Homeಕರ್ನಾಟಕಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ...

ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ

- Advertisement -
- Advertisement -

ಮಂಗಳೂರಿನ ಬಂಟ್ವಾಳ ಬಳಿಯ ಕೊಲ್ತಮಜಲುನಲ್ಲಿ ಅಮಾಯಕ ಮುಸ್ಲಿಂ ಯುವಕ ಅಬ್ದುಲ್ ರಹೀಂ ಅವರ ಕೊಲೆಯಿಂದ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಮೀರ್ ತಮ್ಮ ಸ್ಥಾನಕ್ಕೆ ಬುಧವಾರ ರಾಜೀನಾಮೆ ಘೋಷಿಸಿದ್ದಾರೆ. ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ

ಶರಣ್ ಪಂಪ್‌ವೆಲ್‌ನಂತಹ ದುಷ್ಕರ್ಮಿಗಳ ಮೇಲೆ ಪ್ರಕರಣ ದಾಖಲಾದರೂ, ಎರಡೇ ನಿಮಿಷಗಳಲ್ಲಿ ಮ್ಯಾಗಿ ತಯಾರು ಮಾಡುವಂತೆ ಜಾಮೀನು ದೊರೆಯುವ ವ್ಯವಸ್ಥೆಯಿಂದ ತಾನು ಬೇಸೆತ್ತಿದ್ದು, ಜನರಲ್ಲಿ ಕಾನೂನಿನ ಮೇಲಿನ ನಂಬಿಕೆ ಕಡಿಮೆಯಾಗಿದೆ. ಈ ಘಟನೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರವಾಗಿದೆ ಎಂದು ಶಮೀರ್ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಅವರು ಯುವ ಕಾಂಗ್ರೆಸ್ ಅಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ, “ಕಾಂಗ್ರೆಸ್ ಸರ್ಕಾರದ ವಿಫಲತೆಯಿಂದಾಗಿ ಕರಾವಳಿಯಲ್ಲಿ ಕೋಮುವಾದಿ ಶಕ್ತಿಗಳನ್ನು ನಿಯಂತ್ರಿಸಲು ಯಾವುದೇ ತೀವ್ರ ಕ್ರಮ ಕೈಗೊಳ್ಳಲಾಗಿಲ್ಲ. ಎರಡು ವರ್ಷಗಳಿಂದ ಅಧಿಕಾರದಲ್ಲಿರುವ ಸರ್ಕಾರವು ಕೋಮುವಾದಿಗಳ ಹೆಡೆಮುರಿಯನ್ನು ಕಟ್ಟಿಹಾಕಲು ಯಾವುದೇ ಪರಿಣಾಮಕಾರಿ ಕೆಲಸ ಮಾಡಿಲ್ಲ, ಇದರಿಂದ ಜನರಲ್ಲಿ ತೀವ್ರ ಅಸಮಾಧಾನ ಮೂಡಿದೆ” ಎಂದು ಹೇಳಿದ್ದಾರೆ.

“ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ನಿಷ್ಕ್ರಿಯ ಆಡಳಿತವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ. ಇದರಿಂದ ಆರೆಸ್ಸೆಸ್‌ನಂತಹ ಸಂಘಟನೆಗಳ ಗೂಂಡಾಗಳಿಗೆ ಮುಕ್ತ ಚಲನೆಯ ಸ್ವಾತಂತ್ರ್ಯ ದೊರೆತಂತಾಗಿದೆ. ಇದು ಸರ್ಕಾರದ ದೌರ್ಬಲ್ಯವನ್ನು ಸ್ಪಷ್ಟವಾಗಿ ತೋರಿಸುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನಿರ್ಲಕ್ಷ್ಯದ ಧೋರಣೆಯೂ ಜನರಲ್ಲಿ ಅಸಮಾಧಾನವನ್ನು ತಂದಿದೆ.” ಎಂದು ಅವರು ಹೇಳಿದ್ದಾರೆ.

“ಕರಾವಳಿಯಲ್ಲಿ ಕೋಮು ಗಲಭೆಗಳನ್ನು ತಡೆಗಟ್ಟಲು ಯಾವುದೇ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಪಕ್ಷದ ಶಕ್ತಿಹೀನತೆಯನ್ನು ಎತ್ತಿ ತೋರಿಸುತ್ತದೆ. ಪೊಲೀಸ್ ಇಲಾಖೆಯು ಸರ್ಕಾರದ ಹಿಡಿತದಲ್ಲಿಲ್ಲದಿರುವುದು ಗಂಭೀರ ಕಳವಳದ ವಿಷಯವಾಗಿದೆ. ಶರಣ್ ಪಂಪ್‌ವೆಲ್ ಮತ್ತು ಶ್ರೀಕಾಂತ್ ಶೆಟ್ಟಿಯಂತಹ ದುಷ್ಕರ್ಮಿಗಳು ಗಲಭೆಗೆ ಪ್ರಚೋದನೆ ನೀಡುತ್ತಿದ್ದರೂ, ಅವರು ಸ್ವಚ್ಛಂದವಾಗಿ ತಿರುಗಾಡುತ್ತಿದ್ದಾರೆ. ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವುದು ಸರ್ಕಾರದ ವಿಫಲತೆಯನ್ನು ಸೂಚಿಸುತ್ತದೆ.” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕರಾವಳಿಯಲ್ಲಿ ಕೋಮುವಾದಿ ಶಕ್ತಿಗಳ ಹಾವಳಿಯಿಂದ ದಿನಗೂಲಿ ಕಾರ್ಮಿಕರು ಮತ್ತು ಅಮಾಯಕ ನಾಗರಿಕರು ಭಯದಿಂದ ಬದುಕುವಂತಾಗಿದೆ. ಸಂಘಪರಿವಾರದ ರೌಡಿಗಳನ್ನು ಎದುರಿಸಲು ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ರಾಜಕೀಯ ಇಚ್ಛಾಶಕ್ತಿ ಇಲ್ಲವೆಂದು ತೋರುತ್ತಿದೆ. ಇದರಿಂದ ಜನರು ಸರ್ಕಾರದ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಜನರ ಮುಂದೆ ತಲೆ ಎತ್ತಿಕೊಂಡು ನಿಲ್ಲಲು ಕಷ್ಟವಾಗಿದೆ.” ಎಂದು ಅವರು ಹೇಳಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ, ಕಾಂಗ್ರೆಸ್ ಸರ್ಕಾರದ ಈಗಿನ ಆಡಳಿತದ ನೀತಿಗಳೊಂದಿಗೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವ ಶಮೀರ್‌ ಅವರು, ಪ್ರಸ್ತುತ ಸ್ಥಿತಿಯಲ್ಲಿ, ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಅಲ್ಲದೆ, ತನ್ನೊಂದಿಗೆ ಹಲವು ಯುವ ಕಾಂಗ್ರೆಸ್ ಕಾರ್ಯಕರ್ತರೂ ರಾಜೀನಾಮೆ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...