Homeಫ್ಯಾಕ್ಟ್‌ಚೆಕ್‘ಮದುರೈ ಏಮ್ಸ್ 95% ಕಾಮಗಾರಿ ಮುಗಿದಿದೆ’: ತಮಿಳುನಾಡಿಗೆ ತೆರಳಿ ಹಸಿಹಸಿ ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ...

‘ಮದುರೈ ಏಮ್ಸ್ 95% ಕಾಮಗಾರಿ ಮುಗಿದಿದೆ’: ತಮಿಳುನಾಡಿಗೆ ತೆರಳಿ ಹಸಿಹಸಿ ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ

ಆಸ್ಪತ್ರೆ ಕಟ್ಟಡದ ಕಾಮಗಾರಿ ಇನ್ನೂ ಆರಂಭವೇ ಆಗಿಲ್ಲ ಎಂದು ಪ್ರತಿಪಕ್ಷಗಳು ವಿಡಿಯೊ ಹಾಗೂ ಚಿತ್ರ ಸಮೇತ ಬಹಿರಂಗಪಡಿಸಿದೆ

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಮಿಳುನಾಡಿನ ಮದುರೈಯಲ್ಲಿ ನಿರ್ಮಿಸಲಾಗುತ್ತಿರುವ ಏಮ್ಸ್ (AIIMS) ಯೋಜನೆ ಕಾಮಗಾರಿಯ ಬಗ್ಗೆ ಇತ್ತೀಚೆಗೆ ಮಾಹಿತಿ ಹಂಚಿಕೊಂಡು, ಏಮ್ಸ್‌ನ 95% ಕಾಮಗಾರಿಗಳು ಪೂರ್ಣಗೊಂಡಿದೆ ಎಂದು ಹೇಳಿಕೆ ನೀಡಿದ್ದರು.

ಅವರು ಸೆಪ್ಟೆಂಬರ್ 22ರ ಗುರುವಾರದಂದು ಮದುರೈ ಮತ್ತು ಶಿವಗಂಗಾಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ  ಮಧುರೈನಲ್ಲಿ ಕೈಗಾರಿಕೋದ್ಯಮಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡುತ್ತಾ, “ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ 95% ರಷ್ಟು ಕೆಲಸ ಪೂರ್ಣಗೊಂಡಿದೆ. ಶೀಘ್ರದಲ್ಲಿಯೇ ಇದನ್ನು ಪ್ರಧಾನಿಯವರು ಜನರಿಗೆ ಅರ್ಪಿಸಲಿದ್ದಾರೆ” ಎಂದು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆ.ಪಿ ನಡ್ಡ ಅವರು ಹೇಳಿಕೆಯನ್ನು ಬಿಜೆಪಿ ನಾಯಕರು ಹಾಗೆಯೆ ವೈರಲ್ ಕೂಡಾ ಮಾಡಿದ್ದರು. AIIMS ನ ಈ ಕಾಮಗಾರಿಯು ಮದುರೈ ಬಳಿಯ ತೋಪ್ಪೂರ್‌ನಲ್ಲಿ ನಡೆಯಬೇಕಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಈ ಸುದ್ದಿಯು ವೈರಲ್ ಆಗುತ್ತಿದ್ದಂತೆ ವಿರೋಧ ಪಕ್ಷಗಳು ಜೆಪಿ ನಡ್ಡಾ ಅವರು ಹೇಳಿರುವ ಪ್ರದೇಶಕ್ಕೆ ತೆರಳಿ ನಿಜಾಂಶವೇನು ಎಂಬುವುದನ್ನು ಹೊರಗೆಡವಿದ್ದಾರೆ.

ಇದನ್ನೂಓದಿ: ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

ಜೆ.ಪಿ.ನಡ್ಡಾ ಹೇಳಿಕೆ ಎಷ್ಟು ಸತ್ಯ, ಎಷ್ಟು ಸುಳ್ಳು ಎಂದು ವಾಸ್ತವವನ್ನು ಪರಿಶೀಲಿಸೋಣ
ಫ್ಯಾಕ್ಟ್‌ಚೆಕ್ :

ಮದುರೈನ ಏಮ್ಸ್‌ನ 95% ಕಾಮಗಾರಿ ಪೂರ್ಣಗೊಂಡಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ  ಹೇಳಿಕೆ ಬೆನ್ನಲ್ಲೆ ಕಾಂಗ್ರೆಸ್ ಸಂಸದ ಮಣಿಕ್ಕಂ ಠಾಗೋರ್ ಕಾಮಗಾರಿ ಸ್ಥಳಕ್ಕೆ ತೆರಳಿ ವಿವರಗಳನ್ನು ಸಂಗ್ರಹಿಸಿ, ವಿಡಿಯೋ ಚಿತ್ರಗಳನ್ನೂ ಟ್ವೀಟ್ ಮಾಡಿದ್ದಾರೆ. ಆದರೆ ಅಲ್ಲಿ ಆಸ್ಪತ್ರೆ ಕಟ್ಟಡ ಕಾಮಗಾರಿ ಇನ್ನೂ ಆರಂಭವಾಗಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ-ಎಂ ಮತ್ತು ಕಾಂಗ್ರೆಸ್‌ನ ನಾಯಕರು ಜೆಪಿ ನಡ್ಡಾ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮದುರೈ ಕ್ಷೇತ್ರದ ಸಂಸದ ಸು ವೆಂಕಟೇಶನ್ ಮತ್ತು ವಿರುದುನಗರ ಸಂಸದ, ಕಾಂಗ್ರೆಸ್ ನಾಯಕ ಬಿ. ಮಾಣಿಕಂ ಟ್ಯಾಗೋರ್ ಅವರು ಏಮ್ಸ್ ನಿರ್ಮಾಣವಾಗಬೇಕಿರುವ ಜಾಗದ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿಗೆ ಭೇಟಿ ನೀಡಿದ್ದ ನಡ್ಡಾ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರಿಸುತ್ತಾ,“ಏಮ್ಸ್ ಯೋಜನೆಗೆ 1,264 ಕೋಟಿ ರೂ.ಗಳು ಮಂಜೂರಾಗಿದೆ ಎಂದು ಹೇಳಲು ಹರ್ಷಪಡುತ್ತೇನೆ. ಇಂದು 95%ದಷ್ಟು ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರವೇ ಪ್ರಧಾನಿ ಅದನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ”

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

“ಸಾಂಕ್ರಾಮಿಕ ರೋಗಗಳ ವಿಭಾಗಕ್ಕೆ ಹೆಚ್ಚುವರಿ 164 ಕೋಟಿ ರೂ.ಗಳನ್ನು ಮಂಜೂರುಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ 750 ಹಾಸಿಗೆಗಳು ಹಾಗೂ ಇವುಗಳ ಪೈಕಿ 250 ಐಸಿಯು ಬೆಡ್‍ಗಳು ಇರುತ್ತವೆ” ಎಂದೂ ನಡ್ಡಾ ಹೇಳಿದ್ದರು. ಆದರೆ ನಡ್ಡಾ ಮಾತುಗಳನ್ನು ಒಪ್ಪದ ಕಾಂಗ್ರೆಸ್ ಸಂಸದ ಠಾಗೋರ್ ಶುಕ್ರವಾರ ಸರಣಿ ಟ್ವೀಟ್ ಮಾಡಿದ್ದಾರೆ.

‘‘ನಡ್ಡಾ, ಅವರು ‘ತಮಿಳುನಾಡಿನ ಮದುರೆಯ AIIMS ನ ಕೆಲಸ 95% ಮುಗಿದಿದೆ, ಸದ್ಯವೇ ಪ್ರಧಾನಿಯವರು ಅದನ್ನು ಉದ್ಘಾಟಿಸಲಿದ್ದಾರೆ’ ಎಂದು ಘೋಷಿಸಿದರು. ಹೊಸ ಏಮ್ಸ್ ನೋಡಲು ಜನ ಓಡಿದರು. ನೋಡುವುದೇನು 2019 ರಲ್ಲಿ ಮೋದಿ ಸಾಹೇಬರು ಹಾಕಿದ ಅಡಿಗಲ್ಲು ಚಿಗುರಿ ಹೆಮ್ಮರವಾಗಿಯೇ ಇಲ್ಲ. ಅಲ್ಲಿರುವುದು ಅಡಿಗಲ್ಲು ಮಾತ್ರ” ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.

“ಪ್ರೀತಿಯ ನಡ್ಡಾಜೀ, ಮದುರೈ ಏಮ್ಸ್ 95% ಕಾಮಗಾರಿ ಪೂರ್ಣಗೊಂಡಿದ್ದಕ್ಕಾಗಿ ಧನ್ಯವಾದಗಳು. ನಾನು ತೊಪ್ಪೂರು ಸೈಟ್‍ನಲ್ಲಿ ಒಂದು ಗಂಟೆ ಹುಡುಕಿದೆ, ಆದರೆ ಏನೂ ದೊರೆಯಲಿಲ್ಲ, ಯಾರೋ ಕಟ್ಟಡವನ್ನು ಕದ್ದಿರಬೇಕು” ಎಂದು ಮಾಣಿಕಂ ಟ್ಯಾಗೋರ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

“ನಡ್ಡಾ ಅವರು ಮಧುರೈನಲ್ಲಿ ಮಾತನಾಡಿದ್ದಾರೆ ಹಾಗೂ 95% ದಷ್ಟು ಕಾಮಗಾರಿ ಮುಗಿದಿದೆ ಎಂದಿದ್ದಾರೆ. ಈ ರೀತಿ ಕಾಮಗಾರಿ ಪೂರ್ಣದ ಬಗ್ಗೆ ಸುಳ್ಳು ಹೇಳಿರುವುದು ಅಚ್ಚರಿ ಮೂಡಿಸಿದೆ. ಇದು ಅವರು ತಮಿಳುನಾಡಿನ ಜನರಿಗೆ ವಂಚಿಸುವ ವಿಧಾನವಾಗಿದೆ” ಎಂದು ವೀಡಿಯೋವೊಂದರಲ್ಲಿ ಠಾಗೋರ್ ಹೇಳಿದ್ದಾರೆ.

ಗೂಗಲ್ ಸಹಾಯದಿಂದ ಗೂಗಲ್ ಮ್ಯಾಪ್‌ ಮೂಲಕ ಸ್ಥಳ ಪರಿಶೀಲನೆಯನ್ನು ಮಾಡಿದಾಗ, ನಡ್ಡಾ ಪ್ರಸ್ತಾಪಿಸಿದ ನಿವೇಶನದಲ್ಲಿ ಯಾವುದೇ ಕಟ್ಟಡ ಕಾಮಗಾರಿಗಳು ನಡೆಯುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ತಮಿಳುನಾಡಿಗೆ ಭೇಟಿ ನೀಡಿದ್ದ ವೇಳೆ ನಡ್ಡಾ ಮದುರೈಯಲ್ಲಿ ನಿರ್ಮಿಸಲಾಗುತ್ತಿರುವ ಏಮ್ಸ್ (AIIMS) ಯೋಜನೆ ಕಾಮಗಾರಿ 95% ಪೂರ್ಣಗೊಂಡಿದೆ ಎಂದು ಸುಳ್ಳು ಹೇಳಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...