Homeಕರ್ನಾಟಕಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

ಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

- Advertisement -
- Advertisement -

ಮದ್ಯ ನಿಷೇಧದ ಕುರಿತು ಮುಖ್ಯಮಂತ್ರಿಗಳು ನಮ್ಮೊಂದಿಗೆ ಸಭೆ ನಡೆಸಬೇಕು ಎಂಬ ಮಹಳಿಯರ ಬೇಡಿಕೆ ಹಲವು ವರ್ಷಗಳದ್ದು. ಅದಕ್ಕಾಗಿ ಇದೇ ವರ್ಷ ಜನವರಿಯಲ್ಲಿ 12 ದಿನಗಳ ಕಾಲ ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರು ಚಿತ್ರದುರ್ಗದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸಿದ್ದರೂ ಸಹ ಅಂದಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕನಿಷ್ಠ ಮಹಿಳೆಯನ್ನು ಭೇಟಿ ಮಾಡದೇ ದರ್ಪ ಮೆರೆದಿದ್ದರು.

ಆ ಸಂದರ್ಭದಲ್ಲಿ ಬಿಜೆಪಿಯ ಜಗದೀಶ್‌ ಶೆಟ್ಟರ್‌, ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರ ಮಹಿಳೆಯರ ಪರವಾಗಿ ಮಾತನಾಡಿದ್ದರು. ಆದರೀಗ ಅದೇ ಮಹಿಳೆಯರು ಕನಿಷ್ಟ ಸಭೆ ನಡೆಸಿ ಎಂದು ಮುಖ್ಯಮಂತ್ರಿಗಳ ಬಳಿ ಒತ್ತಾಯಿಸಿದರೆ ಯಡಿಯೂರಪ್ಪನವರು ತಲೆಕೆಡಿಸಿಕೊಳ್ಳುತ್ತಿಲ್ಲ. ಮದ್ಯ ನಿಷೇಧಿಸುವ ಯಾವುದೇ ಪ್ರಸ್ತಾಪ ನಮ್ಮ ಬಳಿ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿಗಳು ಸಭೆ ಕುರಿತು ಮಾತೇ ಆಡುತ್ತಿಲ್ಲ.

ಪಟ್ಟು ಬಿಡದ ಬಡಮಹಿಳೆಯರು ಇಂದು ಬೆಂಗಳೂರಿಗೆ ಬಂದಿದ್ದಾರೆ. ಗಾಂಧಿಜೀಯವರ 150 ನೇ ಜಯಂತಿಯ ಅಂಗವಾಗಿ ಅವರ ಕನಸಾಗಿರುವ ಮದ್ಯಪಾನ ನಿಷೇಧವನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಮಹಿಳೆಯರು ಸತ್ಯಾಗ್ರಹ ನಡೆಸುತ್ತಿದ್ದಾರೆ.

“ಸತ್ಯಾಗ್ರಹಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದರೆ ನಾವು ಅನುಮತಿ ನೀಡಲು ಆಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಕ್ಕೆ ಸಂಖ್ಯೆಯನ್ನು ಇಳಿಸಿಕೊಳ್ಳಲಾಯಿತು. ಆದರೆ ಇದೀಗ ನಮ್ಮ ಪ್ರತಿಭಟನೆಗೆ ಅನುಮತಿ ನೀಡದೇ, ಬೆಂಗಳೂರಿನ ಯಾವುದೇ ಜಾಗವನ್ನು ನಿಗದಿ ಮಾಡದೇ ನೂರಾರು ಸತ್ಯಾಗ್ರಹಿಗಳನ್ನು ರೈಲ್ವೆ ನಿಲ್ದಾಣದಲ್ಲೇ ಕೂರಿಸಲಾಗಿದೆ. ಮುಖ್ಯಮಂತ್ರಿಗಳು ಸಭೆ ಕರೆಯುವವರೆಗೂ ಬೆಂಗಳೂರಿನಿಂದ ಕದಲುವುದಿಲ್ಲ” ಎಂದು ಹಳ್ಳಿಗಳಿಂದ ಬಂದಿರುವ ತಾಯಂದಿರು ದಿಟ್ಟವಾಗಿ ಹೇಳುತ್ತಿದ್ದಾರೆ.

ಎಂತಹ ಕಾರ್ಯಕ್ರಮಕ್ಕೂ ಬೇಕಾದರೂ ಅನುಮತಿ ನೀಡುವ ಪೊಲೀಸ್‌ ಇಲಾಖೆ ಬಡ ಮಹಿಳೆಯರ ಸತ್ಯಾಗ್ರಹಕ್ಕೆ ಅನುಮತಿ ನೀಡದೇ ಇರುವುದು ನಾಚಿಗೇಡಿನ ಸಂಗತಿಯಾಗಿದೆ. ಮಹಿಳೆಯರ ಹೋರಾಟಕ್ಕೆ 15 ದಿನಗಳ ಮೊದಲೇ ಅನುಮತಿಗೆ ಅರ್ಜಿ ಹಾಕಿದ್ದರೂ ಅನುಮತಿ ನೀಡದ ಪೊಲೀಸ್‌ ಇಲಾಖೆ ಯಾರ ಮರ್ಜಿಗೆ ಒಳಗಾಗಿದೆ ಎಂಬ ಪ್ರಶ್ನೆ ಎದ್ದಿದೆ.

ಇಲ್ಲಿರುವ ಮಹಿಳೆಯರು ಮದ್ಯಪಾನದಿಂದಾಗುವ ದುಷ್ಪರಿಣಾಮಗಳನ್ನು ಸ್ವತಃ ಉಂಡು ಬಳಲಿದವರು. ಇವರೊಡಲಲ್ಲಿ ನೂರಾರು ನೋವಿನ ಕಥೆಗಳಿವೆ. ಸಮಾಜದ ಒಳಿತಿಗೆ, ಒಂದಿಷ್ಟು ನೆಮ್ಮದಿಯ ಬದುಕಿಗಾಗಿ ಮದ್ಯಪಾನ ನಿಷೇಧ ಮಾಡಿ ಎಂದು ಮಹಿಳೆಯರು ಬೇಡಿಕೆಯಿಟ್ಟಿದ್ದಾರೆ. ಒಮ್ಮೆಗೆ ಸಂರ್ಪೂಣ ಮದ್ಯಪಾನ ನಿಷೇಧ ಸಾದ್ಯವಿಲ್ಲವೆನ್ನುವುದು ಅವರಿಗೂ ಗೊತ್ತಿದೆ. ಮೊದಲು ಸರ್ಕಾರವೇ ಟಾರ್ಗೆಟ್‌ ನೀಡಿ ಮದ್ಯ ಮಾರಾಟ ಹೆಚ್ಚು ಮಾಡುವ ಆದೇಶ ವಾಪಸ್‌ ಪಡೆಯಬೇಕು, ಅಕ್ರಮ ಮದ್ಯದಂಗಡಿಗಳನ್ನು ಮುಚ್ಚಿಸಬೇಕು, ಮದ್ಯ ಮಾರಟ ಎಷ್ಟಿರಬೇಕೆಂಬ ತೀರ್ಮಾನವನ್ನು ಗ್ರಾಮಪಂಚಾಯ್ತಿಗಳಿಗೆ ನೀಡಬೇಕು ಮತ್ತು ಕೊನೆಯದಾಗಿ ಈ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಸಭೆ ಕರೆಯಬೇಕು ಇವಿಷ್ಟೇ ಮಹಿಳೆಯರ ಹಕ್ಕೊತ್ತಾಯಗಳಾಗಿವೆ.

ಇನ್ನು ಹಿರಿಯ ಗಾಂಧಿವಾದಿ ಹೋರಾಟಗಾರ ಪ್ರಸನ್ನರವರು ಸತ್ಯಾಗ್ರಹ ನಡೆಯುತ್ತಿರುವ ರೈಲ್ವೆ ನಿಲ್ದಾಣಕ್ಕೆ ಬಂದು ಬೆಂಬಲ ಸೂಚಿಸಿದ್ದಾರೆ. “ನೂರಾರು ಮಹಿಳೆಯರು ತಮ್ಮ ನೋವಿನ ಕಥೆ ಹೇಳಲು, ಮದ್ಯ ನಿಷೇಧ ಆಗಬೇಕು ಅಂತ ಬೆಂಗಳೂರಿಗೆ ಬಂದಿದ್ದಾರೆ. ಅವರನ್ನು ಕರೆದು ಸಭೆ ನಡೆಸದೇ ಹೀಗೆ ಬೀದಿಯಲ್ಲಿ ಕೂರಿಸಿರುವುದು ನನಗೆ ತುಂಬಾ ನೋವಾಗುತ್ತಿದೆ.” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೊದಲ ಹಂತದಲ್ಲಿ ಚಳುವಳಿ ಗಟ್ಟಿಯಾಗಿರುವ ರಾಯಚೂರು…ಕಡೆಯಲ್ಲಿ ಹೆಂಡ ಮಾರಾಟ ರದ್ದಾಗಲಿ.

  2. ಹಲವಾರು ಹೋರಾಟ ತ್ಯಾಗ ಬಲಿದಾನ ಮತ್ತು ಚಳುವಳಿಗೆoದಲೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಆದರೆ ಈಗ ಹೋರಾಟ ಅಥವಾ ಚಳುವಳಿಗಳನ್ನು ಮಾಡಲು ಸಕಾ೯ರ ದ ಅನುಮತಿ ಪಡೆಯಬೇಕು. ಸಕಾ೯ರ ಅನುಮತಿ ಕೊಡುತ್ತದೆ ಯೇ?

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...