Homeಕರ್ನಾಟಕಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ...

ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ

- Advertisement -
- Advertisement -

ಮಂಗಳೂರಿನ ಬಂಟ್ವಾಳ ಬಳಿಯ ಕೊಲ್ತಮಜಲುನಲ್ಲಿ ಅಮಾಯಕ ಮುಸ್ಲಿಂ ಯುವಕ ಅಬ್ದುಲ್ ರಹೀಂ ಅವರ ಕೊಲೆಯಿಂದ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಮೀರ್ ತಮ್ಮ ಸ್ಥಾನಕ್ಕೆ ಬುಧವಾರ ರಾಜೀನಾಮೆ ಘೋಷಿಸಿದ್ದಾರೆ. ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ

ಶರಣ್ ಪಂಪ್‌ವೆಲ್‌ನಂತಹ ದುಷ್ಕರ್ಮಿಗಳ ಮೇಲೆ ಪ್ರಕರಣ ದಾಖಲಾದರೂ, ಎರಡೇ ನಿಮಿಷಗಳಲ್ಲಿ ಮ್ಯಾಗಿ ತಯಾರು ಮಾಡುವಂತೆ ಜಾಮೀನು ದೊರೆಯುವ ವ್ಯವಸ್ಥೆಯಿಂದ ತಾನು ಬೇಸೆತ್ತಿದ್ದು, ಜನರಲ್ಲಿ ಕಾನೂನಿನ ಮೇಲಿನ ನಂಬಿಕೆ ಕಡಿಮೆಯಾಗಿದೆ. ಈ ಘಟನೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರವಾಗಿದೆ ಎಂದು ಶಮೀರ್ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಅವರು ಯುವ ಕಾಂಗ್ರೆಸ್ ಅಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ, “ಕಾಂಗ್ರೆಸ್ ಸರ್ಕಾರದ ವಿಫಲತೆಯಿಂದಾಗಿ ಕರಾವಳಿಯಲ್ಲಿ ಕೋಮುವಾದಿ ಶಕ್ತಿಗಳನ್ನು ನಿಯಂತ್ರಿಸಲು ಯಾವುದೇ ತೀವ್ರ ಕ್ರಮ ಕೈಗೊಳ್ಳಲಾಗಿಲ್ಲ. ಎರಡು ವರ್ಷಗಳಿಂದ ಅಧಿಕಾರದಲ್ಲಿರುವ ಸರ್ಕಾರವು ಕೋಮುವಾದಿಗಳ ಹೆಡೆಮುರಿಯನ್ನು ಕಟ್ಟಿಹಾಕಲು ಯಾವುದೇ ಪರಿಣಾಮಕಾರಿ ಕೆಲಸ ಮಾಡಿಲ್ಲ, ಇದರಿಂದ ಜನರಲ್ಲಿ ತೀವ್ರ ಅಸಮಾಧಾನ ಮೂಡಿದೆ” ಎಂದು ಹೇಳಿದ್ದಾರೆ.

“ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ನಿಷ್ಕ್ರಿಯ ಆಡಳಿತವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ. ಇದರಿಂದ ಆರೆಸ್ಸೆಸ್‌ನಂತಹ ಸಂಘಟನೆಗಳ ಗೂಂಡಾಗಳಿಗೆ ಮುಕ್ತ ಚಲನೆಯ ಸ್ವಾತಂತ್ರ್ಯ ದೊರೆತಂತಾಗಿದೆ. ಇದು ಸರ್ಕಾರದ ದೌರ್ಬಲ್ಯವನ್ನು ಸ್ಪಷ್ಟವಾಗಿ ತೋರಿಸುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನಿರ್ಲಕ್ಷ್ಯದ ಧೋರಣೆಯೂ ಜನರಲ್ಲಿ ಅಸಮಾಧಾನವನ್ನು ತಂದಿದೆ.” ಎಂದು ಅವರು ಹೇಳಿದ್ದಾರೆ.

“ಕರಾವಳಿಯಲ್ಲಿ ಕೋಮು ಗಲಭೆಗಳನ್ನು ತಡೆಗಟ್ಟಲು ಯಾವುದೇ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಪಕ್ಷದ ಶಕ್ತಿಹೀನತೆಯನ್ನು ಎತ್ತಿ ತೋರಿಸುತ್ತದೆ. ಪೊಲೀಸ್ ಇಲಾಖೆಯು ಸರ್ಕಾರದ ಹಿಡಿತದಲ್ಲಿಲ್ಲದಿರುವುದು ಗಂಭೀರ ಕಳವಳದ ವಿಷಯವಾಗಿದೆ. ಶರಣ್ ಪಂಪ್‌ವೆಲ್ ಮತ್ತು ಶ್ರೀಕಾಂತ್ ಶೆಟ್ಟಿಯಂತಹ ದುಷ್ಕರ್ಮಿಗಳು ಗಲಭೆಗೆ ಪ್ರಚೋದನೆ ನೀಡುತ್ತಿದ್ದರೂ, ಅವರು ಸ್ವಚ್ಛಂದವಾಗಿ ತಿರುಗಾಡುತ್ತಿದ್ದಾರೆ. ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವುದು ಸರ್ಕಾರದ ವಿಫಲತೆಯನ್ನು ಸೂಚಿಸುತ್ತದೆ.” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕರಾವಳಿಯಲ್ಲಿ ಕೋಮುವಾದಿ ಶಕ್ತಿಗಳ ಹಾವಳಿಯಿಂದ ದಿನಗೂಲಿ ಕಾರ್ಮಿಕರು ಮತ್ತು ಅಮಾಯಕ ನಾಗರಿಕರು ಭಯದಿಂದ ಬದುಕುವಂತಾಗಿದೆ. ಸಂಘಪರಿವಾರದ ರೌಡಿಗಳನ್ನು ಎದುರಿಸಲು ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ರಾಜಕೀಯ ಇಚ್ಛಾಶಕ್ತಿ ಇಲ್ಲವೆಂದು ತೋರುತ್ತಿದೆ. ಇದರಿಂದ ಜನರು ಸರ್ಕಾರದ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಜನರ ಮುಂದೆ ತಲೆ ಎತ್ತಿಕೊಂಡು ನಿಲ್ಲಲು ಕಷ್ಟವಾಗಿದೆ.” ಎಂದು ಅವರು ಹೇಳಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ, ಕಾಂಗ್ರೆಸ್ ಸರ್ಕಾರದ ಈಗಿನ ಆಡಳಿತದ ನೀತಿಗಳೊಂದಿಗೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವ ಶಮೀರ್‌ ಅವರು, ಪ್ರಸ್ತುತ ಸ್ಥಿತಿಯಲ್ಲಿ, ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಅಲ್ಲದೆ, ತನ್ನೊಂದಿಗೆ ಹಲವು ಯುವ ಕಾಂಗ್ರೆಸ್ ಕಾರ್ಯಕರ್ತರೂ ರಾಜೀನಾಮೆ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...