Homeನಿಜವೋ ಸುಳ್ಳೋFact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

Fact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

- Advertisement -
- Advertisement -

ಅಂತರಾಷ್ಟ್ರೀಯವಾಗಿ ಮಾರಾಟವಾಗುವ ಬೀಫ್ ಫ್ಲೇವರ್ ಮ್ಯಾಗಿ ನೂಡೆಲ್ಸ್ ಪ್ಯಾಕೆಟ್ ಒಂದರ ಚಿತ್ರವೊಂದನ್ನು ಹಾಕಿ, ಭಾರತದಲ್ಲಿ ಇದನ್ನು ಮಾರಾಟ ಮಾಡಲಾಗುತ್ತಿದೆ ಅದನ್ನು ಬ್ಯಾನ್ ಮಾಡಬೇಕು ಎಂದು ಫೇಸ್ಬುಕ್ಕಿನಾದ್ಯಂತ ಪೋಸ್ಟಂದು ವೈರಲಾಗಿತ್ತು. ಅದನ್ನು ಫ್ಯಾಕ್ಟ್ ಚೆಕ್ಕರ್ ನ್ಯೂಸ್ ವೆಬ್ ಪೋರ್ಟಲ್‌ ಆದ “ಭೂಮ್ ಲೈವ್” ಫ್ಯಾಕ್ಟ್ ಚೆಕ್ ನಡೆಸಿದ್ದು ಸುದ್ದಿಯ ಸತ್ಯಾಸತ್ಯತೆಯನ್ನು ಹೊರ ಹಾಕಿದೆ.

ನೆಸ್ಲೇ ಇಂಡಿಯಾವನ್ನು ಸಂಪರ್ಕಿಸಿದ ಭೂಮ್ ಲೈವ್, ಫೇಸ್ ಬುಕ್ಕಿನಲ್ಲಿ ಹರಿದಾಡುತ್ತಿರುವ ಬೀಫ್ ಫ್ಲೇವರ್ ಮ್ಯಾಗಿಯು ಆಸ್ಟ್ರೇಲಿಯಾದಲ್ಲಿ ಮಾರಾಟ ಮಾಡುವ ಮ್ಯಾಗಿಯಾಗಿದೆ ಎಂದು ವರದಿ ಮಾಡಿದೆ.

ಅದರ ಫೋಟೋವನ್ನು ಹಾಕಿ “ಮ್ಯಾಗಿಯಲ್ಲಿ ಗೋಮಾಂಸದ ಫ್ಲೇವರ್ ಹಾಕಲು ಪ್ರಾರಂಭಿಸಿದ್ದಾರೆ, ಇಂದಿನಿಂದ ನಾನು ಮ್ಯಾಗಿಯನ್ನು ಬಹಿಷ್ಕಾರ ಮಾಡುತ್ತಿದ್ದೇನೆ. ದಯವಿಟ್ಟು ಯಾರು ದನಕ್ಕೆ ತಾಯಿಯ ಸ್ಥಾನಮಾನ ನೀಡಿದ್ದೀರೊ ಅವರೆಲ್ಲರೂ ಮ್ಯಾಗಿಯನ್ನು ಬಹಿಷ್ಕಾರ ಮಾಡಿ” ಎಂದು ಬರೆಯಲಾಗಿದೆ.

मैगी में गोमांस का फ्लेवर डालना शुरू कर दिया मैं आज से मैगी का बहिष्कार करता हूँ , कृपया आप भी जो गाय को माता का दर्जा देतें हैं मैगी का बहिष्कार करें मैगी का बहिष्कार करो

Posted by क्षत्रिय सिंह on Tuesday, March 10, 2020

ಇನ್ನೊಂದು ಚಿತ್ರದಲ್ಲಿ ಕೂಡಾ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಮ್ಯಾಗಿ ಕಂಪೆನಿಯ ಬೀಫ್ ಫ್ಲೇವರಿನ ಕ್ಯೂಬುಗಳ ಬಗ್ಗೆ ಕೂಡಾ ಇದೇ ರೀತಿಯ ಸುಳ್ಳುಗಳನ್ನು ಹರಿಯಬಿಡಲಾಗಿದೆ.

मैगी में गोमांस का फ्लेवर डालना शुरू कर दिया ?? कृपया आप भी जो गाय को माता का दर्जा देतें हैं मैगी का बहिष्कार करें ?#मैगी_का_बहिष्कार_करो…

Posted by Shubham Sharma on Tuesday, March 10, 2020

ಭೂಮ್ ಲೈವ್, ನಸ್ಲೇ ಇಂಡಿಯಾ ವಕ್ತಾರರನ್ನು ಸಂಪರ್ಕಿಸಿ ಈ ಬಗ್ಗೆ ಸ್ಪಷ್ಟನೆ ಕೇಳಿದಾಗ “ಮ್ಯಾಗಿಯ ಬೀಫ್ ಫ್ಲೇವರ್ ಉತ್ಪನ್ನಗಳು ಭಾರತಲ್ಲಿ ಮಾರಾಟಕ್ಕೆ ಲಭ್ಯವಿಲ್ಲ” ಎಂದು ಹೇಳಿದ್ದಾರಲ್ಲದೆ “ಭಾರತದಲ್ಲಿ ಲಭ್ಯವಿರುವ ಮ್ಯಾಗಿಯ ಯಾವುದೇ ಉತ್ಪನ್ನದಲ್ಲಿ ದನದ ಫ್ಲೇವರ್ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ಮ್ಯಾಗಿ ಇಂಡಿಯಾ ವೆಬ್ ಸೈಟಿನಲ್ಲಿ ಮಾಂಸಾಹಾರಿ ವಿಭಾಗದಲ್ಲಿ ಕೇವಲ ಚಿಕನ್ ಫ್ಲೇವರ್ ಮಾತ್ರ ಹಾಕಿದೆ. ಜೊತೆಗೆ ತನ್ನ ಫೇಸ್ ಬುಕ್ ಪೇಜಲ್ಲಿ ಕೂಡಾ ಇದೆ ಮಾಹಿತಿಯನ್ನು ಹಾಕಿದೆ.

ಭೂಮ್ ಲೈವ್ ಗೋಮಾಂಸವಿದೆ ಎಂದು ವೈರಲಾದ ಫೋಟೋವನ್ನು ರಿವರ್ಸ್ ಸರ್ಚ್ ಮಾಡಿದಾಗ ಅದು “ಮ್ಯಾಗಿ ಆಸ್ಟ್ರೇಲಿಯಾ”ದ ವೆಬ್ಸೈಟಿನ ಫೋಟೋ ಎಂದು ಪತ್ತೆಯಾಗಿದೆ.

ಅಲ್ಲದೆ ಭೂಮ್ ಲೈವ್ ಫೇಸ್ ಬುಕ್ಕಲ್ಲಿ ಹರಿದಾಡುವ ಇನ್ನೊಂದು ಚಿತ್ರವಾದ ಗೋಮಾಂಸದ ಕ್ಯೂಬನ್ನು ಅಮೇರಿಕಾದ ಅಮೇಜಾನ್ ವೆಬ್ಸೈಟಲ್ಲಿ ಇರುವುದನ್ನು ಪತ್ತೆ ಹಚ್ಚಿದೆ. ಅದು ಕೂಡ ಭಾರತದಲ್ಲಿ ಲಭ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...