Homeಅಂತರಾಷ್ಟ್ರೀಯನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್

ನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್

- Advertisement -
- Advertisement -

ಅಮೆರಿಕ ಸೇನೆಯಿಂದ ಶನಿವಾರ (ಜ.3) ಸೆರೆಹಿಡಿಯಲ್ಪಟ್ಟ ವೆನಿಜುವೆಲಾ ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ನ್ಯೂಯಾರ್ಕ್‌ಗೆ ಕರೆದೊಯ್ಯಲಾಗಿದೆ.

ನ್ಯೂಯಾರ್ಕ್‌ನ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟ್ರೇಷನ್ (ಡಿಇಎ) ಮುಖ್ಯ ಕಛೇರಿಯಲ್ಲಿ ಇಬ್ಬರನ್ನೂ ನಿಯಮ ಪ್ರಕ್ರಿಯೆಗೊಳಪಡಿಸಿ, ನಂತರ ಬ್ರೂಕ್ಲಿನ್‌ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ಗೆ (ಜೈಲಿಗೆ) ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮಡೂರೊ ಅವರನ್ನು ಯುಎಸ್‌ ಅಧಿಕಾರಿಗಳು ಡಿಇಎ ಪ್ರಧಾನ ಕಚೇರಿಯೊಳಗಿನ ಕಾರಿಡಾರ್ ಮೂಲಕ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ.

ಮುಂದೆ ಮಡುರೊ ಮತ್ತು ಫ್ಲೋರ್ಸ್ ದಂಪತಿಯನ್ನು ಅಮೆರಿಕದಲ್ಲಿ ದೀರ್ಘಕಾಲ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಏಕೆಂದರೆ, ಅಮೆರಿಕ ನ್ಯಾಯ ಇಲಾಖೆ ಅವರ ವಿರುದ್ದ ಈ ಹಿಂದಿನಿಂದಲೂ ಹಲವು ಆರೋಪಗಳನ್ನು ಮಾಡುತ್ತಾ ಬಂದಿದೆ. ಡ್ರಗ್ ಕಳ್ಳಸಾಗಣೆ ಮತ್ತು ಭಯೋತ್ಪಾದನೆ ಸಂಬಂಧಿತ ಷಡ್ಯಂತ್ರದ (ನಾರ್ಕೋ-ಟೆರರಿಸಂ) ಗುಂಪಿನೊಂದಿಗೆ ಭಾಗಿಯಾಗಿದ್ದಾರೆ ಎಂದು ನ್ಯಾಯ ಇಲಾಖೆ ಆರೋಪಿಸಿದೆ.

ಸರಳವಾಗಿ ಹೇಳುವುದಾದರೆ, ಮಡುರೊ ದಂಪತಿ ವೆನಿಜುವೆಲಾವನ್ನು ಬಳಸಿಕೊಂಡು ಟನ್‌ಗಟ್ಟಲೆ ಡ್ರಗ್ಸ್ (ಕೊಕೇನ್) ಅಮೆರಿಕಕ್ಕೆ ಕಳುಹಿಸಿದ್ದಾರೆ ಮತ್ತು ಭಯೋತ್ಪಾದಕ ಗುಂಪುಗಳೊಂದಿಗೆ ಸೇರಿ ಈ ಕೆಲಸ ಮಾಡಿದ್ದಾರೆ ಎಂಬುವುದು ಅಮೆರಿಕದ ಆರೋಪ.

ಅಧ್ಯಕ್ಷರನ್ನು ಸೆರೆಹಿಡಿದಿರುವ ಹಿನ್ನೆಲೆ, ವೆನಿಜುವೆಲಾದ ಆಡಳಿತವನ್ನು ಸದ್ಯಕ್ಕೆ ಅಮೆರಿಕವೇ ನೋಡಿಕೊಳ್ಳಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, ಸುರಕ್ಷಿತವಾದ, ಸರಿಯಾದ ಮತ್ತು ವಿವೇಚನಾಯುಕ್ತ ಪರಿವರ್ತನೆಯನ್ನು ಮಾಡಲು ಸಾಧ್ಯವಾಗುವವರೆಗೆ ನಾವು ವೆನಿಜುವೆಲಾವನ್ನು ಮುನ್ನಡೆಸುತ್ತೇವೆ ಎಂದಿದ್ದಾರೆ. ಅಮೆರಿಕ ವೆನೆಜುವೆಲಾದ ಅಪಾರ ತೈಲ ನಿಕ್ಷೇಪಗಳನ್ನು ಬಳಸಿ ‘ದೊಡ್ಡ ಪ್ರಮಾಣದಲ್ಲಿ’ ಇತರ ದೇಶಗಳಿಗೆ ಮಾರಾಟ ಮಾಡುತ್ತದೆ ಎಂದು ಇದೇ ಅವರು ತಿಳಿಸಿದ್ದಾರೆ.

ಅಮೆರಿಕ ಸೇನೆ ಆಪರೇಷನ್ ಅಬ್ಸೊಲ್ಯೂಟ್ ರಿಸಾಲ್ವ್ (Operation Absolute Resolve) ಎಂಬ ಹೆಸರಿನಲ್ಲಿ ವೆನಿಜುವೆಲಾ ರಾಜಧಾನಿ ಕಾರಕಸ್ ಮೇಲೆ ಶನಿವಾರ ಏಕಾಏಕಿ ದಾಳಿ ನಡೆಸಿದೆ. ಕಾರಕಸ್ ಮತ್ತು ಸುತ್ತಮುತ್ತಲಿನ ಹಲವು ಪ್ರದೇಶಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಿಂದ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ವೆನಿಜುವಾದ ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ದಾಳಿಯ ಬಳಿಕ ಅಧ್ಯಕ್ಷ ಮಡುರೊ ಅವರ ಮನೆಗೆ ನುಗ್ಗಿ, ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿದೆ. ನಂತರ ಇಬ್ಬರನ್ನೂ ಯುಎಸ್‌ಎಸ್‌ ಐವೊ ಜಿಮಾ ಯುದ್ಧನೌಕೆಗೆ ಕರೆದೊಯ್ದು, ಅಲ್ಲಿಂದ ನ್ಯೂಯಾರ್ಕ್‌ಗೆ ಸ್ಥಳಾಂತರಿಸಲಾಗಿದೆ.

ಕೇವಲ 30 ನಿಮಿಷದೊಳಗೆ ವೆನಿಜುವೆಲಾದ ಒಳಗೆ ನುಗ್ಗಿ, ರಾಜಧಾನಿ ಮೇಲೆ ಬಾಂಬ್ ದಾಳಿ ನಡೆಸಿ, ಅಧ್ಯಕ್ಷ ಮತ್ತು ಅವರು ಪತ್ನಿಯನ್ನು ಸೆರೆ ಹಿಡಿದಿರುವ ಅಮೆರಿಕದ ಕಾರ್ಯಾಚರಣೆಯನ್ನು ತಿಂಗಳ ಹಿಂದೆಯೇ ಯೋಜಿಸಲಾಗಿತ್ತು. ಇದಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಲಾಗಿತ್ತು ಎಂದು ವರದಿಯಾಗಿದೆ.

ಸಾರ್ವಭೌಮ ರಾಷ್ಟ್ರವೊಂದರ ಒಳಗೆ ನುಗ್ಗಿ, ಅದರ ಅಧ್ಯಕ್ಷರನ್ನು ಸೆರೆ ಹಿಡಿದು ಎಳೆದೊಯ್ದ ಅಮೆರಿಕದ ಈ ಕೃತ್ಯವನ್ನು ಜಗತ್ತಿನ ಹಲವು ರಾಷ್ಟ್ರಗಳು ಖಂಡಿಸಿವೆ. ಸಾರ್ವಜನಿಕ ವಯದಲ್ಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...