Homeಮುಖಪುಟಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ

ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ

- Advertisement -
- Advertisement -

ಮಧ್ಯಪ್ರದೇಶದ ಆರೋಗ್ಯ ಸಚಿವರಾಗಿ ನರೋತ್ತಮ್ ಮಿಶ್ರಾ ಅವರು ನೇಮಕವಾದ ನಂತರ ಮೊದಲ ಬಾರಿಗೆ ತಮ್ಮ ಸ್ವಗ್ರಾಮಕ್ಕೆ ಭೇಟಿ ನೀಡಿದಾಗ ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರವಿರುವ ಅವರೇ, ತಮ್ಮ ಮನೆಗೆ ಪ್ರವೇಶಿಸುವಾಗ ಬೆಂಬಲಿಗರೊಡನೆ ಮುತ್ತಿಕೊಂಡು, ಮಾಸ್ಕ್‌ ಕೂಡ ಧರಿಸದೇ ಪೂಜೆಗಳನ್ನು ಮಾಡಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್‌ ಪಕ್ಷದ ಕಮಲ್ ನಾಥ್ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರು ಶನಿವಾರ ತಮ್ಮ ಊರಾದ ಡಾಟಿಯಾಕ್ಕೆ ತೆರಳಿದ್ದರು. ಅವರು ತಮ್ಮ ಬೆಂಬಲಿಗರೊಂದಿಗೆ ಅವರ ಮನೆಯ ಸಮೀಪಿಸುತ್ತಿದ್ದಂತೆ, ಅವರ ಕುಟುಂಬ ಸದಸ್ಯರು ಆರತಿ ಎತ್ತಿ, ಹಣೆಯ ಮೇಲೆ ತಿಲಕ ಹಚ್ಚಿ ಸಿಹಿತಿಂಡಿಗಳನ್ನು ತಿನ್ನಿಸಿದರು. ಮಧ್ಯಪ್ರದೇಶದಲ್ಲಿಯೂ ಅತಿಹೆಚ್ಚಿನ ಕೊರೊನಾ ಪ್ರಕರಣಗಳು ಮತ್ತು ಸಾವುಗಳು ಸಂಭವಿಸಿದ್ದರೂ ಸಹ ಈ ಸಂದರ್ಭದಲ್ಲಿ ಮಿಶ್ರಾ ಅಥವಾ ಅವರ ಕುಟುಂಬ ಸದಸ್ಯರು ಮಾಸ್ಕ್‌ಗಳನ್ನು ಧರಿಸಿರಲಿಲ್ಲ ಮತ್ತು ಅಂತರ ಕಾಯ್ದುಕೊಂಡಿಲ್ಲ.

ಈ ಸಂದರ್ಭದಲ್ಲಿ ಅವರ ಹತ್ತಾರು ಬೆಂಬಲಿಗರು ಒಟ್ಟಿಗೆ ಇದ್ದು, ಅವರು ಕೂಡ ಮಾಸ್ಕ್‌ ಧರಿಸಿಲ್ಲ. ತದನಂತರ ಸಚಿವರು ಮಾಸ್ಕ್‌ ಧರಿಸದೇ ತಮ್ಮ ಕಚೇರಿಗೆ ಹೊರಟು ಎಂದು ಆರೋಪಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 145 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು 2,090 ತಲುಪಿದೆ. ಭಾನುವಾರ ನಾಲ್ಕು ಸೇರ್ಪಡೆಗಳೊಂದಿಗೆ, ಸಾವಿನ ಸಂಖ್ಯೆ 100 ರ ಗಡಿ ದಾಟಿದೆ.

ಈ ತಿಂಗಳ ಆರಂಭದಲ್ಲಿ ರಾಜ್ಯ ಸರ್ಕಾರ ಮಾಸ್ಕ್‌ ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸುವ ಆದೇಶ ಹೊರಡಿಸಿತ್ತು. ಮಾಸ್ಕ್‌ ಧರಿಸದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಾರ್ವಜನಿಕ ಆರೋಗ್ಯ ಇಲಾಖೆ ತಿಳಿಸಿತ್ತು. ಈಗ ಅವರದೇ ಆರೋಗ್ಯ ಸಚಿವರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಾವೇ ಮಾಸ್ಕ್‌ ಧರಿಸದೇ, ಸಾಮಾಜಿಕ ಅಂತರ ಕಾಪಾಡದೇ ಮನೆಗೆ ಪ್ರವೇಶಿಸುವ ಕಾರ್ಯಕ್ರಮ ಮಾಡಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದ ಸರ್ಕಾರ ಪೇಚಿಗೆ ಸಿಲುಕಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾಸ್ಕ್‌ ಧರಿಸಿ ಸಾಮಾಜಿಕವಾಗಿ ದೂರವಿರುವ ನಿಯಮವನ್ನು ಪಾಲಿಸಬೇಕೆಂದು ಜನಸಾಮಾನ್ಯರಿಗೆ ಮನವಿ ಮಾಡುತ್ತಿದ್ದಾರೆ. ಅವರೇ ಎಲ್ಲಾ ವಿಡಿಯೋ ಕಾನ್ಫರೆನ್ಸ್‌ಗಳಲ್ಲಿ ಮಾಸ್ಕ್ ಧರಿಸಿರುತ್ತಾರೆ. ಅಲ್ಲದೇ ನಿನ್ನೆಯ ಮನ್‌ ಕಿ ಬಾತ್‌ ನಲ್ಲಿ ಪ್ರಧಾನಿಯವರು “ಇಂದಿನ ದಿನಗಳಲ್ಲಿ ಮಾಸ್ಕ್‌ ಎಂಬುದು ನಾಗರೀಕತೆಯ ಸಂಕೇತವಾಗಿದೆ” ಎಂದು ನರೇಂದ್ರ ಮೋದಿಯವರು ಹೇಳಿದ್ದರು. ಆದರೆ ಅವರದೇ ಪಕ್ಷದ ಆರೋಗ್ಯ ಸಚಿವರು ಮಾತ್ರ ಅದನ್ನು ಪಾಲಿಸುತ್ತಿಲ್ಲ. ಆರೋಗ್ಯ ಸಚಿವರೆ ನಿಯಮಗಳನ್ನು ಉಲ್ಲಂಘಿಸಿದರೆ ಜನಸಾಮಾನ್ಯರ ಕಥೆಯೇನು ಎಂಬು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಗಳು ಎದ್ದಿವೆ. ಸಚಿವರ ವಿಡಿಯೋ ಸಹ ವೈರಲ್‌ ಆಗಿದೆ.


ಇದನ್ನೂ ಓದಿ: ನನ್ನ ಮೇಲೆ ಗುಂಪು ಹಲ್ಲೆಯಾದಾಗ ನೀವೇಕೆ ಮಾತಾಡಲಿಲ್ಲ?: ಸ್ವಾಮಿ ಅಗ್ನಿವೇಶ್ ಪ್ರಶ್ನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...