Homeಫ್ಯಾಕ್ಟ್‌ಚೆಕ್‘ಮದುರೈ ಏಮ್ಸ್ 95% ಕಾಮಗಾರಿ ಮುಗಿದಿದೆ’: ತಮಿಳುನಾಡಿಗೆ ತೆರಳಿ ಹಸಿಹಸಿ ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ...

‘ಮದುರೈ ಏಮ್ಸ್ 95% ಕಾಮಗಾರಿ ಮುಗಿದಿದೆ’: ತಮಿಳುನಾಡಿಗೆ ತೆರಳಿ ಹಸಿಹಸಿ ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ

ಆಸ್ಪತ್ರೆ ಕಟ್ಟಡದ ಕಾಮಗಾರಿ ಇನ್ನೂ ಆರಂಭವೇ ಆಗಿಲ್ಲ ಎಂದು ಪ್ರತಿಪಕ್ಷಗಳು ವಿಡಿಯೊ ಹಾಗೂ ಚಿತ್ರ ಸಮೇತ ಬಹಿರಂಗಪಡಿಸಿದೆ

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಮಿಳುನಾಡಿನ ಮದುರೈಯಲ್ಲಿ ನಿರ್ಮಿಸಲಾಗುತ್ತಿರುವ ಏಮ್ಸ್ (AIIMS) ಯೋಜನೆ ಕಾಮಗಾರಿಯ ಬಗ್ಗೆ ಇತ್ತೀಚೆಗೆ ಮಾಹಿತಿ ಹಂಚಿಕೊಂಡು, ಏಮ್ಸ್‌ನ 95% ಕಾಮಗಾರಿಗಳು ಪೂರ್ಣಗೊಂಡಿದೆ ಎಂದು ಹೇಳಿಕೆ ನೀಡಿದ್ದರು.

ಅವರು ಸೆಪ್ಟೆಂಬರ್ 22ರ ಗುರುವಾರದಂದು ಮದುರೈ ಮತ್ತು ಶಿವಗಂಗಾಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ  ಮಧುರೈನಲ್ಲಿ ಕೈಗಾರಿಕೋದ್ಯಮಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡುತ್ತಾ, “ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ 95% ರಷ್ಟು ಕೆಲಸ ಪೂರ್ಣಗೊಂಡಿದೆ. ಶೀಘ್ರದಲ್ಲಿಯೇ ಇದನ್ನು ಪ್ರಧಾನಿಯವರು ಜನರಿಗೆ ಅರ್ಪಿಸಲಿದ್ದಾರೆ” ಎಂದು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆ.ಪಿ ನಡ್ಡ ಅವರು ಹೇಳಿಕೆಯನ್ನು ಬಿಜೆಪಿ ನಾಯಕರು ಹಾಗೆಯೆ ವೈರಲ್ ಕೂಡಾ ಮಾಡಿದ್ದರು. AIIMS ನ ಈ ಕಾಮಗಾರಿಯು ಮದುರೈ ಬಳಿಯ ತೋಪ್ಪೂರ್‌ನಲ್ಲಿ ನಡೆಯಬೇಕಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಈ ಸುದ್ದಿಯು ವೈರಲ್ ಆಗುತ್ತಿದ್ದಂತೆ ವಿರೋಧ ಪಕ್ಷಗಳು ಜೆಪಿ ನಡ್ಡಾ ಅವರು ಹೇಳಿರುವ ಪ್ರದೇಶಕ್ಕೆ ತೆರಳಿ ನಿಜಾಂಶವೇನು ಎಂಬುವುದನ್ನು ಹೊರಗೆಡವಿದ್ದಾರೆ.

ಇದನ್ನೂಓದಿ: ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

ಜೆ.ಪಿ.ನಡ್ಡಾ ಹೇಳಿಕೆ ಎಷ್ಟು ಸತ್ಯ, ಎಷ್ಟು ಸುಳ್ಳು ಎಂದು ವಾಸ್ತವವನ್ನು ಪರಿಶೀಲಿಸೋಣ
ಫ್ಯಾಕ್ಟ್‌ಚೆಕ್ :

ಮದುರೈನ ಏಮ್ಸ್‌ನ 95% ಕಾಮಗಾರಿ ಪೂರ್ಣಗೊಂಡಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ  ಹೇಳಿಕೆ ಬೆನ್ನಲ್ಲೆ ಕಾಂಗ್ರೆಸ್ ಸಂಸದ ಮಣಿಕ್ಕಂ ಠಾಗೋರ್ ಕಾಮಗಾರಿ ಸ್ಥಳಕ್ಕೆ ತೆರಳಿ ವಿವರಗಳನ್ನು ಸಂಗ್ರಹಿಸಿ, ವಿಡಿಯೋ ಚಿತ್ರಗಳನ್ನೂ ಟ್ವೀಟ್ ಮಾಡಿದ್ದಾರೆ. ಆದರೆ ಅಲ್ಲಿ ಆಸ್ಪತ್ರೆ ಕಟ್ಟಡ ಕಾಮಗಾರಿ ಇನ್ನೂ ಆರಂಭವಾಗಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ-ಎಂ ಮತ್ತು ಕಾಂಗ್ರೆಸ್‌ನ ನಾಯಕರು ಜೆಪಿ ನಡ್ಡಾ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮದುರೈ ಕ್ಷೇತ್ರದ ಸಂಸದ ಸು ವೆಂಕಟೇಶನ್ ಮತ್ತು ವಿರುದುನಗರ ಸಂಸದ, ಕಾಂಗ್ರೆಸ್ ನಾಯಕ ಬಿ. ಮಾಣಿಕಂ ಟ್ಯಾಗೋರ್ ಅವರು ಏಮ್ಸ್ ನಿರ್ಮಾಣವಾಗಬೇಕಿರುವ ಜಾಗದ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿಗೆ ಭೇಟಿ ನೀಡಿದ್ದ ನಡ್ಡಾ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರಿಸುತ್ತಾ,“ಏಮ್ಸ್ ಯೋಜನೆಗೆ 1,264 ಕೋಟಿ ರೂ.ಗಳು ಮಂಜೂರಾಗಿದೆ ಎಂದು ಹೇಳಲು ಹರ್ಷಪಡುತ್ತೇನೆ. ಇಂದು 95%ದಷ್ಟು ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರವೇ ಪ್ರಧಾನಿ ಅದನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ”

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

“ಸಾಂಕ್ರಾಮಿಕ ರೋಗಗಳ ವಿಭಾಗಕ್ಕೆ ಹೆಚ್ಚುವರಿ 164 ಕೋಟಿ ರೂ.ಗಳನ್ನು ಮಂಜೂರುಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ 750 ಹಾಸಿಗೆಗಳು ಹಾಗೂ ಇವುಗಳ ಪೈಕಿ 250 ಐಸಿಯು ಬೆಡ್‍ಗಳು ಇರುತ್ತವೆ” ಎಂದೂ ನಡ್ಡಾ ಹೇಳಿದ್ದರು. ಆದರೆ ನಡ್ಡಾ ಮಾತುಗಳನ್ನು ಒಪ್ಪದ ಕಾಂಗ್ರೆಸ್ ಸಂಸದ ಠಾಗೋರ್ ಶುಕ್ರವಾರ ಸರಣಿ ಟ್ವೀಟ್ ಮಾಡಿದ್ದಾರೆ.

‘‘ನಡ್ಡಾ, ಅವರು ‘ತಮಿಳುನಾಡಿನ ಮದುರೆಯ AIIMS ನ ಕೆಲಸ 95% ಮುಗಿದಿದೆ, ಸದ್ಯವೇ ಪ್ರಧಾನಿಯವರು ಅದನ್ನು ಉದ್ಘಾಟಿಸಲಿದ್ದಾರೆ’ ಎಂದು ಘೋಷಿಸಿದರು. ಹೊಸ ಏಮ್ಸ್ ನೋಡಲು ಜನ ಓಡಿದರು. ನೋಡುವುದೇನು 2019 ರಲ್ಲಿ ಮೋದಿ ಸಾಹೇಬರು ಹಾಕಿದ ಅಡಿಗಲ್ಲು ಚಿಗುರಿ ಹೆಮ್ಮರವಾಗಿಯೇ ಇಲ್ಲ. ಅಲ್ಲಿರುವುದು ಅಡಿಗಲ್ಲು ಮಾತ್ರ” ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.

“ಪ್ರೀತಿಯ ನಡ್ಡಾಜೀ, ಮದುರೈ ಏಮ್ಸ್ 95% ಕಾಮಗಾರಿ ಪೂರ್ಣಗೊಂಡಿದ್ದಕ್ಕಾಗಿ ಧನ್ಯವಾದಗಳು. ನಾನು ತೊಪ್ಪೂರು ಸೈಟ್‍ನಲ್ಲಿ ಒಂದು ಗಂಟೆ ಹುಡುಕಿದೆ, ಆದರೆ ಏನೂ ದೊರೆಯಲಿಲ್ಲ, ಯಾರೋ ಕಟ್ಟಡವನ್ನು ಕದ್ದಿರಬೇಕು” ಎಂದು ಮಾಣಿಕಂ ಟ್ಯಾಗೋರ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

“ನಡ್ಡಾ ಅವರು ಮಧುರೈನಲ್ಲಿ ಮಾತನಾಡಿದ್ದಾರೆ ಹಾಗೂ 95% ದಷ್ಟು ಕಾಮಗಾರಿ ಮುಗಿದಿದೆ ಎಂದಿದ್ದಾರೆ. ಈ ರೀತಿ ಕಾಮಗಾರಿ ಪೂರ್ಣದ ಬಗ್ಗೆ ಸುಳ್ಳು ಹೇಳಿರುವುದು ಅಚ್ಚರಿ ಮೂಡಿಸಿದೆ. ಇದು ಅವರು ತಮಿಳುನಾಡಿನ ಜನರಿಗೆ ವಂಚಿಸುವ ವಿಧಾನವಾಗಿದೆ” ಎಂದು ವೀಡಿಯೋವೊಂದರಲ್ಲಿ ಠಾಗೋರ್ ಹೇಳಿದ್ದಾರೆ.

ಗೂಗಲ್ ಸಹಾಯದಿಂದ ಗೂಗಲ್ ಮ್ಯಾಪ್‌ ಮೂಲಕ ಸ್ಥಳ ಪರಿಶೀಲನೆಯನ್ನು ಮಾಡಿದಾಗ, ನಡ್ಡಾ ಪ್ರಸ್ತಾಪಿಸಿದ ನಿವೇಶನದಲ್ಲಿ ಯಾವುದೇ ಕಟ್ಟಡ ಕಾಮಗಾರಿಗಳು ನಡೆಯುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ತಮಿಳುನಾಡಿಗೆ ಭೇಟಿ ನೀಡಿದ್ದ ವೇಳೆ ನಡ್ಡಾ ಮದುರೈಯಲ್ಲಿ ನಿರ್ಮಿಸಲಾಗುತ್ತಿರುವ ಏಮ್ಸ್ (AIIMS) ಯೋಜನೆ ಕಾಮಗಾರಿ 95% ಪೂರ್ಣಗೊಂಡಿದೆ ಎಂದು ಸುಳ್ಳು ಹೇಳಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...