Homeಮುಖಪುಟಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ

ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ

- Advertisement -
- Advertisement -

ಮಧ್ಯಪ್ರದೇಶದ ಆರೋಗ್ಯ ಸಚಿವರಾಗಿ ನರೋತ್ತಮ್ ಮಿಶ್ರಾ ಅವರು ನೇಮಕವಾದ ನಂತರ ಮೊದಲ ಬಾರಿಗೆ ತಮ್ಮ ಸ್ವಗ್ರಾಮಕ್ಕೆ ಭೇಟಿ ನೀಡಿದಾಗ ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರವಿರುವ ಅವರೇ, ತಮ್ಮ ಮನೆಗೆ ಪ್ರವೇಶಿಸುವಾಗ ಬೆಂಬಲಿಗರೊಡನೆ ಮುತ್ತಿಕೊಂಡು, ಮಾಸ್ಕ್‌ ಕೂಡ ಧರಿಸದೇ ಪೂಜೆಗಳನ್ನು ಮಾಡಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್‌ ಪಕ್ಷದ ಕಮಲ್ ನಾಥ್ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರು ಶನಿವಾರ ತಮ್ಮ ಊರಾದ ಡಾಟಿಯಾಕ್ಕೆ ತೆರಳಿದ್ದರು. ಅವರು ತಮ್ಮ ಬೆಂಬಲಿಗರೊಂದಿಗೆ ಅವರ ಮನೆಯ ಸಮೀಪಿಸುತ್ತಿದ್ದಂತೆ, ಅವರ ಕುಟುಂಬ ಸದಸ್ಯರು ಆರತಿ ಎತ್ತಿ, ಹಣೆಯ ಮೇಲೆ ತಿಲಕ ಹಚ್ಚಿ ಸಿಹಿತಿಂಡಿಗಳನ್ನು ತಿನ್ನಿಸಿದರು. ಮಧ್ಯಪ್ರದೇಶದಲ್ಲಿಯೂ ಅತಿಹೆಚ್ಚಿನ ಕೊರೊನಾ ಪ್ರಕರಣಗಳು ಮತ್ತು ಸಾವುಗಳು ಸಂಭವಿಸಿದ್ದರೂ ಸಹ ಈ ಸಂದರ್ಭದಲ್ಲಿ ಮಿಶ್ರಾ ಅಥವಾ ಅವರ ಕುಟುಂಬ ಸದಸ್ಯರು ಮಾಸ್ಕ್‌ಗಳನ್ನು ಧರಿಸಿರಲಿಲ್ಲ ಮತ್ತು ಅಂತರ ಕಾಯ್ದುಕೊಂಡಿಲ್ಲ.

ಈ ಸಂದರ್ಭದಲ್ಲಿ ಅವರ ಹತ್ತಾರು ಬೆಂಬಲಿಗರು ಒಟ್ಟಿಗೆ ಇದ್ದು, ಅವರು ಕೂಡ ಮಾಸ್ಕ್‌ ಧರಿಸಿಲ್ಲ. ತದನಂತರ ಸಚಿವರು ಮಾಸ್ಕ್‌ ಧರಿಸದೇ ತಮ್ಮ ಕಚೇರಿಗೆ ಹೊರಟು ಎಂದು ಆರೋಪಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 145 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು 2,090 ತಲುಪಿದೆ. ಭಾನುವಾರ ನಾಲ್ಕು ಸೇರ್ಪಡೆಗಳೊಂದಿಗೆ, ಸಾವಿನ ಸಂಖ್ಯೆ 100 ರ ಗಡಿ ದಾಟಿದೆ.

ಈ ತಿಂಗಳ ಆರಂಭದಲ್ಲಿ ರಾಜ್ಯ ಸರ್ಕಾರ ಮಾಸ್ಕ್‌ ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸುವ ಆದೇಶ ಹೊರಡಿಸಿತ್ತು. ಮಾಸ್ಕ್‌ ಧರಿಸದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಾರ್ವಜನಿಕ ಆರೋಗ್ಯ ಇಲಾಖೆ ತಿಳಿಸಿತ್ತು. ಈಗ ಅವರದೇ ಆರೋಗ್ಯ ಸಚಿವರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಾವೇ ಮಾಸ್ಕ್‌ ಧರಿಸದೇ, ಸಾಮಾಜಿಕ ಅಂತರ ಕಾಪಾಡದೇ ಮನೆಗೆ ಪ್ರವೇಶಿಸುವ ಕಾರ್ಯಕ್ರಮ ಮಾಡಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದ ಸರ್ಕಾರ ಪೇಚಿಗೆ ಸಿಲುಕಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾಸ್ಕ್‌ ಧರಿಸಿ ಸಾಮಾಜಿಕವಾಗಿ ದೂರವಿರುವ ನಿಯಮವನ್ನು ಪಾಲಿಸಬೇಕೆಂದು ಜನಸಾಮಾನ್ಯರಿಗೆ ಮನವಿ ಮಾಡುತ್ತಿದ್ದಾರೆ. ಅವರೇ ಎಲ್ಲಾ ವಿಡಿಯೋ ಕಾನ್ಫರೆನ್ಸ್‌ಗಳಲ್ಲಿ ಮಾಸ್ಕ್ ಧರಿಸಿರುತ್ತಾರೆ. ಅಲ್ಲದೇ ನಿನ್ನೆಯ ಮನ್‌ ಕಿ ಬಾತ್‌ ನಲ್ಲಿ ಪ್ರಧಾನಿಯವರು “ಇಂದಿನ ದಿನಗಳಲ್ಲಿ ಮಾಸ್ಕ್‌ ಎಂಬುದು ನಾಗರೀಕತೆಯ ಸಂಕೇತವಾಗಿದೆ” ಎಂದು ನರೇಂದ್ರ ಮೋದಿಯವರು ಹೇಳಿದ್ದರು. ಆದರೆ ಅವರದೇ ಪಕ್ಷದ ಆರೋಗ್ಯ ಸಚಿವರು ಮಾತ್ರ ಅದನ್ನು ಪಾಲಿಸುತ್ತಿಲ್ಲ. ಆರೋಗ್ಯ ಸಚಿವರೆ ನಿಯಮಗಳನ್ನು ಉಲ್ಲಂಘಿಸಿದರೆ ಜನಸಾಮಾನ್ಯರ ಕಥೆಯೇನು ಎಂಬು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಗಳು ಎದ್ದಿವೆ. ಸಚಿವರ ವಿಡಿಯೋ ಸಹ ವೈರಲ್‌ ಆಗಿದೆ.


ಇದನ್ನೂ ಓದಿ: ನನ್ನ ಮೇಲೆ ಗುಂಪು ಹಲ್ಲೆಯಾದಾಗ ನೀವೇಕೆ ಮಾತಾಡಲಿಲ್ಲ?: ಸ್ವಾಮಿ ಅಗ್ನಿವೇಶ್ ಪ್ರಶ್ನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...