Homeಕರ್ನಾಟಕಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ 'ಮಹಾಡ್ ಸತ್ಯಾಗ್ರಹ': ಬರಗೂರು ರಾಮಚಂದ್ರಪ್ಪ

ಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ ‘ಮಹಾಡ್ ಸತ್ಯಾಗ್ರಹ’: ಬರಗೂರು ರಾಮಚಂದ್ರಪ್ಪ

- Advertisement -
- Advertisement -

“ಮಹಾಡ್ ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ‘ಸಾಮಾಜಿಕ ಸಬಲೀಕರಣ ದಿನ’ವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಕ್ಕಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗಳಿಗೆ ಒಡ್ಡಿದ್ದ ಪ್ರತಿರೋಧವಾಗಿದೆ” ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.

“ಭಾರತದಲ್ಲಿ ನಡೆದ ಅಸ್ಪ್ರಶ್ಯರ ಪರವಾದ ಮೊಟ್ಟ ಮೊದಲ ಚಳವಳಿ ಅಂದರೆ ಅದು ಮಹಾಡ್ ಸತ್ಯಾಗ್ರಹ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿರುವ ಮಹಾಡ್‌ನಲ್ಲಿ 1927 ಮಾರ್ಚ್‌ 20ರಂದು ಸಾರ್ವಜನಿಕವಾಗಿ ಕೆರೆ ನೀರನ್ನ ಮುಟ್ಟಿ ಕುಡಿಯುವುದರ ಮೂಲಕ ಇದು ಎಲ್ಲರಿಗೂ ಸೇರಿದ್ದು ಎನ್ನುವುದನ್ನ ಅಂಬೇಡ್ಕರ್ ಅವರು ಹೇಳಿದ್ದರು. ಮಾನವ ಹಕ್ಕುಗಳನ್ನ ಎತ್ತಿ ಹಿಡಿಯುವ ಈ ಮೂಲಕ ಅಂಬೇಡ್ಕರ್ ಅವರು ಬೌದ್ಧಿಕ ಬದ್ಧತೆಯನ್ನ ತೋರಿಸಿದ್ದರು” ಎಂದು ಬಣ್ಣಿಸಿದರು.

ಭಾರತದ ಅಸ್ಪ್ರಶ್ಯರ ಮೊದಲ ಪ್ರತಿರೋಧ ಚಳವಳಿ ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಬೆಂಗಳೂರಿನ ಗಾಂಧಿ ಭವನದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಗುರುವಾರ ಆಯೋಜಿಸಿದ್ದ ‘ಶೋಷಿತರ ಸಂಘರ್ಷ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

ಭಾಷಣ ಆರಂಭಕ್ಕೂ ಮುನ್ನ ಸಣ್ಣ ಕತೆಯೊಂದನ್ನು ಹೇಳಿದ ಅವರು, “ಒಂದು ಊರಿನಲ್ಲಿ ಒಬ್ಬ ಗುರು ಶಿಷ್ಯರಿಗೆ ಜಾತಿ ವ್ಯವಸ್ಥೆ ಹಾಗೂ ಅಸ್ಪೃಶ್ಯತೆ ವಿರುದ್ಧ ಭೋಧನೆ ಮಾಡುತ್ತಾರೆ. ಅಸ್ಪಶ್ಯತೆ ಮಾಡಬಾರದು; ಅಸ್ಪ್ರಶ್ಯರನ್ನ ಕೀಳಾಗಿ ಕಾಣುವುದು ತಪ್ಪು ಎಂದೆಲ್ಲಾ ಭಾಷಣ ಮಾಡಿ ಮುಂದಿನ ಊರಿಗೆ ತೆರಳುತ್ತಾರೆ. ಇನ್ನೊಂದು ಊರಿಗೆ ಹೋಗುವಾಗ ಅಲ್ಲಿನ ಬಾವಿಯಲ್ಲಿ ಕೈಕಾಲು ತೊಳೆದು ನೀರು ಕುಡಿಯುತ್ತಾರೆ. ನೀರು ಕುಡಿದ ಮೇಲೆ ಬರುವಾಗ ಯಾರೋ ಒಬ್ಬರು, ಇದು ಅಸ್ಪೃಶ್ಯರ ಬಾವಿ ಎಂದು ಹೇಳುತ್ತಾರೆ. ಆ ಬಳಿಕ ಗುರುವಿಗೆ ತಳಮಳ ಶುರುವಾಗಿ ಎಂತಹ ಪಾಪ ತಟ್ಟಿತ್ತು ನನಗೆ ಎಂದು ಹೇಳಿ ಒಬ್ಬ ಬುದ್ಧಿವಂತನ ಹತ್ತಿರ ಹೋಗಿ ಹೀಗೆ ಮಾಡಿದೆ, ಈ ಪಾಪ ಕಳೆದುಕೊಳ್ಳುವುದಕ್ಕೆ ಏನು ಮಾಡಲಿ ಹೇಳಿ ಎಂದು ಕೇಳುತ್ತಾನೆ. ಆ ಬುದ್ಧಿವಂತ ಬಾವಿ ನೀರು ಕುಡಿಯುವ ಸಂದರ್ಭದಲ್ಲಿ ಏನೇನೂ ಮಾಡಿದೆ ಕ್ರಮವಾಗಿ ಹೇಳು ಎಂದಾಗ; ಮೊದಲಿಗೆ ಬಾವಿ ಮೆಟ್ಟಿಲು ಇಳಿದು ಹೋಗಿ ಕೈಕಾಲು ತೊಳೆದು ಆಮೇಲೆ ನೀರು ಕುಡಿದೆ ಎಂದು ಗುರು ಹೇಳುತ್ತಾನೆ. ಆ ಬಳಿಕ ಬುದ್ದಿವಂತ, ನಿನಗೇನು ಆಗಲ್ಲ; ಏಕೆಂದರೆ, ಮೊದಲಿಗೆ ನೀನು ಕೈ-ಕಾಲು ತೊಳೆದಿದ್ದೀಯ. ನಿನ್ನ ಪಾದ ಸ್ಪರ್ಶದಿಂದ ಆ ಬಾವಿಯ ನೀರು ಪವಿತ್ರವಾಯಿತು. ಹಾಗಾಗಿ, ನಿನಗೆ ಏನು ಆಗಲ್ಲ ಎಂದು ಹೇಳಿದ್ನಂತೆ. ಇದು ಕಲ್ಪಿತ ಪ್ರಸಂಗ, ಆದರೂ ಇದರೊಳಗಡೆ ವಾಸ್ತವ ಇದೆ. ಅಂದರೆ, ಗುರು ಪತನಗೊಂಡ ಪ್ರಾಮಾಣಿಕತೆಯ ಸಂಕೇತ. ಈ ಬುದ್ಧಿವಂತ ಭ್ರಷ್ಟಗೊಂಡ ಬೌದ್ಧಿಕತೆಯ ಸಂಕೇತ. ಇವು ಯಾವತ್ತಿಗೂ ಕೂಡ ಒಂದೇ. ಇವು ದೇಶವನ್ನ ಉದ್ಧಾರ ಮಾಡುವುದಿಲ್ಲ. ದೊಡ್ಡ ದೊಡ್ಡ ಹೆಸರು ಇಟ್ಟುಕೊಂಡಿರುವವರಿಗೆ ಪ್ರಾಮಾಣಿಕತೆ ಇರೋದಿಲ್ಲ. ಆ ಗುರು ಪ್ರಾಮಾಣಿಕನಾಗಿದ್ದರೇ ಅಸ್ಪ್ರಶ್ಯರ ಬಾವಿ ನೀರು ಕುಡಿದೆ ಎಂದು ಸಂಭ್ರಮಿಸಬೇಕಿತ್ತು. ಇನ್ನು ಆತ ನಿಜವಾದ ಬುದ್ಧಿವಂತನೇ ಆಗಿದ್ದರೇ, ಆ ಗುರುವನ್ನ ಬೈದು ಕಳಿಸಬೇಕಿತ್ತು” ಎಂದು ವಿವರಿಸಿದರು.

“ಇಂದು ನಾವು ಸಹ ಪತನಗೊಂಡಿರುವ ಪ್ರಾಮಾಣಿಕತೆಯ, ಭ್ರಷ್ಟಗೊಂಡಿರುವ ಬೌದ್ಧಿಕ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನೈತಿಕ ಶಕ್ತಿ, ಸಂಘಟನಾ ಶಕ್ತಿ, ವಿಚಾರ ಶಕ್ತಿ ಸೇರಿ ಒಂದು ಬೌದ್ದಿಕ ಬದ್ದತೆ ಬೇಕು. ಇವತ್ತು ಸಹ ಅಸ್ಪಶ್ಯರಿಗೆ ಹಿಂಸೆ ನೀಡುವ ಘಟನೆ ನಡೆಯುತ್ತಿವೆ. ಆಗ ಅಂಬೇಡ್ಕರ್ ಅವರು ಅದಕ್ಕೊಂದು ದೊಡ್ಡ ಪ್ರತಿರೋಧ ಒಡ್ಡಿದ್ದರು. ಅಂಬೇಡ್ಕರ್ ಅವರು ಒಡ್ಡಿದ ಈ ಪ್ರತಿರೋಧದ ಚಳವಳಿಯಲ್ಲಿ ಅನೇಕ ಸವರ್ಣೀಯರು ಭಾಗವಹಿಸುತ್ತಾರೆ. ಸವರ್ಣೀಯರಲ್ಲಿನ ಪ್ರಗತಿಪರರು ಎಲ್ಲರೂ ಭಾಗವಹಿಸಿದ್ದರು. ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ಸಾಮಾಜಿಕ ಸಬಲೀಕರಣ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಅವರು ಹೇಳುತ್ತಾರೆ. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧ ಆಗಿದೆ” ಎಂದು ತಿಳಿಸಿದರು.

“ಶೋಷಿತ ಸಮುದಾಯಗಳು ಪಂಚಭೂತ ವಂಚಿತ ಸಮುದಾಯಗಳು ಈ ಸಮುದಾಯಗಳು ಗಾಳಿಯಿಂದ ವಂಚಿತರಾಗುತ್ತಾರೆ. ಭೂಮಿಯಿಂದ ವಂಚಿತರಾಗಿದ್ದಾರೆ. ಆಕಾಶ ಕನಸಿನ ಸಂಕೇತ ಅವರಿಗೆ ಕನಸು ಕಾಣೋದಕ್ಕೆ ಆಗುವುದಿಲ್ಲ. ನೀರು ಮುಟ್ಟೋದಕ್ಕೆ ಬಿಡೋದಿಲ್ಲ. ಗುಡಿಸಲಿಗೆ ಬೆಂಕಿ ಹಚ್ಚುತ್ತಾರೆ. ಒಟ್ಟಿನಲ್ಲಿ ಈ ಶೋಷಿತ ಸಮುದಾಯಗಳು ಈ ಪಂಚಭೂತಗಳಿಂದ ವಂಚಿತರಾಗಿದ್ದಾರೆ. ಇವರಿಗೆ ಸರಿಯಾದ ನೀರು, ಗಾಳಿ, ಬೆಂಕಿ, ಭೂಮಿ ಇವ್ಯಾವುದನ್ನೂ ಕೊಡಲಿಲ್ಲ ಅಂದರೆ, ಇವು ಪಂಚಭೂತ ವಂಚಿತ ಸಮುದಾಯಗಳು” ಎಂದು ಹೇಳಿದರು.

“1949ರಲ್ಲಿ ಪ್ರಜಾಪ್ರಭುತ್ವವನ್ನ ಸಾಮಾಜಿಕ, ರಾಜಕೀಯ, ಆರ್ಥಿಕ ಪ್ರಜಾಪ್ರಭುತ್ವ ಎಂದು ಅಂಬೇಡ್ಕರ್ ವಿವರಿಸಿದ್ದಾರೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಇದ್ದರೆ ಇದು ಸಾಮಾಜಿಕ ಪ್ರಜಾಪ್ರಭುತ್ವ ಆಗುತ್ತದೆ. ಆದರೆ, ಈಗ ದ್ವೇಷದ ರಾಜಕಾರಣ ನಡೆಯುತ್ತದೆ. ಪ್ರಜಾಪ್ರಭುತ್ವ ಸಮಾನತೆ ಸಹೋದರತೆ ಜತೆಗೆ ಎಲ್ಲರೂ ತಾರತಮ್ಯ ಮೀರಿ ಸಮಾಜವನ್ನ ಕಟ್ಟಬೇಕು. ಅರ್ಧಕ್ಕೂ ಹೆಚ್ಚು ಸಂಪತ್ತು ಕೆಲವೇ ಜನರ ಬಳಿ‌ ಇದೆ. ಸ್ವಾತಂತ್ರ್ಯ ಕೊಟ್ಟಿರುವ ಹಕ್ಕಿನಿಂದಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅನೇಕ ಚಳುವಳಿಗಳ ಕಾರಣಕ್ಕಾಗಿ ಅನೇಕ ಮುನ್ನಡೆಗಳು ನಡೆಯುತ್ತಿವೆ. ಈ ಮುನ್ನಡೆಗಳ ನಡುವೆ ಹಲವು ಸಮಸ್ಯೆಗಳು ಇದೆ. ಇನ್ನೂ ಅಸ್ಪ್ರಶ್ಯತೆ ಇದೆ. ಸಾಮಾಜಿಕ ಪ್ರಜಾಪ್ರಭುತ್ವ ನೆಲೆಯೂರಿದರೆ ಆಗ ಸ್ವಾತಂತ್ರ್ಯ ಸಮಾನತೆ‌ ಬರುತ್ತದೆ” ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿಯ ಇಂದಿರಾ ಕೃಷ್ಣಪ್ಪ ಮಾತನಾಡಿ, “ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಈ ದಿನಾಚರಣೆಯನ್ನ ನಡೆಸುತ್ತೇವೆ. ಎಲ್ಲ ಜಿಲ್ಲೆಗಳಲ್ಲಿ ಮಹಾಡ್ ಸತ್ಯಾಗ್ರಹದ ಅರಿವು ಮೂಡಲಿ ಎಂದು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಏಕಕಾಲದಲ್ಲಿ ಆಚರಣೆ ಮಾಡಲಾಗುತ್ತಿದೆ” ಎಂದರು.

“ಪ್ರಯಾಗರಾಜ್‌ಗೆ ಹೋಗಿ ಕುಂಭಮೇಳದಲ್ಲಿ ಜನರು ಮುಳುಗಿ ಪವಿತ್ರರಾಗಿದ್ದೀವಿ ಎಂದು ಹೇಳಿಕೊಂಡರು. ಅಲ್ಲಿನ ಜೀವಜಲವನ್ನ ಕೊಳಕು ಮಾಡಿದ್ದಾರೆ; ಇದು ಸಾಮಾನ್ಯ ಜ್ಞಾನ ಎಲ್ಲರಿಗೂ ಗೊತ್ತಾಗುವ ವಿಚಾರ. ನೀರನ್ನು ಹಾಳು ಮಾಡಿ, ಮಲಿನ ಮಾಡಿದ್ದಾರೆ. ಸರ್ಕಾರ ಆ ಪ್ರದೇಶ, ನೀರನ್ನ ಸ್ವಚ್ಛ ಮಾಡಲು ನಮ್ಮ ತೆರಿಗೆ ಹಣದಲ್ಲಿ ನೂರಾರು ಕೋಟಿ ಹಣ ಖರ್ಚು ಮಾಡಿದೆ. ಎಷ್ಟು ಹಣ ವೆಚ್ಚ ಆಗಿದೆ ಎಂದು ಯಾರಾದರೂ ಯೋಚನೆ ಮಾಡಿದ್ದೀರಾ? ಅಂಬೇಡ್ಕರ್ ಮಾಡಿದ್ದ ಸತ್ಯಾಗ್ರಹಕ್ಕೂ ಈಗ ಸರ್ಕಾರವೇ ಏರ್ಪಡಿಸುವ ಇಂತಹ ಕಾರ್ಯಕ್ರಮಗಳಿಗೂ ಎಲ್ಲಿಯ ಸಾಮ್ಯತೆ? ಮೌಢ್ಯದ ವಿರೋಧದ ಬಗ್ಗೆ ಮಾತನಾಡಬೇಕಾದ ಕರ್ನಾಟಕ ಸರ್ಕಾರ ಇಲ್ಲಿಯೂ ಕೂಡ ಹಾಗೆಯೇ ಮಾಡಿತ್ತು. ಈ ಬಗ್ಗೆ ಎಲ್ಲರೂ ಪ್ರಶ್ನೆಗಳನ್ನ ಎತ್ತಿ ಹಿಡಿಯಬೇಕು” ಎಂದು ಹೇಳಿದರು.

“ಈ ಚಳವಳಿ ನಡೆದು ಇಂದಿಗೆ 98 ವರ್ಷಗಳು ಕಳೆದರು ಕೂಡ ನೀರಿನ ವಿಷಯದಲ್ಲಿ, ಬಟ್ಟೆಯ ವಿಷಯದಲ್ಲಿ, ದಲಿತರ ಅಭಿರುಚಿಯ ವಿಷಯದಲ್ಲಿ ದಿನನಿತ್ಯ ಕೊಲೆ, ಸುಲಿಗೆ, ಅತ್ಯಾಚಾರಗಳು ನಿರಂತರವಾಗಿ ನಡೆಯುತ್ತಲೇ ಇದೆ. ಇತ್ತೀಚಿಗೆ ರಾಜಸ್ತಾನದ ಶಾಲೆಯೊಂದರಲ್ಲಿ ಏಳನೇ ತರಗತಿಯ ಬಾಲಕನೊಬ್ಬ ನೀರು ಕುಡಿದನೆಂದು ಹೊಡೆದು ಸಾಯಿಸಿದರು. ಉತ್ತರ ಪ್ರದೇಶದಲ್ಲಿ ಯುವಕನೊಬ್ಬ ಸಾರ್ವಜನಿಕ ಬಾವಿಯೊಂದರ ನೀರನ್ನು ಮುಟ್ಟಿದ ಕಾರಣಕ್ಕೆ ಕೊಲೆಮಾಡಲಾಯಿತು. ಹೀಗೆ, ಪ್ರತಿದಿನ ಸವರ್ಣಿಯರು ತಮ್ಮ ಬಾವಿಯಲ್ಲಿ ನೀರು ಸೇದಿದರು ಎಂದು. ಕೆರೆಯ ನೀರನ್ನು ಬಳಸಿದರು ಎಂದು ನಿರಂತರವಾಗಿ ಹಲ್ಲೆಗಳನ್ನು ದೇಶಾದ್ಯಂತ ನಡೆಸುತ್ತಲೇ ಇದ್ದಾರೆ. ಇದು ದೇಶ ಸಮಾನತೆಯ ಕಡೆಗೆ ನಡೆಯದೆ ಅಮಾನುಷ ದ್ವೇಷ ಮತ್ತು ವಿಕೃತಿಯ ಕಡೆಗೆ ನಡೆಯುತ್ತಿರುವುದನ್ನು ಮತ್ತೆ ಮತ್ತೆ ಖಚಿತಪಡಿಸುತ್ತಿದೆ” ಎಂದು ತಿಳಿಸಿದರು.

ದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...