Homeಮುಖಪುಟಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

‘ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಬಣ್ಣಬಣ್ಣದ ಮಾತುಗಳ ಮಾಯಾಜಾಲವಾಗಿದೆ; ಅದರಲ್ಲಿ ಗಟ್ಟಿತನವಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ನಾನು ಬಜೆಟ್ ಭಾಷಣವನ್ನು ಕೇಳಿಸಿಕೊಂಡಿದ್ದೇನೆ. ಹಣಕಾಸು ಸಚಿವರು ಬಡವರು ಮತ್ತು ಮಧ್ಯಮ ವರ್ಗದವರಿಗಾಗಿ ಕೆಲವು ಹೊಸ ಯೋಜನೆಗಳನ್ನು ತರುತ್ತಾರೆ, ಅವರ ಸಂಕಷ್ಟಗಳಿಗೆ ಅಲ್ಲಿ ಒಂದಷ್ಟಾದರೂ ಪರಿಹಾರಗಳು ಇರುತ್ತವೆ ಎಂದು ಭಾವಿಸಿದ್ದೆ. ಆದರೆ, ಈ ಬಜೆಟ್‌ನಲ್ಲಿ ಅಂಥದ್ದೇನೂ ಇಲ್ಲ. ಪ್ರತಿ ವರ್ಷದಂತೆ ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಕೇವಲ ಬಣ್ಣಬಣ್ಣದ ಮಾತುಗಳ ಮಾಯಾಜಾಲವಾಗಿದೆ; ಅದರಲ್ಲಿ ಗಟ್ಟಿತನವಿಲ್ಲ’ ಎಂದು ಟೀಕಿಸಿದ್ದಾರೆ.

‘ದೊಡ್ಡದಾಗಿ ಮಾತನಾಡುವುದು, ಸತ್ಯವನ್ನೂ ಮೀರಿಸುವಂತೆ ಸುಳ್ಳು ಹೇಳುವುದು ಈ ಸರ್ಕಾರದ ಅಭ್ಯಾಸವಾಗಿದೆ. 2014 ಮತ್ತು 2024ನ್ನು ಹೋಲಿಸಿ ಸದನದಲ್ಲಿ ಶ್ವೇತಪತ್ರ ಮಂಡಿಸುವುದಾಗಿ ಹಣಕಾಸು ಸಚಿವರು ಬಜೆಟ್‌ನಲ್ಲಿ ಹೇಳಿದ್ದಾರೆ. ಆದ್ದರಿಂದ ಅವರಿಗೆ ಕೇಳಬೇಕು, ಕಳೆದ 10 ವರ್ಷಗಳಲ್ಲಿ ಸರ್ಕಾರ ನೀಡಿದ ಭರವಸೆಗಳಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಲಾಗಿದೆ? ಎಷ್ಟು ಉಳಿದಿವೆ? ಬಜೆಟ್‌ನಲ್ಲಿ ಆ ಭರವಸೆಗಳ ಪ್ರಸ್ತಾಪವೇ ಇಲ್ಲ. ವಾರ್ಷಿಕ 2 ಕೋಟಿ ಉದ್ಯೋಗಗಳು, ರೈತರ ಆದಾಯವನ್ನು ದ್ವಿಗುಣಗೊಳಿಸುವುದು, 2022 ರ ವೇಳೆಗೆ ಎಲ್ಲರಿಗೂ ಶಾಶ್ವತ ಮನೆಗಳು, 100 ಸ್ಮಾರ್ಟ್ ಸಿಟಿಗಳು, ಈ ಎಲ್ಲಾ ಭರವಸೆಗಳು ಇಲ್ಲಿಯವರೆಗೆ ಏಕೆ ಈಡೇರಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘2014ರಲ್ಲಿ 4.6% ರಷ್ಟಿದ್ದ ಕೃಷಿ ಬೆಳವಣಿಗೆ ದರ ಈ ವರ್ಷ 1.8% ಆಯಿತು? ಯುಪಿಎ ಅವಧಿಯಲ್ಲಿ ನಮ್ಮ ಕೃಷಿ ಸರಾಸರಿ ಶೇ.4ರಷ್ಟಿತ್ತು, ಅದು ಏಕೆ ಅರ್ಧಕ್ಕೆ ಕುಸಿದಿದೆ? ಪ್ರತಿದಿನ 31 ಮಂದಿ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ? 2014ರಲ್ಲಿ ಒಟ್ಟು ಬಜೆಟ್‌ನ 4.55% ರಷ್ಟಿದ್ದ ಶಿಕ್ಷಣ ಬಜೆಟ್ 3.2% ಕ್ಕೆ ಹೇಗೆ ಕುಸಿಯಿತು? ಒಟ್ಟು ಬಜೆಟ್‌ಗೆ ಹೋಲಿಸಿದರೆ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣದ ಪಾಲು ಏಕೆ ನಿರಂತರವಾಗಿ ಕುಸಿಯುತ್ತಿದೆ’ ಎಂದು ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‘ರಕ್ಷಣಾ ಬಜೆಟ್ ಮತ್ತು ಆರೋಗ್ಯ ಬಜೆಟ್ ಏಕೆ ಕುಸಿಯುತ್ತಿದೆ? ಇಡೀ ಬಜೆಟ್‌ನಲ್ಲಿ ‘ಉದ್ಯೋಗ’ ಎಂಬ ಪದವನ್ನು ಒಂದೇ ಬಾರಿ ಬಳಸಲಾಗಿದೆ. ನಿರುದ್ಯೋಗವು 45 ವರ್ಷಗಳಲ್ಲಿ ಅತಿ ಹೆಚ್ಚು ಏಕೆ? 20-24 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ 45% ರಷ್ಟು ಏಕಿದೆ? ಮೋದಿ ಸರ್ಕಾರ 3 ಕೋಟಿಗೂ ಹೆಚ್ಚು ಜನರ ಉದ್ಯೋಗವನ್ನು ಏಕೆ ಕಿತ್ತುಕೊಂಡಿತು? ಪ್ರತಿ ತಿಂಗಳು ಪತ್ರಿಕೆಗಳು ಏಕೆ ಸೋರಿಕೆಯಾಗುತ್ತಿವೆ? ಗಗನಕ್ಕೇರುತ್ತಿರುವ ಬೆಲೆ ಏರಿಕೆಯಿಂದ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಹಾಗಿದ್ದರೂ ಅಗತ್ಯ ವಸ್ತುಗಳ ಮೇಲೆ 5% ರಿಂದ 18% ಜಿಎಸ್‌ಟಿ ಏಕೆ ವಿಧಿಸಲಾಗಿದೆ? ಹಿಟ್ಟು, ಬೇಳೆಕಾಳು, ಅಕ್ಕಿ, ಹಾಲು ಮತ್ತು ತರಕಾರಿಗಳ ಬೆಲೆ ಏಕೆ ಹೆಚ್ಚುತ್ತಿದೆ? ಇದನ್ನು ಹೇಳುವವರು ಯಾರೂ ಇಲ್ಲ’ ಎಂದು ಸಾಲು ಸಾಲು ಪ್ರಶ್ನೆಗಳನ್ನು ಮೋದಿ ಸರ್ಕಾರದ ಮುಂದಿಟ್ಟಿದ್ದಾರೆ.

‘ಸಾಮಾನ್ಯರ ಆದಾಯ ಹೆಚ್ಚಿದೆ ಎಂದು ಹಣಕಾಸು ಸಚಿವರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಇದು ಸುಳ್ಳು, ವಾಸ್ತವದಲ್ಲಿ ಗ್ರಾಮೀಣ ಭಾರತದಲ್ಲಿ ಕಳೆದ 5 ವರ್ಷಗಳಲ್ಲಿ ಕೂಲಿ ಕಡಿಮೆಯಾಗಿದೆ. ಕಳೆದ 10 ವರ್ಷಗಳಲ್ಲಿ ಗ್ರಾಮೀಣ ಜನರ ಕೂಲಿ ಹೆಚ್ಚಾಗುವ ಬದಲು ಕುಸಿದಿದೆ. ಹಣಕಾಸು ಸಚಿವರು ಇಡೀ ಬಜೆಟ್ ಭಾಷಣದಲ್ಲಿ ಮನರೇಗಾ ಹೆಸರನ್ನು ಉಲ್ಲೇಖಿಸಲಿಲ್ಲ. ಏಕೆಂದರೆ ಯುಪಿಎ ಕಾಲದಲ್ಲಿ ವರ್ಷದಲ್ಲಿ 100 ದಿನ ಕೆಲಸ ಸಿಗುತ್ತಿತ್ತು, ಅದು ಈಗ ಕೇವಲ 48 ದಿನಗಳಿಗೆ ಇಳಿದಿದೆ. ಒಟ್ಟು ಬಜೆಟ್‌ಗೆ ಹೋಲಿಸಿದರೆ ಈ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಬಜೆಟ್ಅನ್ನು ಸಹ ಕಡಿಮೆ ಮಾಡಿದೆ. 2005ರಲ್ಲಿ ಶೇ.30ರಷ್ಟಿದ್ದ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಈಗ ಶೇ.24ಕ್ಕೆ ಏಕೆ ಕುಸಿದಿದೆ’ ಎಂದು ಹೇಳಿದ್ದಾರೆ.

‘ಹೊಸ ಸರಣಿಯ ಪ್ರಕಾರ, ಕಾಂಗ್ರೆಸ್-ಯುಪಿಎ ಆಡಳಿತದಲ್ಲಿ 8% ರಷ್ಟಿದ್ದ ದೇಶದ ಸರಾಸರಿ ಆರ್ಥಿಕ ಬೆಳವಣಿಗೆ ದರವು ಈ ಸರ್ಕಾರದಲ್ಲಿ 5.6% ಕ್ಕೆ ಏಕೆ ಕುಸಿಯಿತು? ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಲಾಗುತ್ತಿದೆ. ಕೇವಲ ಹೆಸರುಗಳನ್ನು ಬದಲಾಯಿಸುವ ಮೂಲಕ ಯೋಜನೆಗಳನ್ನು ಪ್ರಾರಂಭಿಸಲಾಗುತ್ತದೆ. ಆದರೆ ಹಳೆಯ ಭರವಸೆಗಳು ಏನಾಯಿತು ಎಂದು ಹೇಳಲಾಗಿಲ್ಲ? ತೋರಿಸುತ್ತಿರುವ ಹೊಸ ಕನಸುಗಳು ಹೇಗೆ ಈಡೇರುತ್ತವೆ? ವಾಸ್ತವವಾಗಿ, ಯಾವುದೇ ಬಜೆಟ್‌ನಲ್ಲಿ ಎರಡು ವಿವರಗಳಿರುತ್ತವೆ. ಒಂದು ಕಳೆದ ವರ್ಷದ ವಿವರಗಳು ಮತ್ತು ಇನ್ನೊಂದು ಮುಂಬರುವ ವರ್ಷದ ದೃಷ್ಟಿ. ಈ ಎರಡೂ ವಿಷಯಗಳು ಈ ಬಜೆಟ್‌ನಲ್ಲಿ ಕಾಣೆಯಾಗಿವೆ’ ಎಂದು ಖರ್ಗೆ ಅವರು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಹೇಮಂತ್ ಸೊರೇನ್ ಅವರನ್ನು ಬಿಜೆಪಿ ಬೆದರಿಸುತ್ತಿದೆ…’; ಕೇಂದ್ರದ ವಿರುದ್ಧ ಸ್ಟಾಲಿನ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...