Homeಅಂತರಾಷ್ಟ್ರೀಯನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್

ನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್

- Advertisement -
- Advertisement -

ಅಮೆರಿಕ ಸೇನೆಯಿಂದ ಶನಿವಾರ (ಜ.3) ಸೆರೆಹಿಡಿಯಲ್ಪಟ್ಟ ವೆನಿಜುವೆಲಾ ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ನ್ಯೂಯಾರ್ಕ್‌ಗೆ ಕರೆದೊಯ್ಯಲಾಗಿದೆ.

ನ್ಯೂಯಾರ್ಕ್‌ನ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟ್ರೇಷನ್ (ಡಿಇಎ) ಮುಖ್ಯ ಕಛೇರಿಯಲ್ಲಿ ಇಬ್ಬರನ್ನೂ ನಿಯಮ ಪ್ರಕ್ರಿಯೆಗೊಳಪಡಿಸಿ, ನಂತರ ಬ್ರೂಕ್ಲಿನ್‌ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ಗೆ (ಜೈಲಿಗೆ) ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮಡೂರೊ ಅವರನ್ನು ಯುಎಸ್‌ ಅಧಿಕಾರಿಗಳು ಡಿಇಎ ಪ್ರಧಾನ ಕಚೇರಿಯೊಳಗಿನ ಕಾರಿಡಾರ್ ಮೂಲಕ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ.

ಮುಂದೆ ಮಡುರೊ ಮತ್ತು ಫ್ಲೋರ್ಸ್ ದಂಪತಿಯನ್ನು ಅಮೆರಿಕದಲ್ಲಿ ದೀರ್ಘಕಾಲ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಏಕೆಂದರೆ, ಅಮೆರಿಕ ನ್ಯಾಯ ಇಲಾಖೆ ಅವರ ವಿರುದ್ದ ಈ ಹಿಂದಿನಿಂದಲೂ ಹಲವು ಆರೋಪಗಳನ್ನು ಮಾಡುತ್ತಾ ಬಂದಿದೆ. ಡ್ರಗ್ ಕಳ್ಳಸಾಗಣೆ ಮತ್ತು ಭಯೋತ್ಪಾದನೆ ಸಂಬಂಧಿತ ಷಡ್ಯಂತ್ರದ (ನಾರ್ಕೋ-ಟೆರರಿಸಂ) ಗುಂಪಿನೊಂದಿಗೆ ಭಾಗಿಯಾಗಿದ್ದಾರೆ ಎಂದು ನ್ಯಾಯ ಇಲಾಖೆ ಆರೋಪಿಸಿದೆ.

ಸರಳವಾಗಿ ಹೇಳುವುದಾದರೆ, ಮಡುರೊ ದಂಪತಿ ವೆನಿಜುವೆಲಾವನ್ನು ಬಳಸಿಕೊಂಡು ಟನ್‌ಗಟ್ಟಲೆ ಡ್ರಗ್ಸ್ (ಕೊಕೇನ್) ಅಮೆರಿಕಕ್ಕೆ ಕಳುಹಿಸಿದ್ದಾರೆ ಮತ್ತು ಭಯೋತ್ಪಾದಕ ಗುಂಪುಗಳೊಂದಿಗೆ ಸೇರಿ ಈ ಕೆಲಸ ಮಾಡಿದ್ದಾರೆ ಎಂಬುವುದು ಅಮೆರಿಕದ ಆರೋಪ.

ಅಧ್ಯಕ್ಷರನ್ನು ಸೆರೆಹಿಡಿದಿರುವ ಹಿನ್ನೆಲೆ, ವೆನಿಜುವೆಲಾದ ಆಡಳಿತವನ್ನು ಸದ್ಯಕ್ಕೆ ಅಮೆರಿಕವೇ ನೋಡಿಕೊಳ್ಳಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, ಸುರಕ್ಷಿತವಾದ, ಸರಿಯಾದ ಮತ್ತು ವಿವೇಚನಾಯುಕ್ತ ಪರಿವರ್ತನೆಯನ್ನು ಮಾಡಲು ಸಾಧ್ಯವಾಗುವವರೆಗೆ ನಾವು ವೆನಿಜುವೆಲಾವನ್ನು ಮುನ್ನಡೆಸುತ್ತೇವೆ ಎಂದಿದ್ದಾರೆ. ಅಮೆರಿಕ ವೆನೆಜುವೆಲಾದ ಅಪಾರ ತೈಲ ನಿಕ್ಷೇಪಗಳನ್ನು ಬಳಸಿ ‘ದೊಡ್ಡ ಪ್ರಮಾಣದಲ್ಲಿ’ ಇತರ ದೇಶಗಳಿಗೆ ಮಾರಾಟ ಮಾಡುತ್ತದೆ ಎಂದು ಇದೇ ಅವರು ತಿಳಿಸಿದ್ದಾರೆ.

ಅಮೆರಿಕ ಸೇನೆ ಆಪರೇಷನ್ ಅಬ್ಸೊಲ್ಯೂಟ್ ರಿಸಾಲ್ವ್ (Operation Absolute Resolve) ಎಂಬ ಹೆಸರಿನಲ್ಲಿ ವೆನಿಜುವೆಲಾ ರಾಜಧಾನಿ ಕಾರಕಸ್ ಮೇಲೆ ಶನಿವಾರ ಏಕಾಏಕಿ ದಾಳಿ ನಡೆಸಿದೆ. ಕಾರಕಸ್ ಮತ್ತು ಸುತ್ತಮುತ್ತಲಿನ ಹಲವು ಪ್ರದೇಶಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಿಂದ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ವೆನಿಜುವಾದ ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ದಾಳಿಯ ಬಳಿಕ ಅಧ್ಯಕ್ಷ ಮಡುರೊ ಅವರ ಮನೆಗೆ ನುಗ್ಗಿ, ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿದೆ. ನಂತರ ಇಬ್ಬರನ್ನೂ ಯುಎಸ್‌ಎಸ್‌ ಐವೊ ಜಿಮಾ ಯುದ್ಧನೌಕೆಗೆ ಕರೆದೊಯ್ದು, ಅಲ್ಲಿಂದ ನ್ಯೂಯಾರ್ಕ್‌ಗೆ ಸ್ಥಳಾಂತರಿಸಲಾಗಿದೆ.

ಕೇವಲ 30 ನಿಮಿಷದೊಳಗೆ ವೆನಿಜುವೆಲಾದ ಒಳಗೆ ನುಗ್ಗಿ, ರಾಜಧಾನಿ ಮೇಲೆ ಬಾಂಬ್ ದಾಳಿ ನಡೆಸಿ, ಅಧ್ಯಕ್ಷ ಮತ್ತು ಅವರು ಪತ್ನಿಯನ್ನು ಸೆರೆ ಹಿಡಿದಿರುವ ಅಮೆರಿಕದ ಕಾರ್ಯಾಚರಣೆಯನ್ನು ತಿಂಗಳ ಹಿಂದೆಯೇ ಯೋಜಿಸಲಾಗಿತ್ತು. ಇದಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಲಾಗಿತ್ತು ಎಂದು ವರದಿಯಾಗಿದೆ.

ಸಾರ್ವಭೌಮ ರಾಷ್ಟ್ರವೊಂದರ ಒಳಗೆ ನುಗ್ಗಿ, ಅದರ ಅಧ್ಯಕ್ಷರನ್ನು ಸೆರೆ ಹಿಡಿದು ಎಳೆದೊಯ್ದ ಅಮೆರಿಕದ ಈ ಕೃತ್ಯವನ್ನು ಜಗತ್ತಿನ ಹಲವು ರಾಷ್ಟ್ರಗಳು ಖಂಡಿಸಿವೆ. ಸಾರ್ವಜನಿಕ ವಯದಲ್ಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆ ಕಾರಣಕ್ಕೆ ಪೋಷಕರಿಂದ ಅಂಗನವಾಡಿ ಬಹಿಷ್ಕಾರ: ಅಧಿಕಾರಿಗಳ ಮನವೊಲಿಕೆ ಬಳಿಕ ಮರಳಿದ ಮಕ್ಕಳು

ದಲಿತ ಸಮುದಾಯದ ಅಡುಗೆ ಸಹಾಯಕಿ ನೇಮಕದ ನಂತರ ಗ್ರಾಮಸ್ಥರು ಅಂಗನವಾಡಿ ಕೇಂದ್ರವನ್ನು ಬಹಿಷ್ಕರಿಸಿದ್ದ ವಿಚಾರ ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಒಡಿಶಾದ ಕೇಂದ್ರಪಾರ ಜಿಲ್ಲಾಡಳಿತದ ಅಧಿಕಾರಿಗಳ ಮನವೊಲಿಕೆ ಬಳಿಕ ಪೋಷಕರು ಅಂಗನವಾಡಿಗೆ ಮಕ್ಕಳನ್ನು...

FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಜಾಲತಾಣ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) 184 ಕೋಟಿ ರೂಪಾಯಿ ದಂಡ...

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...