Homeಮುಖಪುಟ'ಮಹಾ' ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ...

‘ಮಹಾ’ ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಪಡೆದು ಅಭೂತಪೂರ್ವ ಜಯಗಳಿಸಿದರೂ, ಸಿಎಂ ಆಯ್ಕೆ ಇನ್ನೂ ಕಗ್ಗಂಟಾಗಿ ಉಳಿದಿದೆ.

‘ಮಹಾಯುತಿ’ ಮೈತ್ರಿಕೂಟದ ಪ್ರಮುಖ ಪಕ್ಷ ಶಿವಸೇನೆಯ ಮುಖ್ಯಸ್ಥ ಹಾಗೂ ನಿರ್ಗಮಿತ ಸಿಎಂ ಏಕನಾಥ್ ಶಿಂದೆ, ಆರಂಭದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಗೇರುವ ಉತ್ಸಾಹದಲ್ಲಿದ್ದರು. ಆದರೆ, ಆಂತರಿಕವಾಗಿ ಏನಾಯಿತೋ ಗೊತ್ತಿಲ್ಲ, “ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿ ನಿರ್ಧಾರಕ್ಕೆ ಬದ್ದ” ಎಂದು ನಿನ್ನೆ (ನ.27) ಹೇಳಿದ್ದಾರೆ. ಈ ಮೂಲಕ ಶಿಂದೆ ಶಸ್ತ್ರ ತ್ಯಜಿಸಿದ್ದಾರೆ. ಏಕನಾಥ್ ಶಿಂದೆಯ ಎನ್‌ಸಿಪಿ 288 ಸ್ಥಾನಗಳ ಪೈಕಿ 57 ಸ್ಥಾನಗಳನ್ನು ಗೆದ್ದಿದೆ.

ಸಿಎಂ ಸ್ಥಾನದ ರೇಸ್‌ನಲ್ಲಿರುವ ಮತ್ತೊಬ್ಬ ನಾಯಕ ಬಿಜೆಪಿಯ ದೇವೇಂದ್ರ ಫಡ್ನವಿಸ್. ಈ ಹಿಂದೆ ಸಿಎಂ, ಪ್ರತಿಪಕ್ಷ ನಾಯಕರಾಗಿದ್ದ ಫಡ್ನವಿಸ್, ಕಳೆದ ಅವಧಿಯ ಶಿಂದೆ ಸರ್ಕಾರದಲ್ಲಿ ಅಜಿತ್ ಪವಾರ್ ಜೊತೆ ಉಪ ಮುಖ್ಯಮಂತ್ರಿಯಾಗಿದ್ದರು.

ಏಕನಾಥ್ ಶಿಂದೆ ಶಿವಸೇನೆಯಲ್ಲಿ ಬಂಡಾಯವೆದ್ದು ಸರ್ಕಾರ ರಚಿಸಲು ಮುಂದಾದಾಗ ಫಡ್ನವಿಸ್ ಸಿಎಂ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದರು. ಆದರೆ, ಸರ್ಕಾರ ರಚನೆಗೆ ಕಾರಣರಾದ ಏಕನಾಥ್ ಶಿಂದೆಗೆ ಸಿಎಂ ಹುದ್ದೆ ಕೊಡುವ ಸಲುವಾಗಿ ಬಿಜೆಪಿ ಹೈಕಮಾಂಡ್ ಫಡ್ನವಿಸ್‌ ಅನ್ನು ಡಿಸಿಎಂ ಹುದ್ದೆಗೆ ಒಪ್ಪಿಸಿತ್ತು. ಒಲ್ಲದ ಮನಸ್ಸಿನಿಂದ ಆ ಹುದ್ದೆಯಲ್ಲಿ ಮುಂದುವರೆದ ಫಡ್ನವಿಸ್, ಈ ಬಾರಿ ಸಿಎಂ ರೇಸ್‌ನ ಮುಂಚೂಣಿಯಲ್ಲಿದ್ದಾರೆ. ಅದಕ್ಕೆ ಬೆಂಬಲವಾಗಿ ಬಿಜೆಪಿ 288 ಸ್ಥಾನಗಳ ಪೈಕಿ 132 ಸ್ಥಾನಗಳನ್ನೂ ಪಡೆದಿದೆ.

ಏಕನಾಥ್ ಶಿಂದೆ ಸಿಎಂ ಆಯ್ಕೆ ಬಿಜೆಪಿಗೆ ಬಿಟ್ಟ ಮೇಲೆ ಫಡ್ನವಿಸ್ ಹಾದಿ ಸುಗಮವಾಗಿದೆ. ಇನ್ನೇನು ಸಿಎಂ ಹುದ್ದೆ ಫಿಕ್ಸ್ ಎಂಬ ಹಂತದಲ್ಲಿ ಫಡ್ನವಿಸ್ ಇದ್ದಾರೆ. ಆದರೆ, ಈ ನಡುವೆ ಅವರಿಗೊಂದು ತಡೆ ಎದುರಾಗಿದೆ.

ಹೊಸ ಮುಖ ಹುಡುಕಾಟದಲ್ಲಿ ಬಿಜೆಪಿ

ವರದಿಗಳ ಪ್ರಕಾರ, ಮಹಾರಾಷ್ಟ್ರದ ಸಿಎಂ ಹುದ್ದೆಗೆ ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ ಹೈಕಮಾಂಡ್ ಇದೆ. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಈಗಾಗಲೇ ಬಿಜೆಪಿ ಈ ಪ್ರಯೋಗ ಮಾಡಿದೆ. ಈ ವಿಷಯ ನಿಜವಾದರೆ ಫಡ್ನವಿಸ್ ಸಿಎಂ ಕನಸು ಭಗ್ನವಾಗಲಿದೆ. ಅನಿವಾರ್ಯವಾಗಿ ಹೈಕಮಾಂಡ್ ಮುಂದೆ ತಲೆಬಾಗಬೇಕಿದೆ.

ಸಿಎಂ ಹುದ್ದೆಗೆ ವಿದರ್ಭ ಮತ್ತು ಪಶ್ಚಿಮ ಮಹಾರಾಷ್ಟ್ರದ ನಾಯಕರನ್ನೇ ಹೆಕ್ಕಿ ತರುವ ಸಂಪ್ರದಾಯ ಕೊನೆಗೊಳಿಸಲು ಬಿಜೆಪಿ ಮುಂದಾಗಿದೆ. ಅಲ್ಲದೆ, ಈ ಬಾರಿಯ ಚುನಾವಣೆಯಲ್ಲಿ ಮಹಾಯುತಿಗೆ ದೊಡ್ಡ ಮಟ್ಟದ ಬೆಂಬಲ ನೀಡಿದ ಉತ್ತರ ಮಹಾರಾಷ್ಟ್ರಕ್ಕೆ ಪ್ರಾಶಸ್ತ್ಯ ನೀಡುವ ಯೋಚನೆಯಲ್ಲಿದೆ. ಉತ್ತರ ಮಹಾರಾಷ್ಟ್ರದ 47 ಸ್ಥಾನಗಳ ಪೈಕಿ ಮಹಾಯುತಿ 44 ಅನ್ನು ಗೆದ್ದುಕೊಂಡಿದೆ. ಈ ಲೆಕ್ಕಾಚಾರಗಳ ಪ್ರಕಾರ ನೋಡುವುದಾದರೆ ಮಹಾರಾಷ್ಟ್ರ ಸಿಎಂ ಕುರ್ಚಿಯಲ್ಲಿ ಹೊಸ ಮುಖವನ್ನು ಕಾಣುವ ಸಾಧ್ಯತೆ ಇದೆ.

ದೇವೇಂದ್ರ ಫಡ್ನವಿಸ್ ಅವರ ಆಪ್ತ ಮಾಜಿ ಸಚಿವ ಗಿರೀಶ್ ಮಹಾಜನ್, ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿಗೆ ಪ್ರಬಲ ನಾಯಕರಾಗಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ನಿಕಟವರ್ತಿ, ಮಾಜಿ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಕೆಲ ಮಹಿಳಾ ನಾಯಕರು ಹೊಸ ಮುಖಗಳ ಆಯ್ಕೆ ಪಟ್ಟಿಯಲ್ಲಿ ಇದ್ದಾರೆ ಎಂದೂ ವರದಿಯಾಗಿದೆ.

ಪ್ರಸ್ತುತ ಶಿವಸೇನೆ (ಶಿಂದೆ ಬಣ) ಏಕನಾಥ್ ಶಿಂದೆ ಅವರನ್ನು ಮತ್ತು ಎನ್‌ಸಿಪಿ (ಅಜಿತ್ ಬಣ) ಅಜಿತ್ ಪವಾರ್ ಅವರನ್ನು ತಮ್ಮ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ. ಬಿಜೆಪಿ ಇನ್ನೂ ತಮ್ಮ ನಾಯಕ ಯಾರೆಂದು ಅಂತಿಮಗೊಳಿಸಿಲ್ಲ. ಎಲ್ಲಾ ಸರಿಯಾದರೆ ಹೊಸ ಸಿಎಂ ನವೆಂಬರ್ 30ರಂದು ಪ್ರಮಾಣವಚನ ಸ್ವೀಕರಿಸಬಹುದು.

ಇದನ್ನೂ ಓದಿ : ಅಜ್ಮೀರ್ ದರ್ಗಾ ಶಿವ ದೇವಾಲಯವೆಂದು ಅರ್ಜಿ : ವಿಚಾರಣೆಗೆ ಒಪ್ಪಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...