Homeಮುಖಪುಟಮಹಾಭಾರತದ ದ್ರೌಪದಿಯಂತಹ ನಿದರ್ಶನದ ಹೊರತಾಗಿಯೂ ಮಹಿಳೆಯನ್ನು ಆಸ್ತಿಯಂತೆ ಪರಿಗಣಿಸಲಾಗಿದೆ: ದೆಹಲಿ ಹೈಕೋರ್ಟ್

ಮಹಾಭಾರತದ ದ್ರೌಪದಿಯಂತಹ ನಿದರ್ಶನದ ಹೊರತಾಗಿಯೂ ಮಹಿಳೆಯನ್ನು ಆಸ್ತಿಯಂತೆ ಪರಿಗಣಿಸಲಾಗಿದೆ: ದೆಹಲಿ ಹೈಕೋರ್ಟ್

- Advertisement -
- Advertisement -

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 497 ರ ಅಡಿಯಲ್ಲಿ ರದ್ದುಗೊಂಡಿರುವ ವ್ಯಭಿಚಾರದ ಆರೋಪಗಳನ್ನು ಒಳಗೊಂಡ 2010 ರ ಪ್ರಕರಣವನ್ನು ತೀರ್ಪು ನೀಡುವಾಗ, ಮಹಾಭಾರತದಲ್ಲಿ ದ್ರೌಪದಿಯನ್ನು ನಡೆಸಿಕೊಂಡ ರೀತಿಯನ್ನು ದೆಹಲಿ ಹೈಕೋರ್ಟ್ ಉಲ್ಲೇಖಿಸಿದ್ದು, ಈ ಮೂಲಕ ಮಹಿಳೆಯರನ್ನು ಆಸ್ತಿಯಂತೆ ಪರಿಗಣಿಸುವುದರ ವಿರುದ್ಧ ಎಚ್ಚರಿಕೆ ನೀಡಿದೆ. ಮಹಾಭಾರತದ ದ್ರೌಪದಿಯಂತಹ

ಏಪ್ರಿಲ್ 17 ರಂದು ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ನೀಡಿದ್ದ ತೀರ್ಪಿನಲ್ಲಿ,  ಮಹಾಭಾರತದಲ್ಲಿ ದ್ರೌಪದಿಯ ಸ್ಥಿತಿ ಮತ್ತು ನಂತರದ ಪರಿಣಾಮಗಳನ್ನು ಉತ್ತಮವಾಗಿ ದಾಖಲಿಸಲಾಗಿದ್ದರೂ, ಮಹಿಳೆಯರು ಆಸ್ತಿ ಎಂಬ ಸ್ತ್ರೀದ್ವೇಷ ಮತ್ತು ಪಿತೃಪ್ರಧಾನ ಮನಸ್ಥಿತಿ ನಮ್ಮ ಸಮಾಜದಲ್ಲಿ ಚಾಲ್ತಿಯಲ್ಲಿದೆ ಎಂದು ಹೇಳಿದ್ದಾರೆ.

“ಮಹಿಳೆಯನ್ನು ಗಂಡನ ಆಸ್ತಿ ಎಂದು ಪರಿಗಣಿಸುವುದು ಮತ್ತು ಅದರ ವಿನಾಶಕಾರಿ ಪರಿಣಾಮಗಳನ್ನು ಮಹಾಭಾರತದಲ್ಲಿ ಚೆನ್ನಾಗಿ ದಾಖಲಿಸಲಾಗಿದೆ. ಇದರಲ್ಲಿ ದ್ರೌಪದಿಯನ್ನು ಅವಳ ಸ್ವಂತ ಪತಿ ಯುಧಿಷ್ಠಿರನು ಜೂಜಾಟದಲ್ಲಿ ಪಣಕ್ಕಿಟ್ಟನು. ಅಲ್ಲಿ ಇತರ ನಾಲ್ವರು ಸಹೋದರರು ಮೂಕ ಪ್ರೇಕ್ಷಕರಾಗಿದ್ದರು ಮತ್ತು ದ್ರೌಪದಿಗೆ ಅವಳ ಘನತೆಗಾಗಿ ಪ್ರತಿಭಟಿಸಲು ಯಾವುದೇ ಧ್ವನಿ ಇರಲಿಲ್ಲ.” ಎಂದು ಅವರು ಹೇಳಿದ್ದಾರೆ.

“ಅದು ಸಂಭವಿಸಿದಂತೆ, ಅವಳು ಜೂಜಾಟದಲ್ಲಿ ಕಳೆದುಹೋದಳು ಮತ್ತು ನಂತರ ನಡೆದದ್ದು ಮಹಾಭಾರತದ ಮಹಾ ಯುದ್ಧವಾಗಿದ್ದು, ಸಾಮೂಹಿಕ ಜೀವಹಾನಿ ಮತ್ತು ಕುಟುಂಬದ ಅನೇಕ ಸದಸ್ಯರು ನಾಶವಾಗಲು ಕಾರಣವಾಯಿತು. ಮಹಿಳೆಯನ್ನು ಆಸ್ತಿಯಾಗಿ ಪರಿಗಣಿಸುವ ಅಸಂಬದ್ಧತೆಯ ಪರಿಣಾಮವನ್ನು ಪ್ರದರ್ಶಿಸಲು ಅಂತಹ ಉದಾಹರಣೆಯಿದ್ದರೂ, ಜೋಸೆಫ್ ಶೈನ್ (ಸುಪ್ರಾ) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೆಕ್ಷನ್ 497 ಐಪಿಸಿಯನ್ನು ಅಸಂವಿಧಾನಿಕ ಎಂದು ಘೋಷಿಸಿದಾಗ ಮಾತ್ರ ನಮ್ಮ ಸಮಾಜದ ಸ್ತ್ರೀದ್ವೇಷಿ ಮನಸ್ಥಿತಿ ಇದನ್ನು ಅರ್ಥಮಾಡಿಕೊಂಡಿತು” ಎಂದು ನ್ಯಾಯಾಲಯ ಹೇಳಿದೆ.

ಐಪಿಸಿಯ ಸೆಕ್ಷನ್ 497 ವ್ಯಭಿಚಾರದ ಅಪರಾಧವನ್ನು ಅಪರಾಧೀಕರಿಸಲು ಬಳಸಲಾಗುತ್ತಿತ್ತು, ಆದರೆ ವಿವಾಹಿತ ಮಹಿಳೆ ಸಂಬಂಧ ಹೊಂದಿದ್ದ ಪುರುಷನನ್ನು ಮಾತ್ರ ಹೊಣೆಗಾರರನ್ನಾಗಿ ಮಾಡುತ್ತದೆ. ಇದಲ್ಲದೆ, ಮಹಿಳೆಯ ಪತಿ ಅಂತಹ ಸಂಬಂಧಕ್ಕೆ ಒಪ್ಪಿಗೆ ನೀಡಿದರೆ, ಯಾವುದೇ ಅಪರಾಧ ಆಗಿ ಪರಿಗಣಿಸುತ್ತಿರಲಿಲ್ಲ. 2018 ರಲ್ಲಿ, ಸುಪ್ರೀಂ ಕೋರ್ಟ್ ಐಪಿಸಿಯ ಸೆಕ್ಷನ್ 497 ಅನ್ನು ಅಸಂವಿಧಾನಿಕ ಎಂದು ಘೋಷಿಸಿತು. ಆದಾಗ್ಯೂ, ದೆಹಲಿ ಹೈಕೋರ್ಟ್‌ನ ಈ ವ್ಯಭಿಚಾರ ಪ್ರಕರಣವು 2010 ರ ಹಿಂದಿನದ್ದಾಗಿದೆ.

ಈ ಪ್ರಕರಣವು 1998 ರಲ್ಲಿ ವಿವಾಹವಾದ ದಂಪತಿಗಳಿಗೆ ಸಂಬಂಧಿಸಿದೆ. 2010 ರಲ್ಲಿ, ಪತಿಯು ತನ್ನ ಹೆಂಡತಿ ಇನ್ನೊಬ್ಬ ಪುರುಷನೊಂದಿಗೆ ವ್ಯಭಿಚಾರ ಸಂಬಂಧ ಹೊಂದಿದ್ದಾಳೆಂದು ಕಂಡುಕೊಂಡಿದ್ದಾಗಿ ಆರೋಪಿಸಲಾಗಿದೆ. ತನ್ನ ಹೆಂಡತಿಯ ಕರೆ ದಾಖಲೆಗಳನ್ನು ಪರಿಶೀಲಿಸಿದಾಗ ಅವಳು ರಾತ್ರಿ ವೇಳೆ ಆ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಳು, ಜೊತಗೆ ಲಕ್ನೋದ ಹೋಟೆಲ್‌ನಲ್ಲಿ ಆ ವ್ಯಕ್ತಿಯೊಂದಿಗೆ ರಾತ್ರಿ ತಂಗಿದ್ದಳು ಎಂದು ಅವನು ಕಂಡುಕೊಂಡಿದ್ದನು.

ಮೊದಲು ಅವನು ತನ್ನ ಹೆಂಡತಿಗೆ ವ್ಯಭಿಚಾರವನ್ನು ನಿಲ್ಲಿಸುವಂತೆ ಕಾನೂನು ನೋಟಿಸ್ ಜಾರಿ ಮಾಡಿದನು. ನಂತರ, ಅವಳು ವಿವಾಹೇತರ ಸಂಬಂಧ ಹೊಂದಿದ್ದಳು ಎಂದು ಹೇಳಲಾದ ಪುರುಷನ ವಿರುದ್ಧ ವ್ಯಭಿಚಾರದ ಕ್ರಿಮಿನಲ್ ದೂರು ದಾಖಲಿಸಿದ್ದರು. ಅದಾಗ್ಯೂ, ವಿಚಾರಣಾ ನ್ಯಾಯಾಲಯವು ಅವರ ಪತ್ನಿ ಮತ್ತು ವ್ಯಕ್ತಿಯ ನಡುವೆ ಲೈಂಗಿಕ ಸಂಬಂಧವಿರುವ ಯಾವುದೆ ಸಾಕ್ಷಿ ಇಲ್ಲದ ಕಾರಣ ವ್ಯಭಿಚಾರ ಆರೋಪದಿಂದ ಬಿಡುಗಡೆ ಮಾಡಿತ್ತು. ಅದಾಗ್ಯೂ, ಈ ತೀರ್ಪಿನ ವಿರುದ್ಧ ಮಹಿಳೆಯ ಪತಿ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಸಿ ಸೆಷನ್ಸ್ ನ್ಯಾಯಾಲಯ ತೀರ್ಪನ್ನು ರದ್ದುಗೊಳಿತ್ತು, ಜೊತೆಗೆ ಪತ್ನಿಯ ಜೊತೆಗೆ ಸಂಬಂಧವಿದೆ ಎಂದು ಆರೋಪಿಸಲಾದ ವ್ಯಕ್ತಿಗೆ ಕ್ರಿಮಿನಲ್ ವಿಚಾರಣೆಯನ್ನು ಎದುರಿಸಲು ಸಮನ್ಸ್ ನೀಡಿತ್ತು.

ಇದರ ನಂತರ ವ್ಯಕ್ತಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ತನಗೆ ನೀಡಲಾದ ಸಮನ್ಸ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದರು. ಈ ಮಧ್ಯೆ, ಪತ್ನಿ 2016 ರಲ್ಲಿ ತನ್ನ ಪತಿಯಿಂದ ವಿಚ್ಛೇದನ ಪಡೆದಿದ್ದರು.

ಐಪಿಸಿ ಸೆಕ್ಷನ್ 497 ಅನ್ನು ಅಸಂವಿಧಾನಿಕ ಎಂದು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ನೀಡಿದ 2018 ರ ಜೋಸೆಫ್ ಶೈನ್ ತೀರ್ಪು 2010 ರಲ್ಲಿ ದಾಖಲಾಗಿರುವ ಪ್ರಸ್ತುತ ಪ್ರಕರಣಕ್ಕೆ ಪೂರ್ವಾನ್ವಯವಾಗಿ ಅನ್ವಯಿಸುತ್ತದೆಯೇ ಎಂಬ ವಿಚಾರವನ್ನು ಹೈಕೋರ್ಟ್ ಪರಿಗಣಿಸಿತು. 2018 ರ ತೀರ್ಪು ಪೂರ್ವಾನ್ವಯವಾಗಿ ಅನ್ವಯಿಸುತ್ತದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ.

“ಈ ಅಂಶವನ್ನು ಮೇಜರ್ ಜನರಲ್ ಎ.ಎಸ್. ಗೌರಯ & ಅನರ್. ವರ್ಸಸ್ ಎಸ್.ಎನ್. ಠಾಕೂರ್ 1986 ಎಐಆರ್ 1440 ರ ತೀರ್ಪಿನಲ್ಲಿ ಪರಿಗಣಿಸಲಾಗಿದೆ. ಇದರಲ್ಲಿ ಸುಪ್ರೀಂ ಕೋರ್ಟ್‌ನ ಕಾನೂನು ಘೋಷಣೆಯು ಪೂರ್ವಾನ್ವಯವಾಗಿಯೂ ಸಹ ಬಾಕಿ ಇರುವ ಎಲ್ಲಾ ವಿಚಾರಣೆಗಳಿಗೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ,” ಎಂದು ನ್ಯಾಯಾಲಯ ಹೇಳಿದೆ.

ಲಕ್ನೋದ ಹೋಟೆಲ್‌ನಲ್ಲಿ ಪತ್ನಿ ಬೇರೆ ವ್ಯಕ್ತಿಯೊಂದಿಗೆ ಒಂದೇ ಕೋಣೆಯಲ್ಲಿ ರಾತ್ರಿ ತಂಗಿದ್ದಾಳೆ ಎಂಬ ಕಾರಣಕ್ಕೆ ಲೈಂಗಿಕ ಸಂಭೋಗ ನಡೆದಿದೆ ಎಂದು ಊಹೆ ಮಾಡಲು ಸಾಧ್ಯವಿಲ್ಲ ಎಂದು ವಿಚಾರಣಾ ನ್ಯಾಯಾಲಯ ಸರಿಯಾಗಿಯೇ ಹೇಳಿದೆ ಎಂದು ನ್ಯಾಯಾಲಯವು ಹೇಳಿದೆ. ಆದ್ದರಿಂದ, ಸಮನ್ಸ್ ಆದೇಶವನ್ನು ರದ್ದುಗೊಳಿಸಿ, ಆರೋಪಿ ವ್ಯಕ್ತಿಯನ್ನು ಕ್ರಿಮಿನಲ್ ಪ್ರಕರಣದಿಂದ ಬಿಡುಗಡೆ ಮಾಡಿದೆ. ಮಹಾಭಾರತದ ದ್ರೌಪದಿಯಂತಹ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ| ಸಹೋದ್ಯೋಗಿಯನ್ನು ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದ ಪೊಲೀಸ್ ಕಾನ್‌ಸ್ಟೆಬಲ್

ಬಿಹಾರ| ಸಹೋದ್ಯೋಗಿಯನ್ನು ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿ ಕೊಂದ ಪೊಲೀಸ್ ಕಾನ್‌ಸ್ಟೆಬಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...