Homeಅಂತರಾಷ್ಟ್ರೀಯನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್

ನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್

- Advertisement -
- Advertisement -

ಅಮೆರಿಕ ಸೇನೆಯಿಂದ ಶನಿವಾರ (ಜ.3) ಸೆರೆಹಿಡಿಯಲ್ಪಟ್ಟ ವೆನಿಜುವೆಲಾ ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ನ್ಯೂಯಾರ್ಕ್‌ಗೆ ಕರೆದೊಯ್ಯಲಾಗಿದೆ.

ನ್ಯೂಯಾರ್ಕ್‌ನ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟ್ರೇಷನ್ (ಡಿಇಎ) ಮುಖ್ಯ ಕಛೇರಿಯಲ್ಲಿ ಇಬ್ಬರನ್ನೂ ನಿಯಮ ಪ್ರಕ್ರಿಯೆಗೊಳಪಡಿಸಿ, ನಂತರ ಬ್ರೂಕ್ಲಿನ್‌ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ಗೆ (ಜೈಲಿಗೆ) ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮಡೂರೊ ಅವರನ್ನು ಯುಎಸ್‌ ಅಧಿಕಾರಿಗಳು ಡಿಇಎ ಪ್ರಧಾನ ಕಚೇರಿಯೊಳಗಿನ ಕಾರಿಡಾರ್ ಮೂಲಕ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ.

ಮುಂದೆ ಮಡುರೊ ಮತ್ತು ಫ್ಲೋರ್ಸ್ ದಂಪತಿಯನ್ನು ಅಮೆರಿಕದಲ್ಲಿ ದೀರ್ಘಕಾಲ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಏಕೆಂದರೆ, ಅಮೆರಿಕ ನ್ಯಾಯ ಇಲಾಖೆ ಅವರ ವಿರುದ್ದ ಈ ಹಿಂದಿನಿಂದಲೂ ಹಲವು ಆರೋಪಗಳನ್ನು ಮಾಡುತ್ತಾ ಬಂದಿದೆ. ಡ್ರಗ್ ಕಳ್ಳಸಾಗಣೆ ಮತ್ತು ಭಯೋತ್ಪಾದನೆ ಸಂಬಂಧಿತ ಷಡ್ಯಂತ್ರದ (ನಾರ್ಕೋ-ಟೆರರಿಸಂ) ಗುಂಪಿನೊಂದಿಗೆ ಭಾಗಿಯಾಗಿದ್ದಾರೆ ಎಂದು ನ್ಯಾಯ ಇಲಾಖೆ ಆರೋಪಿಸಿದೆ.

ಸರಳವಾಗಿ ಹೇಳುವುದಾದರೆ, ಮಡುರೊ ದಂಪತಿ ವೆನಿಜುವೆಲಾವನ್ನು ಬಳಸಿಕೊಂಡು ಟನ್‌ಗಟ್ಟಲೆ ಡ್ರಗ್ಸ್ (ಕೊಕೇನ್) ಅಮೆರಿಕಕ್ಕೆ ಕಳುಹಿಸಿದ್ದಾರೆ ಮತ್ತು ಭಯೋತ್ಪಾದಕ ಗುಂಪುಗಳೊಂದಿಗೆ ಸೇರಿ ಈ ಕೆಲಸ ಮಾಡಿದ್ದಾರೆ ಎಂಬುವುದು ಅಮೆರಿಕದ ಆರೋಪ.

ಅಧ್ಯಕ್ಷರನ್ನು ಸೆರೆಹಿಡಿದಿರುವ ಹಿನ್ನೆಲೆ, ವೆನಿಜುವೆಲಾದ ಆಡಳಿತವನ್ನು ಸದ್ಯಕ್ಕೆ ಅಮೆರಿಕವೇ ನೋಡಿಕೊಳ್ಳಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, ಸುರಕ್ಷಿತವಾದ, ಸರಿಯಾದ ಮತ್ತು ವಿವೇಚನಾಯುಕ್ತ ಪರಿವರ್ತನೆಯನ್ನು ಮಾಡಲು ಸಾಧ್ಯವಾಗುವವರೆಗೆ ನಾವು ವೆನಿಜುವೆಲಾವನ್ನು ಮುನ್ನಡೆಸುತ್ತೇವೆ ಎಂದಿದ್ದಾರೆ. ಅಮೆರಿಕ ವೆನೆಜುವೆಲಾದ ಅಪಾರ ತೈಲ ನಿಕ್ಷೇಪಗಳನ್ನು ಬಳಸಿ ‘ದೊಡ್ಡ ಪ್ರಮಾಣದಲ್ಲಿ’ ಇತರ ದೇಶಗಳಿಗೆ ಮಾರಾಟ ಮಾಡುತ್ತದೆ ಎಂದು ಇದೇ ಅವರು ತಿಳಿಸಿದ್ದಾರೆ.

ಅಮೆರಿಕ ಸೇನೆ ಆಪರೇಷನ್ ಅಬ್ಸೊಲ್ಯೂಟ್ ರಿಸಾಲ್ವ್ (Operation Absolute Resolve) ಎಂಬ ಹೆಸರಿನಲ್ಲಿ ವೆನಿಜುವೆಲಾ ರಾಜಧಾನಿ ಕಾರಕಸ್ ಮೇಲೆ ಶನಿವಾರ ಏಕಾಏಕಿ ದಾಳಿ ನಡೆಸಿದೆ. ಕಾರಕಸ್ ಮತ್ತು ಸುತ್ತಮುತ್ತಲಿನ ಹಲವು ಪ್ರದೇಶಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಿಂದ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ವೆನಿಜುವಾದ ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ದಾಳಿಯ ಬಳಿಕ ಅಧ್ಯಕ್ಷ ಮಡುರೊ ಅವರ ಮನೆಗೆ ನುಗ್ಗಿ, ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿದೆ. ನಂತರ ಇಬ್ಬರನ್ನೂ ಯುಎಸ್‌ಎಸ್‌ ಐವೊ ಜಿಮಾ ಯುದ್ಧನೌಕೆಗೆ ಕರೆದೊಯ್ದು, ಅಲ್ಲಿಂದ ನ್ಯೂಯಾರ್ಕ್‌ಗೆ ಸ್ಥಳಾಂತರಿಸಲಾಗಿದೆ.

ಕೇವಲ 30 ನಿಮಿಷದೊಳಗೆ ವೆನಿಜುವೆಲಾದ ಒಳಗೆ ನುಗ್ಗಿ, ರಾಜಧಾನಿ ಮೇಲೆ ಬಾಂಬ್ ದಾಳಿ ನಡೆಸಿ, ಅಧ್ಯಕ್ಷ ಮತ್ತು ಅವರು ಪತ್ನಿಯನ್ನು ಸೆರೆ ಹಿಡಿದಿರುವ ಅಮೆರಿಕದ ಕಾರ್ಯಾಚರಣೆಯನ್ನು ತಿಂಗಳ ಹಿಂದೆಯೇ ಯೋಜಿಸಲಾಗಿತ್ತು. ಇದಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಲಾಗಿತ್ತು ಎಂದು ವರದಿಯಾಗಿದೆ.

ಸಾರ್ವಭೌಮ ರಾಷ್ಟ್ರವೊಂದರ ಒಳಗೆ ನುಗ್ಗಿ, ಅದರ ಅಧ್ಯಕ್ಷರನ್ನು ಸೆರೆ ಹಿಡಿದು ಎಳೆದೊಯ್ದ ಅಮೆರಿಕದ ಈ ಕೃತ್ಯವನ್ನು ಜಗತ್ತಿನ ಹಲವು ರಾಷ್ಟ್ರಗಳು ಖಂಡಿಸಿವೆ. ಸಾರ್ವಜನಿಕ ವಯದಲ್ಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...