Homeಮುಖಪುಟಮತಗಳ್ಳತನದ ವಿರುದ್ಧ 'ಮಹಾ'ರ‍್ಯಾಲಿ : 4,500 ಮಂದಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದ ರಾಜ್...

ಮತಗಳ್ಳತನದ ವಿರುದ್ಧ ‘ಮಹಾ’ರ‍್ಯಾಲಿ : 4,500 ಮಂದಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದ ರಾಜ್ ಠಾಕ್ರೆ

- Advertisement -
- Advertisement -

ಥಾಣೆಯ ಕಲ್ಯಾಣ್ ಗ್ರಾಮೀಣ, ಡೊಂಬಿವಲಿ, ಭಿವಂಡಿ ಮತ್ತು ಮುರ್ಬಾದ್ ಕ್ಷೇತ್ರಗಳಲ್ಲಿ ನೋಂದಾಯಿಸಲ್ಪಟ್ಟ 4,500 ಮತದಾರರು ಕಳೆದ ವರ್ಷದ ಚುನಾವಣೆಯಲ್ಲಿ ಮುಂಬೈನ ಮಲಬಾರ್ ಹಿಲ್‌ನಲ್ಲೂ ಮತ ಚಲಾಯಿಸಿದ್ದಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್‌) ನಾಯಕ ರಾಜ್ ಠಾಕ್ರೆ ಶನಿವಾರ (ನ.1) ಆರೋಪಿಸಿದ್ದಾರೆ.

ಕಳೆದ ವರ್ಷದ ಲೋಕಸಭಾ ಚುನಾವಣೆಯನ್ನು ಉಲ್ಲೇಖಿಸಿ ಆರೋಪ ಮಾಡಿದ್ದೋ..ಅಥವಾ ವಿಧಾನಸಭಾ ಚುನಾವಣೆಯ ಬಗ್ಗೆ ಆರೋಪಿಸಿದ್ದೋ ಎಂಬುದನ್ನು ರಾಜ್‌ಠಾಕ್ರೆ ಸ್ಪಷ್ಟಪಡಿಸಿಲ್ಲ.

“ಅವರು (4,500 ಜನರು) ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ಉದ್ದವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಜೊತೆ ರಾಜ್ಯದ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ವಿರುದ್ಧ ಮುಂಬೈ ನಗರದಲ್ಲಿ ಶನಿವಾರ ಆಯೋಜಿಸಿದ್ದ ರ‍್ಯಾಲಿಯಲ್ಲಿ ರಾಜ್ ಠಾಕ್ರೆ ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ ಎರಡೆರಡು ಬಾರಿ ಮತದಾನ ಮಾಡಿರುವ ಲಕ್ಷಾಂತರ ಮತದಾರರಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ.

ಎಂಎನ್‌ಎಸ್‌ ಮತ್ತು ಎಂವಿಎ ಜೊತೆಯಾಗಿ ‘ಸತ್ಯಚಾ ಮೋರ್ಚಾ’ ಅಥವಾ ಸತ್ಯಕ್ಕಾಗಿ ಮೆರವಣಿಗೆ ಎಂಬ ಹೆಸರಿನ ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು. ಇದರಲ್ಲಿ ಉದ್ಧವ್ ಠಾಕ್ರೆ, ರಾಜ್ ಠಾಕ್ರೆ, ಆದಿತ್ಯ ಠಾಕ್ರೆ, ಶರದ್ ಪವಾರ್, ಸುಪ್ರಿಯಾ ಸುಳೆ, ರೋಹಿತ್ ಪವಾರ್ ಮತ್ತು ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಭಾಗವಹಿಸಿದ್ದರು.

ಮುಂಬೈನ ಮತದಾರರ ಪಟ್ಟಿಗಳಲ್ಲಿ ವ್ಯತ್ಯಾಸಗಳನ್ನು ನಮ್ಮ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಜುಲೈ 1ರವರೆಗೆ ನೋಂದಾಯಿಸಲಾದ ಒಟ್ಟು ಮತದಾರರು 17,29,456 ಆಗಿದ್ದು, ಅದರಲ್ಲಿ 62,370 ಜನರು ‘ಅನುಮಾನಾಸ್ಪದ’ ಮತದಾರರು ಎಂದಿದ್ದಾರೆ.

ಮುಂಬೈ ವಾಯುವ್ಯ ಕ್ಷೇತ್ರದಲ್ಲಿ ಒಟ್ಟು 16,74,861 ಮತದಾರರಿದ್ದು, ಅವರಲ್ಲಿ 7,231 ಜನರು ‘ಅನುಮಾನಾಸ್ಪದರು’ ಎಂದು ಪಕ್ಷದ ಕಾರ್ಯಕರ್ತರು ಕಂಡುಕೊಂಡಿದ್ದಾರೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.

ಮುಂಬೈ ಈಶಾನ್ಯ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 15,90,710 ಇದೆ. ಈ ಪೈಕಿ 92,983 ಮತದಾರರು ‘ಅನುಮಾನಾಸ್ಪದರು’. ಮುಂಬೈ ಉತ್ತರ ಕೇಂದ್ರ ಕ್ಷೇತ್ರದ ಒಟ್ಟು 1,68,148 ಮತದಾರರಿದ್ದು, ಅದರಲ್ಲಿ 63,740 ಮಂದಿ ‘ಅನುಮಾನಾಸ್ಪದರು’ ಎಂದು ರಾಜ್ ಠಾಕ್ರೆ ವಿವರಿಸಿದ್ದಾರೆ.

ಜುಲೈನಲ್ಲಿ ಚುನಾವಣಾ ಆಯೋಗವು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯಡಿಯಲ್ಲಿ ‘ಅನುಮಾನಾಸ್ಪದ’ ಮತದಾರರು ಎಂಬ ವರ್ಗವಿಲ್ಲ ಎಂದು ಹೇಳಿದೆ.

ಮತದಾರರ ಪಟ್ಟಿಯಲ್ಲಿ ‘ನಕಲಿ ಮತದಾರರು’ ಇರುವಾಗ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಬಾರದು. ಮತದಾರರ ಪಟ್ಟಿಯನ್ನು ಮೊದಲು ಸ್ವಚ್ಛಗೊಳಿಸಿ ಎಂದು ರಾಜ್ ಠಾಕ್ರೆ ರ‍್ಯಾಲಿಯಲ್ಲಿ ಆಗ್ರಹಿಸಿದ್ದಾರೆ.

ಉದ್ದವ್ ಠಾಕ್ರೆ ಕೂಡ ರಾಜ್ ಠಾಕ್ರೆ ಆರೋಪಗಳನ್ನೇ ಪುನರುಚ್ಚರಿಸಿದ್ದಾರೆ.

ತಮ್ಮ ವರ್ಲಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸಗಳಿವೆ ಎಂದು ಕೆಲ ದಿನಗಳ ಹಿಂದೆ ಆದಿತ್ಯ ಠಾಕ್ರೆ ಆರೋಪಿಸಿದ್ದರು.

ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಯ ನಡುವೆ ವರ್ಲಿಯಲ್ಲಿ 16,043 ಮತದಾರರನ್ನು ಸೇರಿಸಲಾಗಿದೆ ಮತ್ತು 5,661 ಹೆಸರುಗಳನ್ನು ಅಳಿಸಲಾಗಿದೆ ಎಂದು ಅದಿತ್ಯ ಠಾಕ್ರೆ ಸೋಮವಾರ ಹೇಳಿದ್ದರು.

“502 ಮತದಾರರ ಹೆಸರುಗಳು ಅವರ ತಂದೆಯಂತೆ ಇದೆ. 720 ಮತದಾರರ ತಂದೆಯ ಹೆಸರು ಬೇರೆ ಜಾತಿಯೊಂದಿಗೆ ತಳುಕು ಹಾಕಿಕೊಂಡಿದೆ. ಒಂದೇ ವೋಟರ್ ಐಡಿ ಸಂಖ್ಯೆಯಲ್ಲಿ 133 ಹೆಸರುಗಳು ಎರಡೆರಡು ಬಾರಿ ಇವೆ. 643 ಮತದಾರರ ಹೆಸರುಗಳಲ್ಲಿ ಲಿಂಗ ವ್ಯತ್ಯಾಸಗಳಿವೆ. 100 ವರ್ಷ ದಾಟಿದ 113 ಮತದಾರರಿದ್ದಾರೆ. 4,177 ಮತದಾರರ ವಿಳಾಸಗಳು ಸರಿಯಾಗಿಲ್ಲ ಅಥವಾ ಅವರು ಸೂಚಿಸಿದಂತಹ ವಿಳಾಸವೇ ಇಲ್ಲ. 3,335 ಮತದಾರರು 214 ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಇವು ಪ್ರಮುಖ ಅನುಮಾನಗಳು” ಎಂದು ಆದಿತ್ಯ ಠಾಕ್ರೆ ವಿವರಿಸಿದ್ದರು.

ಮಹಾರಾಷ್ಟ್ರ ಚುನಾವಣೆಗೆ ನೋಂದಾಯಿತ ಮತದಾರರ ಸಂಖ್ಯೆ (9.7 ಕೋಟಿ) ರಾಜ್ಯದ ವಯಸ್ಕ ಜನಸಂಖ್ಯೆಗಿಂತ (9.5 ಕೋಟಿ) ಹೆಚ್ಚಿರುವುದು ಹೇಗೆ ಎಂಬುವುದನ್ನು ವಿವರಿಸುವಂತೆ ಕಾಂಗ್ರೆಸ್ ಕಳೆದ ಫೆಬ್ರವರಿಯಲ್ಲಿ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು.

ಇದಕ್ಕೆ ಉತ್ತರಿಸಿದ್ದ ಚುನಾವಣಾ ಆಯೋಗ, ಮತದಾರರಿಂದ ಪ್ರತಿಕೂಲವಾದ ತೀರ್ಪು ಪಡೆದ ಪಕ್ಷಗಳು ತನ್ನನ್ನು ಕೆಣಕಲು ಪ್ರಯತ್ನಿಸುವುದು ‘ಸಂಪೂರ್ಣವಾಗಿ ಅಸಂಬದ್ಧ’ ಎಂದು ಹೇಳಿತ್ತು.

ಬಿಹಾರದ ಒಂದೇ ಎಂಜಿನ್ ಸರ್ಕಾರ ಕೇಂದ್ರದಿಂದ ನಡೆಸಲ್ಪಡುತ್ತಿದೆ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...