Homeನಿಜವೋ ಸುಳ್ಳೋFact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

Fact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

- Advertisement -
- Advertisement -

ಅಂತರಾಷ್ಟ್ರೀಯವಾಗಿ ಮಾರಾಟವಾಗುವ ಬೀಫ್ ಫ್ಲೇವರ್ ಮ್ಯಾಗಿ ನೂಡೆಲ್ಸ್ ಪ್ಯಾಕೆಟ್ ಒಂದರ ಚಿತ್ರವೊಂದನ್ನು ಹಾಕಿ, ಭಾರತದಲ್ಲಿ ಇದನ್ನು ಮಾರಾಟ ಮಾಡಲಾಗುತ್ತಿದೆ ಅದನ್ನು ಬ್ಯಾನ್ ಮಾಡಬೇಕು ಎಂದು ಫೇಸ್ಬುಕ್ಕಿನಾದ್ಯಂತ ಪೋಸ್ಟಂದು ವೈರಲಾಗಿತ್ತು. ಅದನ್ನು ಫ್ಯಾಕ್ಟ್ ಚೆಕ್ಕರ್ ನ್ಯೂಸ್ ವೆಬ್ ಪೋರ್ಟಲ್‌ ಆದ “ಭೂಮ್ ಲೈವ್” ಫ್ಯಾಕ್ಟ್ ಚೆಕ್ ನಡೆಸಿದ್ದು ಸುದ್ದಿಯ ಸತ್ಯಾಸತ್ಯತೆಯನ್ನು ಹೊರ ಹಾಕಿದೆ.

ನೆಸ್ಲೇ ಇಂಡಿಯಾವನ್ನು ಸಂಪರ್ಕಿಸಿದ ಭೂಮ್ ಲೈವ್, ಫೇಸ್ ಬುಕ್ಕಿನಲ್ಲಿ ಹರಿದಾಡುತ್ತಿರುವ ಬೀಫ್ ಫ್ಲೇವರ್ ಮ್ಯಾಗಿಯು ಆಸ್ಟ್ರೇಲಿಯಾದಲ್ಲಿ ಮಾರಾಟ ಮಾಡುವ ಮ್ಯಾಗಿಯಾಗಿದೆ ಎಂದು ವರದಿ ಮಾಡಿದೆ.

ಅದರ ಫೋಟೋವನ್ನು ಹಾಕಿ “ಮ್ಯಾಗಿಯಲ್ಲಿ ಗೋಮಾಂಸದ ಫ್ಲೇವರ್ ಹಾಕಲು ಪ್ರಾರಂಭಿಸಿದ್ದಾರೆ, ಇಂದಿನಿಂದ ನಾನು ಮ್ಯಾಗಿಯನ್ನು ಬಹಿಷ್ಕಾರ ಮಾಡುತ್ತಿದ್ದೇನೆ. ದಯವಿಟ್ಟು ಯಾರು ದನಕ್ಕೆ ತಾಯಿಯ ಸ್ಥಾನಮಾನ ನೀಡಿದ್ದೀರೊ ಅವರೆಲ್ಲರೂ ಮ್ಯಾಗಿಯನ್ನು ಬಹಿಷ್ಕಾರ ಮಾಡಿ” ಎಂದು ಬರೆಯಲಾಗಿದೆ.

मैगी में गोमांस का फ्लेवर डालना शुरू कर दिया मैं आज से मैगी का बहिष्कार करता हूँ , कृपया आप भी जो गाय को माता का दर्जा देतें हैं मैगी का बहिष्कार करें मैगी का बहिष्कार करो

Posted by क्षत्रिय सिंह on Tuesday, March 10, 2020

ಇನ್ನೊಂದು ಚಿತ್ರದಲ್ಲಿ ಕೂಡಾ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಮ್ಯಾಗಿ ಕಂಪೆನಿಯ ಬೀಫ್ ಫ್ಲೇವರಿನ ಕ್ಯೂಬುಗಳ ಬಗ್ಗೆ ಕೂಡಾ ಇದೇ ರೀತಿಯ ಸುಳ್ಳುಗಳನ್ನು ಹರಿಯಬಿಡಲಾಗಿದೆ.

मैगी में गोमांस का फ्लेवर डालना शुरू कर दिया ?? कृपया आप भी जो गाय को माता का दर्जा देतें हैं मैगी का बहिष्कार करें ?#मैगी_का_बहिष्कार_करो…

Posted by Shubham Sharma on Tuesday, March 10, 2020

ಭೂಮ್ ಲೈವ್, ನಸ್ಲೇ ಇಂಡಿಯಾ ವಕ್ತಾರರನ್ನು ಸಂಪರ್ಕಿಸಿ ಈ ಬಗ್ಗೆ ಸ್ಪಷ್ಟನೆ ಕೇಳಿದಾಗ “ಮ್ಯಾಗಿಯ ಬೀಫ್ ಫ್ಲೇವರ್ ಉತ್ಪನ್ನಗಳು ಭಾರತಲ್ಲಿ ಮಾರಾಟಕ್ಕೆ ಲಭ್ಯವಿಲ್ಲ” ಎಂದು ಹೇಳಿದ್ದಾರಲ್ಲದೆ “ಭಾರತದಲ್ಲಿ ಲಭ್ಯವಿರುವ ಮ್ಯಾಗಿಯ ಯಾವುದೇ ಉತ್ಪನ್ನದಲ್ಲಿ ದನದ ಫ್ಲೇವರ್ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ಮ್ಯಾಗಿ ಇಂಡಿಯಾ ವೆಬ್ ಸೈಟಿನಲ್ಲಿ ಮಾಂಸಾಹಾರಿ ವಿಭಾಗದಲ್ಲಿ ಕೇವಲ ಚಿಕನ್ ಫ್ಲೇವರ್ ಮಾತ್ರ ಹಾಕಿದೆ. ಜೊತೆಗೆ ತನ್ನ ಫೇಸ್ ಬುಕ್ ಪೇಜಲ್ಲಿ ಕೂಡಾ ಇದೆ ಮಾಹಿತಿಯನ್ನು ಹಾಕಿದೆ.

ಭೂಮ್ ಲೈವ್ ಗೋಮಾಂಸವಿದೆ ಎಂದು ವೈರಲಾದ ಫೋಟೋವನ್ನು ರಿವರ್ಸ್ ಸರ್ಚ್ ಮಾಡಿದಾಗ ಅದು “ಮ್ಯಾಗಿ ಆಸ್ಟ್ರೇಲಿಯಾ”ದ ವೆಬ್ಸೈಟಿನ ಫೋಟೋ ಎಂದು ಪತ್ತೆಯಾಗಿದೆ.

ಅಲ್ಲದೆ ಭೂಮ್ ಲೈವ್ ಫೇಸ್ ಬುಕ್ಕಲ್ಲಿ ಹರಿದಾಡುವ ಇನ್ನೊಂದು ಚಿತ್ರವಾದ ಗೋಮಾಂಸದ ಕ್ಯೂಬನ್ನು ಅಮೇರಿಕಾದ ಅಮೇಜಾನ್ ವೆಬ್ಸೈಟಲ್ಲಿ ಇರುವುದನ್ನು ಪತ್ತೆ ಹಚ್ಚಿದೆ. ಅದು ಕೂಡ ಭಾರತದಲ್ಲಿ ಲಭ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...