Homeಕರ್ನಾಟಕಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

ಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

- Advertisement -
- Advertisement -

ಮದ್ಯ ನಿಷೇಧದ ಕುರಿತು ಮುಖ್ಯಮಂತ್ರಿಗಳು ನಮ್ಮೊಂದಿಗೆ ಸಭೆ ನಡೆಸಬೇಕು ಎಂಬ ಮಹಳಿಯರ ಬೇಡಿಕೆ ಹಲವು ವರ್ಷಗಳದ್ದು. ಅದಕ್ಕಾಗಿ ಇದೇ ವರ್ಷ ಜನವರಿಯಲ್ಲಿ 12 ದಿನಗಳ ಕಾಲ ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರು ಚಿತ್ರದುರ್ಗದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸಿದ್ದರೂ ಸಹ ಅಂದಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕನಿಷ್ಠ ಮಹಿಳೆಯನ್ನು ಭೇಟಿ ಮಾಡದೇ ದರ್ಪ ಮೆರೆದಿದ್ದರು.

ಆ ಸಂದರ್ಭದಲ್ಲಿ ಬಿಜೆಪಿಯ ಜಗದೀಶ್‌ ಶೆಟ್ಟರ್‌, ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರ ಮಹಿಳೆಯರ ಪರವಾಗಿ ಮಾತನಾಡಿದ್ದರು. ಆದರೀಗ ಅದೇ ಮಹಿಳೆಯರು ಕನಿಷ್ಟ ಸಭೆ ನಡೆಸಿ ಎಂದು ಮುಖ್ಯಮಂತ್ರಿಗಳ ಬಳಿ ಒತ್ತಾಯಿಸಿದರೆ ಯಡಿಯೂರಪ್ಪನವರು ತಲೆಕೆಡಿಸಿಕೊಳ್ಳುತ್ತಿಲ್ಲ. ಮದ್ಯ ನಿಷೇಧಿಸುವ ಯಾವುದೇ ಪ್ರಸ್ತಾಪ ನಮ್ಮ ಬಳಿ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿಗಳು ಸಭೆ ಕುರಿತು ಮಾತೇ ಆಡುತ್ತಿಲ್ಲ.

ಪಟ್ಟು ಬಿಡದ ಬಡಮಹಿಳೆಯರು ಇಂದು ಬೆಂಗಳೂರಿಗೆ ಬಂದಿದ್ದಾರೆ. ಗಾಂಧಿಜೀಯವರ 150 ನೇ ಜಯಂತಿಯ ಅಂಗವಾಗಿ ಅವರ ಕನಸಾಗಿರುವ ಮದ್ಯಪಾನ ನಿಷೇಧವನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಮಹಿಳೆಯರು ಸತ್ಯಾಗ್ರಹ ನಡೆಸುತ್ತಿದ್ದಾರೆ.

“ಸತ್ಯಾಗ್ರಹಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದರೆ ನಾವು ಅನುಮತಿ ನೀಡಲು ಆಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಕ್ಕೆ ಸಂಖ್ಯೆಯನ್ನು ಇಳಿಸಿಕೊಳ್ಳಲಾಯಿತು. ಆದರೆ ಇದೀಗ ನಮ್ಮ ಪ್ರತಿಭಟನೆಗೆ ಅನುಮತಿ ನೀಡದೇ, ಬೆಂಗಳೂರಿನ ಯಾವುದೇ ಜಾಗವನ್ನು ನಿಗದಿ ಮಾಡದೇ ನೂರಾರು ಸತ್ಯಾಗ್ರಹಿಗಳನ್ನು ರೈಲ್ವೆ ನಿಲ್ದಾಣದಲ್ಲೇ ಕೂರಿಸಲಾಗಿದೆ. ಮುಖ್ಯಮಂತ್ರಿಗಳು ಸಭೆ ಕರೆಯುವವರೆಗೂ ಬೆಂಗಳೂರಿನಿಂದ ಕದಲುವುದಿಲ್ಲ” ಎಂದು ಹಳ್ಳಿಗಳಿಂದ ಬಂದಿರುವ ತಾಯಂದಿರು ದಿಟ್ಟವಾಗಿ ಹೇಳುತ್ತಿದ್ದಾರೆ.

ಎಂತಹ ಕಾರ್ಯಕ್ರಮಕ್ಕೂ ಬೇಕಾದರೂ ಅನುಮತಿ ನೀಡುವ ಪೊಲೀಸ್‌ ಇಲಾಖೆ ಬಡ ಮಹಿಳೆಯರ ಸತ್ಯಾಗ್ರಹಕ್ಕೆ ಅನುಮತಿ ನೀಡದೇ ಇರುವುದು ನಾಚಿಗೇಡಿನ ಸಂಗತಿಯಾಗಿದೆ. ಮಹಿಳೆಯರ ಹೋರಾಟಕ್ಕೆ 15 ದಿನಗಳ ಮೊದಲೇ ಅನುಮತಿಗೆ ಅರ್ಜಿ ಹಾಕಿದ್ದರೂ ಅನುಮತಿ ನೀಡದ ಪೊಲೀಸ್‌ ಇಲಾಖೆ ಯಾರ ಮರ್ಜಿಗೆ ಒಳಗಾಗಿದೆ ಎಂಬ ಪ್ರಶ್ನೆ ಎದ್ದಿದೆ.

ಇಲ್ಲಿರುವ ಮಹಿಳೆಯರು ಮದ್ಯಪಾನದಿಂದಾಗುವ ದುಷ್ಪರಿಣಾಮಗಳನ್ನು ಸ್ವತಃ ಉಂಡು ಬಳಲಿದವರು. ಇವರೊಡಲಲ್ಲಿ ನೂರಾರು ನೋವಿನ ಕಥೆಗಳಿವೆ. ಸಮಾಜದ ಒಳಿತಿಗೆ, ಒಂದಿಷ್ಟು ನೆಮ್ಮದಿಯ ಬದುಕಿಗಾಗಿ ಮದ್ಯಪಾನ ನಿಷೇಧ ಮಾಡಿ ಎಂದು ಮಹಿಳೆಯರು ಬೇಡಿಕೆಯಿಟ್ಟಿದ್ದಾರೆ. ಒಮ್ಮೆಗೆ ಸಂರ್ಪೂಣ ಮದ್ಯಪಾನ ನಿಷೇಧ ಸಾದ್ಯವಿಲ್ಲವೆನ್ನುವುದು ಅವರಿಗೂ ಗೊತ್ತಿದೆ. ಮೊದಲು ಸರ್ಕಾರವೇ ಟಾರ್ಗೆಟ್‌ ನೀಡಿ ಮದ್ಯ ಮಾರಾಟ ಹೆಚ್ಚು ಮಾಡುವ ಆದೇಶ ವಾಪಸ್‌ ಪಡೆಯಬೇಕು, ಅಕ್ರಮ ಮದ್ಯದಂಗಡಿಗಳನ್ನು ಮುಚ್ಚಿಸಬೇಕು, ಮದ್ಯ ಮಾರಟ ಎಷ್ಟಿರಬೇಕೆಂಬ ತೀರ್ಮಾನವನ್ನು ಗ್ರಾಮಪಂಚಾಯ್ತಿಗಳಿಗೆ ನೀಡಬೇಕು ಮತ್ತು ಕೊನೆಯದಾಗಿ ಈ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಸಭೆ ಕರೆಯಬೇಕು ಇವಿಷ್ಟೇ ಮಹಿಳೆಯರ ಹಕ್ಕೊತ್ತಾಯಗಳಾಗಿವೆ.

ಇನ್ನು ಹಿರಿಯ ಗಾಂಧಿವಾದಿ ಹೋರಾಟಗಾರ ಪ್ರಸನ್ನರವರು ಸತ್ಯಾಗ್ರಹ ನಡೆಯುತ್ತಿರುವ ರೈಲ್ವೆ ನಿಲ್ದಾಣಕ್ಕೆ ಬಂದು ಬೆಂಬಲ ಸೂಚಿಸಿದ್ದಾರೆ. “ನೂರಾರು ಮಹಿಳೆಯರು ತಮ್ಮ ನೋವಿನ ಕಥೆ ಹೇಳಲು, ಮದ್ಯ ನಿಷೇಧ ಆಗಬೇಕು ಅಂತ ಬೆಂಗಳೂರಿಗೆ ಬಂದಿದ್ದಾರೆ. ಅವರನ್ನು ಕರೆದು ಸಭೆ ನಡೆಸದೇ ಹೀಗೆ ಬೀದಿಯಲ್ಲಿ ಕೂರಿಸಿರುವುದು ನನಗೆ ತುಂಬಾ ನೋವಾಗುತ್ತಿದೆ.” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೊದಲ ಹಂತದಲ್ಲಿ ಚಳುವಳಿ ಗಟ್ಟಿಯಾಗಿರುವ ರಾಯಚೂರು…ಕಡೆಯಲ್ಲಿ ಹೆಂಡ ಮಾರಾಟ ರದ್ದಾಗಲಿ.

  2. ಹಲವಾರು ಹೋರಾಟ ತ್ಯಾಗ ಬಲಿದಾನ ಮತ್ತು ಚಳುವಳಿಗೆoದಲೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಆದರೆ ಈಗ ಹೋರಾಟ ಅಥವಾ ಚಳುವಳಿಗಳನ್ನು ಮಾಡಲು ಸಕಾ೯ರ ದ ಅನುಮತಿ ಪಡೆಯಬೇಕು. ಸಕಾ೯ರ ಅನುಮತಿ ಕೊಡುತ್ತದೆ ಯೇ?

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...