Homeಮುಖಪುಟಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡು ಸಚಿವ ಪೊನ್ಮುಡಿ ದಂಪತಿಗೆ 3 ವರ್ಷ ಜೈಲು

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡು ಸಚಿವ ಪೊನ್ಮುಡಿ ದಂಪತಿಗೆ 3 ವರ್ಷ ಜೈಲು

- Advertisement -
- Advertisement -

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಮತ್ತು ಅವರ ಪತ್ನಿ ವಿಶಾಲಾಕ್ಷಿಗೆ ಮೂರು ವರ್ಷಗಳ ಸಾಮಾನ್ಯ ಜೈಲು ಶಿಕ್ಷೆ ಮತ್ತು ತಲಾ 50ಲಕ್ಷ ರೂಪಾಯಿ ದಂಡ ವಿಧಿಸಿ ಮದ್ರಾಸ್ ಹೈಕೋರ್ಟ್‌ ಇಂದು(ಡಿ.21) ಆದೇಶಿಸಿದೆ.

ನ್ಯಾಯಮೂರ್ತಿ ಜಿ. ಜಯಚಂದ್ರನ್ ಅವರು ಶರಣಾಗಲು ಅಪರಾಧಿಗಳಿಗೆ 30 ದಿನಗಳ ಕಾಲಾವಕಾಶ ನೀಡಿದ್ದು, ಈ ಅವಧಿಯಲ್ಲಿ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಬಹುದು ಎಂದು ಹೇಳಿದ್ದಾರೆ.

30 ದಿನದೊಳಗೆ ದಂಪತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ಸಾಧ್ಯವಾಗದಿದ್ದರೆ ಸಮಯ ವಿಸ್ತರಿಸುವ ಬಗ್ಗೆ ಮುಂದೆ ನಿರ್ಧರಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಇದು ಬೇರೆ ಯಾವುದೇ ಸಚಿವರ ಮೇಲಿನ ಅಪರಾಧವಾಗಿದ್ದರೆ ವಿಷಯ ವಿಭಿನ್ನವಾಗಿರುತ್ತಿತ್ತು. ಆದರೆ, ಇದು ಉನ್ನತ ಶಿಕ್ಷಣ ಸಚಿವರ ಪ್ರಕರಣ. ಶಿಕ್ಷಣ ಸಚಿವರ ಅಪರಾಧ ಭವಿಷ್ಯದ ಪೀಳಿಗೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ನ್ಯಾಯಧೀಶರು ಹೇಳಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಪೊನ್ಮುಡಿ ದಂಪತಿ ತಪ್ಪಿತಸ್ಥರು ಎಂದು ಮದ್ರಾಸ್ ಹೈಕೋರ್ಟ್‌ ಮಂಗಳವಾರ ಘೋಷಿಸಿತ್ತು. ತೀರ್ಪು ಕಾಯ್ದಿರಿಸಿತ್ತು.

ಏನಿದು ಪ್ರಕರಣ?

1996ರಿಂದ 2001ರ ವರೆಗಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರದಲ್ಲಿ ಪೊನ್ಮುಡಿ ಅವರು ರಾಜ್ಯ ಸಾರಿಗೆ ಸಚಿವರಾಗಿದ್ದ ಸಂದರ್ಭ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಎಐಎಡಿಎಂಕೆ 2002ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜಾಗೃತ ಹಾಗೂ ಭ್ರಷ್ಟಾಚಾರ ವಿರೋಧಿ ನಿರ್ದೇಶನಾಲಯ (ಡಿವಿಎಸಿ)ಅವರ ವಿರುದ್ದ ಪ್ರಕರಣ ದಾಖಲಿಸಿತ್ತು.

2015ರಲ್ಲಿ ಪೊನ್ಮುಡಿ ವಿರುದ್ಧ ಆರೋಪ ರೂಪಿಸಲಾಗಿತ್ತು. ವಿಚಾರಣೆಯನ್ನು ವಿಲ್ಲುಪುರಂನಿಂದ ವೆಲ್ಲೂರಿಗೆ ಸ್ಥಳಾಂತರಿಸಲಾಗಿತ್ತು. ಕಳೆದ ಜೂನ್ 28ರಂದು ವೆಲ್ಲೂರಿನ ಪ್ರಧಾನ ಜಿಲ್ಲಾ ನ್ಯಾಯಧೀಶೆ ಎನ್ .ವಸಂತಲೀಲಾ ಅವರು ಪೊನ್ಮುಡಿ ಮತ್ತು ಅವರ ಪತ್ನಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿದ್ದರು.

ಆದರೆ, ಮದ್ರಾಸ್ ಹೈಕೋರ್ಟ್‌ ಪೊನ್ಮುಡಿ ದಂಪತಿ ಸೇರಿದಂತೆ ಇತರ ಆರು ಮಂದಿ ರಾಜಕಾರಣಿಗಳ ವಿರುದ್ಧದ ಪ್ರಕರಣಗಳನ್ನು ಸ್ವಯಂ ಪ್ರೇರಿತ ಮರು ಪರಿಶೀಲನೆಗೆ ತೆಗೆದುಕೊಂಡಿತ್ತು.ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು ಪೊನ್ಮುಡಿ ದಂಪತಿಯ ಪ್ರಕರಣದ ವಿಚಾರಣೆ ಆರಂಭಿಸಿದ್ದರು.

ವಿಚಾರಣಾ ನ್ಯಾಯಾಲಯ ಇತ್ಯರ್ಥಪಡಿಸಿದ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ವೆಂಕಟೇಶ್ ವಿರುದ್ಧ ಪೊನ್ಮುಡಿ ಮತ್ತು ಅವರ ಪತ್ನಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. “ನಮ್ಮ ವ್ಯವಸ್ಥೆಯಲ್ಲಿ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರಂತಹ ನ್ಯಾಯಾಧೀಶರನ್ನು ಹೊಂದಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು”ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ನವೆಂಬರ್ 5 ರಂದು ಹೇಳಿತ್ತು.

ಬಳಿಕ ನ್ಯಾಯಾಲಯದ ರೋಸ್ಟರ್ ಬದಲಾವಣೆಯ ಕಾರಣ ನ್ಯಾಯಮೂರ್ತಿ ಜಿ.ಜಯಚಂದ್ರ ಅವರು ಈ ಪ್ರಕರಣಗಳ ವಿಚಾರಣೆಯನ್ನು ಮುಂದುವರೆಸಿದ್ದರು. ವಿಚಾರಣೆಗೆ ಪೂರ್ಣಗೊಳಿಸಿ ಮಂಗಳವಾರ ತೀರ್ಪು ಕಾಯ್ದಿರಿಸಿದ್ದರು. ಇಂದು ಪ್ರಕಟಿಸಿದ್ದಾರೆ.

ಎರಡು ವರ್ಷಕ್ಕಿಂತ ಹೆಚ್ಚು ಶಿಕ್ಷೆಯಾದ ಹಿನ್ನೆಲೆ ಕೆ. ಪೊನ್ಮುಡಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ. ಹಾಗೇನಾದರು ಆದರೆ ಅವರ ಸಚಿವ ಸ್ಥಾನವೂ ಕೈ ತಪ್ಪಲಿದೆ. ಮುಂದೆ ಅವರು ಸುಪ್ರೀಂ ಕೋರ್ಟ್ ಮೊರೆ ಹೋದರೆ ಏನಾಗಲಿದೆ ಎಂಬುವುದು ಕಾದು ನೋಡಬೇಕಿದೆ.

ಇದನ್ನೂ ಓದಿ: ಸಂಸತ್ತಿನ ಭದ್ರತಾ ಲೋಪ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯೋರ್ವರ ಪುತ್ರ ಸೇರಿ ಮತ್ತಿಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...