Homeಕರ್ನಾಟಕಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

ಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

- Advertisement -
- Advertisement -

ಮದ್ಯ ನಿಷೇಧದ ಕುರಿತು ಮುಖ್ಯಮಂತ್ರಿಗಳು ನಮ್ಮೊಂದಿಗೆ ಸಭೆ ನಡೆಸಬೇಕು ಎಂಬ ಮಹಳಿಯರ ಬೇಡಿಕೆ ಹಲವು ವರ್ಷಗಳದ್ದು. ಅದಕ್ಕಾಗಿ ಇದೇ ವರ್ಷ ಜನವರಿಯಲ್ಲಿ 12 ದಿನಗಳ ಕಾಲ ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರು ಚಿತ್ರದುರ್ಗದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸಿದ್ದರೂ ಸಹ ಅಂದಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕನಿಷ್ಠ ಮಹಿಳೆಯನ್ನು ಭೇಟಿ ಮಾಡದೇ ದರ್ಪ ಮೆರೆದಿದ್ದರು.

ಆ ಸಂದರ್ಭದಲ್ಲಿ ಬಿಜೆಪಿಯ ಜಗದೀಶ್‌ ಶೆಟ್ಟರ್‌, ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರ ಮಹಿಳೆಯರ ಪರವಾಗಿ ಮಾತನಾಡಿದ್ದರು. ಆದರೀಗ ಅದೇ ಮಹಿಳೆಯರು ಕನಿಷ್ಟ ಸಭೆ ನಡೆಸಿ ಎಂದು ಮುಖ್ಯಮಂತ್ರಿಗಳ ಬಳಿ ಒತ್ತಾಯಿಸಿದರೆ ಯಡಿಯೂರಪ್ಪನವರು ತಲೆಕೆಡಿಸಿಕೊಳ್ಳುತ್ತಿಲ್ಲ. ಮದ್ಯ ನಿಷೇಧಿಸುವ ಯಾವುದೇ ಪ್ರಸ್ತಾಪ ನಮ್ಮ ಬಳಿ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿಗಳು ಸಭೆ ಕುರಿತು ಮಾತೇ ಆಡುತ್ತಿಲ್ಲ.

ಪಟ್ಟು ಬಿಡದ ಬಡಮಹಿಳೆಯರು ಇಂದು ಬೆಂಗಳೂರಿಗೆ ಬಂದಿದ್ದಾರೆ. ಗಾಂಧಿಜೀಯವರ 150 ನೇ ಜಯಂತಿಯ ಅಂಗವಾಗಿ ಅವರ ಕನಸಾಗಿರುವ ಮದ್ಯಪಾನ ನಿಷೇಧವನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಮಹಿಳೆಯರು ಸತ್ಯಾಗ್ರಹ ನಡೆಸುತ್ತಿದ್ದಾರೆ.

“ಸತ್ಯಾಗ್ರಹಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದರೆ ನಾವು ಅನುಮತಿ ನೀಡಲು ಆಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಕ್ಕೆ ಸಂಖ್ಯೆಯನ್ನು ಇಳಿಸಿಕೊಳ್ಳಲಾಯಿತು. ಆದರೆ ಇದೀಗ ನಮ್ಮ ಪ್ರತಿಭಟನೆಗೆ ಅನುಮತಿ ನೀಡದೇ, ಬೆಂಗಳೂರಿನ ಯಾವುದೇ ಜಾಗವನ್ನು ನಿಗದಿ ಮಾಡದೇ ನೂರಾರು ಸತ್ಯಾಗ್ರಹಿಗಳನ್ನು ರೈಲ್ವೆ ನಿಲ್ದಾಣದಲ್ಲೇ ಕೂರಿಸಲಾಗಿದೆ. ಮುಖ್ಯಮಂತ್ರಿಗಳು ಸಭೆ ಕರೆಯುವವರೆಗೂ ಬೆಂಗಳೂರಿನಿಂದ ಕದಲುವುದಿಲ್ಲ” ಎಂದು ಹಳ್ಳಿಗಳಿಂದ ಬಂದಿರುವ ತಾಯಂದಿರು ದಿಟ್ಟವಾಗಿ ಹೇಳುತ್ತಿದ್ದಾರೆ.

ಎಂತಹ ಕಾರ್ಯಕ್ರಮಕ್ಕೂ ಬೇಕಾದರೂ ಅನುಮತಿ ನೀಡುವ ಪೊಲೀಸ್‌ ಇಲಾಖೆ ಬಡ ಮಹಿಳೆಯರ ಸತ್ಯಾಗ್ರಹಕ್ಕೆ ಅನುಮತಿ ನೀಡದೇ ಇರುವುದು ನಾಚಿಗೇಡಿನ ಸಂಗತಿಯಾಗಿದೆ. ಮಹಿಳೆಯರ ಹೋರಾಟಕ್ಕೆ 15 ದಿನಗಳ ಮೊದಲೇ ಅನುಮತಿಗೆ ಅರ್ಜಿ ಹಾಕಿದ್ದರೂ ಅನುಮತಿ ನೀಡದ ಪೊಲೀಸ್‌ ಇಲಾಖೆ ಯಾರ ಮರ್ಜಿಗೆ ಒಳಗಾಗಿದೆ ಎಂಬ ಪ್ರಶ್ನೆ ಎದ್ದಿದೆ.

ಇಲ್ಲಿರುವ ಮಹಿಳೆಯರು ಮದ್ಯಪಾನದಿಂದಾಗುವ ದುಷ್ಪರಿಣಾಮಗಳನ್ನು ಸ್ವತಃ ಉಂಡು ಬಳಲಿದವರು. ಇವರೊಡಲಲ್ಲಿ ನೂರಾರು ನೋವಿನ ಕಥೆಗಳಿವೆ. ಸಮಾಜದ ಒಳಿತಿಗೆ, ಒಂದಿಷ್ಟು ನೆಮ್ಮದಿಯ ಬದುಕಿಗಾಗಿ ಮದ್ಯಪಾನ ನಿಷೇಧ ಮಾಡಿ ಎಂದು ಮಹಿಳೆಯರು ಬೇಡಿಕೆಯಿಟ್ಟಿದ್ದಾರೆ. ಒಮ್ಮೆಗೆ ಸಂರ್ಪೂಣ ಮದ್ಯಪಾನ ನಿಷೇಧ ಸಾದ್ಯವಿಲ್ಲವೆನ್ನುವುದು ಅವರಿಗೂ ಗೊತ್ತಿದೆ. ಮೊದಲು ಸರ್ಕಾರವೇ ಟಾರ್ಗೆಟ್‌ ನೀಡಿ ಮದ್ಯ ಮಾರಾಟ ಹೆಚ್ಚು ಮಾಡುವ ಆದೇಶ ವಾಪಸ್‌ ಪಡೆಯಬೇಕು, ಅಕ್ರಮ ಮದ್ಯದಂಗಡಿಗಳನ್ನು ಮುಚ್ಚಿಸಬೇಕು, ಮದ್ಯ ಮಾರಟ ಎಷ್ಟಿರಬೇಕೆಂಬ ತೀರ್ಮಾನವನ್ನು ಗ್ರಾಮಪಂಚಾಯ್ತಿಗಳಿಗೆ ನೀಡಬೇಕು ಮತ್ತು ಕೊನೆಯದಾಗಿ ಈ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಸಭೆ ಕರೆಯಬೇಕು ಇವಿಷ್ಟೇ ಮಹಿಳೆಯರ ಹಕ್ಕೊತ್ತಾಯಗಳಾಗಿವೆ.

ಇನ್ನು ಹಿರಿಯ ಗಾಂಧಿವಾದಿ ಹೋರಾಟಗಾರ ಪ್ರಸನ್ನರವರು ಸತ್ಯಾಗ್ರಹ ನಡೆಯುತ್ತಿರುವ ರೈಲ್ವೆ ನಿಲ್ದಾಣಕ್ಕೆ ಬಂದು ಬೆಂಬಲ ಸೂಚಿಸಿದ್ದಾರೆ. “ನೂರಾರು ಮಹಿಳೆಯರು ತಮ್ಮ ನೋವಿನ ಕಥೆ ಹೇಳಲು, ಮದ್ಯ ನಿಷೇಧ ಆಗಬೇಕು ಅಂತ ಬೆಂಗಳೂರಿಗೆ ಬಂದಿದ್ದಾರೆ. ಅವರನ್ನು ಕರೆದು ಸಭೆ ನಡೆಸದೇ ಹೀಗೆ ಬೀದಿಯಲ್ಲಿ ಕೂರಿಸಿರುವುದು ನನಗೆ ತುಂಬಾ ನೋವಾಗುತ್ತಿದೆ.” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೊದಲ ಹಂತದಲ್ಲಿ ಚಳುವಳಿ ಗಟ್ಟಿಯಾಗಿರುವ ರಾಯಚೂರು…ಕಡೆಯಲ್ಲಿ ಹೆಂಡ ಮಾರಾಟ ರದ್ದಾಗಲಿ.

  2. ಹಲವಾರು ಹೋರಾಟ ತ್ಯಾಗ ಬಲಿದಾನ ಮತ್ತು ಚಳುವಳಿಗೆoದಲೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಆದರೆ ಈಗ ಹೋರಾಟ ಅಥವಾ ಚಳುವಳಿಗಳನ್ನು ಮಾಡಲು ಸಕಾ೯ರ ದ ಅನುಮತಿ ಪಡೆಯಬೇಕು. ಸಕಾ೯ರ ಅನುಮತಿ ಕೊಡುತ್ತದೆ ಯೇ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...