Homeನಿಜವೋ ಸುಳ್ಳೋFact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

Fact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

- Advertisement -
- Advertisement -

ಅಂತರಾಷ್ಟ್ರೀಯವಾಗಿ ಮಾರಾಟವಾಗುವ ಬೀಫ್ ಫ್ಲೇವರ್ ಮ್ಯಾಗಿ ನೂಡೆಲ್ಸ್ ಪ್ಯಾಕೆಟ್ ಒಂದರ ಚಿತ್ರವೊಂದನ್ನು ಹಾಕಿ, ಭಾರತದಲ್ಲಿ ಇದನ್ನು ಮಾರಾಟ ಮಾಡಲಾಗುತ್ತಿದೆ ಅದನ್ನು ಬ್ಯಾನ್ ಮಾಡಬೇಕು ಎಂದು ಫೇಸ್ಬುಕ್ಕಿನಾದ್ಯಂತ ಪೋಸ್ಟಂದು ವೈರಲಾಗಿತ್ತು. ಅದನ್ನು ಫ್ಯಾಕ್ಟ್ ಚೆಕ್ಕರ್ ನ್ಯೂಸ್ ವೆಬ್ ಪೋರ್ಟಲ್‌ ಆದ “ಭೂಮ್ ಲೈವ್” ಫ್ಯಾಕ್ಟ್ ಚೆಕ್ ನಡೆಸಿದ್ದು ಸುದ್ದಿಯ ಸತ್ಯಾಸತ್ಯತೆಯನ್ನು ಹೊರ ಹಾಕಿದೆ.

ನೆಸ್ಲೇ ಇಂಡಿಯಾವನ್ನು ಸಂಪರ್ಕಿಸಿದ ಭೂಮ್ ಲೈವ್, ಫೇಸ್ ಬುಕ್ಕಿನಲ್ಲಿ ಹರಿದಾಡುತ್ತಿರುವ ಬೀಫ್ ಫ್ಲೇವರ್ ಮ್ಯಾಗಿಯು ಆಸ್ಟ್ರೇಲಿಯಾದಲ್ಲಿ ಮಾರಾಟ ಮಾಡುವ ಮ್ಯಾಗಿಯಾಗಿದೆ ಎಂದು ವರದಿ ಮಾಡಿದೆ.

ಅದರ ಫೋಟೋವನ್ನು ಹಾಕಿ “ಮ್ಯಾಗಿಯಲ್ಲಿ ಗೋಮಾಂಸದ ಫ್ಲೇವರ್ ಹಾಕಲು ಪ್ರಾರಂಭಿಸಿದ್ದಾರೆ, ಇಂದಿನಿಂದ ನಾನು ಮ್ಯಾಗಿಯನ್ನು ಬಹಿಷ್ಕಾರ ಮಾಡುತ್ತಿದ್ದೇನೆ. ದಯವಿಟ್ಟು ಯಾರು ದನಕ್ಕೆ ತಾಯಿಯ ಸ್ಥಾನಮಾನ ನೀಡಿದ್ದೀರೊ ಅವರೆಲ್ಲರೂ ಮ್ಯಾಗಿಯನ್ನು ಬಹಿಷ್ಕಾರ ಮಾಡಿ” ಎಂದು ಬರೆಯಲಾಗಿದೆ.

मैगी में गोमांस का फ्लेवर डालना शुरू कर दिया मैं आज से मैगी का बहिष्कार करता हूँ , कृपया आप भी जो गाय को माता का दर्जा देतें हैं मैगी का बहिष्कार करें मैगी का बहिष्कार करो

Posted by क्षत्रिय सिंह on Tuesday, March 10, 2020

ಇನ್ನೊಂದು ಚಿತ್ರದಲ್ಲಿ ಕೂಡಾ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಮ್ಯಾಗಿ ಕಂಪೆನಿಯ ಬೀಫ್ ಫ್ಲೇವರಿನ ಕ್ಯೂಬುಗಳ ಬಗ್ಗೆ ಕೂಡಾ ಇದೇ ರೀತಿಯ ಸುಳ್ಳುಗಳನ್ನು ಹರಿಯಬಿಡಲಾಗಿದೆ.

मैगी में गोमांस का फ्लेवर डालना शुरू कर दिया ?? कृपया आप भी जो गाय को माता का दर्जा देतें हैं मैगी का बहिष्कार करें ?#मैगी_का_बहिष्कार_करो…

Posted by Shubham Sharma on Tuesday, March 10, 2020

ಭೂಮ್ ಲೈವ್, ನಸ್ಲೇ ಇಂಡಿಯಾ ವಕ್ತಾರರನ್ನು ಸಂಪರ್ಕಿಸಿ ಈ ಬಗ್ಗೆ ಸ್ಪಷ್ಟನೆ ಕೇಳಿದಾಗ “ಮ್ಯಾಗಿಯ ಬೀಫ್ ಫ್ಲೇವರ್ ಉತ್ಪನ್ನಗಳು ಭಾರತಲ್ಲಿ ಮಾರಾಟಕ್ಕೆ ಲಭ್ಯವಿಲ್ಲ” ಎಂದು ಹೇಳಿದ್ದಾರಲ್ಲದೆ “ಭಾರತದಲ್ಲಿ ಲಭ್ಯವಿರುವ ಮ್ಯಾಗಿಯ ಯಾವುದೇ ಉತ್ಪನ್ನದಲ್ಲಿ ದನದ ಫ್ಲೇವರ್ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ಮ್ಯಾಗಿ ಇಂಡಿಯಾ ವೆಬ್ ಸೈಟಿನಲ್ಲಿ ಮಾಂಸಾಹಾರಿ ವಿಭಾಗದಲ್ಲಿ ಕೇವಲ ಚಿಕನ್ ಫ್ಲೇವರ್ ಮಾತ್ರ ಹಾಕಿದೆ. ಜೊತೆಗೆ ತನ್ನ ಫೇಸ್ ಬುಕ್ ಪೇಜಲ್ಲಿ ಕೂಡಾ ಇದೆ ಮಾಹಿತಿಯನ್ನು ಹಾಕಿದೆ.

ಭೂಮ್ ಲೈವ್ ಗೋಮಾಂಸವಿದೆ ಎಂದು ವೈರಲಾದ ಫೋಟೋವನ್ನು ರಿವರ್ಸ್ ಸರ್ಚ್ ಮಾಡಿದಾಗ ಅದು “ಮ್ಯಾಗಿ ಆಸ್ಟ್ರೇಲಿಯಾ”ದ ವೆಬ್ಸೈಟಿನ ಫೋಟೋ ಎಂದು ಪತ್ತೆಯಾಗಿದೆ.

ಅಲ್ಲದೆ ಭೂಮ್ ಲೈವ್ ಫೇಸ್ ಬುಕ್ಕಲ್ಲಿ ಹರಿದಾಡುವ ಇನ್ನೊಂದು ಚಿತ್ರವಾದ ಗೋಮಾಂಸದ ಕ್ಯೂಬನ್ನು ಅಮೇರಿಕಾದ ಅಮೇಜಾನ್ ವೆಬ್ಸೈಟಲ್ಲಿ ಇರುವುದನ್ನು ಪತ್ತೆ ಹಚ್ಚಿದೆ. ಅದು ಕೂಡ ಭಾರತದಲ್ಲಿ ಲಭ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...