Homeಮುಖಪುಟ'ಮಹಾ' ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ...

‘ಮಹಾ’ ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಪಡೆದು ಅಭೂತಪೂರ್ವ ಜಯಗಳಿಸಿದರೂ, ಸಿಎಂ ಆಯ್ಕೆ ಇನ್ನೂ ಕಗ್ಗಂಟಾಗಿ ಉಳಿದಿದೆ.

‘ಮಹಾಯುತಿ’ ಮೈತ್ರಿಕೂಟದ ಪ್ರಮುಖ ಪಕ್ಷ ಶಿವಸೇನೆಯ ಮುಖ್ಯಸ್ಥ ಹಾಗೂ ನಿರ್ಗಮಿತ ಸಿಎಂ ಏಕನಾಥ್ ಶಿಂದೆ, ಆರಂಭದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಗೇರುವ ಉತ್ಸಾಹದಲ್ಲಿದ್ದರು. ಆದರೆ, ಆಂತರಿಕವಾಗಿ ಏನಾಯಿತೋ ಗೊತ್ತಿಲ್ಲ, “ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿ ನಿರ್ಧಾರಕ್ಕೆ ಬದ್ದ” ಎಂದು ನಿನ್ನೆ (ನ.27) ಹೇಳಿದ್ದಾರೆ. ಈ ಮೂಲಕ ಶಿಂದೆ ಶಸ್ತ್ರ ತ್ಯಜಿಸಿದ್ದಾರೆ. ಏಕನಾಥ್ ಶಿಂದೆಯ ಎನ್‌ಸಿಪಿ 288 ಸ್ಥಾನಗಳ ಪೈಕಿ 57 ಸ್ಥಾನಗಳನ್ನು ಗೆದ್ದಿದೆ.

ಸಿಎಂ ಸ್ಥಾನದ ರೇಸ್‌ನಲ್ಲಿರುವ ಮತ್ತೊಬ್ಬ ನಾಯಕ ಬಿಜೆಪಿಯ ದೇವೇಂದ್ರ ಫಡ್ನವಿಸ್. ಈ ಹಿಂದೆ ಸಿಎಂ, ಪ್ರತಿಪಕ್ಷ ನಾಯಕರಾಗಿದ್ದ ಫಡ್ನವಿಸ್, ಕಳೆದ ಅವಧಿಯ ಶಿಂದೆ ಸರ್ಕಾರದಲ್ಲಿ ಅಜಿತ್ ಪವಾರ್ ಜೊತೆ ಉಪ ಮುಖ್ಯಮಂತ್ರಿಯಾಗಿದ್ದರು.

ಏಕನಾಥ್ ಶಿಂದೆ ಶಿವಸೇನೆಯಲ್ಲಿ ಬಂಡಾಯವೆದ್ದು ಸರ್ಕಾರ ರಚಿಸಲು ಮುಂದಾದಾಗ ಫಡ್ನವಿಸ್ ಸಿಎಂ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದರು. ಆದರೆ, ಸರ್ಕಾರ ರಚನೆಗೆ ಕಾರಣರಾದ ಏಕನಾಥ್ ಶಿಂದೆಗೆ ಸಿಎಂ ಹುದ್ದೆ ಕೊಡುವ ಸಲುವಾಗಿ ಬಿಜೆಪಿ ಹೈಕಮಾಂಡ್ ಫಡ್ನವಿಸ್‌ ಅನ್ನು ಡಿಸಿಎಂ ಹುದ್ದೆಗೆ ಒಪ್ಪಿಸಿತ್ತು. ಒಲ್ಲದ ಮನಸ್ಸಿನಿಂದ ಆ ಹುದ್ದೆಯಲ್ಲಿ ಮುಂದುವರೆದ ಫಡ್ನವಿಸ್, ಈ ಬಾರಿ ಸಿಎಂ ರೇಸ್‌ನ ಮುಂಚೂಣಿಯಲ್ಲಿದ್ದಾರೆ. ಅದಕ್ಕೆ ಬೆಂಬಲವಾಗಿ ಬಿಜೆಪಿ 288 ಸ್ಥಾನಗಳ ಪೈಕಿ 132 ಸ್ಥಾನಗಳನ್ನೂ ಪಡೆದಿದೆ.

ಏಕನಾಥ್ ಶಿಂದೆ ಸಿಎಂ ಆಯ್ಕೆ ಬಿಜೆಪಿಗೆ ಬಿಟ್ಟ ಮೇಲೆ ಫಡ್ನವಿಸ್ ಹಾದಿ ಸುಗಮವಾಗಿದೆ. ಇನ್ನೇನು ಸಿಎಂ ಹುದ್ದೆ ಫಿಕ್ಸ್ ಎಂಬ ಹಂತದಲ್ಲಿ ಫಡ್ನವಿಸ್ ಇದ್ದಾರೆ. ಆದರೆ, ಈ ನಡುವೆ ಅವರಿಗೊಂದು ತಡೆ ಎದುರಾಗಿದೆ.

ಹೊಸ ಮುಖ ಹುಡುಕಾಟದಲ್ಲಿ ಬಿಜೆಪಿ

ವರದಿಗಳ ಪ್ರಕಾರ, ಮಹಾರಾಷ್ಟ್ರದ ಸಿಎಂ ಹುದ್ದೆಗೆ ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ ಹೈಕಮಾಂಡ್ ಇದೆ. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಈಗಾಗಲೇ ಬಿಜೆಪಿ ಈ ಪ್ರಯೋಗ ಮಾಡಿದೆ. ಈ ವಿಷಯ ನಿಜವಾದರೆ ಫಡ್ನವಿಸ್ ಸಿಎಂ ಕನಸು ಭಗ್ನವಾಗಲಿದೆ. ಅನಿವಾರ್ಯವಾಗಿ ಹೈಕಮಾಂಡ್ ಮುಂದೆ ತಲೆಬಾಗಬೇಕಿದೆ.

ಸಿಎಂ ಹುದ್ದೆಗೆ ವಿದರ್ಭ ಮತ್ತು ಪಶ್ಚಿಮ ಮಹಾರಾಷ್ಟ್ರದ ನಾಯಕರನ್ನೇ ಹೆಕ್ಕಿ ತರುವ ಸಂಪ್ರದಾಯ ಕೊನೆಗೊಳಿಸಲು ಬಿಜೆಪಿ ಮುಂದಾಗಿದೆ. ಅಲ್ಲದೆ, ಈ ಬಾರಿಯ ಚುನಾವಣೆಯಲ್ಲಿ ಮಹಾಯುತಿಗೆ ದೊಡ್ಡ ಮಟ್ಟದ ಬೆಂಬಲ ನೀಡಿದ ಉತ್ತರ ಮಹಾರಾಷ್ಟ್ರಕ್ಕೆ ಪ್ರಾಶಸ್ತ್ಯ ನೀಡುವ ಯೋಚನೆಯಲ್ಲಿದೆ. ಉತ್ತರ ಮಹಾರಾಷ್ಟ್ರದ 47 ಸ್ಥಾನಗಳ ಪೈಕಿ ಮಹಾಯುತಿ 44 ಅನ್ನು ಗೆದ್ದುಕೊಂಡಿದೆ. ಈ ಲೆಕ್ಕಾಚಾರಗಳ ಪ್ರಕಾರ ನೋಡುವುದಾದರೆ ಮಹಾರಾಷ್ಟ್ರ ಸಿಎಂ ಕುರ್ಚಿಯಲ್ಲಿ ಹೊಸ ಮುಖವನ್ನು ಕಾಣುವ ಸಾಧ್ಯತೆ ಇದೆ.

ದೇವೇಂದ್ರ ಫಡ್ನವಿಸ್ ಅವರ ಆಪ್ತ ಮಾಜಿ ಸಚಿವ ಗಿರೀಶ್ ಮಹಾಜನ್, ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿಗೆ ಪ್ರಬಲ ನಾಯಕರಾಗಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ನಿಕಟವರ್ತಿ, ಮಾಜಿ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಕೆಲ ಮಹಿಳಾ ನಾಯಕರು ಹೊಸ ಮುಖಗಳ ಆಯ್ಕೆ ಪಟ್ಟಿಯಲ್ಲಿ ಇದ್ದಾರೆ ಎಂದೂ ವರದಿಯಾಗಿದೆ.

ಪ್ರಸ್ತುತ ಶಿವಸೇನೆ (ಶಿಂದೆ ಬಣ) ಏಕನಾಥ್ ಶಿಂದೆ ಅವರನ್ನು ಮತ್ತು ಎನ್‌ಸಿಪಿ (ಅಜಿತ್ ಬಣ) ಅಜಿತ್ ಪವಾರ್ ಅವರನ್ನು ತಮ್ಮ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ. ಬಿಜೆಪಿ ಇನ್ನೂ ತಮ್ಮ ನಾಯಕ ಯಾರೆಂದು ಅಂತಿಮಗೊಳಿಸಿಲ್ಲ. ಎಲ್ಲಾ ಸರಿಯಾದರೆ ಹೊಸ ಸಿಎಂ ನವೆಂಬರ್ 30ರಂದು ಪ್ರಮಾಣವಚನ ಸ್ವೀಕರಿಸಬಹುದು.

ಇದನ್ನೂ ಓದಿ : ಅಜ್ಮೀರ್ ದರ್ಗಾ ಶಿವ ದೇವಾಲಯವೆಂದು ಅರ್ಜಿ : ವಿಚಾರಣೆಗೆ ಒಪ್ಪಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...