Homeಫ್ಯಾಕ್ಟ್‌ಚೆಕ್‘ಮದುರೈ ಏಮ್ಸ್ 95% ಕಾಮಗಾರಿ ಮುಗಿದಿದೆ’: ತಮಿಳುನಾಡಿಗೆ ತೆರಳಿ ಹಸಿಹಸಿ ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ...

‘ಮದುರೈ ಏಮ್ಸ್ 95% ಕಾಮಗಾರಿ ಮುಗಿದಿದೆ’: ತಮಿಳುನಾಡಿಗೆ ತೆರಳಿ ಹಸಿಹಸಿ ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ

ಆಸ್ಪತ್ರೆ ಕಟ್ಟಡದ ಕಾಮಗಾರಿ ಇನ್ನೂ ಆರಂಭವೇ ಆಗಿಲ್ಲ ಎಂದು ಪ್ರತಿಪಕ್ಷಗಳು ವಿಡಿಯೊ ಹಾಗೂ ಚಿತ್ರ ಸಮೇತ ಬಹಿರಂಗಪಡಿಸಿದೆ

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಮಿಳುನಾಡಿನ ಮದುರೈಯಲ್ಲಿ ನಿರ್ಮಿಸಲಾಗುತ್ತಿರುವ ಏಮ್ಸ್ (AIIMS) ಯೋಜನೆ ಕಾಮಗಾರಿಯ ಬಗ್ಗೆ ಇತ್ತೀಚೆಗೆ ಮಾಹಿತಿ ಹಂಚಿಕೊಂಡು, ಏಮ್ಸ್‌ನ 95% ಕಾಮಗಾರಿಗಳು ಪೂರ್ಣಗೊಂಡಿದೆ ಎಂದು ಹೇಳಿಕೆ ನೀಡಿದ್ದರು.

ಅವರು ಸೆಪ್ಟೆಂಬರ್ 22ರ ಗುರುವಾರದಂದು ಮದುರೈ ಮತ್ತು ಶಿವಗಂಗಾಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ  ಮಧುರೈನಲ್ಲಿ ಕೈಗಾರಿಕೋದ್ಯಮಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡುತ್ತಾ, “ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ 95% ರಷ್ಟು ಕೆಲಸ ಪೂರ್ಣಗೊಂಡಿದೆ. ಶೀಘ್ರದಲ್ಲಿಯೇ ಇದನ್ನು ಪ್ರಧಾನಿಯವರು ಜನರಿಗೆ ಅರ್ಪಿಸಲಿದ್ದಾರೆ” ಎಂದು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆ.ಪಿ ನಡ್ಡ ಅವರು ಹೇಳಿಕೆಯನ್ನು ಬಿಜೆಪಿ ನಾಯಕರು ಹಾಗೆಯೆ ವೈರಲ್ ಕೂಡಾ ಮಾಡಿದ್ದರು. AIIMS ನ ಈ ಕಾಮಗಾರಿಯು ಮದುರೈ ಬಳಿಯ ತೋಪ್ಪೂರ್‌ನಲ್ಲಿ ನಡೆಯಬೇಕಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಈ ಸುದ್ದಿಯು ವೈರಲ್ ಆಗುತ್ತಿದ್ದಂತೆ ವಿರೋಧ ಪಕ್ಷಗಳು ಜೆಪಿ ನಡ್ಡಾ ಅವರು ಹೇಳಿರುವ ಪ್ರದೇಶಕ್ಕೆ ತೆರಳಿ ನಿಜಾಂಶವೇನು ಎಂಬುವುದನ್ನು ಹೊರಗೆಡವಿದ್ದಾರೆ.

ಇದನ್ನೂಓದಿ: ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

ಜೆ.ಪಿ.ನಡ್ಡಾ ಹೇಳಿಕೆ ಎಷ್ಟು ಸತ್ಯ, ಎಷ್ಟು ಸುಳ್ಳು ಎಂದು ವಾಸ್ತವವನ್ನು ಪರಿಶೀಲಿಸೋಣ
ಫ್ಯಾಕ್ಟ್‌ಚೆಕ್ :

ಮದುರೈನ ಏಮ್ಸ್‌ನ 95% ಕಾಮಗಾರಿ ಪೂರ್ಣಗೊಂಡಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ  ಹೇಳಿಕೆ ಬೆನ್ನಲ್ಲೆ ಕಾಂಗ್ರೆಸ್ ಸಂಸದ ಮಣಿಕ್ಕಂ ಠಾಗೋರ್ ಕಾಮಗಾರಿ ಸ್ಥಳಕ್ಕೆ ತೆರಳಿ ವಿವರಗಳನ್ನು ಸಂಗ್ರಹಿಸಿ, ವಿಡಿಯೋ ಚಿತ್ರಗಳನ್ನೂ ಟ್ವೀಟ್ ಮಾಡಿದ್ದಾರೆ. ಆದರೆ ಅಲ್ಲಿ ಆಸ್ಪತ್ರೆ ಕಟ್ಟಡ ಕಾಮಗಾರಿ ಇನ್ನೂ ಆರಂಭವಾಗಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ-ಎಂ ಮತ್ತು ಕಾಂಗ್ರೆಸ್‌ನ ನಾಯಕರು ಜೆಪಿ ನಡ್ಡಾ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮದುರೈ ಕ್ಷೇತ್ರದ ಸಂಸದ ಸು ವೆಂಕಟೇಶನ್ ಮತ್ತು ವಿರುದುನಗರ ಸಂಸದ, ಕಾಂಗ್ರೆಸ್ ನಾಯಕ ಬಿ. ಮಾಣಿಕಂ ಟ್ಯಾಗೋರ್ ಅವರು ಏಮ್ಸ್ ನಿರ್ಮಾಣವಾಗಬೇಕಿರುವ ಜಾಗದ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿಗೆ ಭೇಟಿ ನೀಡಿದ್ದ ನಡ್ಡಾ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರಿಸುತ್ತಾ,“ಏಮ್ಸ್ ಯೋಜನೆಗೆ 1,264 ಕೋಟಿ ರೂ.ಗಳು ಮಂಜೂರಾಗಿದೆ ಎಂದು ಹೇಳಲು ಹರ್ಷಪಡುತ್ತೇನೆ. ಇಂದು 95%ದಷ್ಟು ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರವೇ ಪ್ರಧಾನಿ ಅದನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ”

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

“ಸಾಂಕ್ರಾಮಿಕ ರೋಗಗಳ ವಿಭಾಗಕ್ಕೆ ಹೆಚ್ಚುವರಿ 164 ಕೋಟಿ ರೂ.ಗಳನ್ನು ಮಂಜೂರುಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ 750 ಹಾಸಿಗೆಗಳು ಹಾಗೂ ಇವುಗಳ ಪೈಕಿ 250 ಐಸಿಯು ಬೆಡ್‍ಗಳು ಇರುತ್ತವೆ” ಎಂದೂ ನಡ್ಡಾ ಹೇಳಿದ್ದರು. ಆದರೆ ನಡ್ಡಾ ಮಾತುಗಳನ್ನು ಒಪ್ಪದ ಕಾಂಗ್ರೆಸ್ ಸಂಸದ ಠಾಗೋರ್ ಶುಕ್ರವಾರ ಸರಣಿ ಟ್ವೀಟ್ ಮಾಡಿದ್ದಾರೆ.

‘‘ನಡ್ಡಾ, ಅವರು ‘ತಮಿಳುನಾಡಿನ ಮದುರೆಯ AIIMS ನ ಕೆಲಸ 95% ಮುಗಿದಿದೆ, ಸದ್ಯವೇ ಪ್ರಧಾನಿಯವರು ಅದನ್ನು ಉದ್ಘಾಟಿಸಲಿದ್ದಾರೆ’ ಎಂದು ಘೋಷಿಸಿದರು. ಹೊಸ ಏಮ್ಸ್ ನೋಡಲು ಜನ ಓಡಿದರು. ನೋಡುವುದೇನು 2019 ರಲ್ಲಿ ಮೋದಿ ಸಾಹೇಬರು ಹಾಕಿದ ಅಡಿಗಲ್ಲು ಚಿಗುರಿ ಹೆಮ್ಮರವಾಗಿಯೇ ಇಲ್ಲ. ಅಲ್ಲಿರುವುದು ಅಡಿಗಲ್ಲು ಮಾತ್ರ” ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.

“ಪ್ರೀತಿಯ ನಡ್ಡಾಜೀ, ಮದುರೈ ಏಮ್ಸ್ 95% ಕಾಮಗಾರಿ ಪೂರ್ಣಗೊಂಡಿದ್ದಕ್ಕಾಗಿ ಧನ್ಯವಾದಗಳು. ನಾನು ತೊಪ್ಪೂರು ಸೈಟ್‍ನಲ್ಲಿ ಒಂದು ಗಂಟೆ ಹುಡುಕಿದೆ, ಆದರೆ ಏನೂ ದೊರೆಯಲಿಲ್ಲ, ಯಾರೋ ಕಟ್ಟಡವನ್ನು ಕದ್ದಿರಬೇಕು” ಎಂದು ಮಾಣಿಕಂ ಟ್ಯಾಗೋರ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

“ನಡ್ಡಾ ಅವರು ಮಧುರೈನಲ್ಲಿ ಮಾತನಾಡಿದ್ದಾರೆ ಹಾಗೂ 95% ದಷ್ಟು ಕಾಮಗಾರಿ ಮುಗಿದಿದೆ ಎಂದಿದ್ದಾರೆ. ಈ ರೀತಿ ಕಾಮಗಾರಿ ಪೂರ್ಣದ ಬಗ್ಗೆ ಸುಳ್ಳು ಹೇಳಿರುವುದು ಅಚ್ಚರಿ ಮೂಡಿಸಿದೆ. ಇದು ಅವರು ತಮಿಳುನಾಡಿನ ಜನರಿಗೆ ವಂಚಿಸುವ ವಿಧಾನವಾಗಿದೆ” ಎಂದು ವೀಡಿಯೋವೊಂದರಲ್ಲಿ ಠಾಗೋರ್ ಹೇಳಿದ್ದಾರೆ.

ಗೂಗಲ್ ಸಹಾಯದಿಂದ ಗೂಗಲ್ ಮ್ಯಾಪ್‌ ಮೂಲಕ ಸ್ಥಳ ಪರಿಶೀಲನೆಯನ್ನು ಮಾಡಿದಾಗ, ನಡ್ಡಾ ಪ್ರಸ್ತಾಪಿಸಿದ ನಿವೇಶನದಲ್ಲಿ ಯಾವುದೇ ಕಟ್ಟಡ ಕಾಮಗಾರಿಗಳು ನಡೆಯುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ತಮಿಳುನಾಡಿಗೆ ಭೇಟಿ ನೀಡಿದ್ದ ವೇಳೆ ನಡ್ಡಾ ಮದುರೈಯಲ್ಲಿ ನಿರ್ಮಿಸಲಾಗುತ್ತಿರುವ ಏಮ್ಸ್ (AIIMS) ಯೋಜನೆ ಕಾಮಗಾರಿ 95% ಪೂರ್ಣಗೊಂಡಿದೆ ಎಂದು ಸುಳ್ಳು ಹೇಳಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...