Homeಅಂತರಾಷ್ಟ್ರೀಯನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್

ನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್

- Advertisement -
- Advertisement -

ಅಮೆರಿಕ ಸೇನೆಯಿಂದ ಶನಿವಾರ (ಜ.3) ಸೆರೆಹಿಡಿಯಲ್ಪಟ್ಟ ವೆನಿಜುವೆಲಾ ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ನ್ಯೂಯಾರ್ಕ್‌ಗೆ ಕರೆದೊಯ್ಯಲಾಗಿದೆ.

ನ್ಯೂಯಾರ್ಕ್‌ನ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟ್ರೇಷನ್ (ಡಿಇಎ) ಮುಖ್ಯ ಕಛೇರಿಯಲ್ಲಿ ಇಬ್ಬರನ್ನೂ ನಿಯಮ ಪ್ರಕ್ರಿಯೆಗೊಳಪಡಿಸಿ, ನಂತರ ಬ್ರೂಕ್ಲಿನ್‌ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ಗೆ (ಜೈಲಿಗೆ) ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮಡೂರೊ ಅವರನ್ನು ಯುಎಸ್‌ ಅಧಿಕಾರಿಗಳು ಡಿಇಎ ಪ್ರಧಾನ ಕಚೇರಿಯೊಳಗಿನ ಕಾರಿಡಾರ್ ಮೂಲಕ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ.

ಮುಂದೆ ಮಡುರೊ ಮತ್ತು ಫ್ಲೋರ್ಸ್ ದಂಪತಿಯನ್ನು ಅಮೆರಿಕದಲ್ಲಿ ದೀರ್ಘಕಾಲ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಏಕೆಂದರೆ, ಅಮೆರಿಕ ನ್ಯಾಯ ಇಲಾಖೆ ಅವರ ವಿರುದ್ದ ಈ ಹಿಂದಿನಿಂದಲೂ ಹಲವು ಆರೋಪಗಳನ್ನು ಮಾಡುತ್ತಾ ಬಂದಿದೆ. ಡ್ರಗ್ ಕಳ್ಳಸಾಗಣೆ ಮತ್ತು ಭಯೋತ್ಪಾದನೆ ಸಂಬಂಧಿತ ಷಡ್ಯಂತ್ರದ (ನಾರ್ಕೋ-ಟೆರರಿಸಂ) ಗುಂಪಿನೊಂದಿಗೆ ಭಾಗಿಯಾಗಿದ್ದಾರೆ ಎಂದು ನ್ಯಾಯ ಇಲಾಖೆ ಆರೋಪಿಸಿದೆ.

ಸರಳವಾಗಿ ಹೇಳುವುದಾದರೆ, ಮಡುರೊ ದಂಪತಿ ವೆನಿಜುವೆಲಾವನ್ನು ಬಳಸಿಕೊಂಡು ಟನ್‌ಗಟ್ಟಲೆ ಡ್ರಗ್ಸ್ (ಕೊಕೇನ್) ಅಮೆರಿಕಕ್ಕೆ ಕಳುಹಿಸಿದ್ದಾರೆ ಮತ್ತು ಭಯೋತ್ಪಾದಕ ಗುಂಪುಗಳೊಂದಿಗೆ ಸೇರಿ ಈ ಕೆಲಸ ಮಾಡಿದ್ದಾರೆ ಎಂಬುವುದು ಅಮೆರಿಕದ ಆರೋಪ.

ಅಧ್ಯಕ್ಷರನ್ನು ಸೆರೆಹಿಡಿದಿರುವ ಹಿನ್ನೆಲೆ, ವೆನಿಜುವೆಲಾದ ಆಡಳಿತವನ್ನು ಸದ್ಯಕ್ಕೆ ಅಮೆರಿಕವೇ ನೋಡಿಕೊಳ್ಳಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, ಸುರಕ್ಷಿತವಾದ, ಸರಿಯಾದ ಮತ್ತು ವಿವೇಚನಾಯುಕ್ತ ಪರಿವರ್ತನೆಯನ್ನು ಮಾಡಲು ಸಾಧ್ಯವಾಗುವವರೆಗೆ ನಾವು ವೆನಿಜುವೆಲಾವನ್ನು ಮುನ್ನಡೆಸುತ್ತೇವೆ ಎಂದಿದ್ದಾರೆ. ಅಮೆರಿಕ ವೆನೆಜುವೆಲಾದ ಅಪಾರ ತೈಲ ನಿಕ್ಷೇಪಗಳನ್ನು ಬಳಸಿ ‘ದೊಡ್ಡ ಪ್ರಮಾಣದಲ್ಲಿ’ ಇತರ ದೇಶಗಳಿಗೆ ಮಾರಾಟ ಮಾಡುತ್ತದೆ ಎಂದು ಇದೇ ಅವರು ತಿಳಿಸಿದ್ದಾರೆ.

ಅಮೆರಿಕ ಸೇನೆ ಆಪರೇಷನ್ ಅಬ್ಸೊಲ್ಯೂಟ್ ರಿಸಾಲ್ವ್ (Operation Absolute Resolve) ಎಂಬ ಹೆಸರಿನಲ್ಲಿ ವೆನಿಜುವೆಲಾ ರಾಜಧಾನಿ ಕಾರಕಸ್ ಮೇಲೆ ಶನಿವಾರ ಏಕಾಏಕಿ ದಾಳಿ ನಡೆಸಿದೆ. ಕಾರಕಸ್ ಮತ್ತು ಸುತ್ತಮುತ್ತಲಿನ ಹಲವು ಪ್ರದೇಶಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಿಂದ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ವೆನಿಜುವಾದ ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ದಾಳಿಯ ಬಳಿಕ ಅಧ್ಯಕ್ಷ ಮಡುರೊ ಅವರ ಮನೆಗೆ ನುಗ್ಗಿ, ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿದೆ. ನಂತರ ಇಬ್ಬರನ್ನೂ ಯುಎಸ್‌ಎಸ್‌ ಐವೊ ಜಿಮಾ ಯುದ್ಧನೌಕೆಗೆ ಕರೆದೊಯ್ದು, ಅಲ್ಲಿಂದ ನ್ಯೂಯಾರ್ಕ್‌ಗೆ ಸ್ಥಳಾಂತರಿಸಲಾಗಿದೆ.

ಕೇವಲ 30 ನಿಮಿಷದೊಳಗೆ ವೆನಿಜುವೆಲಾದ ಒಳಗೆ ನುಗ್ಗಿ, ರಾಜಧಾನಿ ಮೇಲೆ ಬಾಂಬ್ ದಾಳಿ ನಡೆಸಿ, ಅಧ್ಯಕ್ಷ ಮತ್ತು ಅವರು ಪತ್ನಿಯನ್ನು ಸೆರೆ ಹಿಡಿದಿರುವ ಅಮೆರಿಕದ ಕಾರ್ಯಾಚರಣೆಯನ್ನು ತಿಂಗಳ ಹಿಂದೆಯೇ ಯೋಜಿಸಲಾಗಿತ್ತು. ಇದಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಲಾಗಿತ್ತು ಎಂದು ವರದಿಯಾಗಿದೆ.

ಸಾರ್ವಭೌಮ ರಾಷ್ಟ್ರವೊಂದರ ಒಳಗೆ ನುಗ್ಗಿ, ಅದರ ಅಧ್ಯಕ್ಷರನ್ನು ಸೆರೆ ಹಿಡಿದು ಎಳೆದೊಯ್ದ ಅಮೆರಿಕದ ಈ ಕೃತ್ಯವನ್ನು ಜಗತ್ತಿನ ಹಲವು ರಾಷ್ಟ್ರಗಳು ಖಂಡಿಸಿವೆ. ಸಾರ್ವಜನಿಕ ವಯದಲ್ಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...