Homeಮುಖಪುಟಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಕೋವಿಡ್-19 ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ 16 ವರ್ಷದ ಬಾಲಕಿಗೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ತಲಿಪರಂಬ ನ್ಯಾಯಾಲಯವು ಮಂಗಳವಾರ ತೀರ್ಪು ನೀಡಿದೆ. ಅಲಕೋಡ್ ಮೂಲದ ಅಪರಾಧಿ ಮುಹಮ್ಮದ್ ರಫಿಗೆ 9 ಲಕ್ಷ ರೂ. ದಂಡ ವಿಧಿಸಲಾಗಿದೆ.

ಪೊಲೀಸರ ಪ್ರಕಾರ, 2020 ಮತ್ತು 2021 ರ ನಡುವೆ ದೌರ್ಜನ್ಯ ನಡೆದಿದೆ. ರಫಿ ಹುಡುಗಿಯ ಉಂಗುರವನ್ನು ತೋರಿಸುವ ಮೂಲಕ ಆಕೆಯ ವಿಶ್ವಾಸವನ್ನು ಗಳಿಸಿದ್ದಾನೆ. ನಂತರ, ಪದೇಪದೆ ಅಕೆ ಮೇಲೆ ದೌರ್ಜನ್ಯ ಎಸಗಿದ್ದಾನೆ. ಪ್ರಕರಣವನ್ನು ಪಳಯಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ರಫಿ ಎಸಗಿರುವುದು ಪುನರಾವರ್ತಿತ ಅಪರಾದ ಎಂದು ನ್ಯಾಯಾಲಯವು ಗಮನಿಸಿದೆ. ವಲಪಟ್ಟಣಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮತ್ತೊಂದು ಪ್ರಕರಣದಲ್ಲಿ ಅವರ ವಿರುದ್ಧ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಹೊಸ ಅಪರಾಧ ಎಸಗಿದಾಗ ಆತ ಜಾಮೀನಿನ ಮೇಲೆ ಹೊರಬಂದಿದ್ದ.

ಒಟ್ಟು ಶಿಕ್ಷೆ 187 ವರ್ಷಗಳಾದರೂ, ರಫಿ ಭಾರತೀಯ ಕಾನೂನಿನಡಿಯಲ್ಲಿ ಗರಿಷ್ಠ 30 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ದಂಡವನ್ನು ಸಂತ್ರಸ್ತೆಗೆ ಪರಿಹಾರವಾಗಿ ಪಾವತಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ.

ರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...