Homeಕರ್ನಾಟಕಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ 'ಮಹಾಡ್ ಸತ್ಯಾಗ್ರಹ': ಬರಗೂರು ರಾಮಚಂದ್ರಪ್ಪ

ಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ ‘ಮಹಾಡ್ ಸತ್ಯಾಗ್ರಹ’: ಬರಗೂರು ರಾಮಚಂದ್ರಪ್ಪ

- Advertisement -
- Advertisement -

“ಮಹಾಡ್ ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ‘ಸಾಮಾಜಿಕ ಸಬಲೀಕರಣ ದಿನ’ವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಕ್ಕಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗಳಿಗೆ ಒಡ್ಡಿದ್ದ ಪ್ರತಿರೋಧವಾಗಿದೆ” ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.

“ಭಾರತದಲ್ಲಿ ನಡೆದ ಅಸ್ಪ್ರಶ್ಯರ ಪರವಾದ ಮೊಟ್ಟ ಮೊದಲ ಚಳವಳಿ ಅಂದರೆ ಅದು ಮಹಾಡ್ ಸತ್ಯಾಗ್ರಹ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿರುವ ಮಹಾಡ್‌ನಲ್ಲಿ 1927 ಮಾರ್ಚ್‌ 20ರಂದು ಸಾರ್ವಜನಿಕವಾಗಿ ಕೆರೆ ನೀರನ್ನ ಮುಟ್ಟಿ ಕುಡಿಯುವುದರ ಮೂಲಕ ಇದು ಎಲ್ಲರಿಗೂ ಸೇರಿದ್ದು ಎನ್ನುವುದನ್ನ ಅಂಬೇಡ್ಕರ್ ಅವರು ಹೇಳಿದ್ದರು. ಮಾನವ ಹಕ್ಕುಗಳನ್ನ ಎತ್ತಿ ಹಿಡಿಯುವ ಈ ಮೂಲಕ ಅಂಬೇಡ್ಕರ್ ಅವರು ಬೌದ್ಧಿಕ ಬದ್ಧತೆಯನ್ನ ತೋರಿಸಿದ್ದರು” ಎಂದು ಬಣ್ಣಿಸಿದರು.

ಭಾರತದ ಅಸ್ಪ್ರಶ್ಯರ ಮೊದಲ ಪ್ರತಿರೋಧ ಚಳವಳಿ ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಬೆಂಗಳೂರಿನ ಗಾಂಧಿ ಭವನದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಗುರುವಾರ ಆಯೋಜಿಸಿದ್ದ ‘ಶೋಷಿತರ ಸಂಘರ್ಷ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

ಭಾಷಣ ಆರಂಭಕ್ಕೂ ಮುನ್ನ ಸಣ್ಣ ಕತೆಯೊಂದನ್ನು ಹೇಳಿದ ಅವರು, “ಒಂದು ಊರಿನಲ್ಲಿ ಒಬ್ಬ ಗುರು ಶಿಷ್ಯರಿಗೆ ಜಾತಿ ವ್ಯವಸ್ಥೆ ಹಾಗೂ ಅಸ್ಪೃಶ್ಯತೆ ವಿರುದ್ಧ ಭೋಧನೆ ಮಾಡುತ್ತಾರೆ. ಅಸ್ಪಶ್ಯತೆ ಮಾಡಬಾರದು; ಅಸ್ಪ್ರಶ್ಯರನ್ನ ಕೀಳಾಗಿ ಕಾಣುವುದು ತಪ್ಪು ಎಂದೆಲ್ಲಾ ಭಾಷಣ ಮಾಡಿ ಮುಂದಿನ ಊರಿಗೆ ತೆರಳುತ್ತಾರೆ. ಇನ್ನೊಂದು ಊರಿಗೆ ಹೋಗುವಾಗ ಅಲ್ಲಿನ ಬಾವಿಯಲ್ಲಿ ಕೈಕಾಲು ತೊಳೆದು ನೀರು ಕುಡಿಯುತ್ತಾರೆ. ನೀರು ಕುಡಿದ ಮೇಲೆ ಬರುವಾಗ ಯಾರೋ ಒಬ್ಬರು, ಇದು ಅಸ್ಪೃಶ್ಯರ ಬಾವಿ ಎಂದು ಹೇಳುತ್ತಾರೆ. ಆ ಬಳಿಕ ಗುರುವಿಗೆ ತಳಮಳ ಶುರುವಾಗಿ ಎಂತಹ ಪಾಪ ತಟ್ಟಿತ್ತು ನನಗೆ ಎಂದು ಹೇಳಿ ಒಬ್ಬ ಬುದ್ಧಿವಂತನ ಹತ್ತಿರ ಹೋಗಿ ಹೀಗೆ ಮಾಡಿದೆ, ಈ ಪಾಪ ಕಳೆದುಕೊಳ್ಳುವುದಕ್ಕೆ ಏನು ಮಾಡಲಿ ಹೇಳಿ ಎಂದು ಕೇಳುತ್ತಾನೆ. ಆ ಬುದ್ಧಿವಂತ ಬಾವಿ ನೀರು ಕುಡಿಯುವ ಸಂದರ್ಭದಲ್ಲಿ ಏನೇನೂ ಮಾಡಿದೆ ಕ್ರಮವಾಗಿ ಹೇಳು ಎಂದಾಗ; ಮೊದಲಿಗೆ ಬಾವಿ ಮೆಟ್ಟಿಲು ಇಳಿದು ಹೋಗಿ ಕೈಕಾಲು ತೊಳೆದು ಆಮೇಲೆ ನೀರು ಕುಡಿದೆ ಎಂದು ಗುರು ಹೇಳುತ್ತಾನೆ. ಆ ಬಳಿಕ ಬುದ್ದಿವಂತ, ನಿನಗೇನು ಆಗಲ್ಲ; ಏಕೆಂದರೆ, ಮೊದಲಿಗೆ ನೀನು ಕೈ-ಕಾಲು ತೊಳೆದಿದ್ದೀಯ. ನಿನ್ನ ಪಾದ ಸ್ಪರ್ಶದಿಂದ ಆ ಬಾವಿಯ ನೀರು ಪವಿತ್ರವಾಯಿತು. ಹಾಗಾಗಿ, ನಿನಗೆ ಏನು ಆಗಲ್ಲ ಎಂದು ಹೇಳಿದ್ನಂತೆ. ಇದು ಕಲ್ಪಿತ ಪ್ರಸಂಗ, ಆದರೂ ಇದರೊಳಗಡೆ ವಾಸ್ತವ ಇದೆ. ಅಂದರೆ, ಗುರು ಪತನಗೊಂಡ ಪ್ರಾಮಾಣಿಕತೆಯ ಸಂಕೇತ. ಈ ಬುದ್ಧಿವಂತ ಭ್ರಷ್ಟಗೊಂಡ ಬೌದ್ಧಿಕತೆಯ ಸಂಕೇತ. ಇವು ಯಾವತ್ತಿಗೂ ಕೂಡ ಒಂದೇ. ಇವು ದೇಶವನ್ನ ಉದ್ಧಾರ ಮಾಡುವುದಿಲ್ಲ. ದೊಡ್ಡ ದೊಡ್ಡ ಹೆಸರು ಇಟ್ಟುಕೊಂಡಿರುವವರಿಗೆ ಪ್ರಾಮಾಣಿಕತೆ ಇರೋದಿಲ್ಲ. ಆ ಗುರು ಪ್ರಾಮಾಣಿಕನಾಗಿದ್ದರೇ ಅಸ್ಪ್ರಶ್ಯರ ಬಾವಿ ನೀರು ಕುಡಿದೆ ಎಂದು ಸಂಭ್ರಮಿಸಬೇಕಿತ್ತು. ಇನ್ನು ಆತ ನಿಜವಾದ ಬುದ್ಧಿವಂತನೇ ಆಗಿದ್ದರೇ, ಆ ಗುರುವನ್ನ ಬೈದು ಕಳಿಸಬೇಕಿತ್ತು” ಎಂದು ವಿವರಿಸಿದರು.

“ಇಂದು ನಾವು ಸಹ ಪತನಗೊಂಡಿರುವ ಪ್ರಾಮಾಣಿಕತೆಯ, ಭ್ರಷ್ಟಗೊಂಡಿರುವ ಬೌದ್ಧಿಕ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನೈತಿಕ ಶಕ್ತಿ, ಸಂಘಟನಾ ಶಕ್ತಿ, ವಿಚಾರ ಶಕ್ತಿ ಸೇರಿ ಒಂದು ಬೌದ್ದಿಕ ಬದ್ದತೆ ಬೇಕು. ಇವತ್ತು ಸಹ ಅಸ್ಪಶ್ಯರಿಗೆ ಹಿಂಸೆ ನೀಡುವ ಘಟನೆ ನಡೆಯುತ್ತಿವೆ. ಆಗ ಅಂಬೇಡ್ಕರ್ ಅವರು ಅದಕ್ಕೊಂದು ದೊಡ್ಡ ಪ್ರತಿರೋಧ ಒಡ್ಡಿದ್ದರು. ಅಂಬೇಡ್ಕರ್ ಅವರು ಒಡ್ಡಿದ ಈ ಪ್ರತಿರೋಧದ ಚಳವಳಿಯಲ್ಲಿ ಅನೇಕ ಸವರ್ಣೀಯರು ಭಾಗವಹಿಸುತ್ತಾರೆ. ಸವರ್ಣೀಯರಲ್ಲಿನ ಪ್ರಗತಿಪರರು ಎಲ್ಲರೂ ಭಾಗವಹಿಸಿದ್ದರು. ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ಸಾಮಾಜಿಕ ಸಬಲೀಕರಣ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಅವರು ಹೇಳುತ್ತಾರೆ. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧ ಆಗಿದೆ” ಎಂದು ತಿಳಿಸಿದರು.

“ಶೋಷಿತ ಸಮುದಾಯಗಳು ಪಂಚಭೂತ ವಂಚಿತ ಸಮುದಾಯಗಳು ಈ ಸಮುದಾಯಗಳು ಗಾಳಿಯಿಂದ ವಂಚಿತರಾಗುತ್ತಾರೆ. ಭೂಮಿಯಿಂದ ವಂಚಿತರಾಗಿದ್ದಾರೆ. ಆಕಾಶ ಕನಸಿನ ಸಂಕೇತ ಅವರಿಗೆ ಕನಸು ಕಾಣೋದಕ್ಕೆ ಆಗುವುದಿಲ್ಲ. ನೀರು ಮುಟ್ಟೋದಕ್ಕೆ ಬಿಡೋದಿಲ್ಲ. ಗುಡಿಸಲಿಗೆ ಬೆಂಕಿ ಹಚ್ಚುತ್ತಾರೆ. ಒಟ್ಟಿನಲ್ಲಿ ಈ ಶೋಷಿತ ಸಮುದಾಯಗಳು ಈ ಪಂಚಭೂತಗಳಿಂದ ವಂಚಿತರಾಗಿದ್ದಾರೆ. ಇವರಿಗೆ ಸರಿಯಾದ ನೀರು, ಗಾಳಿ, ಬೆಂಕಿ, ಭೂಮಿ ಇವ್ಯಾವುದನ್ನೂ ಕೊಡಲಿಲ್ಲ ಅಂದರೆ, ಇವು ಪಂಚಭೂತ ವಂಚಿತ ಸಮುದಾಯಗಳು” ಎಂದು ಹೇಳಿದರು.

“1949ರಲ್ಲಿ ಪ್ರಜಾಪ್ರಭುತ್ವವನ್ನ ಸಾಮಾಜಿಕ, ರಾಜಕೀಯ, ಆರ್ಥಿಕ ಪ್ರಜಾಪ್ರಭುತ್ವ ಎಂದು ಅಂಬೇಡ್ಕರ್ ವಿವರಿಸಿದ್ದಾರೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಇದ್ದರೆ ಇದು ಸಾಮಾಜಿಕ ಪ್ರಜಾಪ್ರಭುತ್ವ ಆಗುತ್ತದೆ. ಆದರೆ, ಈಗ ದ್ವೇಷದ ರಾಜಕಾರಣ ನಡೆಯುತ್ತದೆ. ಪ್ರಜಾಪ್ರಭುತ್ವ ಸಮಾನತೆ ಸಹೋದರತೆ ಜತೆಗೆ ಎಲ್ಲರೂ ತಾರತಮ್ಯ ಮೀರಿ ಸಮಾಜವನ್ನ ಕಟ್ಟಬೇಕು. ಅರ್ಧಕ್ಕೂ ಹೆಚ್ಚು ಸಂಪತ್ತು ಕೆಲವೇ ಜನರ ಬಳಿ‌ ಇದೆ. ಸ್ವಾತಂತ್ರ್ಯ ಕೊಟ್ಟಿರುವ ಹಕ್ಕಿನಿಂದಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅನೇಕ ಚಳುವಳಿಗಳ ಕಾರಣಕ್ಕಾಗಿ ಅನೇಕ ಮುನ್ನಡೆಗಳು ನಡೆಯುತ್ತಿವೆ. ಈ ಮುನ್ನಡೆಗಳ ನಡುವೆ ಹಲವು ಸಮಸ್ಯೆಗಳು ಇದೆ. ಇನ್ನೂ ಅಸ್ಪ್ರಶ್ಯತೆ ಇದೆ. ಸಾಮಾಜಿಕ ಪ್ರಜಾಪ್ರಭುತ್ವ ನೆಲೆಯೂರಿದರೆ ಆಗ ಸ್ವಾತಂತ್ರ್ಯ ಸಮಾನತೆ‌ ಬರುತ್ತದೆ” ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿಯ ಇಂದಿರಾ ಕೃಷ್ಣಪ್ಪ ಮಾತನಾಡಿ, “ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಈ ದಿನಾಚರಣೆಯನ್ನ ನಡೆಸುತ್ತೇವೆ. ಎಲ್ಲ ಜಿಲ್ಲೆಗಳಲ್ಲಿ ಮಹಾಡ್ ಸತ್ಯಾಗ್ರಹದ ಅರಿವು ಮೂಡಲಿ ಎಂದು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಏಕಕಾಲದಲ್ಲಿ ಆಚರಣೆ ಮಾಡಲಾಗುತ್ತಿದೆ” ಎಂದರು.

“ಪ್ರಯಾಗರಾಜ್‌ಗೆ ಹೋಗಿ ಕುಂಭಮೇಳದಲ್ಲಿ ಜನರು ಮುಳುಗಿ ಪವಿತ್ರರಾಗಿದ್ದೀವಿ ಎಂದು ಹೇಳಿಕೊಂಡರು. ಅಲ್ಲಿನ ಜೀವಜಲವನ್ನ ಕೊಳಕು ಮಾಡಿದ್ದಾರೆ; ಇದು ಸಾಮಾನ್ಯ ಜ್ಞಾನ ಎಲ್ಲರಿಗೂ ಗೊತ್ತಾಗುವ ವಿಚಾರ. ನೀರನ್ನು ಹಾಳು ಮಾಡಿ, ಮಲಿನ ಮಾಡಿದ್ದಾರೆ. ಸರ್ಕಾರ ಆ ಪ್ರದೇಶ, ನೀರನ್ನ ಸ್ವಚ್ಛ ಮಾಡಲು ನಮ್ಮ ತೆರಿಗೆ ಹಣದಲ್ಲಿ ನೂರಾರು ಕೋಟಿ ಹಣ ಖರ್ಚು ಮಾಡಿದೆ. ಎಷ್ಟು ಹಣ ವೆಚ್ಚ ಆಗಿದೆ ಎಂದು ಯಾರಾದರೂ ಯೋಚನೆ ಮಾಡಿದ್ದೀರಾ? ಅಂಬೇಡ್ಕರ್ ಮಾಡಿದ್ದ ಸತ್ಯಾಗ್ರಹಕ್ಕೂ ಈಗ ಸರ್ಕಾರವೇ ಏರ್ಪಡಿಸುವ ಇಂತಹ ಕಾರ್ಯಕ್ರಮಗಳಿಗೂ ಎಲ್ಲಿಯ ಸಾಮ್ಯತೆ? ಮೌಢ್ಯದ ವಿರೋಧದ ಬಗ್ಗೆ ಮಾತನಾಡಬೇಕಾದ ಕರ್ನಾಟಕ ಸರ್ಕಾರ ಇಲ್ಲಿಯೂ ಕೂಡ ಹಾಗೆಯೇ ಮಾಡಿತ್ತು. ಈ ಬಗ್ಗೆ ಎಲ್ಲರೂ ಪ್ರಶ್ನೆಗಳನ್ನ ಎತ್ತಿ ಹಿಡಿಯಬೇಕು” ಎಂದು ಹೇಳಿದರು.

“ಈ ಚಳವಳಿ ನಡೆದು ಇಂದಿಗೆ 98 ವರ್ಷಗಳು ಕಳೆದರು ಕೂಡ ನೀರಿನ ವಿಷಯದಲ್ಲಿ, ಬಟ್ಟೆಯ ವಿಷಯದಲ್ಲಿ, ದಲಿತರ ಅಭಿರುಚಿಯ ವಿಷಯದಲ್ಲಿ ದಿನನಿತ್ಯ ಕೊಲೆ, ಸುಲಿಗೆ, ಅತ್ಯಾಚಾರಗಳು ನಿರಂತರವಾಗಿ ನಡೆಯುತ್ತಲೇ ಇದೆ. ಇತ್ತೀಚಿಗೆ ರಾಜಸ್ತಾನದ ಶಾಲೆಯೊಂದರಲ್ಲಿ ಏಳನೇ ತರಗತಿಯ ಬಾಲಕನೊಬ್ಬ ನೀರು ಕುಡಿದನೆಂದು ಹೊಡೆದು ಸಾಯಿಸಿದರು. ಉತ್ತರ ಪ್ರದೇಶದಲ್ಲಿ ಯುವಕನೊಬ್ಬ ಸಾರ್ವಜನಿಕ ಬಾವಿಯೊಂದರ ನೀರನ್ನು ಮುಟ್ಟಿದ ಕಾರಣಕ್ಕೆ ಕೊಲೆಮಾಡಲಾಯಿತು. ಹೀಗೆ, ಪ್ರತಿದಿನ ಸವರ್ಣಿಯರು ತಮ್ಮ ಬಾವಿಯಲ್ಲಿ ನೀರು ಸೇದಿದರು ಎಂದು. ಕೆರೆಯ ನೀರನ್ನು ಬಳಸಿದರು ಎಂದು ನಿರಂತರವಾಗಿ ಹಲ್ಲೆಗಳನ್ನು ದೇಶಾದ್ಯಂತ ನಡೆಸುತ್ತಲೇ ಇದ್ದಾರೆ. ಇದು ದೇಶ ಸಮಾನತೆಯ ಕಡೆಗೆ ನಡೆಯದೆ ಅಮಾನುಷ ದ್ವೇಷ ಮತ್ತು ವಿಕೃತಿಯ ಕಡೆಗೆ ನಡೆಯುತ್ತಿರುವುದನ್ನು ಮತ್ತೆ ಮತ್ತೆ ಖಚಿತಪಡಿಸುತ್ತಿದೆ” ಎಂದು ತಿಳಿಸಿದರು.

ದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...