Homeಮುಖಪುಟಮತಗಳ್ಳತನದ ವಿರುದ್ಧ 'ಮಹಾ'ರ‍್ಯಾಲಿ : 4,500 ಮಂದಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದ ರಾಜ್...

ಮತಗಳ್ಳತನದ ವಿರುದ್ಧ ‘ಮಹಾ’ರ‍್ಯಾಲಿ : 4,500 ಮಂದಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದ ರಾಜ್ ಠಾಕ್ರೆ

- Advertisement -
- Advertisement -

ಥಾಣೆಯ ಕಲ್ಯಾಣ್ ಗ್ರಾಮೀಣ, ಡೊಂಬಿವಲಿ, ಭಿವಂಡಿ ಮತ್ತು ಮುರ್ಬಾದ್ ಕ್ಷೇತ್ರಗಳಲ್ಲಿ ನೋಂದಾಯಿಸಲ್ಪಟ್ಟ 4,500 ಮತದಾರರು ಕಳೆದ ವರ್ಷದ ಚುನಾವಣೆಯಲ್ಲಿ ಮುಂಬೈನ ಮಲಬಾರ್ ಹಿಲ್‌ನಲ್ಲೂ ಮತ ಚಲಾಯಿಸಿದ್ದಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್‌) ನಾಯಕ ರಾಜ್ ಠಾಕ್ರೆ ಶನಿವಾರ (ನ.1) ಆರೋಪಿಸಿದ್ದಾರೆ.

ಕಳೆದ ವರ್ಷದ ಲೋಕಸಭಾ ಚುನಾವಣೆಯನ್ನು ಉಲ್ಲೇಖಿಸಿ ಆರೋಪ ಮಾಡಿದ್ದೋ..ಅಥವಾ ವಿಧಾನಸಭಾ ಚುನಾವಣೆಯ ಬಗ್ಗೆ ಆರೋಪಿಸಿದ್ದೋ ಎಂಬುದನ್ನು ರಾಜ್‌ಠಾಕ್ರೆ ಸ್ಪಷ್ಟಪಡಿಸಿಲ್ಲ.

“ಅವರು (4,500 ಜನರು) ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ಉದ್ದವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಜೊತೆ ರಾಜ್ಯದ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ವಿರುದ್ಧ ಮುಂಬೈ ನಗರದಲ್ಲಿ ಶನಿವಾರ ಆಯೋಜಿಸಿದ್ದ ರ‍್ಯಾಲಿಯಲ್ಲಿ ರಾಜ್ ಠಾಕ್ರೆ ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ ಎರಡೆರಡು ಬಾರಿ ಮತದಾನ ಮಾಡಿರುವ ಲಕ್ಷಾಂತರ ಮತದಾರರಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ.

ಎಂಎನ್‌ಎಸ್‌ ಮತ್ತು ಎಂವಿಎ ಜೊತೆಯಾಗಿ ‘ಸತ್ಯಚಾ ಮೋರ್ಚಾ’ ಅಥವಾ ಸತ್ಯಕ್ಕಾಗಿ ಮೆರವಣಿಗೆ ಎಂಬ ಹೆಸರಿನ ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು. ಇದರಲ್ಲಿ ಉದ್ಧವ್ ಠಾಕ್ರೆ, ರಾಜ್ ಠಾಕ್ರೆ, ಆದಿತ್ಯ ಠಾಕ್ರೆ, ಶರದ್ ಪವಾರ್, ಸುಪ್ರಿಯಾ ಸುಳೆ, ರೋಹಿತ್ ಪವಾರ್ ಮತ್ತು ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಭಾಗವಹಿಸಿದ್ದರು.

ಮುಂಬೈನ ಮತದಾರರ ಪಟ್ಟಿಗಳಲ್ಲಿ ವ್ಯತ್ಯಾಸಗಳನ್ನು ನಮ್ಮ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಜುಲೈ 1ರವರೆಗೆ ನೋಂದಾಯಿಸಲಾದ ಒಟ್ಟು ಮತದಾರರು 17,29,456 ಆಗಿದ್ದು, ಅದರಲ್ಲಿ 62,370 ಜನರು ‘ಅನುಮಾನಾಸ್ಪದ’ ಮತದಾರರು ಎಂದಿದ್ದಾರೆ.

ಮುಂಬೈ ವಾಯುವ್ಯ ಕ್ಷೇತ್ರದಲ್ಲಿ ಒಟ್ಟು 16,74,861 ಮತದಾರರಿದ್ದು, ಅವರಲ್ಲಿ 7,231 ಜನರು ‘ಅನುಮಾನಾಸ್ಪದರು’ ಎಂದು ಪಕ್ಷದ ಕಾರ್ಯಕರ್ತರು ಕಂಡುಕೊಂಡಿದ್ದಾರೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.

ಮುಂಬೈ ಈಶಾನ್ಯ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 15,90,710 ಇದೆ. ಈ ಪೈಕಿ 92,983 ಮತದಾರರು ‘ಅನುಮಾನಾಸ್ಪದರು’. ಮುಂಬೈ ಉತ್ತರ ಕೇಂದ್ರ ಕ್ಷೇತ್ರದ ಒಟ್ಟು 1,68,148 ಮತದಾರರಿದ್ದು, ಅದರಲ್ಲಿ 63,740 ಮಂದಿ ‘ಅನುಮಾನಾಸ್ಪದರು’ ಎಂದು ರಾಜ್ ಠಾಕ್ರೆ ವಿವರಿಸಿದ್ದಾರೆ.

ಜುಲೈನಲ್ಲಿ ಚುನಾವಣಾ ಆಯೋಗವು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯಡಿಯಲ್ಲಿ ‘ಅನುಮಾನಾಸ್ಪದ’ ಮತದಾರರು ಎಂಬ ವರ್ಗವಿಲ್ಲ ಎಂದು ಹೇಳಿದೆ.

ಮತದಾರರ ಪಟ್ಟಿಯಲ್ಲಿ ‘ನಕಲಿ ಮತದಾರರು’ ಇರುವಾಗ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಬಾರದು. ಮತದಾರರ ಪಟ್ಟಿಯನ್ನು ಮೊದಲು ಸ್ವಚ್ಛಗೊಳಿಸಿ ಎಂದು ರಾಜ್ ಠಾಕ್ರೆ ರ‍್ಯಾಲಿಯಲ್ಲಿ ಆಗ್ರಹಿಸಿದ್ದಾರೆ.

ಉದ್ದವ್ ಠಾಕ್ರೆ ಕೂಡ ರಾಜ್ ಠಾಕ್ರೆ ಆರೋಪಗಳನ್ನೇ ಪುನರುಚ್ಚರಿಸಿದ್ದಾರೆ.

ತಮ್ಮ ವರ್ಲಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸಗಳಿವೆ ಎಂದು ಕೆಲ ದಿನಗಳ ಹಿಂದೆ ಆದಿತ್ಯ ಠಾಕ್ರೆ ಆರೋಪಿಸಿದ್ದರು.

ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಯ ನಡುವೆ ವರ್ಲಿಯಲ್ಲಿ 16,043 ಮತದಾರರನ್ನು ಸೇರಿಸಲಾಗಿದೆ ಮತ್ತು 5,661 ಹೆಸರುಗಳನ್ನು ಅಳಿಸಲಾಗಿದೆ ಎಂದು ಅದಿತ್ಯ ಠಾಕ್ರೆ ಸೋಮವಾರ ಹೇಳಿದ್ದರು.

“502 ಮತದಾರರ ಹೆಸರುಗಳು ಅವರ ತಂದೆಯಂತೆ ಇದೆ. 720 ಮತದಾರರ ತಂದೆಯ ಹೆಸರು ಬೇರೆ ಜಾತಿಯೊಂದಿಗೆ ತಳುಕು ಹಾಕಿಕೊಂಡಿದೆ. ಒಂದೇ ವೋಟರ್ ಐಡಿ ಸಂಖ್ಯೆಯಲ್ಲಿ 133 ಹೆಸರುಗಳು ಎರಡೆರಡು ಬಾರಿ ಇವೆ. 643 ಮತದಾರರ ಹೆಸರುಗಳಲ್ಲಿ ಲಿಂಗ ವ್ಯತ್ಯಾಸಗಳಿವೆ. 100 ವರ್ಷ ದಾಟಿದ 113 ಮತದಾರರಿದ್ದಾರೆ. 4,177 ಮತದಾರರ ವಿಳಾಸಗಳು ಸರಿಯಾಗಿಲ್ಲ ಅಥವಾ ಅವರು ಸೂಚಿಸಿದಂತಹ ವಿಳಾಸವೇ ಇಲ್ಲ. 3,335 ಮತದಾರರು 214 ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಇವು ಪ್ರಮುಖ ಅನುಮಾನಗಳು” ಎಂದು ಆದಿತ್ಯ ಠಾಕ್ರೆ ವಿವರಿಸಿದ್ದರು.

ಮಹಾರಾಷ್ಟ್ರ ಚುನಾವಣೆಗೆ ನೋಂದಾಯಿತ ಮತದಾರರ ಸಂಖ್ಯೆ (9.7 ಕೋಟಿ) ರಾಜ್ಯದ ವಯಸ್ಕ ಜನಸಂಖ್ಯೆಗಿಂತ (9.5 ಕೋಟಿ) ಹೆಚ್ಚಿರುವುದು ಹೇಗೆ ಎಂಬುವುದನ್ನು ವಿವರಿಸುವಂತೆ ಕಾಂಗ್ರೆಸ್ ಕಳೆದ ಫೆಬ್ರವರಿಯಲ್ಲಿ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು.

ಇದಕ್ಕೆ ಉತ್ತರಿಸಿದ್ದ ಚುನಾವಣಾ ಆಯೋಗ, ಮತದಾರರಿಂದ ಪ್ರತಿಕೂಲವಾದ ತೀರ್ಪು ಪಡೆದ ಪಕ್ಷಗಳು ತನ್ನನ್ನು ಕೆಣಕಲು ಪ್ರಯತ್ನಿಸುವುದು ‘ಸಂಪೂರ್ಣವಾಗಿ ಅಸಂಬದ್ಧ’ ಎಂದು ಹೇಳಿತ್ತು.

ಬಿಹಾರದ ಒಂದೇ ಎಂಜಿನ್ ಸರ್ಕಾರ ಕೇಂದ್ರದಿಂದ ನಡೆಸಲ್ಪಡುತ್ತಿದೆ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...