Homeನಿಜವೋ ಸುಳ್ಳೋFact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

Fact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

- Advertisement -
- Advertisement -

ಅಂತರಾಷ್ಟ್ರೀಯವಾಗಿ ಮಾರಾಟವಾಗುವ ಬೀಫ್ ಫ್ಲೇವರ್ ಮ್ಯಾಗಿ ನೂಡೆಲ್ಸ್ ಪ್ಯಾಕೆಟ್ ಒಂದರ ಚಿತ್ರವೊಂದನ್ನು ಹಾಕಿ, ಭಾರತದಲ್ಲಿ ಇದನ್ನು ಮಾರಾಟ ಮಾಡಲಾಗುತ್ತಿದೆ ಅದನ್ನು ಬ್ಯಾನ್ ಮಾಡಬೇಕು ಎಂದು ಫೇಸ್ಬುಕ್ಕಿನಾದ್ಯಂತ ಪೋಸ್ಟಂದು ವೈರಲಾಗಿತ್ತು. ಅದನ್ನು ಫ್ಯಾಕ್ಟ್ ಚೆಕ್ಕರ್ ನ್ಯೂಸ್ ವೆಬ್ ಪೋರ್ಟಲ್‌ ಆದ “ಭೂಮ್ ಲೈವ್” ಫ್ಯಾಕ್ಟ್ ಚೆಕ್ ನಡೆಸಿದ್ದು ಸುದ್ದಿಯ ಸತ್ಯಾಸತ್ಯತೆಯನ್ನು ಹೊರ ಹಾಕಿದೆ.

ನೆಸ್ಲೇ ಇಂಡಿಯಾವನ್ನು ಸಂಪರ್ಕಿಸಿದ ಭೂಮ್ ಲೈವ್, ಫೇಸ್ ಬುಕ್ಕಿನಲ್ಲಿ ಹರಿದಾಡುತ್ತಿರುವ ಬೀಫ್ ಫ್ಲೇವರ್ ಮ್ಯಾಗಿಯು ಆಸ್ಟ್ರೇಲಿಯಾದಲ್ಲಿ ಮಾರಾಟ ಮಾಡುವ ಮ್ಯಾಗಿಯಾಗಿದೆ ಎಂದು ವರದಿ ಮಾಡಿದೆ.

ಅದರ ಫೋಟೋವನ್ನು ಹಾಕಿ “ಮ್ಯಾಗಿಯಲ್ಲಿ ಗೋಮಾಂಸದ ಫ್ಲೇವರ್ ಹಾಕಲು ಪ್ರಾರಂಭಿಸಿದ್ದಾರೆ, ಇಂದಿನಿಂದ ನಾನು ಮ್ಯಾಗಿಯನ್ನು ಬಹಿಷ್ಕಾರ ಮಾಡುತ್ತಿದ್ದೇನೆ. ದಯವಿಟ್ಟು ಯಾರು ದನಕ್ಕೆ ತಾಯಿಯ ಸ್ಥಾನಮಾನ ನೀಡಿದ್ದೀರೊ ಅವರೆಲ್ಲರೂ ಮ್ಯಾಗಿಯನ್ನು ಬಹಿಷ್ಕಾರ ಮಾಡಿ” ಎಂದು ಬರೆಯಲಾಗಿದೆ.

मैगी में गोमांस का फ्लेवर डालना शुरू कर दिया मैं आज से मैगी का बहिष्कार करता हूँ , कृपया आप भी जो गाय को माता का दर्जा देतें हैं मैगी का बहिष्कार करें मैगी का बहिष्कार करो

Posted by क्षत्रिय सिंह on Tuesday, March 10, 2020

ಇನ್ನೊಂದು ಚಿತ್ರದಲ್ಲಿ ಕೂಡಾ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಮ್ಯಾಗಿ ಕಂಪೆನಿಯ ಬೀಫ್ ಫ್ಲೇವರಿನ ಕ್ಯೂಬುಗಳ ಬಗ್ಗೆ ಕೂಡಾ ಇದೇ ರೀತಿಯ ಸುಳ್ಳುಗಳನ್ನು ಹರಿಯಬಿಡಲಾಗಿದೆ.

मैगी में गोमांस का फ्लेवर डालना शुरू कर दिया ?? कृपया आप भी जो गाय को माता का दर्जा देतें हैं मैगी का बहिष्कार करें ?#मैगी_का_बहिष्कार_करो…

Posted by Shubham Sharma on Tuesday, March 10, 2020

ಭೂಮ್ ಲೈವ್, ನಸ್ಲೇ ಇಂಡಿಯಾ ವಕ್ತಾರರನ್ನು ಸಂಪರ್ಕಿಸಿ ಈ ಬಗ್ಗೆ ಸ್ಪಷ್ಟನೆ ಕೇಳಿದಾಗ “ಮ್ಯಾಗಿಯ ಬೀಫ್ ಫ್ಲೇವರ್ ಉತ್ಪನ್ನಗಳು ಭಾರತಲ್ಲಿ ಮಾರಾಟಕ್ಕೆ ಲಭ್ಯವಿಲ್ಲ” ಎಂದು ಹೇಳಿದ್ದಾರಲ್ಲದೆ “ಭಾರತದಲ್ಲಿ ಲಭ್ಯವಿರುವ ಮ್ಯಾಗಿಯ ಯಾವುದೇ ಉತ್ಪನ್ನದಲ್ಲಿ ದನದ ಫ್ಲೇವರ್ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ಮ್ಯಾಗಿ ಇಂಡಿಯಾ ವೆಬ್ ಸೈಟಿನಲ್ಲಿ ಮಾಂಸಾಹಾರಿ ವಿಭಾಗದಲ್ಲಿ ಕೇವಲ ಚಿಕನ್ ಫ್ಲೇವರ್ ಮಾತ್ರ ಹಾಕಿದೆ. ಜೊತೆಗೆ ತನ್ನ ಫೇಸ್ ಬುಕ್ ಪೇಜಲ್ಲಿ ಕೂಡಾ ಇದೆ ಮಾಹಿತಿಯನ್ನು ಹಾಕಿದೆ.

ಭೂಮ್ ಲೈವ್ ಗೋಮಾಂಸವಿದೆ ಎಂದು ವೈರಲಾದ ಫೋಟೋವನ್ನು ರಿವರ್ಸ್ ಸರ್ಚ್ ಮಾಡಿದಾಗ ಅದು “ಮ್ಯಾಗಿ ಆಸ್ಟ್ರೇಲಿಯಾ”ದ ವೆಬ್ಸೈಟಿನ ಫೋಟೋ ಎಂದು ಪತ್ತೆಯಾಗಿದೆ.

ಅಲ್ಲದೆ ಭೂಮ್ ಲೈವ್ ಫೇಸ್ ಬುಕ್ಕಲ್ಲಿ ಹರಿದಾಡುವ ಇನ್ನೊಂದು ಚಿತ್ರವಾದ ಗೋಮಾಂಸದ ಕ್ಯೂಬನ್ನು ಅಮೇರಿಕಾದ ಅಮೇಜಾನ್ ವೆಬ್ಸೈಟಲ್ಲಿ ಇರುವುದನ್ನು ಪತ್ತೆ ಹಚ್ಚಿದೆ. ಅದು ಕೂಡ ಭಾರತದಲ್ಲಿ ಲಭ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...