Homeಮುಖಪುಟತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ.

ನ್ಯಾಯಮೂರ್ತಿ ಜಿ. ಜಯಚಂದ್ರನ್ ಮತ್ತು ನ್ಯಾಯಮೂರ್ತಿ ಕೆ. ಕೆ ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠವು ಆದೇಶವನ್ನು ಪ್ರಕಟಿಸುತ್ತಾ, ಹಿಂದಿನ ಮೊಕದ್ದಮೆಗಳಲ್ಲಿ ಈ ವಿಷಯವು ಇತ್ಯರ್ಥವಾಗದ ಕಾರಣ ಏಕ ನ್ಯಾಯಾಧೀಶರ ಆದೇಶವು ರೆಸ್ ಜುಡಿಕಾಟಾದಿಂದ ಪ್ರಭಾವಿತವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ

ರೆಸ್ ಜುಡಿಕಾಟಾ ಎಂದರೆ ಒಂದೇ ವಿಷಯದಲ್ಲಿ ಒಮ್ಮೆ ತೀರ್ಪು ಬಂದ ನಂತರ ಮತ್ತೆ ಅದೇ ಪಕ್ಷಗಳ ನಡುವೆ ಅದೇ ವಿಷಯವನ್ನು ಮರುವಿಚಾರಣೆಗೆ ತೆಗೆದುಕೊಳ್ಳುವಂತಿಲ್ಲ ಎಂಬ ನ್ಯಾಯ ಸಿದ್ಧಾಂತ. ಆದರೆ, ಇಲ್ಲಿ ಏಕಸದಸ್ಯ ಪೀಠದ ಆದೇಶದಲ್ಲಿರುವ ವಿಷಯವು ಹಿಂದಿನ ದಾವೆಗಳಲ್ಲಿ ನಿರ್ಧಾರಕ್ಕೆ ಬಂದಿರಲಿಲ್ಲ, ಆದ್ದರಿಂದ ರೆಸ್ ಜುಡಿಕಾಟಾ ಅನ್ವಯಿಸುವುದಿಲ್ಲ ಎಂದು ವಿಭಾಗೀಯ ಪೀಠ ಹೇಳಿದೆ.

ರಾಜ್ಯ ಸರ್ಕಾರದ ಅಧಿಕಾರಿಗಳು, ಹಜರತ್ ಸುಲ್ತಾನ್ ಸಿಕಂರ್ ಬಾದುಷಾ ಅವುಲಿಯಾ ದರ್ಗಾ ಸೇರಿದಂತೆ ಮೇಲ್ಮನವಿದಾರರು, ಆಗಮ ಶಾಸ್ತ್ರವು ಸ್ಥಳದಲ್ಲಿ ದೀಪ ಬೆಳಗುವುದನ್ನು ತಡೆಯುತ್ತದೆ ಎಂದು ತೋರಿಸಲು ಪ್ರಬಲ ಪುರಾವೆಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪೀಠ ತಿಳಿಸಿದೆ.

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ‘ಕಾಲ್ಪನಿಕ ಭೂತ’

“ದೇವಸ್ಥಾನದ ಪ್ರತಿನಿಧಿಗಳು ವರ್ಷದಲ್ಲಿ ಒಂದು ನಿರ್ದಿಷ್ಟ ದಿನದಂದು ಕಲ್ಲಿನ ಕಂಬದ ಬಳಿ ದೀಪ ಹಚ್ಚಲು ಅವಕಾಶ ನೀಡುವುದರಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುತ್ತದೆ ಎಂಬ ರಾಜ್ಯ ಸರ್ಕಾರದ ಆತಂಕವು ಹಾಸ್ಯಾಸ್ಪದ ಮತ್ತು ನಂಬಲು ಕಷ್ಟ. ಅಂತಹ ಅಡಚಣೆಯನ್ನು ರಾಜ್ಯವೇ ಪ್ರಾಯೋಜಿಸಿದರೆ ಮಾತ್ರ ಅದು ಸಂಭವಿಸಬಹುದು. ಯಾವುದೇ ರಾಜ್ಯವು ತಮ್ಮ ರಾಜಕೀಯ ಕಾರ್ಯಸೂಚಿಯನ್ನು ಸಾಧಿಸಲು ಈ ಮಟ್ಟಕ್ಕೆ ಇಳಿಯಬಾರದು ಎಂದು ನಾವು ಪ್ರಾರ್ಥಿಸುತ್ತೇವೆ ಎಂಬುವುದಾಗಿ ನ್ಯಾಯಾಲಯ ಹೇಳಿದೆ. ಹಾಗೆಯೇ, ದರ್ಗಾ ಪಕ್ಷವು ದೀಪ ಸ್ತಂಭವು ತಮಗೆ ಸೇರಿದೆ ಎಂದು ವಾದಿಸಿದ್ದನ್ನು ‘ದುಷ್ಟತನದ ವಾದ’ ಎಂದು ಕರೆದು, ಅದು ಸಮುದಾಯಗಳ ನಡುವೆ ಅನುಮಾನವನ್ನು ಹೆಚ್ಚಿಸುತ್ತದೆ ಎಂದು ಟೀಕಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಇರುವ ಗ್ರಹಿಕೆಯು, ಒಂದು ಸಮುದಾಯವನ್ನು ಇನ್ನೊಂದು ಸಮುದಾಯದ ಮುಂದೆ ಅನುಮಾನಕ್ಕೆ ಒಳಪಡಿಸಲು ರಾಜ್ಯ ಅಧಿಕಾರಿಗಳು ಸೃಷ್ಟಿಸಿದ ಕಾಲ್ಪನಿಕ ಭೂತವಾಗಿದೆ” ಎಂದು ಪೀಠ ಹೇಳಿದೆ.

ಜಿಲ್ಲಾಡಳಿತವು ಈ ಸಮಸ್ಯೆಯನ್ನು ಮಧ್ಯಸ್ಥಿಕೆಯ ಮೂಲಕ ಸಮುದಾಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಒಂದು ಅವಕಾಶವಾಗಿ ತೆಗೆದುಕೊಳ್ಳಬೇಕಾಗಿತ್ತು ಎಂದಿದೆ.

ತಿರುಪರನ್‌ಕುಂದ್ರಂ ಬೆಟ್ಟವು ಸಂರಕ್ಷಿತ ತಾಣವಾಗಿರುವುದರಿಂದ ಯಾವುದೇ ಚಟುವಟಿಕೆಯು ಎಎಸ್‌ಐ ಕಾಯ್ದೆಯ ಪ್ರಕಾರ ಇರಬೇಕು ಎಂದು ಪೀಠ ಹೇಳಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯೊಂದಿಗೆ ಸಮಾಲೋಚಿಸಿದ ನಂತರ ದೀಪವನ್ನು ಬೆಳಗಿಸಬಹುದು ಮತ್ತು ವ್ಯಕ್ತಿಗಳ ಸಂಖ್ಯೆಯನ್ನು ನಿಗದಿಪಡಿಸಬಹುದು ಎಂದು ತಿಳಿಸಿದೆ.

ಮಧುರೈನ ತಿರುಪರನ್‌ಕುಂದ್ರಂನಲ್ಲಿರುವ ಅರುಲ್ಮಿಗು ಸುಬ್ರಮಣಿಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯು ತಿರುಪರನ್‌ಕುಂದ್ರಂ ಬೆಟ್ಟಗಳ ಮೇಲಿರುವ ದೀಪಥೂನ್ (ಪ್ರಾಚೀನ ಕಲ್ಲಿನ ದೀಪ ಸ್ತಂಭ) ನಲ್ಲಿ ಕಾರ್ತಿಗೈ ದೀಪವನ್ನು ಬೆಳಗಿಸಬೇಕೆಂದು ಡಿಸೆಂಬರ್ 1ರಂದು ಏಕ ಸದಸ್ಯ ನ್ಯಾಯಾಧೀಶರು ನೀಡಿದ ತೀರ್ಪಿನಿಂದ ಉದ್ಭವಿಸಿದ ಮೇಲ್ಮನವಿಗಳ ಗುಂಪಿನ ಮೇಲೆ ಈ ಆದೇಶಗಳನ್ನು ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...