Homeಮುಖಪುಟಮತಗಳ್ಳತನದ ವಿರುದ್ಧ 'ಮಹಾ'ರ‍್ಯಾಲಿ : 4,500 ಮಂದಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದ ರಾಜ್...

ಮತಗಳ್ಳತನದ ವಿರುದ್ಧ ‘ಮಹಾ’ರ‍್ಯಾಲಿ : 4,500 ಮಂದಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದ ರಾಜ್ ಠಾಕ್ರೆ

- Advertisement -
- Advertisement -

ಥಾಣೆಯ ಕಲ್ಯಾಣ್ ಗ್ರಾಮೀಣ, ಡೊಂಬಿವಲಿ, ಭಿವಂಡಿ ಮತ್ತು ಮುರ್ಬಾದ್ ಕ್ಷೇತ್ರಗಳಲ್ಲಿ ನೋಂದಾಯಿಸಲ್ಪಟ್ಟ 4,500 ಮತದಾರರು ಕಳೆದ ವರ್ಷದ ಚುನಾವಣೆಯಲ್ಲಿ ಮುಂಬೈನ ಮಲಬಾರ್ ಹಿಲ್‌ನಲ್ಲೂ ಮತ ಚಲಾಯಿಸಿದ್ದಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್‌) ನಾಯಕ ರಾಜ್ ಠಾಕ್ರೆ ಶನಿವಾರ (ನ.1) ಆರೋಪಿಸಿದ್ದಾರೆ.

ಕಳೆದ ವರ್ಷದ ಲೋಕಸಭಾ ಚುನಾವಣೆಯನ್ನು ಉಲ್ಲೇಖಿಸಿ ಆರೋಪ ಮಾಡಿದ್ದೋ..ಅಥವಾ ವಿಧಾನಸಭಾ ಚುನಾವಣೆಯ ಬಗ್ಗೆ ಆರೋಪಿಸಿದ್ದೋ ಎಂಬುದನ್ನು ರಾಜ್‌ಠಾಕ್ರೆ ಸ್ಪಷ್ಟಪಡಿಸಿಲ್ಲ.

“ಅವರು (4,500 ಜನರು) ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ಉದ್ದವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಜೊತೆ ರಾಜ್ಯದ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ವಿರುದ್ಧ ಮುಂಬೈ ನಗರದಲ್ಲಿ ಶನಿವಾರ ಆಯೋಜಿಸಿದ್ದ ರ‍್ಯಾಲಿಯಲ್ಲಿ ರಾಜ್ ಠಾಕ್ರೆ ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ ಎರಡೆರಡು ಬಾರಿ ಮತದಾನ ಮಾಡಿರುವ ಲಕ್ಷಾಂತರ ಮತದಾರರಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ.

ಎಂಎನ್‌ಎಸ್‌ ಮತ್ತು ಎಂವಿಎ ಜೊತೆಯಾಗಿ ‘ಸತ್ಯಚಾ ಮೋರ್ಚಾ’ ಅಥವಾ ಸತ್ಯಕ್ಕಾಗಿ ಮೆರವಣಿಗೆ ಎಂಬ ಹೆಸರಿನ ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು. ಇದರಲ್ಲಿ ಉದ್ಧವ್ ಠಾಕ್ರೆ, ರಾಜ್ ಠಾಕ್ರೆ, ಆದಿತ್ಯ ಠಾಕ್ರೆ, ಶರದ್ ಪವಾರ್, ಸುಪ್ರಿಯಾ ಸುಳೆ, ರೋಹಿತ್ ಪವಾರ್ ಮತ್ತು ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಭಾಗವಹಿಸಿದ್ದರು.

ಮುಂಬೈನ ಮತದಾರರ ಪಟ್ಟಿಗಳಲ್ಲಿ ವ್ಯತ್ಯಾಸಗಳನ್ನು ನಮ್ಮ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಜುಲೈ 1ರವರೆಗೆ ನೋಂದಾಯಿಸಲಾದ ಒಟ್ಟು ಮತದಾರರು 17,29,456 ಆಗಿದ್ದು, ಅದರಲ್ಲಿ 62,370 ಜನರು ‘ಅನುಮಾನಾಸ್ಪದ’ ಮತದಾರರು ಎಂದಿದ್ದಾರೆ.

ಮುಂಬೈ ವಾಯುವ್ಯ ಕ್ಷೇತ್ರದಲ್ಲಿ ಒಟ್ಟು 16,74,861 ಮತದಾರರಿದ್ದು, ಅವರಲ್ಲಿ 7,231 ಜನರು ‘ಅನುಮಾನಾಸ್ಪದರು’ ಎಂದು ಪಕ್ಷದ ಕಾರ್ಯಕರ್ತರು ಕಂಡುಕೊಂಡಿದ್ದಾರೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.

ಮುಂಬೈ ಈಶಾನ್ಯ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 15,90,710 ಇದೆ. ಈ ಪೈಕಿ 92,983 ಮತದಾರರು ‘ಅನುಮಾನಾಸ್ಪದರು’. ಮುಂಬೈ ಉತ್ತರ ಕೇಂದ್ರ ಕ್ಷೇತ್ರದ ಒಟ್ಟು 1,68,148 ಮತದಾರರಿದ್ದು, ಅದರಲ್ಲಿ 63,740 ಮಂದಿ ‘ಅನುಮಾನಾಸ್ಪದರು’ ಎಂದು ರಾಜ್ ಠಾಕ್ರೆ ವಿವರಿಸಿದ್ದಾರೆ.

ಜುಲೈನಲ್ಲಿ ಚುನಾವಣಾ ಆಯೋಗವು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯಡಿಯಲ್ಲಿ ‘ಅನುಮಾನಾಸ್ಪದ’ ಮತದಾರರು ಎಂಬ ವರ್ಗವಿಲ್ಲ ಎಂದು ಹೇಳಿದೆ.

ಮತದಾರರ ಪಟ್ಟಿಯಲ್ಲಿ ‘ನಕಲಿ ಮತದಾರರು’ ಇರುವಾಗ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಬಾರದು. ಮತದಾರರ ಪಟ್ಟಿಯನ್ನು ಮೊದಲು ಸ್ವಚ್ಛಗೊಳಿಸಿ ಎಂದು ರಾಜ್ ಠಾಕ್ರೆ ರ‍್ಯಾಲಿಯಲ್ಲಿ ಆಗ್ರಹಿಸಿದ್ದಾರೆ.

ಉದ್ದವ್ ಠಾಕ್ರೆ ಕೂಡ ರಾಜ್ ಠಾಕ್ರೆ ಆರೋಪಗಳನ್ನೇ ಪುನರುಚ್ಚರಿಸಿದ್ದಾರೆ.

ತಮ್ಮ ವರ್ಲಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸಗಳಿವೆ ಎಂದು ಕೆಲ ದಿನಗಳ ಹಿಂದೆ ಆದಿತ್ಯ ಠಾಕ್ರೆ ಆರೋಪಿಸಿದ್ದರು.

ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಯ ನಡುವೆ ವರ್ಲಿಯಲ್ಲಿ 16,043 ಮತದಾರರನ್ನು ಸೇರಿಸಲಾಗಿದೆ ಮತ್ತು 5,661 ಹೆಸರುಗಳನ್ನು ಅಳಿಸಲಾಗಿದೆ ಎಂದು ಅದಿತ್ಯ ಠಾಕ್ರೆ ಸೋಮವಾರ ಹೇಳಿದ್ದರು.

“502 ಮತದಾರರ ಹೆಸರುಗಳು ಅವರ ತಂದೆಯಂತೆ ಇದೆ. 720 ಮತದಾರರ ತಂದೆಯ ಹೆಸರು ಬೇರೆ ಜಾತಿಯೊಂದಿಗೆ ತಳುಕು ಹಾಕಿಕೊಂಡಿದೆ. ಒಂದೇ ವೋಟರ್ ಐಡಿ ಸಂಖ್ಯೆಯಲ್ಲಿ 133 ಹೆಸರುಗಳು ಎರಡೆರಡು ಬಾರಿ ಇವೆ. 643 ಮತದಾರರ ಹೆಸರುಗಳಲ್ಲಿ ಲಿಂಗ ವ್ಯತ್ಯಾಸಗಳಿವೆ. 100 ವರ್ಷ ದಾಟಿದ 113 ಮತದಾರರಿದ್ದಾರೆ. 4,177 ಮತದಾರರ ವಿಳಾಸಗಳು ಸರಿಯಾಗಿಲ್ಲ ಅಥವಾ ಅವರು ಸೂಚಿಸಿದಂತಹ ವಿಳಾಸವೇ ಇಲ್ಲ. 3,335 ಮತದಾರರು 214 ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಇವು ಪ್ರಮುಖ ಅನುಮಾನಗಳು” ಎಂದು ಆದಿತ್ಯ ಠಾಕ್ರೆ ವಿವರಿಸಿದ್ದರು.

ಮಹಾರಾಷ್ಟ್ರ ಚುನಾವಣೆಗೆ ನೋಂದಾಯಿತ ಮತದಾರರ ಸಂಖ್ಯೆ (9.7 ಕೋಟಿ) ರಾಜ್ಯದ ವಯಸ್ಕ ಜನಸಂಖ್ಯೆಗಿಂತ (9.5 ಕೋಟಿ) ಹೆಚ್ಚಿರುವುದು ಹೇಗೆ ಎಂಬುವುದನ್ನು ವಿವರಿಸುವಂತೆ ಕಾಂಗ್ರೆಸ್ ಕಳೆದ ಫೆಬ್ರವರಿಯಲ್ಲಿ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು.

ಇದಕ್ಕೆ ಉತ್ತರಿಸಿದ್ದ ಚುನಾವಣಾ ಆಯೋಗ, ಮತದಾರರಿಂದ ಪ್ರತಿಕೂಲವಾದ ತೀರ್ಪು ಪಡೆದ ಪಕ್ಷಗಳು ತನ್ನನ್ನು ಕೆಣಕಲು ಪ್ರಯತ್ನಿಸುವುದು ‘ಸಂಪೂರ್ಣವಾಗಿ ಅಸಂಬದ್ಧ’ ಎಂದು ಹೇಳಿತ್ತು.

ಬಿಹಾರದ ಒಂದೇ ಎಂಜಿನ್ ಸರ್ಕಾರ ಕೇಂದ್ರದಿಂದ ನಡೆಸಲ್ಪಡುತ್ತಿದೆ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...