Homeಕರ್ನಾಟಕಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

ಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

- Advertisement -
- Advertisement -

ಮದ್ಯ ನಿಷೇಧದ ಕುರಿತು ಮುಖ್ಯಮಂತ್ರಿಗಳು ನಮ್ಮೊಂದಿಗೆ ಸಭೆ ನಡೆಸಬೇಕು ಎಂಬ ಮಹಳಿಯರ ಬೇಡಿಕೆ ಹಲವು ವರ್ಷಗಳದ್ದು. ಅದಕ್ಕಾಗಿ ಇದೇ ವರ್ಷ ಜನವರಿಯಲ್ಲಿ 12 ದಿನಗಳ ಕಾಲ ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರು ಚಿತ್ರದುರ್ಗದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸಿದ್ದರೂ ಸಹ ಅಂದಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕನಿಷ್ಠ ಮಹಿಳೆಯನ್ನು ಭೇಟಿ ಮಾಡದೇ ದರ್ಪ ಮೆರೆದಿದ್ದರು.

ಆ ಸಂದರ್ಭದಲ್ಲಿ ಬಿಜೆಪಿಯ ಜಗದೀಶ್‌ ಶೆಟ್ಟರ್‌, ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರ ಮಹಿಳೆಯರ ಪರವಾಗಿ ಮಾತನಾಡಿದ್ದರು. ಆದರೀಗ ಅದೇ ಮಹಿಳೆಯರು ಕನಿಷ್ಟ ಸಭೆ ನಡೆಸಿ ಎಂದು ಮುಖ್ಯಮಂತ್ರಿಗಳ ಬಳಿ ಒತ್ತಾಯಿಸಿದರೆ ಯಡಿಯೂರಪ್ಪನವರು ತಲೆಕೆಡಿಸಿಕೊಳ್ಳುತ್ತಿಲ್ಲ. ಮದ್ಯ ನಿಷೇಧಿಸುವ ಯಾವುದೇ ಪ್ರಸ್ತಾಪ ನಮ್ಮ ಬಳಿ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿಗಳು ಸಭೆ ಕುರಿತು ಮಾತೇ ಆಡುತ್ತಿಲ್ಲ.

ಪಟ್ಟು ಬಿಡದ ಬಡಮಹಿಳೆಯರು ಇಂದು ಬೆಂಗಳೂರಿಗೆ ಬಂದಿದ್ದಾರೆ. ಗಾಂಧಿಜೀಯವರ 150 ನೇ ಜಯಂತಿಯ ಅಂಗವಾಗಿ ಅವರ ಕನಸಾಗಿರುವ ಮದ್ಯಪಾನ ನಿಷೇಧವನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಮಹಿಳೆಯರು ಸತ್ಯಾಗ್ರಹ ನಡೆಸುತ್ತಿದ್ದಾರೆ.

“ಸತ್ಯಾಗ್ರಹಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದರೆ ನಾವು ಅನುಮತಿ ನೀಡಲು ಆಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಕ್ಕೆ ಸಂಖ್ಯೆಯನ್ನು ಇಳಿಸಿಕೊಳ್ಳಲಾಯಿತು. ಆದರೆ ಇದೀಗ ನಮ್ಮ ಪ್ರತಿಭಟನೆಗೆ ಅನುಮತಿ ನೀಡದೇ, ಬೆಂಗಳೂರಿನ ಯಾವುದೇ ಜಾಗವನ್ನು ನಿಗದಿ ಮಾಡದೇ ನೂರಾರು ಸತ್ಯಾಗ್ರಹಿಗಳನ್ನು ರೈಲ್ವೆ ನಿಲ್ದಾಣದಲ್ಲೇ ಕೂರಿಸಲಾಗಿದೆ. ಮುಖ್ಯಮಂತ್ರಿಗಳು ಸಭೆ ಕರೆಯುವವರೆಗೂ ಬೆಂಗಳೂರಿನಿಂದ ಕದಲುವುದಿಲ್ಲ” ಎಂದು ಹಳ್ಳಿಗಳಿಂದ ಬಂದಿರುವ ತಾಯಂದಿರು ದಿಟ್ಟವಾಗಿ ಹೇಳುತ್ತಿದ್ದಾರೆ.

ಎಂತಹ ಕಾರ್ಯಕ್ರಮಕ್ಕೂ ಬೇಕಾದರೂ ಅನುಮತಿ ನೀಡುವ ಪೊಲೀಸ್‌ ಇಲಾಖೆ ಬಡ ಮಹಿಳೆಯರ ಸತ್ಯಾಗ್ರಹಕ್ಕೆ ಅನುಮತಿ ನೀಡದೇ ಇರುವುದು ನಾಚಿಗೇಡಿನ ಸಂಗತಿಯಾಗಿದೆ. ಮಹಿಳೆಯರ ಹೋರಾಟಕ್ಕೆ 15 ದಿನಗಳ ಮೊದಲೇ ಅನುಮತಿಗೆ ಅರ್ಜಿ ಹಾಕಿದ್ದರೂ ಅನುಮತಿ ನೀಡದ ಪೊಲೀಸ್‌ ಇಲಾಖೆ ಯಾರ ಮರ್ಜಿಗೆ ಒಳಗಾಗಿದೆ ಎಂಬ ಪ್ರಶ್ನೆ ಎದ್ದಿದೆ.

ಇಲ್ಲಿರುವ ಮಹಿಳೆಯರು ಮದ್ಯಪಾನದಿಂದಾಗುವ ದುಷ್ಪರಿಣಾಮಗಳನ್ನು ಸ್ವತಃ ಉಂಡು ಬಳಲಿದವರು. ಇವರೊಡಲಲ್ಲಿ ನೂರಾರು ನೋವಿನ ಕಥೆಗಳಿವೆ. ಸಮಾಜದ ಒಳಿತಿಗೆ, ಒಂದಿಷ್ಟು ನೆಮ್ಮದಿಯ ಬದುಕಿಗಾಗಿ ಮದ್ಯಪಾನ ನಿಷೇಧ ಮಾಡಿ ಎಂದು ಮಹಿಳೆಯರು ಬೇಡಿಕೆಯಿಟ್ಟಿದ್ದಾರೆ. ಒಮ್ಮೆಗೆ ಸಂರ್ಪೂಣ ಮದ್ಯಪಾನ ನಿಷೇಧ ಸಾದ್ಯವಿಲ್ಲವೆನ್ನುವುದು ಅವರಿಗೂ ಗೊತ್ತಿದೆ. ಮೊದಲು ಸರ್ಕಾರವೇ ಟಾರ್ಗೆಟ್‌ ನೀಡಿ ಮದ್ಯ ಮಾರಾಟ ಹೆಚ್ಚು ಮಾಡುವ ಆದೇಶ ವಾಪಸ್‌ ಪಡೆಯಬೇಕು, ಅಕ್ರಮ ಮದ್ಯದಂಗಡಿಗಳನ್ನು ಮುಚ್ಚಿಸಬೇಕು, ಮದ್ಯ ಮಾರಟ ಎಷ್ಟಿರಬೇಕೆಂಬ ತೀರ್ಮಾನವನ್ನು ಗ್ರಾಮಪಂಚಾಯ್ತಿಗಳಿಗೆ ನೀಡಬೇಕು ಮತ್ತು ಕೊನೆಯದಾಗಿ ಈ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಸಭೆ ಕರೆಯಬೇಕು ಇವಿಷ್ಟೇ ಮಹಿಳೆಯರ ಹಕ್ಕೊತ್ತಾಯಗಳಾಗಿವೆ.

ಇನ್ನು ಹಿರಿಯ ಗಾಂಧಿವಾದಿ ಹೋರಾಟಗಾರ ಪ್ರಸನ್ನರವರು ಸತ್ಯಾಗ್ರಹ ನಡೆಯುತ್ತಿರುವ ರೈಲ್ವೆ ನಿಲ್ದಾಣಕ್ಕೆ ಬಂದು ಬೆಂಬಲ ಸೂಚಿಸಿದ್ದಾರೆ. “ನೂರಾರು ಮಹಿಳೆಯರು ತಮ್ಮ ನೋವಿನ ಕಥೆ ಹೇಳಲು, ಮದ್ಯ ನಿಷೇಧ ಆಗಬೇಕು ಅಂತ ಬೆಂಗಳೂರಿಗೆ ಬಂದಿದ್ದಾರೆ. ಅವರನ್ನು ಕರೆದು ಸಭೆ ನಡೆಸದೇ ಹೀಗೆ ಬೀದಿಯಲ್ಲಿ ಕೂರಿಸಿರುವುದು ನನಗೆ ತುಂಬಾ ನೋವಾಗುತ್ತಿದೆ.” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೊದಲ ಹಂತದಲ್ಲಿ ಚಳುವಳಿ ಗಟ್ಟಿಯಾಗಿರುವ ರಾಯಚೂರು…ಕಡೆಯಲ್ಲಿ ಹೆಂಡ ಮಾರಾಟ ರದ್ದಾಗಲಿ.

  2. ಹಲವಾರು ಹೋರಾಟ ತ್ಯಾಗ ಬಲಿದಾನ ಮತ್ತು ಚಳುವಳಿಗೆoದಲೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಆದರೆ ಈಗ ಹೋರಾಟ ಅಥವಾ ಚಳುವಳಿಗಳನ್ನು ಮಾಡಲು ಸಕಾ೯ರ ದ ಅನುಮತಿ ಪಡೆಯಬೇಕು. ಸಕಾ೯ರ ಅನುಮತಿ ಕೊಡುತ್ತದೆ ಯೇ?

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...