Homeಮುಖಪುಟಜಯ ಮಹಾಭಾರತದ ಮರುಕಥನ

ಜಯ ಮಹಾಭಾರತದ ಮರುಕಥನ

- Advertisement -
- Advertisement -

ಭಾರತದ ಮಹಾ ಕಾವ್ಯವಾದ ಮಹಾಭಾರತದ ಮೂಲಕೃತಿ “ಜಯ”. ಅದೇನೂ ಈಗ ನಾವು ಕಾಣುತ್ತಿರುವ ಮಹಾಭಾರತದಷ್ಟು ದೊಡ್ಡದಾಗಿರಲಿಲ್ಲ. ಕುಟುಂಬವೆರಡರ ದಾಯಾದಿ ಕಲಹದ ಕತೆಯು ಬಾಯಿಂದಬಾಯಿಗೆ ಹರಡಿತು. ಸ್ಥಳದಿಂದ ಸ್ಥಳಕ್ಕೆ ಸಂಚರಿಸಿತು. ಪೀಳಿಗೆಗಳಿಂದ ಪೀಳಿಗೆಗಳಿಗೆ ದಾಟಿತು. ಹಾಗೆ ಹರಡುತ್ತಾ, ಸಂಚರಿಸುತ್ತಾ, ದಾಟುತ್ತಾ ವಿವಿಧ ಪ್ರದೇಶಗಳ ವಿವಿಧ ಸಂಸ್ಕೃತಿಗಳನ್ನು ತನ್ನದಾಗಿಸಿಕೊಳ್ಳುತ್ತಾ, ವಿವಿಧ ರೀತಿನೀತಿಗಳನ್ನು ಒಳಗೊಳ್ಳುತ್ತಾ, ವಿವಿಧ ಮಾದರಿಗಳ ಪಾತ್ರಗಳೆಲ್ಲಾ ಭಾಗವಹಿಸುತ್ತಾ ಬೃಹತ್ತಾಗಿ ಬೆಳೆದು ಮಹಾಭಾರತವಾಯಿತು.

ಮಹಾಭಾರತವೆಂಬ ಗೊಂಡಾರಣ್ಯವನ್ನು ಹೊಕ್ಕು ನೋಡಿದರೆ ನಾವು ದೇಶವೆಂದು ಈಗ ಕರೆಯುವ ಈ ಭೂಭಾಗದಲ್ಲಿ ಎಂತೆಂತಹ ಸಂಸ್ಕೃತಿಗಳಿದ್ದವು, ಸಾಮಾಜಿಕ ಪದ್ಧತಿಗಳಿದ್ದವು, ಜನರಿದ್ದರು, ಎಂತೆಂತಹ ಘನತೆ ಗೌರವಗಳಿದ್ದವು, ಯಾವ್ಯಾವ ಕಾರಣಗಳಿಂದ ಸಾಮಾಜಿಕ ಮತ್ತು ವ್ಯಕ್ತಿಗತ ಅಪಮಾನಗಳು ಮತ್ತು ಸನ್ಮಾನಗಳಾಗುತ್ತಿದ್ದವು? ಎಂತೆಂತಹ ನಮೂನೆಯ ಮನಸ್ಥಿತಿಗಳಿದ್ದವು; ಹೀಗೆ ಬಲು ಸೂಕ್ಷ್ಮ ಮತ್ತು ಸ್ಥೂಲ ವಿಚಾರಗಳೆಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.

ರಾಜಕಾರಣ, ಧರ್ಮಕಾರಣ, ಮಾನುಷಕಾರಣ, ದ್ವೇಷಕಾರಣ, ಮೋಹಕಾರಣ, ಅಹಂಕಾರಕಾರಣ, ದೌರ್ಬಲ್ಯಕಾರಣ. ಹೀಗೆ ನಾನಾ ಕಾರಣಗಳು ಮನುಷ್ಯನಲ್ಲಿ ಮತ್ತು ಮಾನುಷ ಸಮಾಜದಲ್ಲಿ ಉಂಟುಮಾಡುವ ಪರಿಣಾಮಗಳನ್ನು ವಿವರಿಸುತ್ತದೆ ಈ ಮಹಾಭಾರತ. ಚಾತುರ್ವರ್ಣ ವ್ಯವಸ್ಥೆಯು, ಪ್ರಭುತ್ವದ ದಬ್ಬಾಳಿಕೆಯು, ಸ್ವಜನಾಸಕ್ತಿ, ಸ್ವಪರಿವಾರ ಮೋಹವು ಏನೆಲ್ಲಾ ಶೋಷಣೆಗಳನ್ನು ಮಾಡಿತು, ಎಂತೆಂತಹ ದುರಂತಗಳನ್ನು ಕಂಡಿತು ಎಂದು ಕಂಡಹಾಗೇ ವಿವರಿಸುತ್ತದೆ. ಒಳ್ಳೆಯ ಅಥವಾ ಕೆಟ್ಟ ಎಂಬ ಗೆರೆ ಎಳೆದಂತಹ ಸಿದ್ಧ ಮಾದರಿಗಳನ್ನು ಮುಂದಿಡದೇ, ಒಳ್ಳೆಯತನದ ಹಿಂದಿನ ಕರಾಳ ಮುಖವನ್ನು, ಕೆಟ್ಟದೆನ್ನುವುದರ ಹಿಂದಿನ ನೈಜತೆ ಮತ್ತು ಪ್ರಾಮಾಣಿಕತೆಯ ಗುಣವನ್ನು ಗುರುತಿಸುತ್ತದೆ.

ನಿಷ್ಪಕ್ಷಪಾತ ನಿರೂಪಣೆಯೇ ಮಹಾಭಾರತದ ಶಕ್ತಿ ಮತ್ತು ಮೌಲ್ಯ. ಪಕ್ಷಪಾತ ಮಾಡುವ ಕೃಷ್ಣನು ಕೂಡ ಶಾಪಕ್ಕೆ, ದುರ್ವಿಧಿಯ ಸಾವಿಗೆ ಬಲಿಯಾಗುತ್ತಾನೆ. ಒಳ್ಳೆಯವರೆಂದು ಕೃಷ್ಣನಿಂದ ಮತ್ತು ಭೀಷ್ಮಾದಿಗಳಿಂದ ಪ್ರಾಮಾಣೀಕರಿಸಲ್ಪಡುವ ಪಾಂಡವರು ಹಾದಿಯಲ್ಲಿ ಹೆಣಗಳಾಗಿ ಬೀಳುತ್ತಾರೆ. ಇನ್ನು ಪಾತ್ರಗಳೆಂದರೆ ಅವು ಬರಿಯ ವ್ಯಕ್ತಿಗಳಲ್ಲ. ವ್ಯಕ್ತಿತ್ವದ ಮಾದರಿಗಳು. ಶಂತನುವಿನಿಂದ ಹಿಡಿದು ಪರೀಕ್ಷಿತನವರೆಗೂ ಈಗಲೂ ನಾವು ನಮ್ಮನಮ್ಮಲ್ಲಿ ಕಾಣುತ್ತಲೇ ಇರುವ ಹಲವು ಮನಸ್ಥಿತಿಗಳ, ಹಲವು ವ್ಯಕ್ತಿತ್ವಗಳ ಮಾದರಿಗಳು.

ಹಾಗಾಗಿಯೇ ಇದು ಒಂದು ಧಾರ್ಮಿಕ ಗ್ರಂಥವಲ್ಲ. ಈ ನೆಲದ ನಿವಾಸಿಗಳಿಗೆಲ್ಲಾ, ಅವರು ಯಾವುದೇ ಧರ್ಮದವರಾಗಲಿ, ತಮ್ಮತಮ್ಮಲ್ಲಿ ಕಾಣುತ್ತಿರುವ ವ್ಯಕ್ತಿತ್ವಗಳ, ಸಂಘರ್ಷಗಳ, ಬದುಕಿನ ನೋವುನಲಿವುಗಳ ಕಾರಣ ಮತ್ತು ಪರಿಣಾಮಗಳ ಸಮಾಜೋಸಾಂಸ್ಕೃತಿಕ ಕಥನವಿದು. ನಿರಂತರವಾಗಿ ಪ್ರಯೋಗಗಳಿಗೆ ಮತ್ತು ಪರಿವರ್ತನೆಗಳಿಗೆ ಒಳಪಡುತ್ತಿದ್ದ ತಾತ್ವಿಕತೆಗಳ ವಿಶ್ಲೇಷಣೆ ಇದು. ವಿಶಾಲ ಭೂಭಾಗದ ಸಂಕೀರ್ಣ ಸಂಸ್ಕೃತಿಗೆ ಇದೊಂದು ರೂಪಕ ಇತಿಹಾಸ. ಯಾರೂ ಅಮುಖ್ಯರಲ್ಲದೇ ಸಮಾಜದ ಮತ್ತು ವ್ಯಕ್ತಿಗಳ ಆಗುಹೋಗುಗಳಿಗೆ ಕಾರಣ ಕರ್ತೃಗಳಾದವರ ಒಂದು ಮಹಾಕಾವ್ಯ.

ಈ ಮಹಾಕಾವ್ಯದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಮನೋವೈಜ್ಞಾನಿಕ ವಿಶ್ಲೇಷಣೆಗಳಿಗೆ ದಾರಿ ತೋರುವ ಕೃತಿ ದೇವದತ್ತ ಪಟ್ನಾಯಕರವರ ಜಯ. ಗಿರಡ್ಡಿ ಗೋವಿಂದರಾಜ ಇದನ್ನು ಕನ್ನಡಕ್ಕೆ ತಂದಿದ್ದಾರೆ.

ಈಗ ನಾವು ತಿಳಿದಿರುವ ರಿಲೀಜಿಯನ್ ಎಂಬ ಧರ್ಮದ ಪರಿಕಲ್ಪನೆಯೇ ಇಲ್ಲದಿದ್ದ ಮಹಾಭಾರತದ ಕಾಲದಲ್ಲಿಯೂ ಧರ್ಮದ ಬಗ್ಗೆ ಮಾತಾಡುತ್ತಾರೆ. ಅದನ್ನು ಎತ್ತಿ ಹಿಡಿಯುತ್ತಾರೆ. ಅದನ್ನು ಪಾಲಿಸುತ್ತಾರೆ. ಅದಕ್ಕಾಗಿ ಬದುಕುತ್ತಾರೆ. ಅದಕ್ಕಾಗಿ ಸಾಯುತ್ತಾರೆ. ಆದರೆ ಆ ಧರ್ಮವೆಂಬುದು ಅಲ್ಲಿ ಸ್ವಧರ್ಮ ಎಂಬ ಒಬ್ಬರ ಅಥವಾ ಒಂದರ ಅಥವಾ ಒಂದು ವ್ಯವಸ್ಥೆಯ ಮೂಲ ಗುಣಸ್ವಭಾವ, ರೀತಿ ಮತ್ತು ನೀತಿ. ಅದೊಂದು ಜೈವಿಕ, ಆಧ್ಯಾತ್ಮಿಕ, ತಾತ್ವಿಕ ಮತ್ತು ಸಾಮಾಜಿಕ ಅಸ್ತಿತ್ವಗಳ ಸೂಕ್ಷ್ಮ ವಿಚಾರ.

ಮಹಾಭಾರತ ಭಾರತದ ಒಂದು ಹೆಮ್ಮೆಯ ಕಾವ್ಯ. ಆದರೆ ನಿಷ್ಪಕ್ಷಪಾತವಾದ ಈ ಮಹಾಭಾರತವನ್ನು ಪರ ಅಥವಾ ವಿರೋಧದ ನೆಲೆಗಟ್ಟುಗಳಿಂದ ನೋಡದೇ ರೂಪಕ ಇತಿಹಾಸವನ್ನು ಅಭ್ಯಾಸ ಮಾಡುವಂತೆ ದೇವದತ್ತ ಜಯವನ್ನು ಬರೆದು ಮಹದುಪಕಾರ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...