Homeಮುಖಪುಟ'ಮಹಾ' ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ...

‘ಮಹಾ’ ಸಿಎಂ | ಶಸ್ತ್ರ ತ್ಯಜಿಸಿದ ಶಿಂದೆ, ಫಡ್ನವಿಸ್ ಹಾದಿ ಸುಗಮ : ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಪಡೆದು ಅಭೂತಪೂರ್ವ ಜಯಗಳಿಸಿದರೂ, ಸಿಎಂ ಆಯ್ಕೆ ಇನ್ನೂ ಕಗ್ಗಂಟಾಗಿ ಉಳಿದಿದೆ.

‘ಮಹಾಯುತಿ’ ಮೈತ್ರಿಕೂಟದ ಪ್ರಮುಖ ಪಕ್ಷ ಶಿವಸೇನೆಯ ಮುಖ್ಯಸ್ಥ ಹಾಗೂ ನಿರ್ಗಮಿತ ಸಿಎಂ ಏಕನಾಥ್ ಶಿಂದೆ, ಆರಂಭದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಗೇರುವ ಉತ್ಸಾಹದಲ್ಲಿದ್ದರು. ಆದರೆ, ಆಂತರಿಕವಾಗಿ ಏನಾಯಿತೋ ಗೊತ್ತಿಲ್ಲ, “ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿ ನಿರ್ಧಾರಕ್ಕೆ ಬದ್ದ” ಎಂದು ನಿನ್ನೆ (ನ.27) ಹೇಳಿದ್ದಾರೆ. ಈ ಮೂಲಕ ಶಿಂದೆ ಶಸ್ತ್ರ ತ್ಯಜಿಸಿದ್ದಾರೆ. ಏಕನಾಥ್ ಶಿಂದೆಯ ಎನ್‌ಸಿಪಿ 288 ಸ್ಥಾನಗಳ ಪೈಕಿ 57 ಸ್ಥಾನಗಳನ್ನು ಗೆದ್ದಿದೆ.

ಸಿಎಂ ಸ್ಥಾನದ ರೇಸ್‌ನಲ್ಲಿರುವ ಮತ್ತೊಬ್ಬ ನಾಯಕ ಬಿಜೆಪಿಯ ದೇವೇಂದ್ರ ಫಡ್ನವಿಸ್. ಈ ಹಿಂದೆ ಸಿಎಂ, ಪ್ರತಿಪಕ್ಷ ನಾಯಕರಾಗಿದ್ದ ಫಡ್ನವಿಸ್, ಕಳೆದ ಅವಧಿಯ ಶಿಂದೆ ಸರ್ಕಾರದಲ್ಲಿ ಅಜಿತ್ ಪವಾರ್ ಜೊತೆ ಉಪ ಮುಖ್ಯಮಂತ್ರಿಯಾಗಿದ್ದರು.

ಏಕನಾಥ್ ಶಿಂದೆ ಶಿವಸೇನೆಯಲ್ಲಿ ಬಂಡಾಯವೆದ್ದು ಸರ್ಕಾರ ರಚಿಸಲು ಮುಂದಾದಾಗ ಫಡ್ನವಿಸ್ ಸಿಎಂ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದರು. ಆದರೆ, ಸರ್ಕಾರ ರಚನೆಗೆ ಕಾರಣರಾದ ಏಕನಾಥ್ ಶಿಂದೆಗೆ ಸಿಎಂ ಹುದ್ದೆ ಕೊಡುವ ಸಲುವಾಗಿ ಬಿಜೆಪಿ ಹೈಕಮಾಂಡ್ ಫಡ್ನವಿಸ್‌ ಅನ್ನು ಡಿಸಿಎಂ ಹುದ್ದೆಗೆ ಒಪ್ಪಿಸಿತ್ತು. ಒಲ್ಲದ ಮನಸ್ಸಿನಿಂದ ಆ ಹುದ್ದೆಯಲ್ಲಿ ಮುಂದುವರೆದ ಫಡ್ನವಿಸ್, ಈ ಬಾರಿ ಸಿಎಂ ರೇಸ್‌ನ ಮುಂಚೂಣಿಯಲ್ಲಿದ್ದಾರೆ. ಅದಕ್ಕೆ ಬೆಂಬಲವಾಗಿ ಬಿಜೆಪಿ 288 ಸ್ಥಾನಗಳ ಪೈಕಿ 132 ಸ್ಥಾನಗಳನ್ನೂ ಪಡೆದಿದೆ.

ಏಕನಾಥ್ ಶಿಂದೆ ಸಿಎಂ ಆಯ್ಕೆ ಬಿಜೆಪಿಗೆ ಬಿಟ್ಟ ಮೇಲೆ ಫಡ್ನವಿಸ್ ಹಾದಿ ಸುಗಮವಾಗಿದೆ. ಇನ್ನೇನು ಸಿಎಂ ಹುದ್ದೆ ಫಿಕ್ಸ್ ಎಂಬ ಹಂತದಲ್ಲಿ ಫಡ್ನವಿಸ್ ಇದ್ದಾರೆ. ಆದರೆ, ಈ ನಡುವೆ ಅವರಿಗೊಂದು ತಡೆ ಎದುರಾಗಿದೆ.

ಹೊಸ ಮುಖ ಹುಡುಕಾಟದಲ್ಲಿ ಬಿಜೆಪಿ

ವರದಿಗಳ ಪ್ರಕಾರ, ಮಹಾರಾಷ್ಟ್ರದ ಸಿಎಂ ಹುದ್ದೆಗೆ ಹೊಸ ಮುಖದ ಹುಡುಕಾಟದಲ್ಲಿ ಬಿಜೆಪಿ ಹೈಕಮಾಂಡ್ ಇದೆ. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಈಗಾಗಲೇ ಬಿಜೆಪಿ ಈ ಪ್ರಯೋಗ ಮಾಡಿದೆ. ಈ ವಿಷಯ ನಿಜವಾದರೆ ಫಡ್ನವಿಸ್ ಸಿಎಂ ಕನಸು ಭಗ್ನವಾಗಲಿದೆ. ಅನಿವಾರ್ಯವಾಗಿ ಹೈಕಮಾಂಡ್ ಮುಂದೆ ತಲೆಬಾಗಬೇಕಿದೆ.

ಸಿಎಂ ಹುದ್ದೆಗೆ ವಿದರ್ಭ ಮತ್ತು ಪಶ್ಚಿಮ ಮಹಾರಾಷ್ಟ್ರದ ನಾಯಕರನ್ನೇ ಹೆಕ್ಕಿ ತರುವ ಸಂಪ್ರದಾಯ ಕೊನೆಗೊಳಿಸಲು ಬಿಜೆಪಿ ಮುಂದಾಗಿದೆ. ಅಲ್ಲದೆ, ಈ ಬಾರಿಯ ಚುನಾವಣೆಯಲ್ಲಿ ಮಹಾಯುತಿಗೆ ದೊಡ್ಡ ಮಟ್ಟದ ಬೆಂಬಲ ನೀಡಿದ ಉತ್ತರ ಮಹಾರಾಷ್ಟ್ರಕ್ಕೆ ಪ್ರಾಶಸ್ತ್ಯ ನೀಡುವ ಯೋಚನೆಯಲ್ಲಿದೆ. ಉತ್ತರ ಮಹಾರಾಷ್ಟ್ರದ 47 ಸ್ಥಾನಗಳ ಪೈಕಿ ಮಹಾಯುತಿ 44 ಅನ್ನು ಗೆದ್ದುಕೊಂಡಿದೆ. ಈ ಲೆಕ್ಕಾಚಾರಗಳ ಪ್ರಕಾರ ನೋಡುವುದಾದರೆ ಮಹಾರಾಷ್ಟ್ರ ಸಿಎಂ ಕುರ್ಚಿಯಲ್ಲಿ ಹೊಸ ಮುಖವನ್ನು ಕಾಣುವ ಸಾಧ್ಯತೆ ಇದೆ.

ದೇವೇಂದ್ರ ಫಡ್ನವಿಸ್ ಅವರ ಆಪ್ತ ಮಾಜಿ ಸಚಿವ ಗಿರೀಶ್ ಮಹಾಜನ್, ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿಗೆ ಪ್ರಬಲ ನಾಯಕರಾಗಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ನಿಕಟವರ್ತಿ, ಮಾಜಿ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಕೆಲ ಮಹಿಳಾ ನಾಯಕರು ಹೊಸ ಮುಖಗಳ ಆಯ್ಕೆ ಪಟ್ಟಿಯಲ್ಲಿ ಇದ್ದಾರೆ ಎಂದೂ ವರದಿಯಾಗಿದೆ.

ಪ್ರಸ್ತುತ ಶಿವಸೇನೆ (ಶಿಂದೆ ಬಣ) ಏಕನಾಥ್ ಶಿಂದೆ ಅವರನ್ನು ಮತ್ತು ಎನ್‌ಸಿಪಿ (ಅಜಿತ್ ಬಣ) ಅಜಿತ್ ಪವಾರ್ ಅವರನ್ನು ತಮ್ಮ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ. ಬಿಜೆಪಿ ಇನ್ನೂ ತಮ್ಮ ನಾಯಕ ಯಾರೆಂದು ಅಂತಿಮಗೊಳಿಸಿಲ್ಲ. ಎಲ್ಲಾ ಸರಿಯಾದರೆ ಹೊಸ ಸಿಎಂ ನವೆಂಬರ್ 30ರಂದು ಪ್ರಮಾಣವಚನ ಸ್ವೀಕರಿಸಬಹುದು.

ಇದನ್ನೂ ಓದಿ : ಅಜ್ಮೀರ್ ದರ್ಗಾ ಶಿವ ದೇವಾಲಯವೆಂದು ಅರ್ಜಿ : ವಿಚಾರಣೆಗೆ ಒಪ್ಪಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...