Homeಮುಖಪುಟ'ಮಹಾ' ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ...

‘ಮಹಾ’ ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಪಡೆದು ಅಭೂತಪೂರ್ವ ಜಯಗಳಿಸಿದರೂ, ಸಿಎಂ ಆಯ್ಕೆ ಇನ್ನೂ ಕಗ್ಗಂಟಾಗಿ ಉಳಿದಿದೆ.

‘ಮಹಾಯುತಿ’ ಮೈತ್ರಿಕೂಟದ ಪ್ರಮುಖ ಪಕ್ಷ ಶಿವಸೇನೆಯ ಮುಖ್ಯಸ್ಥ ಹಾಗೂ ನಿರ್ಗಮಿತ ಸಿಎಂ ಏಕನಾಥ್ ಶಿಂದೆ, ಆರಂಭದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಗೇರುವ ಉತ್ಸಾಹದಲ್ಲಿದ್ದರು. ಆದರೆ, ಆಂತರಿಕವಾಗಿ ಏನಾಯಿತೋ ಗೊತ್ತಿಲ್ಲ, “ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿ ನಿರ್ಧಾರಕ್ಕೆ ಬದ್ದ” ಎಂದು ನಿನ್ನೆ (ನ.27) ಹೇಳಿದ್ದಾರೆ. ಈ ಮೂಲಕ ಶಿಂದೆ ಶಸ್ತ್ರ ತ್ಯಜಿಸಿದ್ದಾರೆ. ಏಕನಾಥ್ ಶಿಂದೆಯ ಎನ್‌ಸಿಪಿ 288 ಸ್ಥಾನಗಳ ಪೈಕಿ 57 ಸ್ಥಾನಗಳನ್ನು ಗೆದ್ದಿದೆ.

ಸಿಎಂ ಸ್ಥಾನದ ರೇಸ್‌ನಲ್ಲಿರುವ ಮತ್ತೊಬ್ಬ ನಾಯಕ ಬಿಜೆಪಿಯ ದೇವೇಂದ್ರ ಫಡ್ನವಿಸ್. ಈ ಹಿಂದೆ ಸಿಎಂ, ಪ್ರತಿಪಕ್ಷ ನಾಯಕರಾಗಿದ್ದ ಫಡ್ನವಿಸ್, ಕಳೆದ ಅವಧಿಯ ಶಿಂದೆ ಸರ್ಕಾರದಲ್ಲಿ ಅಜಿತ್ ಪವಾರ್ ಜೊತೆ ಉಪ ಮುಖ್ಯಮಂತ್ರಿಯಾಗಿದ್ದರು.

ಏಕನಾಥ್ ಶಿಂದೆ ಶಿವಸೇನೆಯಲ್ಲಿ ಬಂಡಾಯವೆದ್ದು ಸರ್ಕಾರ ರಚಿಸಲು ಮುಂದಾದಾಗ ಫಡ್ನವಿಸ್ ಸಿಎಂ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದರು. ಆದರೆ, ಸರ್ಕಾರ ರಚನೆಗೆ ಕಾರಣರಾದ ಏಕನಾಥ್ ಶಿಂದೆಗೆ ಸಿಎಂ ಹುದ್ದೆ ಕೊಡುವ ಸಲುವಾಗಿ ಬಿಜೆಪಿ ಹೈಕಮಾಂಡ್ ಫಡ್ನವಿಸ್‌ ಅನ್ನು ಡಿಸಿಎಂ ಹುದ್ದೆಗೆ ಒಪ್ಪಿಸಿತ್ತು. ಒಲ್ಲದ ಮನಸ್ಸಿನಿಂದ ಆ ಹುದ್ದೆಯಲ್ಲಿ ಮುಂದುವರೆದ ಫಡ್ನವಿಸ್, ಈ ಬಾರಿ ಸಿಎಂ ರೇಸ್‌ನ ಮುಂಚೂಣಿಯಲ್ಲಿದ್ದಾರೆ. ಅದಕ್ಕೆ ಬೆಂಬಲವಾಗಿ ಬಿಜೆಪಿ 288 ಸ್ಥಾನಗಳ ಪೈಕಿ 132 ಸ್ಥಾನಗಳನ್ನೂ ಪಡೆದಿದೆ.

ಏಕನಾಥ್ ಶಿಂದೆ ಸಿಎಂ ಆಯ್ಕೆ ಬಿಜೆಪಿಗೆ ಬಿಟ್ಟ ಮೇಲೆ ಫಡ್ನವಿಸ್ ಹಾದಿ ಸುಗಮವಾಗಿದೆ. ಇನ್ನೇನು ಸಿಎಂ ಹುದ್ದೆ ಫಿಕ್ಸ್ ಎಂಬ ಹಂತದಲ್ಲಿ ಫಡ್ನವಿಸ್ ಇದ್ದಾರೆ. ಆದರೆ, ಈ ನಡುವೆ ಅವರಿಗೊಂದು ತಡೆ ಎದುರಾಗಿದೆ.

ಹೊಸ ಮುಖ ಹುಡುಕಾಟದಲ್ಲಿ ಬಿಜೆಪಿ

ವರದಿಗಳ ಪ್ರಕಾರ, ಮಹಾರಾಷ್ಟ್ರದ ಸಿಎಂ ಹುದ್ದೆಗೆ ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ ಹೈಕಮಾಂಡ್ ಇದೆ. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಈಗಾಗಲೇ ಬಿಜೆಪಿ ಈ ಪ್ರಯೋಗ ಮಾಡಿದೆ. ಈ ವಿಷಯ ನಿಜವಾದರೆ ಫಡ್ನವಿಸ್ ಸಿಎಂ ಕನಸು ಭಗ್ನವಾಗಲಿದೆ. ಅನಿವಾರ್ಯವಾಗಿ ಹೈಕಮಾಂಡ್ ಮುಂದೆ ತಲೆಬಾಗಬೇಕಿದೆ.

ಸಿಎಂ ಹುದ್ದೆಗೆ ವಿದರ್ಭ ಮತ್ತು ಪಶ್ಚಿಮ ಮಹಾರಾಷ್ಟ್ರದ ನಾಯಕರನ್ನೇ ಹೆಕ್ಕಿ ತರುವ ಸಂಪ್ರದಾಯ ಕೊನೆಗೊಳಿಸಲು ಬಿಜೆಪಿ ಮುಂದಾಗಿದೆ. ಅಲ್ಲದೆ, ಈ ಬಾರಿಯ ಚುನಾವಣೆಯಲ್ಲಿ ಮಹಾಯುತಿಗೆ ದೊಡ್ಡ ಮಟ್ಟದ ಬೆಂಬಲ ನೀಡಿದ ಉತ್ತರ ಮಹಾರಾಷ್ಟ್ರಕ್ಕೆ ಪ್ರಾಶಸ್ತ್ಯ ನೀಡುವ ಯೋಚನೆಯಲ್ಲಿದೆ. ಉತ್ತರ ಮಹಾರಾಷ್ಟ್ರದ 47 ಸ್ಥಾನಗಳ ಪೈಕಿ ಮಹಾಯುತಿ 44 ಅನ್ನು ಗೆದ್ದುಕೊಂಡಿದೆ. ಈ ಲೆಕ್ಕಾಚಾರಗಳ ಪ್ರಕಾರ ನೋಡುವುದಾದರೆ ಮಹಾರಾಷ್ಟ್ರ ಸಿಎಂ ಕುರ್ಚಿಯಲ್ಲಿ ಹೊಸ ಮುಖವನ್ನು ಕಾಣುವ ಸಾಧ್ಯತೆ ಇದೆ.

ದೇವೇಂದ್ರ ಫಡ್ನವಿಸ್ ಅವರ ಆಪ್ತ ಮಾಜಿ ಸಚಿವ ಗಿರೀಶ್ ಮಹಾಜನ್, ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿಗೆ ಪ್ರಬಲ ನಾಯಕರಾಗಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ನಿಕಟವರ್ತಿ, ಮಾಜಿ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಕೆಲ ಮಹಿಳಾ ನಾಯಕರು ಹೊಸ ಮುಖಗಳ ಆಯ್ಕೆ ಪಟ್ಟಿಯಲ್ಲಿ ಇದ್ದಾರೆ ಎಂದೂ ವರದಿಯಾಗಿದೆ.

ಪ್ರಸ್ತುತ ಶಿವಸೇನೆ (ಶಿಂದೆ ಬಣ) ಏಕನಾಥ್ ಶಿಂದೆ ಅವರನ್ನು ಮತ್ತು ಎನ್‌ಸಿಪಿ (ಅಜಿತ್ ಬಣ) ಅಜಿತ್ ಪವಾರ್ ಅವರನ್ನು ತಮ್ಮ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ. ಬಿಜೆಪಿ ಇನ್ನೂ ತಮ್ಮ ನಾಯಕ ಯಾರೆಂದು ಅಂತಿಮಗೊಳಿಸಿಲ್ಲ. ಎಲ್ಲಾ ಸರಿಯಾದರೆ ಹೊಸ ಸಿಎಂ ನವೆಂಬರ್ 30ರಂದು ಪ್ರಮಾಣವಚನ ಸ್ವೀಕರಿಸಬಹುದು.

ಇದನ್ನೂ ಓದಿ : ಅಜ್ಮೀರ್ ದರ್ಗಾ ಶಿವ ದೇವಾಲಯವೆಂದು ಅರ್ಜಿ : ವಿಚಾರಣೆಗೆ ಒಪ್ಪಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...