Homeಮುಖಪುಟಜಯ ಮಹಾಭಾರತದ ಮರುಕಥನ

ಜಯ ಮಹಾಭಾರತದ ಮರುಕಥನ

- Advertisement -
- Advertisement -

ಭಾರತದ ಮಹಾ ಕಾವ್ಯವಾದ ಮಹಾಭಾರತದ ಮೂಲಕೃತಿ “ಜಯ”. ಅದೇನೂ ಈಗ ನಾವು ಕಾಣುತ್ತಿರುವ ಮಹಾಭಾರತದಷ್ಟು ದೊಡ್ಡದಾಗಿರಲಿಲ್ಲ. ಕುಟುಂಬವೆರಡರ ದಾಯಾದಿ ಕಲಹದ ಕತೆಯು ಬಾಯಿಂದಬಾಯಿಗೆ ಹರಡಿತು. ಸ್ಥಳದಿಂದ ಸ್ಥಳಕ್ಕೆ ಸಂಚರಿಸಿತು. ಪೀಳಿಗೆಗಳಿಂದ ಪೀಳಿಗೆಗಳಿಗೆ ದಾಟಿತು. ಹಾಗೆ ಹರಡುತ್ತಾ, ಸಂಚರಿಸುತ್ತಾ, ದಾಟುತ್ತಾ ವಿವಿಧ ಪ್ರದೇಶಗಳ ವಿವಿಧ ಸಂಸ್ಕೃತಿಗಳನ್ನು ತನ್ನದಾಗಿಸಿಕೊಳ್ಳುತ್ತಾ, ವಿವಿಧ ರೀತಿನೀತಿಗಳನ್ನು ಒಳಗೊಳ್ಳುತ್ತಾ, ವಿವಿಧ ಮಾದರಿಗಳ ಪಾತ್ರಗಳೆಲ್ಲಾ ಭಾಗವಹಿಸುತ್ತಾ ಬೃಹತ್ತಾಗಿ ಬೆಳೆದು ಮಹಾಭಾರತವಾಯಿತು.

ಮಹಾಭಾರತವೆಂಬ ಗೊಂಡಾರಣ್ಯವನ್ನು ಹೊಕ್ಕು ನೋಡಿದರೆ ನಾವು ದೇಶವೆಂದು ಈಗ ಕರೆಯುವ ಈ ಭೂಭಾಗದಲ್ಲಿ ಎಂತೆಂತಹ ಸಂಸ್ಕೃತಿಗಳಿದ್ದವು, ಸಾಮಾಜಿಕ ಪದ್ಧತಿಗಳಿದ್ದವು, ಜನರಿದ್ದರು, ಎಂತೆಂತಹ ಘನತೆ ಗೌರವಗಳಿದ್ದವು, ಯಾವ್ಯಾವ ಕಾರಣಗಳಿಂದ ಸಾಮಾಜಿಕ ಮತ್ತು ವ್ಯಕ್ತಿಗತ ಅಪಮಾನಗಳು ಮತ್ತು ಸನ್ಮಾನಗಳಾಗುತ್ತಿದ್ದವು? ಎಂತೆಂತಹ ನಮೂನೆಯ ಮನಸ್ಥಿತಿಗಳಿದ್ದವು; ಹೀಗೆ ಬಲು ಸೂಕ್ಷ್ಮ ಮತ್ತು ಸ್ಥೂಲ ವಿಚಾರಗಳೆಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.

ರಾಜಕಾರಣ, ಧರ್ಮಕಾರಣ, ಮಾನುಷಕಾರಣ, ದ್ವೇಷಕಾರಣ, ಮೋಹಕಾರಣ, ಅಹಂಕಾರಕಾರಣ, ದೌರ್ಬಲ್ಯಕಾರಣ. ಹೀಗೆ ನಾನಾ ಕಾರಣಗಳು ಮನುಷ್ಯನಲ್ಲಿ ಮತ್ತು ಮಾನುಷ ಸಮಾಜದಲ್ಲಿ ಉಂಟುಮಾಡುವ ಪರಿಣಾಮಗಳನ್ನು ವಿವರಿಸುತ್ತದೆ ಈ ಮಹಾಭಾರತ. ಚಾತುರ್ವರ್ಣ ವ್ಯವಸ್ಥೆಯು, ಪ್ರಭುತ್ವದ ದಬ್ಬಾಳಿಕೆಯು, ಸ್ವಜನಾಸಕ್ತಿ, ಸ್ವಪರಿವಾರ ಮೋಹವು ಏನೆಲ್ಲಾ ಶೋಷಣೆಗಳನ್ನು ಮಾಡಿತು, ಎಂತೆಂತಹ ದುರಂತಗಳನ್ನು ಕಂಡಿತು ಎಂದು ಕಂಡಹಾಗೇ ವಿವರಿಸುತ್ತದೆ. ಒಳ್ಳೆಯ ಅಥವಾ ಕೆಟ್ಟ ಎಂಬ ಗೆರೆ ಎಳೆದಂತಹ ಸಿದ್ಧ ಮಾದರಿಗಳನ್ನು ಮುಂದಿಡದೇ, ಒಳ್ಳೆಯತನದ ಹಿಂದಿನ ಕರಾಳ ಮುಖವನ್ನು, ಕೆಟ್ಟದೆನ್ನುವುದರ ಹಿಂದಿನ ನೈಜತೆ ಮತ್ತು ಪ್ರಾಮಾಣಿಕತೆಯ ಗುಣವನ್ನು ಗುರುತಿಸುತ್ತದೆ.

ನಿಷ್ಪಕ್ಷಪಾತ ನಿರೂಪಣೆಯೇ ಮಹಾಭಾರತದ ಶಕ್ತಿ ಮತ್ತು ಮೌಲ್ಯ. ಪಕ್ಷಪಾತ ಮಾಡುವ ಕೃಷ್ಣನು ಕೂಡ ಶಾಪಕ್ಕೆ, ದುರ್ವಿಧಿಯ ಸಾವಿಗೆ ಬಲಿಯಾಗುತ್ತಾನೆ. ಒಳ್ಳೆಯವರೆಂದು ಕೃಷ್ಣನಿಂದ ಮತ್ತು ಭೀಷ್ಮಾದಿಗಳಿಂದ ಪ್ರಾಮಾಣೀಕರಿಸಲ್ಪಡುವ ಪಾಂಡವರು ಹಾದಿಯಲ್ಲಿ ಹೆಣಗಳಾಗಿ ಬೀಳುತ್ತಾರೆ. ಇನ್ನು ಪಾತ್ರಗಳೆಂದರೆ ಅವು ಬರಿಯ ವ್ಯಕ್ತಿಗಳಲ್ಲ. ವ್ಯಕ್ತಿತ್ವದ ಮಾದರಿಗಳು. ಶಂತನುವಿನಿಂದ ಹಿಡಿದು ಪರೀಕ್ಷಿತನವರೆಗೂ ಈಗಲೂ ನಾವು ನಮ್ಮನಮ್ಮಲ್ಲಿ ಕಾಣುತ್ತಲೇ ಇರುವ ಹಲವು ಮನಸ್ಥಿತಿಗಳ, ಹಲವು ವ್ಯಕ್ತಿತ್ವಗಳ ಮಾದರಿಗಳು.

ಹಾಗಾಗಿಯೇ ಇದು ಒಂದು ಧಾರ್ಮಿಕ ಗ್ರಂಥವಲ್ಲ. ಈ ನೆಲದ ನಿವಾಸಿಗಳಿಗೆಲ್ಲಾ, ಅವರು ಯಾವುದೇ ಧರ್ಮದವರಾಗಲಿ, ತಮ್ಮತಮ್ಮಲ್ಲಿ ಕಾಣುತ್ತಿರುವ ವ್ಯಕ್ತಿತ್ವಗಳ, ಸಂಘರ್ಷಗಳ, ಬದುಕಿನ ನೋವುನಲಿವುಗಳ ಕಾರಣ ಮತ್ತು ಪರಿಣಾಮಗಳ ಸಮಾಜೋಸಾಂಸ್ಕೃತಿಕ ಕಥನವಿದು. ನಿರಂತರವಾಗಿ ಪ್ರಯೋಗಗಳಿಗೆ ಮತ್ತು ಪರಿವರ್ತನೆಗಳಿಗೆ ಒಳಪಡುತ್ತಿದ್ದ ತಾತ್ವಿಕತೆಗಳ ವಿಶ್ಲೇಷಣೆ ಇದು. ವಿಶಾಲ ಭೂಭಾಗದ ಸಂಕೀರ್ಣ ಸಂಸ್ಕೃತಿಗೆ ಇದೊಂದು ರೂಪಕ ಇತಿಹಾಸ. ಯಾರೂ ಅಮುಖ್ಯರಲ್ಲದೇ ಸಮಾಜದ ಮತ್ತು ವ್ಯಕ್ತಿಗಳ ಆಗುಹೋಗುಗಳಿಗೆ ಕಾರಣ ಕರ್ತೃಗಳಾದವರ ಒಂದು ಮಹಾಕಾವ್ಯ.

ಈ ಮಹಾಕಾವ್ಯದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಮನೋವೈಜ್ಞಾನಿಕ ವಿಶ್ಲೇಷಣೆಗಳಿಗೆ ದಾರಿ ತೋರುವ ಕೃತಿ ದೇವದತ್ತ ಪಟ್ನಾಯಕರವರ ಜಯ. ಗಿರಡ್ಡಿ ಗೋವಿಂದರಾಜ ಇದನ್ನು ಕನ್ನಡಕ್ಕೆ ತಂದಿದ್ದಾರೆ.

ಈಗ ನಾವು ತಿಳಿದಿರುವ ರಿಲೀಜಿಯನ್ ಎಂಬ ಧರ್ಮದ ಪರಿಕಲ್ಪನೆಯೇ ಇಲ್ಲದಿದ್ದ ಮಹಾಭಾರತದ ಕಾಲದಲ್ಲಿಯೂ ಧರ್ಮದ ಬಗ್ಗೆ ಮಾತಾಡುತ್ತಾರೆ. ಅದನ್ನು ಎತ್ತಿ ಹಿಡಿಯುತ್ತಾರೆ. ಅದನ್ನು ಪಾಲಿಸುತ್ತಾರೆ. ಅದಕ್ಕಾಗಿ ಬದುಕುತ್ತಾರೆ. ಅದಕ್ಕಾಗಿ ಸಾಯುತ್ತಾರೆ. ಆದರೆ ಆ ಧರ್ಮವೆಂಬುದು ಅಲ್ಲಿ ಸ್ವಧರ್ಮ ಎಂಬ ಒಬ್ಬರ ಅಥವಾ ಒಂದರ ಅಥವಾ ಒಂದು ವ್ಯವಸ್ಥೆಯ ಮೂಲ ಗುಣಸ್ವಭಾವ, ರೀತಿ ಮತ್ತು ನೀತಿ. ಅದೊಂದು ಜೈವಿಕ, ಆಧ್ಯಾತ್ಮಿಕ, ತಾತ್ವಿಕ ಮತ್ತು ಸಾಮಾಜಿಕ ಅಸ್ತಿತ್ವಗಳ ಸೂಕ್ಷ್ಮ ವಿಚಾರ.

ಮಹಾಭಾರತ ಭಾರತದ ಒಂದು ಹೆಮ್ಮೆಯ ಕಾವ್ಯ. ಆದರೆ ನಿಷ್ಪಕ್ಷಪಾತವಾದ ಈ ಮಹಾಭಾರತವನ್ನು ಪರ ಅಥವಾ ವಿರೋಧದ ನೆಲೆಗಟ್ಟುಗಳಿಂದ ನೋಡದೇ ರೂಪಕ ಇತಿಹಾಸವನ್ನು ಅಭ್ಯಾಸ ಮಾಡುವಂತೆ ದೇವದತ್ತ ಜಯವನ್ನು ಬರೆದು ಮಹದುಪಕಾರ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...