Homeಕರ್ನಾಟಕಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

ಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

- Advertisement -
- Advertisement -

ಮದ್ಯ ನಿಷೇಧದ ಕುರಿತು ಮುಖ್ಯಮಂತ್ರಿಗಳು ನಮ್ಮೊಂದಿಗೆ ಸಭೆ ನಡೆಸಬೇಕು ಎಂಬ ಮಹಳಿಯರ ಬೇಡಿಕೆ ಹಲವು ವರ್ಷಗಳದ್ದು. ಅದಕ್ಕಾಗಿ ಇದೇ ವರ್ಷ ಜನವರಿಯಲ್ಲಿ 12 ದಿನಗಳ ಕಾಲ ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರು ಚಿತ್ರದುರ್ಗದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸಿದ್ದರೂ ಸಹ ಅಂದಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕನಿಷ್ಠ ಮಹಿಳೆಯನ್ನು ಭೇಟಿ ಮಾಡದೇ ದರ್ಪ ಮೆರೆದಿದ್ದರು.

ಆ ಸಂದರ್ಭದಲ್ಲಿ ಬಿಜೆಪಿಯ ಜಗದೀಶ್‌ ಶೆಟ್ಟರ್‌, ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರ ಮಹಿಳೆಯರ ಪರವಾಗಿ ಮಾತನಾಡಿದ್ದರು. ಆದರೀಗ ಅದೇ ಮಹಿಳೆಯರು ಕನಿಷ್ಟ ಸಭೆ ನಡೆಸಿ ಎಂದು ಮುಖ್ಯಮಂತ್ರಿಗಳ ಬಳಿ ಒತ್ತಾಯಿಸಿದರೆ ಯಡಿಯೂರಪ್ಪನವರು ತಲೆಕೆಡಿಸಿಕೊಳ್ಳುತ್ತಿಲ್ಲ. ಮದ್ಯ ನಿಷೇಧಿಸುವ ಯಾವುದೇ ಪ್ರಸ್ತಾಪ ನಮ್ಮ ಬಳಿ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿಗಳು ಸಭೆ ಕುರಿತು ಮಾತೇ ಆಡುತ್ತಿಲ್ಲ.

ಪಟ್ಟು ಬಿಡದ ಬಡಮಹಿಳೆಯರು ಇಂದು ಬೆಂಗಳೂರಿಗೆ ಬಂದಿದ್ದಾರೆ. ಗಾಂಧಿಜೀಯವರ 150 ನೇ ಜಯಂತಿಯ ಅಂಗವಾಗಿ ಅವರ ಕನಸಾಗಿರುವ ಮದ್ಯಪಾನ ನಿಷೇಧವನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಮಹಿಳೆಯರು ಸತ್ಯಾಗ್ರಹ ನಡೆಸುತ್ತಿದ್ದಾರೆ.

“ಸತ್ಯಾಗ್ರಹಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದರೆ ನಾವು ಅನುಮತಿ ನೀಡಲು ಆಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಕ್ಕೆ ಸಂಖ್ಯೆಯನ್ನು ಇಳಿಸಿಕೊಳ್ಳಲಾಯಿತು. ಆದರೆ ಇದೀಗ ನಮ್ಮ ಪ್ರತಿಭಟನೆಗೆ ಅನುಮತಿ ನೀಡದೇ, ಬೆಂಗಳೂರಿನ ಯಾವುದೇ ಜಾಗವನ್ನು ನಿಗದಿ ಮಾಡದೇ ನೂರಾರು ಸತ್ಯಾಗ್ರಹಿಗಳನ್ನು ರೈಲ್ವೆ ನಿಲ್ದಾಣದಲ್ಲೇ ಕೂರಿಸಲಾಗಿದೆ. ಮುಖ್ಯಮಂತ್ರಿಗಳು ಸಭೆ ಕರೆಯುವವರೆಗೂ ಬೆಂಗಳೂರಿನಿಂದ ಕದಲುವುದಿಲ್ಲ” ಎಂದು ಹಳ್ಳಿಗಳಿಂದ ಬಂದಿರುವ ತಾಯಂದಿರು ದಿಟ್ಟವಾಗಿ ಹೇಳುತ್ತಿದ್ದಾರೆ.

ಎಂತಹ ಕಾರ್ಯಕ್ರಮಕ್ಕೂ ಬೇಕಾದರೂ ಅನುಮತಿ ನೀಡುವ ಪೊಲೀಸ್‌ ಇಲಾಖೆ ಬಡ ಮಹಿಳೆಯರ ಸತ್ಯಾಗ್ರಹಕ್ಕೆ ಅನುಮತಿ ನೀಡದೇ ಇರುವುದು ನಾಚಿಗೇಡಿನ ಸಂಗತಿಯಾಗಿದೆ. ಮಹಿಳೆಯರ ಹೋರಾಟಕ್ಕೆ 15 ದಿನಗಳ ಮೊದಲೇ ಅನುಮತಿಗೆ ಅರ್ಜಿ ಹಾಕಿದ್ದರೂ ಅನುಮತಿ ನೀಡದ ಪೊಲೀಸ್‌ ಇಲಾಖೆ ಯಾರ ಮರ್ಜಿಗೆ ಒಳಗಾಗಿದೆ ಎಂಬ ಪ್ರಶ್ನೆ ಎದ್ದಿದೆ.

ಇಲ್ಲಿರುವ ಮಹಿಳೆಯರು ಮದ್ಯಪಾನದಿಂದಾಗುವ ದುಷ್ಪರಿಣಾಮಗಳನ್ನು ಸ್ವತಃ ಉಂಡು ಬಳಲಿದವರು. ಇವರೊಡಲಲ್ಲಿ ನೂರಾರು ನೋವಿನ ಕಥೆಗಳಿವೆ. ಸಮಾಜದ ಒಳಿತಿಗೆ, ಒಂದಿಷ್ಟು ನೆಮ್ಮದಿಯ ಬದುಕಿಗಾಗಿ ಮದ್ಯಪಾನ ನಿಷೇಧ ಮಾಡಿ ಎಂದು ಮಹಿಳೆಯರು ಬೇಡಿಕೆಯಿಟ್ಟಿದ್ದಾರೆ. ಒಮ್ಮೆಗೆ ಸಂರ್ಪೂಣ ಮದ್ಯಪಾನ ನಿಷೇಧ ಸಾದ್ಯವಿಲ್ಲವೆನ್ನುವುದು ಅವರಿಗೂ ಗೊತ್ತಿದೆ. ಮೊದಲು ಸರ್ಕಾರವೇ ಟಾರ್ಗೆಟ್‌ ನೀಡಿ ಮದ್ಯ ಮಾರಾಟ ಹೆಚ್ಚು ಮಾಡುವ ಆದೇಶ ವಾಪಸ್‌ ಪಡೆಯಬೇಕು, ಅಕ್ರಮ ಮದ್ಯದಂಗಡಿಗಳನ್ನು ಮುಚ್ಚಿಸಬೇಕು, ಮದ್ಯ ಮಾರಟ ಎಷ್ಟಿರಬೇಕೆಂಬ ತೀರ್ಮಾನವನ್ನು ಗ್ರಾಮಪಂಚಾಯ್ತಿಗಳಿಗೆ ನೀಡಬೇಕು ಮತ್ತು ಕೊನೆಯದಾಗಿ ಈ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಸಭೆ ಕರೆಯಬೇಕು ಇವಿಷ್ಟೇ ಮಹಿಳೆಯರ ಹಕ್ಕೊತ್ತಾಯಗಳಾಗಿವೆ.

ಇನ್ನು ಹಿರಿಯ ಗಾಂಧಿವಾದಿ ಹೋರಾಟಗಾರ ಪ್ರಸನ್ನರವರು ಸತ್ಯಾಗ್ರಹ ನಡೆಯುತ್ತಿರುವ ರೈಲ್ವೆ ನಿಲ್ದಾಣಕ್ಕೆ ಬಂದು ಬೆಂಬಲ ಸೂಚಿಸಿದ್ದಾರೆ. “ನೂರಾರು ಮಹಿಳೆಯರು ತಮ್ಮ ನೋವಿನ ಕಥೆ ಹೇಳಲು, ಮದ್ಯ ನಿಷೇಧ ಆಗಬೇಕು ಅಂತ ಬೆಂಗಳೂರಿಗೆ ಬಂದಿದ್ದಾರೆ. ಅವರನ್ನು ಕರೆದು ಸಭೆ ನಡೆಸದೇ ಹೀಗೆ ಬೀದಿಯಲ್ಲಿ ಕೂರಿಸಿರುವುದು ನನಗೆ ತುಂಬಾ ನೋವಾಗುತ್ತಿದೆ.” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೊದಲ ಹಂತದಲ್ಲಿ ಚಳುವಳಿ ಗಟ್ಟಿಯಾಗಿರುವ ರಾಯಚೂರು…ಕಡೆಯಲ್ಲಿ ಹೆಂಡ ಮಾರಾಟ ರದ್ದಾಗಲಿ.

  2. ಹಲವಾರು ಹೋರಾಟ ತ್ಯಾಗ ಬಲಿದಾನ ಮತ್ತು ಚಳುವಳಿಗೆoದಲೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಆದರೆ ಈಗ ಹೋರಾಟ ಅಥವಾ ಚಳುವಳಿಗಳನ್ನು ಮಾಡಲು ಸಕಾ೯ರ ದ ಅನುಮತಿ ಪಡೆಯಬೇಕು. ಸಕಾ೯ರ ಅನುಮತಿ ಕೊಡುತ್ತದೆ ಯೇ?

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...