Homeಮುಖಪುಟಮಹಾಭಾರತದ ದ್ರೌಪದಿಯಂತಹ ನಿದರ್ಶನದ ಹೊರತಾಗಿಯೂ ಮಹಿಳೆಯನ್ನು ಆಸ್ತಿಯಂತೆ ಪರಿಗಣಿಸಲಾಗಿದೆ: ದೆಹಲಿ ಹೈಕೋರ್ಟ್

ಮಹಾಭಾರತದ ದ್ರೌಪದಿಯಂತಹ ನಿದರ್ಶನದ ಹೊರತಾಗಿಯೂ ಮಹಿಳೆಯನ್ನು ಆಸ್ತಿಯಂತೆ ಪರಿಗಣಿಸಲಾಗಿದೆ: ದೆಹಲಿ ಹೈಕೋರ್ಟ್

- Advertisement -
- Advertisement -

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 497 ರ ಅಡಿಯಲ್ಲಿ ರದ್ದುಗೊಂಡಿರುವ ವ್ಯಭಿಚಾರದ ಆರೋಪಗಳನ್ನು ಒಳಗೊಂಡ 2010 ರ ಪ್ರಕರಣವನ್ನು ತೀರ್ಪು ನೀಡುವಾಗ, ಮಹಾಭಾರತದಲ್ಲಿ ದ್ರೌಪದಿಯನ್ನು ನಡೆಸಿಕೊಂಡ ರೀತಿಯನ್ನು ದೆಹಲಿ ಹೈಕೋರ್ಟ್ ಉಲ್ಲೇಖಿಸಿದ್ದು, ಈ ಮೂಲಕ ಮಹಿಳೆಯರನ್ನು ಆಸ್ತಿಯಂತೆ ಪರಿಗಣಿಸುವುದರ ವಿರುದ್ಧ ಎಚ್ಚರಿಕೆ ನೀಡಿದೆ. ಮಹಾಭಾರತದ ದ್ರೌಪದಿಯಂತಹ

ಏಪ್ರಿಲ್ 17 ರಂದು ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ನೀಡಿದ್ದ ತೀರ್ಪಿನಲ್ಲಿ,  ಮಹಾಭಾರತದಲ್ಲಿ ದ್ರೌಪದಿಯ ಸ್ಥಿತಿ ಮತ್ತು ನಂತರದ ಪರಿಣಾಮಗಳನ್ನು ಉತ್ತಮವಾಗಿ ದಾಖಲಿಸಲಾಗಿದ್ದರೂ, ಮಹಿಳೆಯರು ಆಸ್ತಿ ಎಂಬ ಸ್ತ್ರೀದ್ವೇಷ ಮತ್ತು ಪಿತೃಪ್ರಧಾನ ಮನಸ್ಥಿತಿ ನಮ್ಮ ಸಮಾಜದಲ್ಲಿ ಚಾಲ್ತಿಯಲ್ಲಿದೆ ಎಂದು ಹೇಳಿದ್ದಾರೆ.

“ಮಹಿಳೆಯನ್ನು ಗಂಡನ ಆಸ್ತಿ ಎಂದು ಪರಿಗಣಿಸುವುದು ಮತ್ತು ಅದರ ವಿನಾಶಕಾರಿ ಪರಿಣಾಮಗಳನ್ನು ಮಹಾಭಾರತದಲ್ಲಿ ಚೆನ್ನಾಗಿ ದಾಖಲಿಸಲಾಗಿದೆ. ಇದರಲ್ಲಿ ದ್ರೌಪದಿಯನ್ನು ಅವಳ ಸ್ವಂತ ಪತಿ ಯುಧಿಷ್ಠಿರನು ಜೂಜಾಟದಲ್ಲಿ ಪಣಕ್ಕಿಟ್ಟನು. ಅಲ್ಲಿ ಇತರ ನಾಲ್ವರು ಸಹೋದರರು ಮೂಕ ಪ್ರೇಕ್ಷಕರಾಗಿದ್ದರು ಮತ್ತು ದ್ರೌಪದಿಗೆ ಅವಳ ಘನತೆಗಾಗಿ ಪ್ರತಿಭಟಿಸಲು ಯಾವುದೇ ಧ್ವನಿ ಇರಲಿಲ್ಲ.” ಎಂದು ಅವರು ಹೇಳಿದ್ದಾರೆ.

“ಅದು ಸಂಭವಿಸಿದಂತೆ, ಅವಳು ಜೂಜಾಟದಲ್ಲಿ ಕಳೆದುಹೋದಳು ಮತ್ತು ನಂತರ ನಡೆದದ್ದು ಮಹಾಭಾರತದ ಮಹಾ ಯುದ್ಧವಾಗಿದ್ದು, ಸಾಮೂಹಿಕ ಜೀವಹಾನಿ ಮತ್ತು ಕುಟುಂಬದ ಅನೇಕ ಸದಸ್ಯರು ನಾಶವಾಗಲು ಕಾರಣವಾಯಿತು. ಮಹಿಳೆಯನ್ನು ಆಸ್ತಿಯಾಗಿ ಪರಿಗಣಿಸುವ ಅಸಂಬದ್ಧತೆಯ ಪರಿಣಾಮವನ್ನು ಪ್ರದರ್ಶಿಸಲು ಅಂತಹ ಉದಾಹರಣೆಯಿದ್ದರೂ, ಜೋಸೆಫ್ ಶೈನ್ (ಸುಪ್ರಾ) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೆಕ್ಷನ್ 497 ಐಪಿಸಿಯನ್ನು ಅಸಂವಿಧಾನಿಕ ಎಂದು ಘೋಷಿಸಿದಾಗ ಮಾತ್ರ ನಮ್ಮ ಸಮಾಜದ ಸ್ತ್ರೀದ್ವೇಷಿ ಮನಸ್ಥಿತಿ ಇದನ್ನು ಅರ್ಥಮಾಡಿಕೊಂಡಿತು” ಎಂದು ನ್ಯಾಯಾಲಯ ಹೇಳಿದೆ.

ಐಪಿಸಿಯ ಸೆಕ್ಷನ್ 497 ವ್ಯಭಿಚಾರದ ಅಪರಾಧವನ್ನು ಅಪರಾಧೀಕರಿಸಲು ಬಳಸಲಾಗುತ್ತಿತ್ತು, ಆದರೆ ವಿವಾಹಿತ ಮಹಿಳೆ ಸಂಬಂಧ ಹೊಂದಿದ್ದ ಪುರುಷನನ್ನು ಮಾತ್ರ ಹೊಣೆಗಾರರನ್ನಾಗಿ ಮಾಡುತ್ತದೆ. ಇದಲ್ಲದೆ, ಮಹಿಳೆಯ ಪತಿ ಅಂತಹ ಸಂಬಂಧಕ್ಕೆ ಒಪ್ಪಿಗೆ ನೀಡಿದರೆ, ಯಾವುದೇ ಅಪರಾಧ ಆಗಿ ಪರಿಗಣಿಸುತ್ತಿರಲಿಲ್ಲ. 2018 ರಲ್ಲಿ, ಸುಪ್ರೀಂ ಕೋರ್ಟ್ ಐಪಿಸಿಯ ಸೆಕ್ಷನ್ 497 ಅನ್ನು ಅಸಂವಿಧಾನಿಕ ಎಂದು ಘೋಷಿಸಿತು. ಆದಾಗ್ಯೂ, ದೆಹಲಿ ಹೈಕೋರ್ಟ್‌ನ ಈ ವ್ಯಭಿಚಾರ ಪ್ರಕರಣವು 2010 ರ ಹಿಂದಿನದ್ದಾಗಿದೆ.

ಈ ಪ್ರಕರಣವು 1998 ರಲ್ಲಿ ವಿವಾಹವಾದ ದಂಪತಿಗಳಿಗೆ ಸಂಬಂಧಿಸಿದೆ. 2010 ರಲ್ಲಿ, ಪತಿಯು ತನ್ನ ಹೆಂಡತಿ ಇನ್ನೊಬ್ಬ ಪುರುಷನೊಂದಿಗೆ ವ್ಯಭಿಚಾರ ಸಂಬಂಧ ಹೊಂದಿದ್ದಾಳೆಂದು ಕಂಡುಕೊಂಡಿದ್ದಾಗಿ ಆರೋಪಿಸಲಾಗಿದೆ. ತನ್ನ ಹೆಂಡತಿಯ ಕರೆ ದಾಖಲೆಗಳನ್ನು ಪರಿಶೀಲಿಸಿದಾಗ ಅವಳು ರಾತ್ರಿ ವೇಳೆ ಆ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಳು, ಜೊತಗೆ ಲಕ್ನೋದ ಹೋಟೆಲ್‌ನಲ್ಲಿ ಆ ವ್ಯಕ್ತಿಯೊಂದಿಗೆ ರಾತ್ರಿ ತಂಗಿದ್ದಳು ಎಂದು ಅವನು ಕಂಡುಕೊಂಡಿದ್ದನು.

ಮೊದಲು ಅವನು ತನ್ನ ಹೆಂಡತಿಗೆ ವ್ಯಭಿಚಾರವನ್ನು ನಿಲ್ಲಿಸುವಂತೆ ಕಾನೂನು ನೋಟಿಸ್ ಜಾರಿ ಮಾಡಿದನು. ನಂತರ, ಅವಳು ವಿವಾಹೇತರ ಸಂಬಂಧ ಹೊಂದಿದ್ದಳು ಎಂದು ಹೇಳಲಾದ ಪುರುಷನ ವಿರುದ್ಧ ವ್ಯಭಿಚಾರದ ಕ್ರಿಮಿನಲ್ ದೂರು ದಾಖಲಿಸಿದ್ದರು. ಅದಾಗ್ಯೂ, ವಿಚಾರಣಾ ನ್ಯಾಯಾಲಯವು ಅವರ ಪತ್ನಿ ಮತ್ತು ವ್ಯಕ್ತಿಯ ನಡುವೆ ಲೈಂಗಿಕ ಸಂಬಂಧವಿರುವ ಯಾವುದೆ ಸಾಕ್ಷಿ ಇಲ್ಲದ ಕಾರಣ ವ್ಯಭಿಚಾರ ಆರೋಪದಿಂದ ಬಿಡುಗಡೆ ಮಾಡಿತ್ತು. ಅದಾಗ್ಯೂ, ಈ ತೀರ್ಪಿನ ವಿರುದ್ಧ ಮಹಿಳೆಯ ಪತಿ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಸಿ ಸೆಷನ್ಸ್ ನ್ಯಾಯಾಲಯ ತೀರ್ಪನ್ನು ರದ್ದುಗೊಳಿತ್ತು, ಜೊತೆಗೆ ಪತ್ನಿಯ ಜೊತೆಗೆ ಸಂಬಂಧವಿದೆ ಎಂದು ಆರೋಪಿಸಲಾದ ವ್ಯಕ್ತಿಗೆ ಕ್ರಿಮಿನಲ್ ವಿಚಾರಣೆಯನ್ನು ಎದುರಿಸಲು ಸಮನ್ಸ್ ನೀಡಿತ್ತು.

ಇದರ ನಂತರ ವ್ಯಕ್ತಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ತನಗೆ ನೀಡಲಾದ ಸಮನ್ಸ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದರು. ಈ ಮಧ್ಯೆ, ಪತ್ನಿ 2016 ರಲ್ಲಿ ತನ್ನ ಪತಿಯಿಂದ ವಿಚ್ಛೇದನ ಪಡೆದಿದ್ದರು.

ಐಪಿಸಿ ಸೆಕ್ಷನ್ 497 ಅನ್ನು ಅಸಂವಿಧಾನಿಕ ಎಂದು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ನೀಡಿದ 2018 ರ ಜೋಸೆಫ್ ಶೈನ್ ತೀರ್ಪು 2010 ರಲ್ಲಿ ದಾಖಲಾಗಿರುವ ಪ್ರಸ್ತುತ ಪ್ರಕರಣಕ್ಕೆ ಪೂರ್ವಾನ್ವಯವಾಗಿ ಅನ್ವಯಿಸುತ್ತದೆಯೇ ಎಂಬ ವಿಚಾರವನ್ನು ಹೈಕೋರ್ಟ್ ಪರಿಗಣಿಸಿತು. 2018 ರ ತೀರ್ಪು ಪೂರ್ವಾನ್ವಯವಾಗಿ ಅನ್ವಯಿಸುತ್ತದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ.

“ಈ ಅಂಶವನ್ನು ಮೇಜರ್ ಜನರಲ್ ಎ.ಎಸ್. ಗೌರಯ & ಅನರ್. ವರ್ಸಸ್ ಎಸ್.ಎನ್. ಠಾಕೂರ್ 1986 ಎಐಆರ್ 1440 ರ ತೀರ್ಪಿನಲ್ಲಿ ಪರಿಗಣಿಸಲಾಗಿದೆ. ಇದರಲ್ಲಿ ಸುಪ್ರೀಂ ಕೋರ್ಟ್‌ನ ಕಾನೂನು ಘೋಷಣೆಯು ಪೂರ್ವಾನ್ವಯವಾಗಿಯೂ ಸಹ ಬಾಕಿ ಇರುವ ಎಲ್ಲಾ ವಿಚಾರಣೆಗಳಿಗೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ,” ಎಂದು ನ್ಯಾಯಾಲಯ ಹೇಳಿದೆ.

ಲಕ್ನೋದ ಹೋಟೆಲ್‌ನಲ್ಲಿ ಪತ್ನಿ ಬೇರೆ ವ್ಯಕ್ತಿಯೊಂದಿಗೆ ಒಂದೇ ಕೋಣೆಯಲ್ಲಿ ರಾತ್ರಿ ತಂಗಿದ್ದಾಳೆ ಎಂಬ ಕಾರಣಕ್ಕೆ ಲೈಂಗಿಕ ಸಂಭೋಗ ನಡೆದಿದೆ ಎಂದು ಊಹೆ ಮಾಡಲು ಸಾಧ್ಯವಿಲ್ಲ ಎಂದು ವಿಚಾರಣಾ ನ್ಯಾಯಾಲಯ ಸರಿಯಾಗಿಯೇ ಹೇಳಿದೆ ಎಂದು ನ್ಯಾಯಾಲಯವು ಹೇಳಿದೆ. ಆದ್ದರಿಂದ, ಸಮನ್ಸ್ ಆದೇಶವನ್ನು ರದ್ದುಗೊಳಿಸಿ, ಆರೋಪಿ ವ್ಯಕ್ತಿಯನ್ನು ಕ್ರಿಮಿನಲ್ ಪ್ರಕರಣದಿಂದ ಬಿಡುಗಡೆ ಮಾಡಿದೆ. ಮಹಾಭಾರತದ ದ್ರೌಪದಿಯಂತಹ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ| ಸಹೋದ್ಯೋಗಿಯನ್ನು ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದ ಪೊಲೀಸ್ ಕಾನ್‌ಸ್ಟೆಬಲ್

ಬಿಹಾರ| ಸಹೋದ್ಯೋಗಿಯನ್ನು ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದ ಪೊಲೀಸ್ ಕಾನ್‌ಸ್ಟೆಬಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...