Homeಮುಖಪುಟಮಹಾ ವಿಕಾಸ್ ಅಘಾಡಿ ಮೈತ್ರಿಯ ಸೀಟು ಹಂಚಿಕೆಯ 99% ಕೆಲಸ ಪೂರ್ಣ: ಸಂಜಯ್ ರಾವತ್

ಮಹಾ ವಿಕಾಸ್ ಅಘಾಡಿ ಮೈತ್ರಿಯ ಸೀಟು ಹಂಚಿಕೆಯ 99% ಕೆಲಸ ಪೂರ್ಣ: ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರದ ವಿಪಕ್ಷಗಳ ಮಹಾ ವಿಕಾಸ್ ಅಘಾಡಿ ಮೈತ್ರಿಯ ಸೀಟು ಹಂಚಿಕೆಯ 99% ದಷ್ಟು ಕೆಲಸ ಪೂರ್ಣಗೊಂಡಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಬುಧವಾರ ಹೇಳಿದ್ದಾರೆ. ಮೂರು ಮೈತ್ರಿ ಪಕ್ಷಗಳ ನಾಯಕರು ಸಂಜೆ ವೇಳೆ ಸೀಟು ಹಂಚಿಕೆಯನ್ನು ಪ್ರಕಟಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ತಮ್ಮ ಪಕ್ಷ 100 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಸೂಚಿಸಿದ್ದಾರೆ. ವಿಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಉನ್ನತ ನಾಯಕರು ಮಂಗಳವಾರ ತಡರಾತ್ರಿ ಮುಂಬೈಯಲ್ಲಿ ಸಭೆ ನಡೆಸಿ, ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆಯ ಮಾತುಕತೆಯನ್ನು ಅಂತಿಮಗೊಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ವಿಪಕ್ಷಗಳ ಮಹಾ ವಿಕಾಸ್ ಅಘಾಡಿ ಮೈತ್ರಿಯಲ್ಲಿ ಶಿವಸೇನೆ (UBT), ಕಾಂಗ್ರೆಸ್ ಮತ್ತು NCP (SP) ಪಕ್ಷಗಳು ಇವೆ.

ಈ ಹಿಂದೆ ಸೀಟು ಹಂಚಿಕೆಯ ವಿಚಾರವಾಗಿ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ಬಹಿರಂಗವಾಗಿ ಪರಸ್ಪರ ವಾಗ್ದಾಳಿ ನಡೆಸಿದ್ದವು. ಇದರ ನಂತರ ಹಿರಿಯ ರಾಜ್ಯ ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಮಂಗಳವಾರ ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಮತ್ತು ನಂತರ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಭಿನ್ನಾಭಿಪ್ರಾಯ ಶಮನಮಾಡುವ ಪ್ರಯತ್ನ ಮಾಡಿದ್ದಾರೆ.

ನಂತರ, ಥೋರಟ್ ಮತ್ತು ಎಂವಿಎಯ ಇತರ ನಾಯಕರು ಮುಂಬೈನ ಹೋಟೆಲ್‌ನಲ್ಲಿ ಹಲವಾರು ಗಂಟೆಗಳ ಕಾಲ ಸಭೆ ನಡೆಸಿ ಚರ್ಚಿಸಿದ್ದಾರೆ. ಈ ಸಭೆ ಮಂಗಳವಾರ ತಡರಾತ್ರಿಯವರೆಗೂ ಮುಂದುವರೆದು ಸೀಟು ಹಂಚಿಕೆಯ ಬಗ್ಗೆ ಅಂತಿಮ ತೀರ್ಮಾನಕ್ಕೆ ಬಂದಿದ್ದಾರೆ.

ಸೀಟು ಹಂಚಿಕೆಯ ಶೇಕಡಾ ತೊಂಬತ್ತೊಂಬತ್ತು ಕೆಲಸ ಪೂರ್ಣಗೊಂಡಿದೆ. ಇಂದು ಸಂಜೆ ವೇಳೆಗೆ ಮೂರು ಪಕ್ಷಗಳ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ರಾವತ್ ಬುಧವಾರ ಹೇಳಿದ್ದಾರೆ. “ಶಿವಸೇನೆ (ಉದ್ಧವ್ ಠಾಕ್ರೆ ನೇತೃತ್ವದ ಅವರ ಬಣವನ್ನು ಉಲ್ಲೇಖಿಸಿ) ಅನುಭವಿ ಆಟಗಾರ, ಆದ್ದರಿಂದ ಅದು ಶತಕ ಬಾರಿಸಬೇಕು. ಸೀಟುಗಳಲ್ಲಿ ಶತಕ ಬಾರಿಸಬೇಕು ಮತ್ತು ಒಟ್ಟಾರೆ ಗೆಲುವು ಪಡೆಯಬೇಕು ಎಂಬ ನಿರೀಕ್ಷೆ ಜನರಲ್ಲಿದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಶಿವಸೇನೆ (ಸಿಎಂ ಏಕನಾಥ್ ಶಿಂಧೆ ನೇತೃತ್ವದ), ಬಿಜೆಪಿ ಮತ್ತು ಎಂಎನ್‌ಎಸ್ ಅನ್ನು ತರಾಟೆಗೆ ತೆಗೆದುಕೊಂಡ ಸಂಜಯ್ ರಾವತ್, “ಎಂವಿಎ ಮೈತ್ರಿ ಸರ್ಕಾರವನ್ನು ರಚಿಸುತ್ತದೆ. ಅದಕ್ಕಾಗಿಯೇ ಮಿತ್ರಪಕ್ಷಗಳು ಸಮಯ ತೆಗೆದುಕೊಂಡಿವೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಬಗ್ಗೆಯೂ ಚರ್ಚಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...