Homeಮುಖಪುಟತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ.

ನ್ಯಾಯಮೂರ್ತಿ ಜಿ. ಜಯಚಂದ್ರನ್ ಮತ್ತು ನ್ಯಾಯಮೂರ್ತಿ ಕೆ. ಕೆ ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠವು ಆದೇಶವನ್ನು ಪ್ರಕಟಿಸುತ್ತಾ, ಹಿಂದಿನ ಮೊಕದ್ದಮೆಗಳಲ್ಲಿ ಈ ವಿಷಯವು ಇತ್ಯರ್ಥವಾಗದ ಕಾರಣ ಏಕ ನ್ಯಾಯಾಧೀಶರ ಆದೇಶವು ರೆಸ್ ಜುಡಿಕಾಟಾದಿಂದ ಪ್ರಭಾವಿತವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ

ರೆಸ್ ಜುಡಿಕಾಟಾ ಎಂದರೆ ಒಂದೇ ವಿಷಯದಲ್ಲಿ ಒಮ್ಮೆ ತೀರ್ಪು ಬಂದ ನಂತರ ಮತ್ತೆ ಅದೇ ಪಕ್ಷಗಳ ನಡುವೆ ಅದೇ ವಿಷಯವನ್ನು ಮರುವಿಚಾರಣೆಗೆ ತೆಗೆದುಕೊಳ್ಳುವಂತಿಲ್ಲ ಎಂಬ ನ್ಯಾಯ ಸಿದ್ಧಾಂತ. ಆದರೆ, ಇಲ್ಲಿ ಏಕಸದಸ್ಯ ಪೀಠದ ಆದೇಶದಲ್ಲಿರುವ ವಿಷಯವು ಹಿಂದಿನ ದಾವೆಗಳಲ್ಲಿ ನಿರ್ಧಾರಕ್ಕೆ ಬಂದಿರಲಿಲ್ಲ, ಆದ್ದರಿಂದ ರೆಸ್ ಜುಡಿಕಾಟಾ ಅನ್ವಯಿಸುವುದಿಲ್ಲ ಎಂದು ವಿಭಾಗೀಯ ಪೀಠ ಹೇಳಿದೆ.

ರಾಜ್ಯ ಸರ್ಕಾರದ ಅಧಿಕಾರಿಗಳು, ಹಜರತ್ ಸುಲ್ತಾನ್ ಸಿಕಂರ್ ಬಾದುಷಾ ಅವುಲಿಯಾ ದರ್ಗಾ ಸೇರಿದಂತೆ ಮೇಲ್ಮನವಿದಾರರು, ಆಗಮ ಶಾಸ್ತ್ರವು ಸ್ಥಳದಲ್ಲಿ ದೀಪ ಬೆಳಗುವುದನ್ನು ತಡೆಯುತ್ತದೆ ಎಂದು ತೋರಿಸಲು ಪ್ರಬಲ ಪುರಾವೆಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪೀಠ ತಿಳಿಸಿದೆ.

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ‘ಕಾಲ್ಪನಿಕ ಭೂತ’

“ದೇವಸ್ಥಾನದ ಪ್ರತಿನಿಧಿಗಳು ವರ್ಷದಲ್ಲಿ ಒಂದು ನಿರ್ದಿಷ್ಟ ದಿನದಂದು ಕಲ್ಲಿನ ಕಂಬದ ಬಳಿ ದೀಪ ಹಚ್ಚಲು ಅವಕಾಶ ನೀಡುವುದರಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುತ್ತದೆ ಎಂಬ ರಾಜ್ಯ ಸರ್ಕಾರದ ಆತಂಕವು ಹಾಸ್ಯಾಸ್ಪದ ಮತ್ತು ನಂಬಲು ಕಷ್ಟ. ಅಂತಹ ಅಡಚಣೆಯನ್ನು ರಾಜ್ಯವೇ ಪ್ರಾಯೋಜಿಸಿದರೆ ಮಾತ್ರ ಅದು ಸಂಭವಿಸಬಹುದು. ಯಾವುದೇ ರಾಜ್ಯವು ತಮ್ಮ ರಾಜಕೀಯ ಕಾರ್ಯಸೂಚಿಯನ್ನು ಸಾಧಿಸಲು ಈ ಮಟ್ಟಕ್ಕೆ ಇಳಿಯಬಾರದು ಎಂದು ನಾವು ಪ್ರಾರ್ಥಿಸುತ್ತೇವೆ ಎಂಬುವುದಾಗಿ ನ್ಯಾಯಾಲಯ ಹೇಳಿದೆ. ಹಾಗೆಯೇ, ದರ್ಗಾ ಪಕ್ಷವು ದೀಪ ಸ್ತಂಭವು ತಮಗೆ ಸೇರಿದೆ ಎಂದು ವಾದಿಸಿದ್ದನ್ನು ‘ದುಷ್ಟತನದ ವಾದ’ ಎಂದು ಕರೆದು, ಅದು ಸಮುದಾಯಗಳ ನಡುವೆ ಅನುಮಾನವನ್ನು ಹೆಚ್ಚಿಸುತ್ತದೆ ಎಂದು ಟೀಕಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಇರುವ ಗ್ರಹಿಕೆಯು, ಒಂದು ಸಮುದಾಯವನ್ನು ಇನ್ನೊಂದು ಸಮುದಾಯದ ಮುಂದೆ ಅನುಮಾನಕ್ಕೆ ಒಳಪಡಿಸಲು ರಾಜ್ಯ ಅಧಿಕಾರಿಗಳು ಸೃಷ್ಟಿಸಿದ ಕಾಲ್ಪನಿಕ ಭೂತವಾಗಿದೆ” ಎಂದು ಪೀಠ ಹೇಳಿದೆ.

ಜಿಲ್ಲಾಡಳಿತವು ಈ ಸಮಸ್ಯೆಯನ್ನು ಮಧ್ಯಸ್ಥಿಕೆಯ ಮೂಲಕ ಸಮುದಾಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಒಂದು ಅವಕಾಶವಾಗಿ ತೆಗೆದುಕೊಳ್ಳಬೇಕಾಗಿತ್ತು ಎಂದಿದೆ.

ತಿರುಪರನ್‌ಕುಂದ್ರಂ ಬೆಟ್ಟವು ಸಂರಕ್ಷಿತ ತಾಣವಾಗಿರುವುದರಿಂದ ಯಾವುದೇ ಚಟುವಟಿಕೆಯು ಎಎಸ್‌ಐ ಕಾಯ್ದೆಯ ಪ್ರಕಾರ ಇರಬೇಕು ಎಂದು ಪೀಠ ಹೇಳಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯೊಂದಿಗೆ ಸಮಾಲೋಚಿಸಿದ ನಂತರ ದೀಪವನ್ನು ಬೆಳಗಿಸಬಹುದು ಮತ್ತು ವ್ಯಕ್ತಿಗಳ ಸಂಖ್ಯೆಯನ್ನು ನಿಗದಿಪಡಿಸಬಹುದು ಎಂದು ತಿಳಿಸಿದೆ.

ಮಧುರೈನ ತಿರುಪರನ್‌ಕುಂದ್ರಂನಲ್ಲಿರುವ ಅರುಲ್ಮಿಗು ಸುಬ್ರಮಣಿಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯು ತಿರುಪರನ್‌ಕುಂದ್ರಂ ಬೆಟ್ಟಗಳ ಮೇಲಿರುವ ದೀಪಥೂನ್ (ಪ್ರಾಚೀನ ಕಲ್ಲಿನ ದೀಪ ಸ್ತಂಭ) ನಲ್ಲಿ ಕಾರ್ತಿಗೈ ದೀಪವನ್ನು ಬೆಳಗಿಸಬೇಕೆಂದು ಡಿಸೆಂಬರ್ 1ರಂದು ಏಕ ಸದಸ್ಯ ನ್ಯಾಯಾಧೀಶರು ನೀಡಿದ ತೀರ್ಪಿನಿಂದ ಉದ್ಭವಿಸಿದ ಮೇಲ್ಮನವಿಗಳ ಗುಂಪಿನ ಮೇಲೆ ಈ ಆದೇಶಗಳನ್ನು ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...