Homeಮುಖಪುಟಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಮ್ಯಾಜಿಸ್ಟ್ರೇಟ್ ವರ್ಗಾವಣೆ!

ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಮ್ಯಾಜಿಸ್ಟ್ರೇಟ್ ವರ್ಗಾವಣೆ!

ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್‌ಕರ್ ಸೇರಿದಂತೆ 16 ಐಎಎಸ್ ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರ ವರ್ಗಾಯಿಸಿ ಗುರುವಾರ ಆದೇಶ ಹೊರಡಿಸಿದೆ

- Advertisement -
- Advertisement -

ಇತ್ತೀಚೆಗೆ ದೇಶದ ನೈತಿಕ ಪ್ರಜ್ಞೆಯನ್ನು ಕಲಕಿದ್ದ ಹತ್ರಾಸ್ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ ಪ್ರಕರಣವನ್ನು ನಿರ್ವಹಿಸುತ್ತಿದ್ದ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್‌ಕರ್ ಅವರನ್ನು ವರ್ಗಾಯಿಸಲಾಗಿದೆ. ಇವರೂ ಸೇರಿದಂತೆ 16 ಐಎಎಸ್ ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರ ವರ್ಗಾಯಿಸಿ ಗುರುವಾರ ಆದೇಶ ಹೊರಡಿಸಿದೆ.

ಪ್ರವೀಣ್ ಕುಮಾರ್ ಲಕ್ಷ್‌ಕರ್ ಈಗ ಮಿರ್ಜಾಪುರದ ಹೊಸ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡಿದ್ದಾರೆ. ಉತ್ತರ ಪ್ರದೇಶದ ಜಲ ನಿಗಮದಲ್ಲಿದ್ದ ಎಂ.ಡಿ. ರಮೇಶ್ ರಂಜನ್ ಈಗ ಹತ್ರಾಸ್‌ನ ಮ್ಯಾಜಿಸ್ಟ್ರೇಟ್ ಸ್ಥಾನಕ್ಕೆ ವರ್ಗವಾಗಿದ್ದಾರೆ ಎಂದು ಸರ್ಕಾರದ ಅಧಿಕೃತ ವಕ್ತಾರರು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆಗೈದಿದ್ದಾರೆ ಎಂದು ಸಿಬಿಐ ಚಾರ್ಜ್‌ಶೀಟ್‌ – ವಕೀಲರ ಹೇಳಿಕೆ

ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ 19 ವರ್ಷದ ದಲಿತ ಮಹಿಳೆಯ ಮೇಲೆ ನಾಲ್ಕು ಮೇಲ್ಜಾತಿಯ ಪುರುಷರು ಅತ್ಯಾಚಾರ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಯುವತಿ ಕೊನೆಯುಸಿರೆಳೆದಿದ್ದರು. ಈ ಪ್ರಕರಣದ ನಂತರ ಪ್ರವೀಣ್ ಕುಮಾರ್ ಲಕ್ಷ್‌ಕರ್ ಮುನ್ನೆಲೆಗೆ ಬಂದಿದ್ದರು.

ಸೆಪ್ಟೆಂಬರ್ 30 ರಂದು ಯುವತಿಯ ಮೃತ ದೇಹವನ್ನು ಪೊಲೀಸರೇ ಸುಟ್ಟು ಹಾಕಿದ್ದರು. ಇದು ದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು.

ಇದನ್ನೂ ಓದಿ: ಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

“ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ, ಮೇಲ್ಜಾತಿಗೆ ಸೇರಿದ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಠಾಕೂರ್ ಸಮುದಾಯದವರಿಗೆ ಜಾತಿ ಸಭೆಗಳನ್ನು ನಡೆಸಲು ಅವಕಾಶ ನೀಡಿದೆ. ಸಂತ್ರಸ್ತೆಯ ಕುಟುಂಬಕ್ಕೆ ರಕ್ಷಣೆ ನೀಡದೇ, ಬಹಿರಂಗವಾಗಿ ಸವಾಲು ಹಾಕಲು ಅವಕಾಶ ನೀಡುತ್ತಿದೆ” ಎಂಬ ಆರೋಪ ಕೇಳಿಬಂದಿತ್ತು.

ಅಲ್ಲಿನ ಜಿಲ್ಲಾಧಿಕಾರಿ ಬಹಿರಂಗವಾಗಿ ಸಂತ್ರಸ್ತ ಕುಟುಂಬಕ್ಕೆ ಧಮ್ಕಿ ಹಾಕಿದ್ದರು. ಇದನ್ನು ಖಂಡಿಸಿದ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ನ್ಯಾಯಪೀಠ, ನ್ಯಾಯಯುತ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ಜಿಲ್ಲಾಧಿಕಾರಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು.


ಇದನ್ನೂ ಓದಿ: ಹತ್ರಾಸ್ ಪ್ರಕರಣ:’ಸೇಡು ತೀರಿಸಿಕೊಳ್ಳುವುದಲ್ಲ, ಬದಲಾವಣೆ ಬೇಕು’; ಮಹಿಳಾ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....