Homeಮುಖಪುಟಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

‘ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಬಣ್ಣಬಣ್ಣದ ಮಾತುಗಳ ಮಾಯಾಜಾಲವಾಗಿದೆ; ಅದರಲ್ಲಿ ಗಟ್ಟಿತನವಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ನಾನು ಬಜೆಟ್ ಭಾಷಣವನ್ನು ಕೇಳಿಸಿಕೊಂಡಿದ್ದೇನೆ. ಹಣಕಾಸು ಸಚಿವರು ಬಡವರು ಮತ್ತು ಮಧ್ಯಮ ವರ್ಗದವರಿಗಾಗಿ ಕೆಲವು ಹೊಸ ಯೋಜನೆಗಳನ್ನು ತರುತ್ತಾರೆ, ಅವರ ಸಂಕಷ್ಟಗಳಿಗೆ ಅಲ್ಲಿ ಒಂದಷ್ಟಾದರೂ ಪರಿಹಾರಗಳು ಇರುತ್ತವೆ ಎಂದು ಭಾವಿಸಿದ್ದೆ. ಆದರೆ, ಈ ಬಜೆಟ್‌ನಲ್ಲಿ ಅಂಥದ್ದೇನೂ ಇಲ್ಲ. ಪ್ರತಿ ವರ್ಷದಂತೆ ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಕೇವಲ ಬಣ್ಣಬಣ್ಣದ ಮಾತುಗಳ ಮಾಯಾಜಾಲವಾಗಿದೆ; ಅದರಲ್ಲಿ ಗಟ್ಟಿತನವಿಲ್ಲ’ ಎಂದು ಟೀಕಿಸಿದ್ದಾರೆ.

‘ದೊಡ್ಡದಾಗಿ ಮಾತನಾಡುವುದು, ಸತ್ಯವನ್ನೂ ಮೀರಿಸುವಂತೆ ಸುಳ್ಳು ಹೇಳುವುದು ಈ ಸರ್ಕಾರದ ಅಭ್ಯಾಸವಾಗಿದೆ. 2014 ಮತ್ತು 2024ನ್ನು ಹೋಲಿಸಿ ಸದನದಲ್ಲಿ ಶ್ವೇತಪತ್ರ ಮಂಡಿಸುವುದಾಗಿ ಹಣಕಾಸು ಸಚಿವರು ಬಜೆಟ್‌ನಲ್ಲಿ ಹೇಳಿದ್ದಾರೆ. ಆದ್ದರಿಂದ ಅವರಿಗೆ ಕೇಳಬೇಕು, ಕಳೆದ 10 ವರ್ಷಗಳಲ್ಲಿ ಸರ್ಕಾರ ನೀಡಿದ ಭರವಸೆಗಳಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಲಾಗಿದೆ? ಎಷ್ಟು ಉಳಿದಿವೆ? ಬಜೆಟ್‌ನಲ್ಲಿ ಆ ಭರವಸೆಗಳ ಪ್ರಸ್ತಾಪವೇ ಇಲ್ಲ. ವಾರ್ಷಿಕ 2 ಕೋಟಿ ಉದ್ಯೋಗಗಳು, ರೈತರ ಆದಾಯವನ್ನು ದ್ವಿಗುಣಗೊಳಿಸುವುದು, 2022 ರ ವೇಳೆಗೆ ಎಲ್ಲರಿಗೂ ಶಾಶ್ವತ ಮನೆಗಳು, 100 ಸ್ಮಾರ್ಟ್ ಸಿಟಿಗಳು, ಈ ಎಲ್ಲಾ ಭರವಸೆಗಳು ಇಲ್ಲಿಯವರೆಗೆ ಏಕೆ ಈಡೇರಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘2014ರಲ್ಲಿ 4.6% ರಷ್ಟಿದ್ದ ಕೃಷಿ ಬೆಳವಣಿಗೆ ದರ ಈ ವರ್ಷ 1.8% ಆಯಿತು? ಯುಪಿಎ ಅವಧಿಯಲ್ಲಿ ನಮ್ಮ ಕೃಷಿ ಸರಾಸರಿ ಶೇ.4ರಷ್ಟಿತ್ತು, ಅದು ಏಕೆ ಅರ್ಧಕ್ಕೆ ಕುಸಿದಿದೆ? ಪ್ರತಿದಿನ 31 ಮಂದಿ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ? 2014ರಲ್ಲಿ ಒಟ್ಟು ಬಜೆಟ್‌ನ 4.55% ರಷ್ಟಿದ್ದ ಶಿಕ್ಷಣ ಬಜೆಟ್ 3.2% ಕ್ಕೆ ಹೇಗೆ ಕುಸಿಯಿತು? ಒಟ್ಟು ಬಜೆಟ್‌ಗೆ ಹೋಲಿಸಿದರೆ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣದ ಪಾಲು ಏಕೆ ನಿರಂತರವಾಗಿ ಕುಸಿಯುತ್ತಿದೆ’ ಎಂದು ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‘ರಕ್ಷಣಾ ಬಜೆಟ್ ಮತ್ತು ಆರೋಗ್ಯ ಬಜೆಟ್ ಏಕೆ ಕುಸಿಯುತ್ತಿದೆ? ಇಡೀ ಬಜೆಟ್‌ನಲ್ಲಿ ‘ಉದ್ಯೋಗ’ ಎಂಬ ಪದವನ್ನು ಒಂದೇ ಬಾರಿ ಬಳಸಲಾಗಿದೆ. ನಿರುದ್ಯೋಗವು 45 ವರ್ಷಗಳಲ್ಲಿ ಅತಿ ಹೆಚ್ಚು ಏಕೆ? 20-24 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ 45% ರಷ್ಟು ಏಕಿದೆ? ಮೋದಿ ಸರ್ಕಾರ 3 ಕೋಟಿಗೂ ಹೆಚ್ಚು ಜನರ ಉದ್ಯೋಗವನ್ನು ಏಕೆ ಕಿತ್ತುಕೊಂಡಿತು? ಪ್ರತಿ ತಿಂಗಳು ಪತ್ರಿಕೆಗಳು ಏಕೆ ಸೋರಿಕೆಯಾಗುತ್ತಿವೆ? ಗಗನಕ್ಕೇರುತ್ತಿರುವ ಬೆಲೆ ಏರಿಕೆಯಿಂದ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಹಾಗಿದ್ದರೂ ಅಗತ್ಯ ವಸ್ತುಗಳ ಮೇಲೆ 5% ರಿಂದ 18% ಜಿಎಸ್‌ಟಿ ಏಕೆ ವಿಧಿಸಲಾಗಿದೆ? ಹಿಟ್ಟು, ಬೇಳೆಕಾಳು, ಅಕ್ಕಿ, ಹಾಲು ಮತ್ತು ತರಕಾರಿಗಳ ಬೆಲೆ ಏಕೆ ಹೆಚ್ಚುತ್ತಿದೆ? ಇದನ್ನು ಹೇಳುವವರು ಯಾರೂ ಇಲ್ಲ’ ಎಂದು ಸಾಲು ಸಾಲು ಪ್ರಶ್ನೆಗಳನ್ನು ಮೋದಿ ಸರ್ಕಾರದ ಮುಂದಿಟ್ಟಿದ್ದಾರೆ.

‘ಸಾಮಾನ್ಯರ ಆದಾಯ ಹೆಚ್ಚಿದೆ ಎಂದು ಹಣಕಾಸು ಸಚಿವರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಇದು ಸುಳ್ಳು, ವಾಸ್ತವದಲ್ಲಿ ಗ್ರಾಮೀಣ ಭಾರತದಲ್ಲಿ ಕಳೆದ 5 ವರ್ಷಗಳಲ್ಲಿ ಕೂಲಿ ಕಡಿಮೆಯಾಗಿದೆ. ಕಳೆದ 10 ವರ್ಷಗಳಲ್ಲಿ ಗ್ರಾಮೀಣ ಜನರ ಕೂಲಿ ಹೆಚ್ಚಾಗುವ ಬದಲು ಕುಸಿದಿದೆ. ಹಣಕಾಸು ಸಚಿವರು ಇಡೀ ಬಜೆಟ್ ಭಾಷಣದಲ್ಲಿ ಮನರೇಗಾ ಹೆಸರನ್ನು ಉಲ್ಲೇಖಿಸಲಿಲ್ಲ. ಏಕೆಂದರೆ ಯುಪಿಎ ಕಾಲದಲ್ಲಿ ವರ್ಷದಲ್ಲಿ 100 ದಿನ ಕೆಲಸ ಸಿಗುತ್ತಿತ್ತು, ಅದು ಈಗ ಕೇವಲ 48 ದಿನಗಳಿಗೆ ಇಳಿದಿದೆ. ಒಟ್ಟು ಬಜೆಟ್‌ಗೆ ಹೋಲಿಸಿದರೆ ಈ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಬಜೆಟ್ಅನ್ನು ಸಹ ಕಡಿಮೆ ಮಾಡಿದೆ. 2005ರಲ್ಲಿ ಶೇ.30ರಷ್ಟಿದ್ದ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಈಗ ಶೇ.24ಕ್ಕೆ ಏಕೆ ಕುಸಿದಿದೆ’ ಎಂದು ಹೇಳಿದ್ದಾರೆ.

‘ಹೊಸ ಸರಣಿಯ ಪ್ರಕಾರ, ಕಾಂಗ್ರೆಸ್-ಯುಪಿಎ ಆಡಳಿತದಲ್ಲಿ 8% ರಷ್ಟಿದ್ದ ದೇಶದ ಸರಾಸರಿ ಆರ್ಥಿಕ ಬೆಳವಣಿಗೆ ದರವು ಈ ಸರ್ಕಾರದಲ್ಲಿ 5.6% ಕ್ಕೆ ಏಕೆ ಕುಸಿಯಿತು? ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಲಾಗುತ್ತಿದೆ. ಕೇವಲ ಹೆಸರುಗಳನ್ನು ಬದಲಾಯಿಸುವ ಮೂಲಕ ಯೋಜನೆಗಳನ್ನು ಪ್ರಾರಂಭಿಸಲಾಗುತ್ತದೆ. ಆದರೆ ಹಳೆಯ ಭರವಸೆಗಳು ಏನಾಯಿತು ಎಂದು ಹೇಳಲಾಗಿಲ್ಲ? ತೋರಿಸುತ್ತಿರುವ ಹೊಸ ಕನಸುಗಳು ಹೇಗೆ ಈಡೇರುತ್ತವೆ? ವಾಸ್ತವವಾಗಿ, ಯಾವುದೇ ಬಜೆಟ್‌ನಲ್ಲಿ ಎರಡು ವಿವರಗಳಿರುತ್ತವೆ. ಒಂದು ಕಳೆದ ವರ್ಷದ ವಿವರಗಳು ಮತ್ತು ಇನ್ನೊಂದು ಮುಂಬರುವ ವರ್ಷದ ದೃಷ್ಟಿ. ಈ ಎರಡೂ ವಿಷಯಗಳು ಈ ಬಜೆಟ್‌ನಲ್ಲಿ ಕಾಣೆಯಾಗಿವೆ’ ಎಂದು ಖರ್ಗೆ ಅವರು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಹೇಮಂತ್ ಸೊರೇನ್ ಅವರನ್ನು ಬಿಜೆಪಿ ಬೆದರಿಸುತ್ತಿದೆ…’; ಕೇಂದ್ರದ ವಿರುದ್ಧ ಸ್ಟಾಲಿನ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...