Homeಕರ್ನಾಟಕಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

ಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

- Advertisement -
- Advertisement -

ಮದ್ಯ ನಿಷೇಧದ ಕುರಿತು ಮುಖ್ಯಮಂತ್ರಿಗಳು ನಮ್ಮೊಂದಿಗೆ ಸಭೆ ನಡೆಸಬೇಕು ಎಂಬ ಮಹಳಿಯರ ಬೇಡಿಕೆ ಹಲವು ವರ್ಷಗಳದ್ದು. ಅದಕ್ಕಾಗಿ ಇದೇ ವರ್ಷ ಜನವರಿಯಲ್ಲಿ 12 ದಿನಗಳ ಕಾಲ ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರು ಚಿತ್ರದುರ್ಗದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸಿದ್ದರೂ ಸಹ ಅಂದಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕನಿಷ್ಠ ಮಹಿಳೆಯನ್ನು ಭೇಟಿ ಮಾಡದೇ ದರ್ಪ ಮೆರೆದಿದ್ದರು.

ಆ ಸಂದರ್ಭದಲ್ಲಿ ಬಿಜೆಪಿಯ ಜಗದೀಶ್‌ ಶೆಟ್ಟರ್‌, ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರ ಮಹಿಳೆಯರ ಪರವಾಗಿ ಮಾತನಾಡಿದ್ದರು. ಆದರೀಗ ಅದೇ ಮಹಿಳೆಯರು ಕನಿಷ್ಟ ಸಭೆ ನಡೆಸಿ ಎಂದು ಮುಖ್ಯಮಂತ್ರಿಗಳ ಬಳಿ ಒತ್ತಾಯಿಸಿದರೆ ಯಡಿಯೂರಪ್ಪನವರು ತಲೆಕೆಡಿಸಿಕೊಳ್ಳುತ್ತಿಲ್ಲ. ಮದ್ಯ ನಿಷೇಧಿಸುವ ಯಾವುದೇ ಪ್ರಸ್ತಾಪ ನಮ್ಮ ಬಳಿ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿಗಳು ಸಭೆ ಕುರಿತು ಮಾತೇ ಆಡುತ್ತಿಲ್ಲ.

ಪಟ್ಟು ಬಿಡದ ಬಡಮಹಿಳೆಯರು ಇಂದು ಬೆಂಗಳೂರಿಗೆ ಬಂದಿದ್ದಾರೆ. ಗಾಂಧಿಜೀಯವರ 150 ನೇ ಜಯಂತಿಯ ಅಂಗವಾಗಿ ಅವರ ಕನಸಾಗಿರುವ ಮದ್ಯಪಾನ ನಿಷೇಧವನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಮಹಿಳೆಯರು ಸತ್ಯಾಗ್ರಹ ನಡೆಸುತ್ತಿದ್ದಾರೆ.

“ಸತ್ಯಾಗ್ರಹಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದರೆ ನಾವು ಅನುಮತಿ ನೀಡಲು ಆಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಕ್ಕೆ ಸಂಖ್ಯೆಯನ್ನು ಇಳಿಸಿಕೊಳ್ಳಲಾಯಿತು. ಆದರೆ ಇದೀಗ ನಮ್ಮ ಪ್ರತಿಭಟನೆಗೆ ಅನುಮತಿ ನೀಡದೇ, ಬೆಂಗಳೂರಿನ ಯಾವುದೇ ಜಾಗವನ್ನು ನಿಗದಿ ಮಾಡದೇ ನೂರಾರು ಸತ್ಯಾಗ್ರಹಿಗಳನ್ನು ರೈಲ್ವೆ ನಿಲ್ದಾಣದಲ್ಲೇ ಕೂರಿಸಲಾಗಿದೆ. ಮುಖ್ಯಮಂತ್ರಿಗಳು ಸಭೆ ಕರೆಯುವವರೆಗೂ ಬೆಂಗಳೂರಿನಿಂದ ಕದಲುವುದಿಲ್ಲ” ಎಂದು ಹಳ್ಳಿಗಳಿಂದ ಬಂದಿರುವ ತಾಯಂದಿರು ದಿಟ್ಟವಾಗಿ ಹೇಳುತ್ತಿದ್ದಾರೆ.

ಎಂತಹ ಕಾರ್ಯಕ್ರಮಕ್ಕೂ ಬೇಕಾದರೂ ಅನುಮತಿ ನೀಡುವ ಪೊಲೀಸ್‌ ಇಲಾಖೆ ಬಡ ಮಹಿಳೆಯರ ಸತ್ಯಾಗ್ರಹಕ್ಕೆ ಅನುಮತಿ ನೀಡದೇ ಇರುವುದು ನಾಚಿಗೇಡಿನ ಸಂಗತಿಯಾಗಿದೆ. ಮಹಿಳೆಯರ ಹೋರಾಟಕ್ಕೆ 15 ದಿನಗಳ ಮೊದಲೇ ಅನುಮತಿಗೆ ಅರ್ಜಿ ಹಾಕಿದ್ದರೂ ಅನುಮತಿ ನೀಡದ ಪೊಲೀಸ್‌ ಇಲಾಖೆ ಯಾರ ಮರ್ಜಿಗೆ ಒಳಗಾಗಿದೆ ಎಂಬ ಪ್ರಶ್ನೆ ಎದ್ದಿದೆ.

ಇಲ್ಲಿರುವ ಮಹಿಳೆಯರು ಮದ್ಯಪಾನದಿಂದಾಗುವ ದುಷ್ಪರಿಣಾಮಗಳನ್ನು ಸ್ವತಃ ಉಂಡು ಬಳಲಿದವರು. ಇವರೊಡಲಲ್ಲಿ ನೂರಾರು ನೋವಿನ ಕಥೆಗಳಿವೆ. ಸಮಾಜದ ಒಳಿತಿಗೆ, ಒಂದಿಷ್ಟು ನೆಮ್ಮದಿಯ ಬದುಕಿಗಾಗಿ ಮದ್ಯಪಾನ ನಿಷೇಧ ಮಾಡಿ ಎಂದು ಮಹಿಳೆಯರು ಬೇಡಿಕೆಯಿಟ್ಟಿದ್ದಾರೆ. ಒಮ್ಮೆಗೆ ಸಂರ್ಪೂಣ ಮದ್ಯಪಾನ ನಿಷೇಧ ಸಾದ್ಯವಿಲ್ಲವೆನ್ನುವುದು ಅವರಿಗೂ ಗೊತ್ತಿದೆ. ಮೊದಲು ಸರ್ಕಾರವೇ ಟಾರ್ಗೆಟ್‌ ನೀಡಿ ಮದ್ಯ ಮಾರಾಟ ಹೆಚ್ಚು ಮಾಡುವ ಆದೇಶ ವಾಪಸ್‌ ಪಡೆಯಬೇಕು, ಅಕ್ರಮ ಮದ್ಯದಂಗಡಿಗಳನ್ನು ಮುಚ್ಚಿಸಬೇಕು, ಮದ್ಯ ಮಾರಟ ಎಷ್ಟಿರಬೇಕೆಂಬ ತೀರ್ಮಾನವನ್ನು ಗ್ರಾಮಪಂಚಾಯ್ತಿಗಳಿಗೆ ನೀಡಬೇಕು ಮತ್ತು ಕೊನೆಯದಾಗಿ ಈ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಸಭೆ ಕರೆಯಬೇಕು ಇವಿಷ್ಟೇ ಮಹಿಳೆಯರ ಹಕ್ಕೊತ್ತಾಯಗಳಾಗಿವೆ.

ಇನ್ನು ಹಿರಿಯ ಗಾಂಧಿವಾದಿ ಹೋರಾಟಗಾರ ಪ್ರಸನ್ನರವರು ಸತ್ಯಾಗ್ರಹ ನಡೆಯುತ್ತಿರುವ ರೈಲ್ವೆ ನಿಲ್ದಾಣಕ್ಕೆ ಬಂದು ಬೆಂಬಲ ಸೂಚಿಸಿದ್ದಾರೆ. “ನೂರಾರು ಮಹಿಳೆಯರು ತಮ್ಮ ನೋವಿನ ಕಥೆ ಹೇಳಲು, ಮದ್ಯ ನಿಷೇಧ ಆಗಬೇಕು ಅಂತ ಬೆಂಗಳೂರಿಗೆ ಬಂದಿದ್ದಾರೆ. ಅವರನ್ನು ಕರೆದು ಸಭೆ ನಡೆಸದೇ ಹೀಗೆ ಬೀದಿಯಲ್ಲಿ ಕೂರಿಸಿರುವುದು ನನಗೆ ತುಂಬಾ ನೋವಾಗುತ್ತಿದೆ.” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೊದಲ ಹಂತದಲ್ಲಿ ಚಳುವಳಿ ಗಟ್ಟಿಯಾಗಿರುವ ರಾಯಚೂರು…ಕಡೆಯಲ್ಲಿ ಹೆಂಡ ಮಾರಾಟ ರದ್ದಾಗಲಿ.

  2. ಹಲವಾರು ಹೋರಾಟ ತ್ಯಾಗ ಬಲಿದಾನ ಮತ್ತು ಚಳುವಳಿಗೆoದಲೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಆದರೆ ಈಗ ಹೋರಾಟ ಅಥವಾ ಚಳುವಳಿಗಳನ್ನು ಮಾಡಲು ಸಕಾ೯ರ ದ ಅನುಮತಿ ಪಡೆಯಬೇಕು. ಸಕಾ೯ರ ಅನುಮತಿ ಕೊಡುತ್ತದೆ ಯೇ?

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...