Homeಮುಖಪುಟಮಾಫಿಯಾ ರಾಜ್ ಹೇಳಿಕೆ: ಟ್ವಿಟ್ಟರ್‌ನಲ್ಲಿ ಟ್ರೋಲ್ ಆದ ಬಿಜೆಪಿಯ ದಿಲೀಪ್ ಘೋಷ್

ಮಾಫಿಯಾ ರಾಜ್ ಹೇಳಿಕೆ: ಟ್ವಿಟ್ಟರ್‌ನಲ್ಲಿ ಟ್ರೋಲ್ ಆದ ಬಿಜೆಪಿಯ ದಿಲೀಪ್ ಘೋಷ್

ಟ್ವಿಟ್ಟರ್‌ನಲ್ಲಿ ಬಿಜೆಪಿ ನಾಯಕನ ಹೇಳಿಕೆಯನ್ನು ಟ್ಯಾಗ್ ಮಾಡಿ ಹಲವು ಮಂದಿ ’ಯುಪಿ ಮತ್ತು ಬಿಹಾರದಲ್ಲಿ ಮಾಫಿಯಾ ರಾಜ್ ಆಡಳಿತವಿದೆ ಎಂದು ಸತ್ಯ ನುಡಿದಿದ್ದಕ್ಕೆ ಥ್ಯಾಂಕ್ಯೂ ದಿಲೀಪ್ ಘೋಷ್’‌ ಎಂದಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಮತ್ತು ಕ್ರಮೇಣ ಇದು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ ಆಡಳಿತದ ರಾಜ್ಯವಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ನಿನ್ನೆ ಆರೋಪಿಸಿದ್ದರು. ಮಾಫಿಯಾ ರಾಜ್ ಹೇಳಿಕೆಗೆ ಜನ ಟ್ವಿಟ್ಟರ್‌ನಲ್ಲಿ ದಿಲೀಪ್ ಘೋಷ್‌ಗೆ ಧನ್ಯವಾದ ಸಲ್ಲಿಸಿ ವ್ಯಂಗ್ಯವಾಡಿದ್ದಾರೆ.

‘ಪಶ್ಚಿಮ ಬಂಗಾಳವು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ-ರಾಜ್‌ ವ್ಯವಸ್ಥೆಗೆ ಜಾರುತ್ತಿದೆ.  ಸ್ಟೆನ್‌ಗನ್ ಬಳಸಿ ಪೊಲೀಸ್ ಠಾಣೆಯ ಮುಂದೆಯೇ ಕೌನ್ಸಿಲರ್‌ನನ್ನು ಗುಂಡಿಕ್ಕಿ ಕೊಂದಿದ್ದು ನಾಚಿಕೆಗೇಡಿನ ಘಟನೆ’ ಎಂದು ಘೋಷ್‌ ಹೇಳಿದ್ದರು. ಉತ್ತರ 24 ಪರಗಣ ಜಿಲ್ಲೆಯ ತಿತಾಗರ್‌ನಲ್ಲಿ ಬಿಜೆಪಿ ನಾಯಕ ಮನೀಶ್ ಶುಕ್ಲಾ‍ ಅವರನ್ನು ಗುಂಡಿಟ್ಟು ಕೊಂದಿದ್ದನ್ನು ಉಲ್ಲೇಖಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ತೃಣಮೂಲ ಕಾಂಗ್ರೆಸ್, ಬಿಜೆಪಿ ಅಧಿಕಾರದಲ್ಲಿರುವ  ಉತ್ತರ ಪ್ರದೇಶ ಮತ್ತು ಬಿಹಾರ ಎರಡು ರಾಜ್ಯಗಳಲ್ಲಿ ಮಾಫಿಯಾ-ರಾಜ್ ಅಸ್ತಿತ್ವದಲ್ಲಿದೆ ಎಂದು ಒಪ್ಪಿಕೊಳ್ಳುವುದು ಒಳ್ಳೆಯ ಬೆಳವಣಿಗೆ ಎಂದು ವ್ಯಂಗ್ಯವಾಡಿತ್ತು.

ಇದನ್ನೂ ಓದಿ: ’ಯುಪಿ, ಬಿಹಾರದಂತೆ ಪ.ಬಂಗಾಳವೂ ಮಾಫಿಯಾ ರಾಜ್ಯವಾಗುತ್ತಿದೆ’- ಬಿಜೆಪಿ ನಾಯಕ

“ಬಿಜೆಪಿ ಆಡಳಿತದ ಯುಪಿ ಮತ್ತು ಬಿಹಾರದಲ್ಲಿ ಮಾಫಿಯಾ ರಾಜ್ ಅಸ್ತಿತ್ವದಲ್ಲಿದೆ ಎಂದು ಅವರು ಒಪ್ಪಿಕೊಂಡಿರುವುದು ಒಳ್ಳೆಯದು. ಒಮ್ಮೆಯಾದರೂ ಅವರು ಸತ್ಯವನ್ನು ಮಾತನಾಡಿದ್ದಕ್ಕೆ ನಮಗೆ ಸಂತೋಷವಾಗಿದೆ ”ಎಂದು ಟಿಎಂಸಿಯ ಹಿರಿಯ ಮುಖಂಡ ಮತ್ತು ಸಚಿವ ಫಿರ್ಹಾದ್ ಹಕೀಮ್ ವ್ಯಂಗ್ಯವಾಡಿದ್ದರು.

ಟ್ವಿಟ್ಟರ್‌ನಲ್ಲಿ ಬಿಜೆಪಿ ನಾಯಕನ ಹೇಳಿಕೆಯನ್ನು ಟ್ಯಾಗ್ ಮಾಡಿ ಹಲವು ಮಂದಿ ’ಯುಪಿ ಮತ್ತು ಬಿಹಾರದಲ್ಲಿ ಮಾಫಿಯಾ ರಾಜ್ ಆಡಳಿತವಿದೆ ಎಂದು ಸತ್ಯ ನುಡಿದಿದ್ದಕ್ಕೆ ಥ್ಯಾಂಕ್ಯೂ ದಿಲೀಪ್ ಘೋಷ್’‌ ಎಂದಿದ್ದಾರೆ.

 

ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಟ್ವಿಟ್ ಮಾಡಿ ’ದಿಲೀಪ್ ಘೋಷ್‌ ನಿಮಗೆ ತುಂಬಾ ತುಂಬಾ ಧನ್ಯವಾದಗಳು. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತು ಬಿಹಾರದ ನಿತೀಶ್ ಕುಮಾರ್ ಸರ್ಕಾರದಲ್ಲಿ ಮಾಫಿಯಾ ರಾಜ್ ನಡೆಯುತ್ತಿದೆ ಎಂದು ಒಪ್ಪಿಕೊಂಡಿರುವುದಕ್ಕೆ ಧನ್ಯವಾದ’ ಎಂದಿದ್ದಾರೆ.

ಕೆಲ ಮೂಲಗಳ ಪ್ರಕಾರ ಮುಕುಲ್ ರಾಯ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಲು ದಿಲೀಪ್ ಘೋಷ್ ಹೀಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...