Homeಮುಖಪುಟಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

‘ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಬಣ್ಣಬಣ್ಣದ ಮಾತುಗಳ ಮಾಯಾಜಾಲವಾಗಿದೆ; ಅದರಲ್ಲಿ ಗಟ್ಟಿತನವಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ನಾನು ಬಜೆಟ್ ಭಾಷಣವನ್ನು ಕೇಳಿಸಿಕೊಂಡಿದ್ದೇನೆ. ಹಣಕಾಸು ಸಚಿವರು ಬಡವರು ಮತ್ತು ಮಧ್ಯಮ ವರ್ಗದವರಿಗಾಗಿ ಕೆಲವು ಹೊಸ ಯೋಜನೆಗಳನ್ನು ತರುತ್ತಾರೆ, ಅವರ ಸಂಕಷ್ಟಗಳಿಗೆ ಅಲ್ಲಿ ಒಂದಷ್ಟಾದರೂ ಪರಿಹಾರಗಳು ಇರುತ್ತವೆ ಎಂದು ಭಾವಿಸಿದ್ದೆ. ಆದರೆ, ಈ ಬಜೆಟ್‌ನಲ್ಲಿ ಅಂಥದ್ದೇನೂ ಇಲ್ಲ. ಪ್ರತಿ ವರ್ಷದಂತೆ ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಕೇವಲ ಬಣ್ಣಬಣ್ಣದ ಮಾತುಗಳ ಮಾಯಾಜಾಲವಾಗಿದೆ; ಅದರಲ್ಲಿ ಗಟ್ಟಿತನವಿಲ್ಲ’ ಎಂದು ಟೀಕಿಸಿದ್ದಾರೆ.

‘ದೊಡ್ಡದಾಗಿ ಮಾತನಾಡುವುದು, ಸತ್ಯವನ್ನೂ ಮೀರಿಸುವಂತೆ ಸುಳ್ಳು ಹೇಳುವುದು ಈ ಸರ್ಕಾರದ ಅಭ್ಯಾಸವಾಗಿದೆ. 2014 ಮತ್ತು 2024ನ್ನು ಹೋಲಿಸಿ ಸದನದಲ್ಲಿ ಶ್ವೇತಪತ್ರ ಮಂಡಿಸುವುದಾಗಿ ಹಣಕಾಸು ಸಚಿವರು ಬಜೆಟ್‌ನಲ್ಲಿ ಹೇಳಿದ್ದಾರೆ. ಆದ್ದರಿಂದ ಅವರಿಗೆ ಕೇಳಬೇಕು, ಕಳೆದ 10 ವರ್ಷಗಳಲ್ಲಿ ಸರ್ಕಾರ ನೀಡಿದ ಭರವಸೆಗಳಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಲಾಗಿದೆ? ಎಷ್ಟು ಉಳಿದಿವೆ? ಬಜೆಟ್‌ನಲ್ಲಿ ಆ ಭರವಸೆಗಳ ಪ್ರಸ್ತಾಪವೇ ಇಲ್ಲ. ವಾರ್ಷಿಕ 2 ಕೋಟಿ ಉದ್ಯೋಗಗಳು, ರೈತರ ಆದಾಯವನ್ನು ದ್ವಿಗುಣಗೊಳಿಸುವುದು, 2022 ರ ವೇಳೆಗೆ ಎಲ್ಲರಿಗೂ ಶಾಶ್ವತ ಮನೆಗಳು, 100 ಸ್ಮಾರ್ಟ್ ಸಿಟಿಗಳು, ಈ ಎಲ್ಲಾ ಭರವಸೆಗಳು ಇಲ್ಲಿಯವರೆಗೆ ಏಕೆ ಈಡೇರಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘2014ರಲ್ಲಿ 4.6% ರಷ್ಟಿದ್ದ ಕೃಷಿ ಬೆಳವಣಿಗೆ ದರ ಈ ವರ್ಷ 1.8% ಆಯಿತು? ಯುಪಿಎ ಅವಧಿಯಲ್ಲಿ ನಮ್ಮ ಕೃಷಿ ಸರಾಸರಿ ಶೇ.4ರಷ್ಟಿತ್ತು, ಅದು ಏಕೆ ಅರ್ಧಕ್ಕೆ ಕುಸಿದಿದೆ? ಪ್ರತಿದಿನ 31 ಮಂದಿ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ? 2014ರಲ್ಲಿ ಒಟ್ಟು ಬಜೆಟ್‌ನ 4.55% ರಷ್ಟಿದ್ದ ಶಿಕ್ಷಣ ಬಜೆಟ್ 3.2% ಕ್ಕೆ ಹೇಗೆ ಕುಸಿಯಿತು? ಒಟ್ಟು ಬಜೆಟ್‌ಗೆ ಹೋಲಿಸಿದರೆ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣದ ಪಾಲು ಏಕೆ ನಿರಂತರವಾಗಿ ಕುಸಿಯುತ್ತಿದೆ’ ಎಂದು ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‘ರಕ್ಷಣಾ ಬಜೆಟ್ ಮತ್ತು ಆರೋಗ್ಯ ಬಜೆಟ್ ಏಕೆ ಕುಸಿಯುತ್ತಿದೆ? ಇಡೀ ಬಜೆಟ್‌ನಲ್ಲಿ ‘ಉದ್ಯೋಗ’ ಎಂಬ ಪದವನ್ನು ಒಂದೇ ಬಾರಿ ಬಳಸಲಾಗಿದೆ. ನಿರುದ್ಯೋಗವು 45 ವರ್ಷಗಳಲ್ಲಿ ಅತಿ ಹೆಚ್ಚು ಏಕೆ? 20-24 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ 45% ರಷ್ಟು ಏಕಿದೆ? ಮೋದಿ ಸರ್ಕಾರ 3 ಕೋಟಿಗೂ ಹೆಚ್ಚು ಜನರ ಉದ್ಯೋಗವನ್ನು ಏಕೆ ಕಿತ್ತುಕೊಂಡಿತು? ಪ್ರತಿ ತಿಂಗಳು ಪತ್ರಿಕೆಗಳು ಏಕೆ ಸೋರಿಕೆಯಾಗುತ್ತಿವೆ? ಗಗನಕ್ಕೇರುತ್ತಿರುವ ಬೆಲೆ ಏರಿಕೆಯಿಂದ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಹಾಗಿದ್ದರೂ ಅಗತ್ಯ ವಸ್ತುಗಳ ಮೇಲೆ 5% ರಿಂದ 18% ಜಿಎಸ್‌ಟಿ ಏಕೆ ವಿಧಿಸಲಾಗಿದೆ? ಹಿಟ್ಟು, ಬೇಳೆಕಾಳು, ಅಕ್ಕಿ, ಹಾಲು ಮತ್ತು ತರಕಾರಿಗಳ ಬೆಲೆ ಏಕೆ ಹೆಚ್ಚುತ್ತಿದೆ? ಇದನ್ನು ಹೇಳುವವರು ಯಾರೂ ಇಲ್ಲ’ ಎಂದು ಸಾಲು ಸಾಲು ಪ್ರಶ್ನೆಗಳನ್ನು ಮೋದಿ ಸರ್ಕಾರದ ಮುಂದಿಟ್ಟಿದ್ದಾರೆ.

‘ಸಾಮಾನ್ಯರ ಆದಾಯ ಹೆಚ್ಚಿದೆ ಎಂದು ಹಣಕಾಸು ಸಚಿವರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಇದು ಸುಳ್ಳು, ವಾಸ್ತವದಲ್ಲಿ ಗ್ರಾಮೀಣ ಭಾರತದಲ್ಲಿ ಕಳೆದ 5 ವರ್ಷಗಳಲ್ಲಿ ಕೂಲಿ ಕಡಿಮೆಯಾಗಿದೆ. ಕಳೆದ 10 ವರ್ಷಗಳಲ್ಲಿ ಗ್ರಾಮೀಣ ಜನರ ಕೂಲಿ ಹೆಚ್ಚಾಗುವ ಬದಲು ಕುಸಿದಿದೆ. ಹಣಕಾಸು ಸಚಿವರು ಇಡೀ ಬಜೆಟ್ ಭಾಷಣದಲ್ಲಿ ಮನರೇಗಾ ಹೆಸರನ್ನು ಉಲ್ಲೇಖಿಸಲಿಲ್ಲ. ಏಕೆಂದರೆ ಯುಪಿಎ ಕಾಲದಲ್ಲಿ ವರ್ಷದಲ್ಲಿ 100 ದಿನ ಕೆಲಸ ಸಿಗುತ್ತಿತ್ತು, ಅದು ಈಗ ಕೇವಲ 48 ದಿನಗಳಿಗೆ ಇಳಿದಿದೆ. ಒಟ್ಟು ಬಜೆಟ್‌ಗೆ ಹೋಲಿಸಿದರೆ ಈ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಬಜೆಟ್ಅನ್ನು ಸಹ ಕಡಿಮೆ ಮಾಡಿದೆ. 2005ರಲ್ಲಿ ಶೇ.30ರಷ್ಟಿದ್ದ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಈಗ ಶೇ.24ಕ್ಕೆ ಏಕೆ ಕುಸಿದಿದೆ’ ಎಂದು ಹೇಳಿದ್ದಾರೆ.

‘ಹೊಸ ಸರಣಿಯ ಪ್ರಕಾರ, ಕಾಂಗ್ರೆಸ್-ಯುಪಿಎ ಆಡಳಿತದಲ್ಲಿ 8% ರಷ್ಟಿದ್ದ ದೇಶದ ಸರಾಸರಿ ಆರ್ಥಿಕ ಬೆಳವಣಿಗೆ ದರವು ಈ ಸರ್ಕಾರದಲ್ಲಿ 5.6% ಕ್ಕೆ ಏಕೆ ಕುಸಿಯಿತು? ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಲಾಗುತ್ತಿದೆ. ಕೇವಲ ಹೆಸರುಗಳನ್ನು ಬದಲಾಯಿಸುವ ಮೂಲಕ ಯೋಜನೆಗಳನ್ನು ಪ್ರಾರಂಭಿಸಲಾಗುತ್ತದೆ. ಆದರೆ ಹಳೆಯ ಭರವಸೆಗಳು ಏನಾಯಿತು ಎಂದು ಹೇಳಲಾಗಿಲ್ಲ? ತೋರಿಸುತ್ತಿರುವ ಹೊಸ ಕನಸುಗಳು ಹೇಗೆ ಈಡೇರುತ್ತವೆ? ವಾಸ್ತವವಾಗಿ, ಯಾವುದೇ ಬಜೆಟ್‌ನಲ್ಲಿ ಎರಡು ವಿವರಗಳಿರುತ್ತವೆ. ಒಂದು ಕಳೆದ ವರ್ಷದ ವಿವರಗಳು ಮತ್ತು ಇನ್ನೊಂದು ಮುಂಬರುವ ವರ್ಷದ ದೃಷ್ಟಿ. ಈ ಎರಡೂ ವಿಷಯಗಳು ಈ ಬಜೆಟ್‌ನಲ್ಲಿ ಕಾಣೆಯಾಗಿವೆ’ ಎಂದು ಖರ್ಗೆ ಅವರು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಹೇಮಂತ್ ಸೊರೇನ್ ಅವರನ್ನು ಬಿಜೆಪಿ ಬೆದರಿಸುತ್ತಿದೆ…’; ಕೇಂದ್ರದ ವಿರುದ್ಧ ಸ್ಟಾಲಿನ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...