Homeಮುಖಪುಟಜಯ ಮಹಾಭಾರತದ ಮರುಕಥನ

ಜಯ ಮಹಾಭಾರತದ ಮರುಕಥನ

- Advertisement -
- Advertisement -

ಭಾರತದ ಮಹಾ ಕಾವ್ಯವಾದ ಮಹಾಭಾರತದ ಮೂಲಕೃತಿ “ಜಯ”. ಅದೇನೂ ಈಗ ನಾವು ಕಾಣುತ್ತಿರುವ ಮಹಾಭಾರತದಷ್ಟು ದೊಡ್ಡದಾಗಿರಲಿಲ್ಲ. ಕುಟುಂಬವೆರಡರ ದಾಯಾದಿ ಕಲಹದ ಕತೆಯು ಬಾಯಿಂದಬಾಯಿಗೆ ಹರಡಿತು. ಸ್ಥಳದಿಂದ ಸ್ಥಳಕ್ಕೆ ಸಂಚರಿಸಿತು. ಪೀಳಿಗೆಗಳಿಂದ ಪೀಳಿಗೆಗಳಿಗೆ ದಾಟಿತು. ಹಾಗೆ ಹರಡುತ್ತಾ, ಸಂಚರಿಸುತ್ತಾ, ದಾಟುತ್ತಾ ವಿವಿಧ ಪ್ರದೇಶಗಳ ವಿವಿಧ ಸಂಸ್ಕೃತಿಗಳನ್ನು ತನ್ನದಾಗಿಸಿಕೊಳ್ಳುತ್ತಾ, ವಿವಿಧ ರೀತಿನೀತಿಗಳನ್ನು ಒಳಗೊಳ್ಳುತ್ತಾ, ವಿವಿಧ ಮಾದರಿಗಳ ಪಾತ್ರಗಳೆಲ್ಲಾ ಭಾಗವಹಿಸುತ್ತಾ ಬೃಹತ್ತಾಗಿ ಬೆಳೆದು ಮಹಾಭಾರತವಾಯಿತು.

ಮಹಾಭಾರತವೆಂಬ ಗೊಂಡಾರಣ್ಯವನ್ನು ಹೊಕ್ಕು ನೋಡಿದರೆ ನಾವು ದೇಶವೆಂದು ಈಗ ಕರೆಯುವ ಈ ಭೂಭಾಗದಲ್ಲಿ ಎಂತೆಂತಹ ಸಂಸ್ಕೃತಿಗಳಿದ್ದವು, ಸಾಮಾಜಿಕ ಪದ್ಧತಿಗಳಿದ್ದವು, ಜನರಿದ್ದರು, ಎಂತೆಂತಹ ಘನತೆ ಗೌರವಗಳಿದ್ದವು, ಯಾವ್ಯಾವ ಕಾರಣಗಳಿಂದ ಸಾಮಾಜಿಕ ಮತ್ತು ವ್ಯಕ್ತಿಗತ ಅಪಮಾನಗಳು ಮತ್ತು ಸನ್ಮಾನಗಳಾಗುತ್ತಿದ್ದವು? ಎಂತೆಂತಹ ನಮೂನೆಯ ಮನಸ್ಥಿತಿಗಳಿದ್ದವು; ಹೀಗೆ ಬಲು ಸೂಕ್ಷ್ಮ ಮತ್ತು ಸ್ಥೂಲ ವಿಚಾರಗಳೆಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.

ರಾಜಕಾರಣ, ಧರ್ಮಕಾರಣ, ಮಾನುಷಕಾರಣ, ದ್ವೇಷಕಾರಣ, ಮೋಹಕಾರಣ, ಅಹಂಕಾರಕಾರಣ, ದೌರ್ಬಲ್ಯಕಾರಣ. ಹೀಗೆ ನಾನಾ ಕಾರಣಗಳು ಮನುಷ್ಯನಲ್ಲಿ ಮತ್ತು ಮಾನುಷ ಸಮಾಜದಲ್ಲಿ ಉಂಟುಮಾಡುವ ಪರಿಣಾಮಗಳನ್ನು ವಿವರಿಸುತ್ತದೆ ಈ ಮಹಾಭಾರತ. ಚಾತುರ್ವರ್ಣ ವ್ಯವಸ್ಥೆಯು, ಪ್ರಭುತ್ವದ ದಬ್ಬಾಳಿಕೆಯು, ಸ್ವಜನಾಸಕ್ತಿ, ಸ್ವಪರಿವಾರ ಮೋಹವು ಏನೆಲ್ಲಾ ಶೋಷಣೆಗಳನ್ನು ಮಾಡಿತು, ಎಂತೆಂತಹ ದುರಂತಗಳನ್ನು ಕಂಡಿತು ಎಂದು ಕಂಡಹಾಗೇ ವಿವರಿಸುತ್ತದೆ. ಒಳ್ಳೆಯ ಅಥವಾ ಕೆಟ್ಟ ಎಂಬ ಗೆರೆ ಎಳೆದಂತಹ ಸಿದ್ಧ ಮಾದರಿಗಳನ್ನು ಮುಂದಿಡದೇ, ಒಳ್ಳೆಯತನದ ಹಿಂದಿನ ಕರಾಳ ಮುಖವನ್ನು, ಕೆಟ್ಟದೆನ್ನುವುದರ ಹಿಂದಿನ ನೈಜತೆ ಮತ್ತು ಪ್ರಾಮಾಣಿಕತೆಯ ಗುಣವನ್ನು ಗುರುತಿಸುತ್ತದೆ.

ನಿಷ್ಪಕ್ಷಪಾತ ನಿರೂಪಣೆಯೇ ಮಹಾಭಾರತದ ಶಕ್ತಿ ಮತ್ತು ಮೌಲ್ಯ. ಪಕ್ಷಪಾತ ಮಾಡುವ ಕೃಷ್ಣನು ಕೂಡ ಶಾಪಕ್ಕೆ, ದುರ್ವಿಧಿಯ ಸಾವಿಗೆ ಬಲಿಯಾಗುತ್ತಾನೆ. ಒಳ್ಳೆಯವರೆಂದು ಕೃಷ್ಣನಿಂದ ಮತ್ತು ಭೀಷ್ಮಾದಿಗಳಿಂದ ಪ್ರಾಮಾಣೀಕರಿಸಲ್ಪಡುವ ಪಾಂಡವರು ಹಾದಿಯಲ್ಲಿ ಹೆಣಗಳಾಗಿ ಬೀಳುತ್ತಾರೆ. ಇನ್ನು ಪಾತ್ರಗಳೆಂದರೆ ಅವು ಬರಿಯ ವ್ಯಕ್ತಿಗಳಲ್ಲ. ವ್ಯಕ್ತಿತ್ವದ ಮಾದರಿಗಳು. ಶಂತನುವಿನಿಂದ ಹಿಡಿದು ಪರೀಕ್ಷಿತನವರೆಗೂ ಈಗಲೂ ನಾವು ನಮ್ಮನಮ್ಮಲ್ಲಿ ಕಾಣುತ್ತಲೇ ಇರುವ ಹಲವು ಮನಸ್ಥಿತಿಗಳ, ಹಲವು ವ್ಯಕ್ತಿತ್ವಗಳ ಮಾದರಿಗಳು.

ಹಾಗಾಗಿಯೇ ಇದು ಒಂದು ಧಾರ್ಮಿಕ ಗ್ರಂಥವಲ್ಲ. ಈ ನೆಲದ ನಿವಾಸಿಗಳಿಗೆಲ್ಲಾ, ಅವರು ಯಾವುದೇ ಧರ್ಮದವರಾಗಲಿ, ತಮ್ಮತಮ್ಮಲ್ಲಿ ಕಾಣುತ್ತಿರುವ ವ್ಯಕ್ತಿತ್ವಗಳ, ಸಂಘರ್ಷಗಳ, ಬದುಕಿನ ನೋವುನಲಿವುಗಳ ಕಾರಣ ಮತ್ತು ಪರಿಣಾಮಗಳ ಸಮಾಜೋಸಾಂಸ್ಕೃತಿಕ ಕಥನವಿದು. ನಿರಂತರವಾಗಿ ಪ್ರಯೋಗಗಳಿಗೆ ಮತ್ತು ಪರಿವರ್ತನೆಗಳಿಗೆ ಒಳಪಡುತ್ತಿದ್ದ ತಾತ್ವಿಕತೆಗಳ ವಿಶ್ಲೇಷಣೆ ಇದು. ವಿಶಾಲ ಭೂಭಾಗದ ಸಂಕೀರ್ಣ ಸಂಸ್ಕೃತಿಗೆ ಇದೊಂದು ರೂಪಕ ಇತಿಹಾಸ. ಯಾರೂ ಅಮುಖ್ಯರಲ್ಲದೇ ಸಮಾಜದ ಮತ್ತು ವ್ಯಕ್ತಿಗಳ ಆಗುಹೋಗುಗಳಿಗೆ ಕಾರಣ ಕರ್ತೃಗಳಾದವರ ಒಂದು ಮಹಾಕಾವ್ಯ.

ಈ ಮಹಾಕಾವ್ಯದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಮನೋವೈಜ್ಞಾನಿಕ ವಿಶ್ಲೇಷಣೆಗಳಿಗೆ ದಾರಿ ತೋರುವ ಕೃತಿ ದೇವದತ್ತ ಪಟ್ನಾಯಕರವರ ಜಯ. ಗಿರಡ್ಡಿ ಗೋವಿಂದರಾಜ ಇದನ್ನು ಕನ್ನಡಕ್ಕೆ ತಂದಿದ್ದಾರೆ.

ಈಗ ನಾವು ತಿಳಿದಿರುವ ರಿಲೀಜಿಯನ್ ಎಂಬ ಧರ್ಮದ ಪರಿಕಲ್ಪನೆಯೇ ಇಲ್ಲದಿದ್ದ ಮಹಾಭಾರತದ ಕಾಲದಲ್ಲಿಯೂ ಧರ್ಮದ ಬಗ್ಗೆ ಮಾತಾಡುತ್ತಾರೆ. ಅದನ್ನು ಎತ್ತಿ ಹಿಡಿಯುತ್ತಾರೆ. ಅದನ್ನು ಪಾಲಿಸುತ್ತಾರೆ. ಅದಕ್ಕಾಗಿ ಬದುಕುತ್ತಾರೆ. ಅದಕ್ಕಾಗಿ ಸಾಯುತ್ತಾರೆ. ಆದರೆ ಆ ಧರ್ಮವೆಂಬುದು ಅಲ್ಲಿ ಸ್ವಧರ್ಮ ಎಂಬ ಒಬ್ಬರ ಅಥವಾ ಒಂದರ ಅಥವಾ ಒಂದು ವ್ಯವಸ್ಥೆಯ ಮೂಲ ಗುಣಸ್ವಭಾವ, ರೀತಿ ಮತ್ತು ನೀತಿ. ಅದೊಂದು ಜೈವಿಕ, ಆಧ್ಯಾತ್ಮಿಕ, ತಾತ್ವಿಕ ಮತ್ತು ಸಾಮಾಜಿಕ ಅಸ್ತಿತ್ವಗಳ ಸೂಕ್ಷ್ಮ ವಿಚಾರ.

ಮಹಾಭಾರತ ಭಾರತದ ಒಂದು ಹೆಮ್ಮೆಯ ಕಾವ್ಯ. ಆದರೆ ನಿಷ್ಪಕ್ಷಪಾತವಾದ ಈ ಮಹಾಭಾರತವನ್ನು ಪರ ಅಥವಾ ವಿರೋಧದ ನೆಲೆಗಟ್ಟುಗಳಿಂದ ನೋಡದೇ ರೂಪಕ ಇತಿಹಾಸವನ್ನು ಅಭ್ಯಾಸ ಮಾಡುವಂತೆ ದೇವದತ್ತ ಜಯವನ್ನು ಬರೆದು ಮಹದುಪಕಾರ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...