Homeಮುಖಪುಟಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

‘ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಬಣ್ಣಬಣ್ಣದ ಮಾತುಗಳ ಮಾಯಾಜಾಲವಾಗಿದೆ; ಅದರಲ್ಲಿ ಗಟ್ಟಿತನವಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ನಾನು ಬಜೆಟ್ ಭಾಷಣವನ್ನು ಕೇಳಿಸಿಕೊಂಡಿದ್ದೇನೆ. ಹಣಕಾಸು ಸಚಿವರು ಬಡವರು ಮತ್ತು ಮಧ್ಯಮ ವರ್ಗದವರಿಗಾಗಿ ಕೆಲವು ಹೊಸ ಯೋಜನೆಗಳನ್ನು ತರುತ್ತಾರೆ, ಅವರ ಸಂಕಷ್ಟಗಳಿಗೆ ಅಲ್ಲಿ ಒಂದಷ್ಟಾದರೂ ಪರಿಹಾರಗಳು ಇರುತ್ತವೆ ಎಂದು ಭಾವಿಸಿದ್ದೆ. ಆದರೆ, ಈ ಬಜೆಟ್‌ನಲ್ಲಿ ಅಂಥದ್ದೇನೂ ಇಲ್ಲ. ಪ್ರತಿ ವರ್ಷದಂತೆ ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಕೇವಲ ಬಣ್ಣಬಣ್ಣದ ಮಾತುಗಳ ಮಾಯಾಜಾಲವಾಗಿದೆ; ಅದರಲ್ಲಿ ಗಟ್ಟಿತನವಿಲ್ಲ’ ಎಂದು ಟೀಕಿಸಿದ್ದಾರೆ.

‘ದೊಡ್ಡದಾಗಿ ಮಾತನಾಡುವುದು, ಸತ್ಯವನ್ನೂ ಮೀರಿಸುವಂತೆ ಸುಳ್ಳು ಹೇಳುವುದು ಈ ಸರ್ಕಾರದ ಅಭ್ಯಾಸವಾಗಿದೆ. 2014 ಮತ್ತು 2024ನ್ನು ಹೋಲಿಸಿ ಸದನದಲ್ಲಿ ಶ್ವೇತಪತ್ರ ಮಂಡಿಸುವುದಾಗಿ ಹಣಕಾಸು ಸಚಿವರು ಬಜೆಟ್‌ನಲ್ಲಿ ಹೇಳಿದ್ದಾರೆ. ಆದ್ದರಿಂದ ಅವರಿಗೆ ಕೇಳಬೇಕು, ಕಳೆದ 10 ವರ್ಷಗಳಲ್ಲಿ ಸರ್ಕಾರ ನೀಡಿದ ಭರವಸೆಗಳಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಲಾಗಿದೆ? ಎಷ್ಟು ಉಳಿದಿವೆ? ಬಜೆಟ್‌ನಲ್ಲಿ ಆ ಭರವಸೆಗಳ ಪ್ರಸ್ತಾಪವೇ ಇಲ್ಲ. ವಾರ್ಷಿಕ 2 ಕೋಟಿ ಉದ್ಯೋಗಗಳು, ರೈತರ ಆದಾಯವನ್ನು ದ್ವಿಗುಣಗೊಳಿಸುವುದು, 2022 ರ ವೇಳೆಗೆ ಎಲ್ಲರಿಗೂ ಶಾಶ್ವತ ಮನೆಗಳು, 100 ಸ್ಮಾರ್ಟ್ ಸಿಟಿಗಳು, ಈ ಎಲ್ಲಾ ಭರವಸೆಗಳು ಇಲ್ಲಿಯವರೆಗೆ ಏಕೆ ಈಡೇರಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘2014ರಲ್ಲಿ 4.6% ರಷ್ಟಿದ್ದ ಕೃಷಿ ಬೆಳವಣಿಗೆ ದರ ಈ ವರ್ಷ 1.8% ಆಯಿತು? ಯುಪಿಎ ಅವಧಿಯಲ್ಲಿ ನಮ್ಮ ಕೃಷಿ ಸರಾಸರಿ ಶೇ.4ರಷ್ಟಿತ್ತು, ಅದು ಏಕೆ ಅರ್ಧಕ್ಕೆ ಕುಸಿದಿದೆ? ಪ್ರತಿದಿನ 31 ಮಂದಿ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ? 2014ರಲ್ಲಿ ಒಟ್ಟು ಬಜೆಟ್‌ನ 4.55% ರಷ್ಟಿದ್ದ ಶಿಕ್ಷಣ ಬಜೆಟ್ 3.2% ಕ್ಕೆ ಹೇಗೆ ಕುಸಿಯಿತು? ಒಟ್ಟು ಬಜೆಟ್‌ಗೆ ಹೋಲಿಸಿದರೆ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣದ ಪಾಲು ಏಕೆ ನಿರಂತರವಾಗಿ ಕುಸಿಯುತ್ತಿದೆ’ ಎಂದು ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‘ರಕ್ಷಣಾ ಬಜೆಟ್ ಮತ್ತು ಆರೋಗ್ಯ ಬಜೆಟ್ ಏಕೆ ಕುಸಿಯುತ್ತಿದೆ? ಇಡೀ ಬಜೆಟ್‌ನಲ್ಲಿ ‘ಉದ್ಯೋಗ’ ಎಂಬ ಪದವನ್ನು ಒಂದೇ ಬಾರಿ ಬಳಸಲಾಗಿದೆ. ನಿರುದ್ಯೋಗವು 45 ವರ್ಷಗಳಲ್ಲಿ ಅತಿ ಹೆಚ್ಚು ಏಕೆ? 20-24 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ 45% ರಷ್ಟು ಏಕಿದೆ? ಮೋದಿ ಸರ್ಕಾರ 3 ಕೋಟಿಗೂ ಹೆಚ್ಚು ಜನರ ಉದ್ಯೋಗವನ್ನು ಏಕೆ ಕಿತ್ತುಕೊಂಡಿತು? ಪ್ರತಿ ತಿಂಗಳು ಪತ್ರಿಕೆಗಳು ಏಕೆ ಸೋರಿಕೆಯಾಗುತ್ತಿವೆ? ಗಗನಕ್ಕೇರುತ್ತಿರುವ ಬೆಲೆ ಏರಿಕೆಯಿಂದ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಹಾಗಿದ್ದರೂ ಅಗತ್ಯ ವಸ್ತುಗಳ ಮೇಲೆ 5% ರಿಂದ 18% ಜಿಎಸ್‌ಟಿ ಏಕೆ ವಿಧಿಸಲಾಗಿದೆ? ಹಿಟ್ಟು, ಬೇಳೆಕಾಳು, ಅಕ್ಕಿ, ಹಾಲು ಮತ್ತು ತರಕಾರಿಗಳ ಬೆಲೆ ಏಕೆ ಹೆಚ್ಚುತ್ತಿದೆ? ಇದನ್ನು ಹೇಳುವವರು ಯಾರೂ ಇಲ್ಲ’ ಎಂದು ಸಾಲು ಸಾಲು ಪ್ರಶ್ನೆಗಳನ್ನು ಮೋದಿ ಸರ್ಕಾರದ ಮುಂದಿಟ್ಟಿದ್ದಾರೆ.

‘ಸಾಮಾನ್ಯರ ಆದಾಯ ಹೆಚ್ಚಿದೆ ಎಂದು ಹಣಕಾಸು ಸಚಿವರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಇದು ಸುಳ್ಳು, ವಾಸ್ತವದಲ್ಲಿ ಗ್ರಾಮೀಣ ಭಾರತದಲ್ಲಿ ಕಳೆದ 5 ವರ್ಷಗಳಲ್ಲಿ ಕೂಲಿ ಕಡಿಮೆಯಾಗಿದೆ. ಕಳೆದ 10 ವರ್ಷಗಳಲ್ಲಿ ಗ್ರಾಮೀಣ ಜನರ ಕೂಲಿ ಹೆಚ್ಚಾಗುವ ಬದಲು ಕುಸಿದಿದೆ. ಹಣಕಾಸು ಸಚಿವರು ಇಡೀ ಬಜೆಟ್ ಭಾಷಣದಲ್ಲಿ ಮನರೇಗಾ ಹೆಸರನ್ನು ಉಲ್ಲೇಖಿಸಲಿಲ್ಲ. ಏಕೆಂದರೆ ಯುಪಿಎ ಕಾಲದಲ್ಲಿ ವರ್ಷದಲ್ಲಿ 100 ದಿನ ಕೆಲಸ ಸಿಗುತ್ತಿತ್ತು, ಅದು ಈಗ ಕೇವಲ 48 ದಿನಗಳಿಗೆ ಇಳಿದಿದೆ. ಒಟ್ಟು ಬಜೆಟ್‌ಗೆ ಹೋಲಿಸಿದರೆ ಈ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಬಜೆಟ್ಅನ್ನು ಸಹ ಕಡಿಮೆ ಮಾಡಿದೆ. 2005ರಲ್ಲಿ ಶೇ.30ರಷ್ಟಿದ್ದ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಈಗ ಶೇ.24ಕ್ಕೆ ಏಕೆ ಕುಸಿದಿದೆ’ ಎಂದು ಹೇಳಿದ್ದಾರೆ.

‘ಹೊಸ ಸರಣಿಯ ಪ್ರಕಾರ, ಕಾಂಗ್ರೆಸ್-ಯುಪಿಎ ಆಡಳಿತದಲ್ಲಿ 8% ರಷ್ಟಿದ್ದ ದೇಶದ ಸರಾಸರಿ ಆರ್ಥಿಕ ಬೆಳವಣಿಗೆ ದರವು ಈ ಸರ್ಕಾರದಲ್ಲಿ 5.6% ಕ್ಕೆ ಏಕೆ ಕುಸಿಯಿತು? ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಲಾಗುತ್ತಿದೆ. ಕೇವಲ ಹೆಸರುಗಳನ್ನು ಬದಲಾಯಿಸುವ ಮೂಲಕ ಯೋಜನೆಗಳನ್ನು ಪ್ರಾರಂಭಿಸಲಾಗುತ್ತದೆ. ಆದರೆ ಹಳೆಯ ಭರವಸೆಗಳು ಏನಾಯಿತು ಎಂದು ಹೇಳಲಾಗಿಲ್ಲ? ತೋರಿಸುತ್ತಿರುವ ಹೊಸ ಕನಸುಗಳು ಹೇಗೆ ಈಡೇರುತ್ತವೆ? ವಾಸ್ತವವಾಗಿ, ಯಾವುದೇ ಬಜೆಟ್‌ನಲ್ಲಿ ಎರಡು ವಿವರಗಳಿರುತ್ತವೆ. ಒಂದು ಕಳೆದ ವರ್ಷದ ವಿವರಗಳು ಮತ್ತು ಇನ್ನೊಂದು ಮುಂಬರುವ ವರ್ಷದ ದೃಷ್ಟಿ. ಈ ಎರಡೂ ವಿಷಯಗಳು ಈ ಬಜೆಟ್‌ನಲ್ಲಿ ಕಾಣೆಯಾಗಿವೆ’ ಎಂದು ಖರ್ಗೆ ಅವರು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಹೇಮಂತ್ ಸೊರೇನ್ ಅವರನ್ನು ಬಿಜೆಪಿ ಬೆದರಿಸುತ್ತಿದೆ…’; ಕೇಂದ್ರದ ವಿರುದ್ಧ ಸ್ಟಾಲಿನ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...