Homeಮುಖಪುಟ'ಮಹಾ' ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ...

‘ಮಹಾ’ ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಪಡೆದು ಅಭೂತಪೂರ್ವ ಜಯಗಳಿಸಿದರೂ, ಸಿಎಂ ಆಯ್ಕೆ ಇನ್ನೂ ಕಗ್ಗಂಟಾಗಿ ಉಳಿದಿದೆ.

‘ಮಹಾಯುತಿ’ ಮೈತ್ರಿಕೂಟದ ಪ್ರಮುಖ ಪಕ್ಷ ಶಿವಸೇನೆಯ ಮುಖ್ಯಸ್ಥ ಹಾಗೂ ನಿರ್ಗಮಿತ ಸಿಎಂ ಏಕನಾಥ್ ಶಿಂದೆ, ಆರಂಭದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಗೇರುವ ಉತ್ಸಾಹದಲ್ಲಿದ್ದರು. ಆದರೆ, ಆಂತರಿಕವಾಗಿ ಏನಾಯಿತೋ ಗೊತ್ತಿಲ್ಲ, “ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿ ನಿರ್ಧಾರಕ್ಕೆ ಬದ್ದ” ಎಂದು ನಿನ್ನೆ (ನ.27) ಹೇಳಿದ್ದಾರೆ. ಈ ಮೂಲಕ ಶಿಂದೆ ಶಸ್ತ್ರ ತ್ಯಜಿಸಿದ್ದಾರೆ. ಏಕನಾಥ್ ಶಿಂದೆಯ ಎನ್‌ಸಿಪಿ 288 ಸ್ಥಾನಗಳ ಪೈಕಿ 57 ಸ್ಥಾನಗಳನ್ನು ಗೆದ್ದಿದೆ.

ಸಿಎಂ ಸ್ಥಾನದ ರೇಸ್‌ನಲ್ಲಿರುವ ಮತ್ತೊಬ್ಬ ನಾಯಕ ಬಿಜೆಪಿಯ ದೇವೇಂದ್ರ ಫಡ್ನವಿಸ್. ಈ ಹಿಂದೆ ಸಿಎಂ, ಪ್ರತಿಪಕ್ಷ ನಾಯಕರಾಗಿದ್ದ ಫಡ್ನವಿಸ್, ಕಳೆದ ಅವಧಿಯ ಶಿಂದೆ ಸರ್ಕಾರದಲ್ಲಿ ಅಜಿತ್ ಪವಾರ್ ಜೊತೆ ಉಪ ಮುಖ್ಯಮಂತ್ರಿಯಾಗಿದ್ದರು.

ಏಕನಾಥ್ ಶಿಂದೆ ಶಿವಸೇನೆಯಲ್ಲಿ ಬಂಡಾಯವೆದ್ದು ಸರ್ಕಾರ ರಚಿಸಲು ಮುಂದಾದಾಗ ಫಡ್ನವಿಸ್ ಸಿಎಂ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದರು. ಆದರೆ, ಸರ್ಕಾರ ರಚನೆಗೆ ಕಾರಣರಾದ ಏಕನಾಥ್ ಶಿಂದೆಗೆ ಸಿಎಂ ಹುದ್ದೆ ಕೊಡುವ ಸಲುವಾಗಿ ಬಿಜೆಪಿ ಹೈಕಮಾಂಡ್ ಫಡ್ನವಿಸ್‌ ಅನ್ನು ಡಿಸಿಎಂ ಹುದ್ದೆಗೆ ಒಪ್ಪಿಸಿತ್ತು. ಒಲ್ಲದ ಮನಸ್ಸಿನಿಂದ ಆ ಹುದ್ದೆಯಲ್ಲಿ ಮುಂದುವರೆದ ಫಡ್ನವಿಸ್, ಈ ಬಾರಿ ಸಿಎಂ ರೇಸ್‌ನ ಮುಂಚೂಣಿಯಲ್ಲಿದ್ದಾರೆ. ಅದಕ್ಕೆ ಬೆಂಬಲವಾಗಿ ಬಿಜೆಪಿ 288 ಸ್ಥಾನಗಳ ಪೈಕಿ 132 ಸ್ಥಾನಗಳನ್ನೂ ಪಡೆದಿದೆ.

ಏಕನಾಥ್ ಶಿಂದೆ ಸಿಎಂ ಆಯ್ಕೆ ಬಿಜೆಪಿಗೆ ಬಿಟ್ಟ ಮೇಲೆ ಫಡ್ನವಿಸ್ ಹಾದಿ ಸುಗಮವಾಗಿದೆ. ಇನ್ನೇನು ಸಿಎಂ ಹುದ್ದೆ ಫಿಕ್ಸ್ ಎಂಬ ಹಂತದಲ್ಲಿ ಫಡ್ನವಿಸ್ ಇದ್ದಾರೆ. ಆದರೆ, ಈ ನಡುವೆ ಅವರಿಗೊಂದು ತಡೆ ಎದುರಾಗಿದೆ.

ಹೊಸ ಮುಖ ಹುಡುಕಾಟದಲ್ಲಿ ಬಿಜೆಪಿ

ವರದಿಗಳ ಪ್ರಕಾರ, ಮಹಾರಾಷ್ಟ್ರದ ಸಿಎಂ ಹುದ್ದೆಗೆ ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ ಹೈಕಮಾಂಡ್ ಇದೆ. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಈಗಾಗಲೇ ಬಿಜೆಪಿ ಈ ಪ್ರಯೋಗ ಮಾಡಿದೆ. ಈ ವಿಷಯ ನಿಜವಾದರೆ ಫಡ್ನವಿಸ್ ಸಿಎಂ ಕನಸು ಭಗ್ನವಾಗಲಿದೆ. ಅನಿವಾರ್ಯವಾಗಿ ಹೈಕಮಾಂಡ್ ಮುಂದೆ ತಲೆಬಾಗಬೇಕಿದೆ.

ಸಿಎಂ ಹುದ್ದೆಗೆ ವಿದರ್ಭ ಮತ್ತು ಪಶ್ಚಿಮ ಮಹಾರಾಷ್ಟ್ರದ ನಾಯಕರನ್ನೇ ಹೆಕ್ಕಿ ತರುವ ಸಂಪ್ರದಾಯ ಕೊನೆಗೊಳಿಸಲು ಬಿಜೆಪಿ ಮುಂದಾಗಿದೆ. ಅಲ್ಲದೆ, ಈ ಬಾರಿಯ ಚುನಾವಣೆಯಲ್ಲಿ ಮಹಾಯುತಿಗೆ ದೊಡ್ಡ ಮಟ್ಟದ ಬೆಂಬಲ ನೀಡಿದ ಉತ್ತರ ಮಹಾರಾಷ್ಟ್ರಕ್ಕೆ ಪ್ರಾಶಸ್ತ್ಯ ನೀಡುವ ಯೋಚನೆಯಲ್ಲಿದೆ. ಉತ್ತರ ಮಹಾರಾಷ್ಟ್ರದ 47 ಸ್ಥಾನಗಳ ಪೈಕಿ ಮಹಾಯುತಿ 44 ಅನ್ನು ಗೆದ್ದುಕೊಂಡಿದೆ. ಈ ಲೆಕ್ಕಾಚಾರಗಳ ಪ್ರಕಾರ ನೋಡುವುದಾದರೆ ಮಹಾರಾಷ್ಟ್ರ ಸಿಎಂ ಕುರ್ಚಿಯಲ್ಲಿ ಹೊಸ ಮುಖವನ್ನು ಕಾಣುವ ಸಾಧ್ಯತೆ ಇದೆ.

ದೇವೇಂದ್ರ ಫಡ್ನವಿಸ್ ಅವರ ಆಪ್ತ ಮಾಜಿ ಸಚಿವ ಗಿರೀಶ್ ಮಹಾಜನ್, ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿಗೆ ಪ್ರಬಲ ನಾಯಕರಾಗಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ನಿಕಟವರ್ತಿ, ಮಾಜಿ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಕೆಲ ಮಹಿಳಾ ನಾಯಕರು ಹೊಸ ಮುಖಗಳ ಆಯ್ಕೆ ಪಟ್ಟಿಯಲ್ಲಿ ಇದ್ದಾರೆ ಎಂದೂ ವರದಿಯಾಗಿದೆ.

ಪ್ರಸ್ತುತ ಶಿವಸೇನೆ (ಶಿಂದೆ ಬಣ) ಏಕನಾಥ್ ಶಿಂದೆ ಅವರನ್ನು ಮತ್ತು ಎನ್‌ಸಿಪಿ (ಅಜಿತ್ ಬಣ) ಅಜಿತ್ ಪವಾರ್ ಅವರನ್ನು ತಮ್ಮ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ. ಬಿಜೆಪಿ ಇನ್ನೂ ತಮ್ಮ ನಾಯಕ ಯಾರೆಂದು ಅಂತಿಮಗೊಳಿಸಿಲ್ಲ. ಎಲ್ಲಾ ಸರಿಯಾದರೆ ಹೊಸ ಸಿಎಂ ನವೆಂಬರ್ 30ರಂದು ಪ್ರಮಾಣವಚನ ಸ್ವೀಕರಿಸಬಹುದು.

ಇದನ್ನೂ ಓದಿ : ಅಜ್ಮೀರ್ ದರ್ಗಾ ಶಿವ ದೇವಾಲಯವೆಂದು ಅರ್ಜಿ : ವಿಚಾರಣೆಗೆ ಒಪ್ಪಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...