Homeಮುಖಪುಟಜಯ ಮಹಾಭಾರತದ ಮರುಕಥನ

ಜಯ ಮಹಾಭಾರತದ ಮರುಕಥನ

- Advertisement -
- Advertisement -

ಭಾರತದ ಮಹಾ ಕಾವ್ಯವಾದ ಮಹಾಭಾರತದ ಮೂಲಕೃತಿ “ಜಯ”. ಅದೇನೂ ಈಗ ನಾವು ಕಾಣುತ್ತಿರುವ ಮಹಾಭಾರತದಷ್ಟು ದೊಡ್ಡದಾಗಿರಲಿಲ್ಲ. ಕುಟುಂಬವೆರಡರ ದಾಯಾದಿ ಕಲಹದ ಕತೆಯು ಬಾಯಿಂದಬಾಯಿಗೆ ಹರಡಿತು. ಸ್ಥಳದಿಂದ ಸ್ಥಳಕ್ಕೆ ಸಂಚರಿಸಿತು. ಪೀಳಿಗೆಗಳಿಂದ ಪೀಳಿಗೆಗಳಿಗೆ ದಾಟಿತು. ಹಾಗೆ ಹರಡುತ್ತಾ, ಸಂಚರಿಸುತ್ತಾ, ದಾಟುತ್ತಾ ವಿವಿಧ ಪ್ರದೇಶಗಳ ವಿವಿಧ ಸಂಸ್ಕೃತಿಗಳನ್ನು ತನ್ನದಾಗಿಸಿಕೊಳ್ಳುತ್ತಾ, ವಿವಿಧ ರೀತಿನೀತಿಗಳನ್ನು ಒಳಗೊಳ್ಳುತ್ತಾ, ವಿವಿಧ ಮಾದರಿಗಳ ಪಾತ್ರಗಳೆಲ್ಲಾ ಭಾಗವಹಿಸುತ್ತಾ ಬೃಹತ್ತಾಗಿ ಬೆಳೆದು ಮಹಾಭಾರತವಾಯಿತು.

ಮಹಾಭಾರತವೆಂಬ ಗೊಂಡಾರಣ್ಯವನ್ನು ಹೊಕ್ಕು ನೋಡಿದರೆ ನಾವು ದೇಶವೆಂದು ಈಗ ಕರೆಯುವ ಈ ಭೂಭಾಗದಲ್ಲಿ ಎಂತೆಂತಹ ಸಂಸ್ಕೃತಿಗಳಿದ್ದವು, ಸಾಮಾಜಿಕ ಪದ್ಧತಿಗಳಿದ್ದವು, ಜನರಿದ್ದರು, ಎಂತೆಂತಹ ಘನತೆ ಗೌರವಗಳಿದ್ದವು, ಯಾವ್ಯಾವ ಕಾರಣಗಳಿಂದ ಸಾಮಾಜಿಕ ಮತ್ತು ವ್ಯಕ್ತಿಗತ ಅಪಮಾನಗಳು ಮತ್ತು ಸನ್ಮಾನಗಳಾಗುತ್ತಿದ್ದವು? ಎಂತೆಂತಹ ನಮೂನೆಯ ಮನಸ್ಥಿತಿಗಳಿದ್ದವು; ಹೀಗೆ ಬಲು ಸೂಕ್ಷ್ಮ ಮತ್ತು ಸ್ಥೂಲ ವಿಚಾರಗಳೆಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.

ರಾಜಕಾರಣ, ಧರ್ಮಕಾರಣ, ಮಾನುಷಕಾರಣ, ದ್ವೇಷಕಾರಣ, ಮೋಹಕಾರಣ, ಅಹಂಕಾರಕಾರಣ, ದೌರ್ಬಲ್ಯಕಾರಣ. ಹೀಗೆ ನಾನಾ ಕಾರಣಗಳು ಮನುಷ್ಯನಲ್ಲಿ ಮತ್ತು ಮಾನುಷ ಸಮಾಜದಲ್ಲಿ ಉಂಟುಮಾಡುವ ಪರಿಣಾಮಗಳನ್ನು ವಿವರಿಸುತ್ತದೆ ಈ ಮಹಾಭಾರತ. ಚಾತುರ್ವರ್ಣ ವ್ಯವಸ್ಥೆಯು, ಪ್ರಭುತ್ವದ ದಬ್ಬಾಳಿಕೆಯು, ಸ್ವಜನಾಸಕ್ತಿ, ಸ್ವಪರಿವಾರ ಮೋಹವು ಏನೆಲ್ಲಾ ಶೋಷಣೆಗಳನ್ನು ಮಾಡಿತು, ಎಂತೆಂತಹ ದುರಂತಗಳನ್ನು ಕಂಡಿತು ಎಂದು ಕಂಡಹಾಗೇ ವಿವರಿಸುತ್ತದೆ. ಒಳ್ಳೆಯ ಅಥವಾ ಕೆಟ್ಟ ಎಂಬ ಗೆರೆ ಎಳೆದಂತಹ ಸಿದ್ಧ ಮಾದರಿಗಳನ್ನು ಮುಂದಿಡದೇ, ಒಳ್ಳೆಯತನದ ಹಿಂದಿನ ಕರಾಳ ಮುಖವನ್ನು, ಕೆಟ್ಟದೆನ್ನುವುದರ ಹಿಂದಿನ ನೈಜತೆ ಮತ್ತು ಪ್ರಾಮಾಣಿಕತೆಯ ಗುಣವನ್ನು ಗುರುತಿಸುತ್ತದೆ.

ನಿಷ್ಪಕ್ಷಪಾತ ನಿರೂಪಣೆಯೇ ಮಹಾಭಾರತದ ಶಕ್ತಿ ಮತ್ತು ಮೌಲ್ಯ. ಪಕ್ಷಪಾತ ಮಾಡುವ ಕೃಷ್ಣನು ಕೂಡ ಶಾಪಕ್ಕೆ, ದುರ್ವಿಧಿಯ ಸಾವಿಗೆ ಬಲಿಯಾಗುತ್ತಾನೆ. ಒಳ್ಳೆಯವರೆಂದು ಕೃಷ್ಣನಿಂದ ಮತ್ತು ಭೀಷ್ಮಾದಿಗಳಿಂದ ಪ್ರಾಮಾಣೀಕರಿಸಲ್ಪಡುವ ಪಾಂಡವರು ಹಾದಿಯಲ್ಲಿ ಹೆಣಗಳಾಗಿ ಬೀಳುತ್ತಾರೆ. ಇನ್ನು ಪಾತ್ರಗಳೆಂದರೆ ಅವು ಬರಿಯ ವ್ಯಕ್ತಿಗಳಲ್ಲ. ವ್ಯಕ್ತಿತ್ವದ ಮಾದರಿಗಳು. ಶಂತನುವಿನಿಂದ ಹಿಡಿದು ಪರೀಕ್ಷಿತನವರೆಗೂ ಈಗಲೂ ನಾವು ನಮ್ಮನಮ್ಮಲ್ಲಿ ಕಾಣುತ್ತಲೇ ಇರುವ ಹಲವು ಮನಸ್ಥಿತಿಗಳ, ಹಲವು ವ್ಯಕ್ತಿತ್ವಗಳ ಮಾದರಿಗಳು.

ಹಾಗಾಗಿಯೇ ಇದು ಒಂದು ಧಾರ್ಮಿಕ ಗ್ರಂಥವಲ್ಲ. ಈ ನೆಲದ ನಿವಾಸಿಗಳಿಗೆಲ್ಲಾ, ಅವರು ಯಾವುದೇ ಧರ್ಮದವರಾಗಲಿ, ತಮ್ಮತಮ್ಮಲ್ಲಿ ಕಾಣುತ್ತಿರುವ ವ್ಯಕ್ತಿತ್ವಗಳ, ಸಂಘರ್ಷಗಳ, ಬದುಕಿನ ನೋವುನಲಿವುಗಳ ಕಾರಣ ಮತ್ತು ಪರಿಣಾಮಗಳ ಸಮಾಜೋಸಾಂಸ್ಕೃತಿಕ ಕಥನವಿದು. ನಿರಂತರವಾಗಿ ಪ್ರಯೋಗಗಳಿಗೆ ಮತ್ತು ಪರಿವರ್ತನೆಗಳಿಗೆ ಒಳಪಡುತ್ತಿದ್ದ ತಾತ್ವಿಕತೆಗಳ ವಿಶ್ಲೇಷಣೆ ಇದು. ವಿಶಾಲ ಭೂಭಾಗದ ಸಂಕೀರ್ಣ ಸಂಸ್ಕೃತಿಗೆ ಇದೊಂದು ರೂಪಕ ಇತಿಹಾಸ. ಯಾರೂ ಅಮುಖ್ಯರಲ್ಲದೇ ಸಮಾಜದ ಮತ್ತು ವ್ಯಕ್ತಿಗಳ ಆಗುಹೋಗುಗಳಿಗೆ ಕಾರಣ ಕರ್ತೃಗಳಾದವರ ಒಂದು ಮಹಾಕಾವ್ಯ.

ಈ ಮಹಾಕಾವ್ಯದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಮನೋವೈಜ್ಞಾನಿಕ ವಿಶ್ಲೇಷಣೆಗಳಿಗೆ ದಾರಿ ತೋರುವ ಕೃತಿ ದೇವದತ್ತ ಪಟ್ನಾಯಕರವರ ಜಯ. ಗಿರಡ್ಡಿ ಗೋವಿಂದರಾಜ ಇದನ್ನು ಕನ್ನಡಕ್ಕೆ ತಂದಿದ್ದಾರೆ.

ಈಗ ನಾವು ತಿಳಿದಿರುವ ರಿಲೀಜಿಯನ್ ಎಂಬ ಧರ್ಮದ ಪರಿಕಲ್ಪನೆಯೇ ಇಲ್ಲದಿದ್ದ ಮಹಾಭಾರತದ ಕಾಲದಲ್ಲಿಯೂ ಧರ್ಮದ ಬಗ್ಗೆ ಮಾತಾಡುತ್ತಾರೆ. ಅದನ್ನು ಎತ್ತಿ ಹಿಡಿಯುತ್ತಾರೆ. ಅದನ್ನು ಪಾಲಿಸುತ್ತಾರೆ. ಅದಕ್ಕಾಗಿ ಬದುಕುತ್ತಾರೆ. ಅದಕ್ಕಾಗಿ ಸಾಯುತ್ತಾರೆ. ಆದರೆ ಆ ಧರ್ಮವೆಂಬುದು ಅಲ್ಲಿ ಸ್ವಧರ್ಮ ಎಂಬ ಒಬ್ಬರ ಅಥವಾ ಒಂದರ ಅಥವಾ ಒಂದು ವ್ಯವಸ್ಥೆಯ ಮೂಲ ಗುಣಸ್ವಭಾವ, ರೀತಿ ಮತ್ತು ನೀತಿ. ಅದೊಂದು ಜೈವಿಕ, ಆಧ್ಯಾತ್ಮಿಕ, ತಾತ್ವಿಕ ಮತ್ತು ಸಾಮಾಜಿಕ ಅಸ್ತಿತ್ವಗಳ ಸೂಕ್ಷ್ಮ ವಿಚಾರ.

ಮಹಾಭಾರತ ಭಾರತದ ಒಂದು ಹೆಮ್ಮೆಯ ಕಾವ್ಯ. ಆದರೆ ನಿಷ್ಪಕ್ಷಪಾತವಾದ ಈ ಮಹಾಭಾರತವನ್ನು ಪರ ಅಥವಾ ವಿರೋಧದ ನೆಲೆಗಟ್ಟುಗಳಿಂದ ನೋಡದೇ ರೂಪಕ ಇತಿಹಾಸವನ್ನು ಅಭ್ಯಾಸ ಮಾಡುವಂತೆ ದೇವದತ್ತ ಜಯವನ್ನು ಬರೆದು ಮಹದುಪಕಾರ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...