Homeಮುಖಪುಟಮಧ್ಯಪ್ರದೇಶ ವಿಶ್ವಾಸಮತಯಾಚನೆ ಪ್ರಕರಣ: ಸ್ಪಷ್ಟನೆ ಕೇಳಿ ವಿಚಾರಣೆ ನಾಳೆಗೆ ಮೂಂದೂಡಿದ ಸುಪ್ರೀಂ

ಮಧ್ಯಪ್ರದೇಶ ವಿಶ್ವಾಸಮತಯಾಚನೆ ಪ್ರಕರಣ: ಸ್ಪಷ್ಟನೆ ಕೇಳಿ ವಿಚಾರಣೆ ನಾಳೆಗೆ ಮೂಂದೂಡಿದ ಸುಪ್ರೀಂ

- Advertisement -
- Advertisement -

12 ಗಂಟೆಗಳ ಒಳಗೆ ಬಹುಮತ ಪರೀಕ್ಷೆ ನಡೆಸಬೇಕೆಂದು ಬಿಜೆಪಿ ಸುಪ್ರೀಂನಲ್ಲಿ ಮನವಿ ಮಾಡಿರುವ ಬಗ್ಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ವಿಧಾನಸಭಾ ಕಾರ್ಯದರ್ಶಿೆ ತಮ್ಮ ನಿಲುವನ್ನು ವಿವರಿಸುವಂತೆ ಸುಪ್ರೀಂ ಕೋರ್ಟ್ ನೋಟಿಸ್‌ ನೀಡಿದೆ. ಅಲ್ಲದೇ ವಿಚಾರಣೆಯನ್ನು ಬುಧವಾರಕ್ಕೆ ಮೂಂದೂಡಿದೆ.

ಮಧ್ಯಪ್ರದೇಶದ ಸ್ಪೀಕರ್‌ ಕೊರೊನಾ ವೈರಸ್ ವಿರುದ್ಧ ಮುನ್ನೆಚ್ಚರಿಕೆ ಕ್ರಮ ಎಂದು ಉಲ್ಲೇಖಿಸಿ ವಿಧಾನಸಭೆಯನ್ನು 10 ದಿನಗಳವರೆಗೆ ಮುಂದೂಡಿದ ನಂತರ ಬಿಜೆಪಿ ನಿನ್ನೆ ಉನ್ನತ ನ್ಯಾಯಾಲಯವನ್ನು ಸಂಪರ್ಕಿಸಿತ್ತು. ಜ್ಯೋತಿರಾದಿತ್ಯ ಸಿಂಧಿಯಾ ಅವರ ಬೆಂಬಲಿಗ 22 ಕಾಂಗ್ರೆಸ್‌ ಶಾಸಕರು ರಾಜೀನಾಮೆ ನೀಡಿದ ನಂತರ ಕಮಲ್ ನಾಥ್ ಸರ್ಕಾರ ವಿಶ್ವಾಸಮತ ಯಾಚಿಸಲು ವಿಳಂಬ ಮಾಡುತ್ತಿದೆ ಎಂದು ಬಿಜೆಪಿ ವಾದಿಸಿದೆ.

ಇಂದಿನ ವಿಚಾರಣೆಯಲ್ಲಿ ಉನ್ನತ ನ್ಯಾಯಾಲಯವು ಮುಖ್ಯಮಂತ್ರಿ ಮತ್ತು ವಿಧಾನಸಭಾ ಕಾರ್ಯದರ್ಶಿಗೆ ನೋಟಿಸ್ ನೀಡಿ, ಅವರ ಅಭಿಪ್ರಾಯಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಈ ಪ್ರಕರಣವನ್ನು ನಾಳೆ ಮತ್ತೆ ವಿಚಾರಣೆ ನಡೆಸಲಿದೆ.

16 ಬಂಡಾಯ ಶಾಸಕರು ಈ ಪ್ರಕರಣದಲ್ಲಿ ಪಾರ್ಟಿಯಾಗಲು ಉನ್ನತ ನ್ಯಾಯಾಲಯವು ಅನುಮತಿ ನೀಡಿದೆ.

ಕಮಲ್ ನಾಥ್ ಅವರಿಗೆ ಬರೆದ ಪತ್ರದಲ್ಲಿ ರಾಜ್ಯಪಾಲರು “ಮಾರ್ಚ್ 17 ರೊಳಗೆ ನೀವು ವಿಶ್ವಾಸಮತ ಯಾಚಿಸದಿದ್ದರೆ, ನಿಮ್ಮ ಬಹುಮತವನ್ನು ಕಳೆದುಕೊಂಡಿದ್ದೀರಿ ಎಂದು ಭಾವಿಸಲಾಗುತ್ತದೆ.” ಎಂದಿದ್ದರು.

ಸ್ಪೀಕರ್ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡುವುದು ರಾಜ್ಯಪಾಲರ ವ್ಯಾಪ್ತಿಯಲ್ಲಿ ಬರುವುದಿಲ್ಲ” ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್‌ರವರು ರಾಜ್ಯಪಾಲ ಲಾಲ್ಜಿ ಟಂಡನ್ ಅವರಿಗೆ ಪತ್ರ ಬರೆದಿದ್ದಾರೆ.

ನಿನ್ನೆ ವಿಧಾನಸಭೆ ಮುಂದೂಡಲ್ಪಟ್ಟ ನಂತರ, ಬಿಜೆಪಿಯ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌, “ಕೊರೊನಾ ಕೂಡ ಕಮಲ್ ನಾಥ್ ಅವರ ಸರ್ಕಾರವನ್ನು ಉಳಿಸುವುದಿಲ್ಲ. ಅವರು ಬಹುಮತವನ್ನು ಸ್ಪಷ್ಟವಾಗಿ ಕಳೆದುಕೊಂಡಿದ್ದಾರೆ, ಆದ್ದರಿಂದ ಅವರು ಇಂದು ವಿಶ್ವಾಸಮತ ಯಾಚನೆಯನ್ನು ತಪ್ಪಿಸಿದ್ದಾರೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...