Homeಕರ್ನಾಟಕಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ 'ಮಹಾಡ್ ಸತ್ಯಾಗ್ರಹ': ಬರಗೂರು ರಾಮಚಂದ್ರಪ್ಪ

ಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ ‘ಮಹಾಡ್ ಸತ್ಯಾಗ್ರಹ’: ಬರಗೂರು ರಾಮಚಂದ್ರಪ್ಪ

- Advertisement -
- Advertisement -

“ಮಹಾಡ್ ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ‘ಸಾಮಾಜಿಕ ಸಬಲೀಕರಣ ದಿನ’ವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಕ್ಕಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗಳಿಗೆ ಒಡ್ಡಿದ್ದ ಪ್ರತಿರೋಧವಾಗಿದೆ” ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.

“ಭಾರತದಲ್ಲಿ ನಡೆದ ಅಸ್ಪ್ರಶ್ಯರ ಪರವಾದ ಮೊಟ್ಟ ಮೊದಲ ಚಳವಳಿ ಅಂದರೆ ಅದು ಮಹಾಡ್ ಸತ್ಯಾಗ್ರಹ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿರುವ ಮಹಾಡ್‌ನಲ್ಲಿ 1927 ಮಾರ್ಚ್‌ 20ರಂದು ಸಾರ್ವಜನಿಕವಾಗಿ ಕೆರೆ ನೀರನ್ನ ಮುಟ್ಟಿ ಕುಡಿಯುವುದರ ಮೂಲಕ ಇದು ಎಲ್ಲರಿಗೂ ಸೇರಿದ್ದು ಎನ್ನುವುದನ್ನ ಅಂಬೇಡ್ಕರ್ ಅವರು ಹೇಳಿದ್ದರು. ಮಾನವ ಹಕ್ಕುಗಳನ್ನ ಎತ್ತಿ ಹಿಡಿಯುವ ಈ ಮೂಲಕ ಅಂಬೇಡ್ಕರ್ ಅವರು ಬೌದ್ಧಿಕ ಬದ್ಧತೆಯನ್ನ ತೋರಿಸಿದ್ದರು” ಎಂದು ಬಣ್ಣಿಸಿದರು.

ಭಾರತದ ಅಸ್ಪ್ರಶ್ಯರ ಮೊದಲ ಪ್ರತಿರೋಧ ಚಳವಳಿ ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಬೆಂಗಳೂರಿನ ಗಾಂಧಿ ಭವನದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಗುರುವಾರ ಆಯೋಜಿಸಿದ್ದ ‘ಶೋಷಿತರ ಸಂಘರ್ಷ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

ಭಾಷಣ ಆರಂಭಕ್ಕೂ ಮುನ್ನ ಸಣ್ಣ ಕತೆಯೊಂದನ್ನು ಹೇಳಿದ ಅವರು, “ಒಂದು ಊರಿನಲ್ಲಿ ಒಬ್ಬ ಗುರು ಶಿಷ್ಯರಿಗೆ ಜಾತಿ ವ್ಯವಸ್ಥೆ ಹಾಗೂ ಅಸ್ಪೃಶ್ಯತೆ ವಿರುದ್ಧ ಭೋಧನೆ ಮಾಡುತ್ತಾರೆ. ಅಸ್ಪಶ್ಯತೆ ಮಾಡಬಾರದು; ಅಸ್ಪ್ರಶ್ಯರನ್ನ ಕೀಳಾಗಿ ಕಾಣುವುದು ತಪ್ಪು ಎಂದೆಲ್ಲಾ ಭಾಷಣ ಮಾಡಿ ಮುಂದಿನ ಊರಿಗೆ ತೆರಳುತ್ತಾರೆ. ಇನ್ನೊಂದು ಊರಿಗೆ ಹೋಗುವಾಗ ಅಲ್ಲಿನ ಬಾವಿಯಲ್ಲಿ ಕೈಕಾಲು ತೊಳೆದು ನೀರು ಕುಡಿಯುತ್ತಾರೆ. ನೀರು ಕುಡಿದ ಮೇಲೆ ಬರುವಾಗ ಯಾರೋ ಒಬ್ಬರು, ಇದು ಅಸ್ಪೃಶ್ಯರ ಬಾವಿ ಎಂದು ಹೇಳುತ್ತಾರೆ. ಆ ಬಳಿಕ ಗುರುವಿಗೆ ತಳಮಳ ಶುರುವಾಗಿ ಎಂತಹ ಪಾಪ ತಟ್ಟಿತ್ತು ನನಗೆ ಎಂದು ಹೇಳಿ ಒಬ್ಬ ಬುದ್ಧಿವಂತನ ಹತ್ತಿರ ಹೋಗಿ ಹೀಗೆ ಮಾಡಿದೆ, ಈ ಪಾಪ ಕಳೆದುಕೊಳ್ಳುವುದಕ್ಕೆ ಏನು ಮಾಡಲಿ ಹೇಳಿ ಎಂದು ಕೇಳುತ್ತಾನೆ. ಆ ಬುದ್ಧಿವಂತ ಬಾವಿ ನೀರು ಕುಡಿಯುವ ಸಂದರ್ಭದಲ್ಲಿ ಏನೇನೂ ಮಾಡಿದೆ ಕ್ರಮವಾಗಿ ಹೇಳು ಎಂದಾಗ; ಮೊದಲಿಗೆ ಬಾವಿ ಮೆಟ್ಟಿಲು ಇಳಿದು ಹೋಗಿ ಕೈಕಾಲು ತೊಳೆದು ಆಮೇಲೆ ನೀರು ಕುಡಿದೆ ಎಂದು ಗುರು ಹೇಳುತ್ತಾನೆ. ಆ ಬಳಿಕ ಬುದ್ದಿವಂತ, ನಿನಗೇನು ಆಗಲ್ಲ; ಏಕೆಂದರೆ, ಮೊದಲಿಗೆ ನೀನು ಕೈ-ಕಾಲು ತೊಳೆದಿದ್ದೀಯ. ನಿನ್ನ ಪಾದ ಸ್ಪರ್ಶದಿಂದ ಆ ಬಾವಿಯ ನೀರು ಪವಿತ್ರವಾಯಿತು. ಹಾಗಾಗಿ, ನಿನಗೆ ಏನು ಆಗಲ್ಲ ಎಂದು ಹೇಳಿದ್ನಂತೆ. ಇದು ಕಲ್ಪಿತ ಪ್ರಸಂಗ, ಆದರೂ ಇದರೊಳಗಡೆ ವಾಸ್ತವ ಇದೆ. ಅಂದರೆ, ಗುರು ಪತನಗೊಂಡ ಪ್ರಾಮಾಣಿಕತೆಯ ಸಂಕೇತ. ಈ ಬುದ್ಧಿವಂತ ಭ್ರಷ್ಟಗೊಂಡ ಬೌದ್ಧಿಕತೆಯ ಸಂಕೇತ. ಇವು ಯಾವತ್ತಿಗೂ ಕೂಡ ಒಂದೇ. ಇವು ದೇಶವನ್ನ ಉದ್ಧಾರ ಮಾಡುವುದಿಲ್ಲ. ದೊಡ್ಡ ದೊಡ್ಡ ಹೆಸರು ಇಟ್ಟುಕೊಂಡಿರುವವರಿಗೆ ಪ್ರಾಮಾಣಿಕತೆ ಇರೋದಿಲ್ಲ. ಆ ಗುರು ಪ್ರಾಮಾಣಿಕನಾಗಿದ್ದರೇ ಅಸ್ಪ್ರಶ್ಯರ ಬಾವಿ ನೀರು ಕುಡಿದೆ ಎಂದು ಸಂಭ್ರಮಿಸಬೇಕಿತ್ತು. ಇನ್ನು ಆತ ನಿಜವಾದ ಬುದ್ಧಿವಂತನೇ ಆಗಿದ್ದರೇ, ಆ ಗುರುವನ್ನ ಬೈದು ಕಳಿಸಬೇಕಿತ್ತು” ಎಂದು ವಿವರಿಸಿದರು.

“ಇಂದು ನಾವು ಸಹ ಪತನಗೊಂಡಿರುವ ಪ್ರಾಮಾಣಿಕತೆಯ, ಭ್ರಷ್ಟಗೊಂಡಿರುವ ಬೌದ್ಧಿಕ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನೈತಿಕ ಶಕ್ತಿ, ಸಂಘಟನಾ ಶಕ್ತಿ, ವಿಚಾರ ಶಕ್ತಿ ಸೇರಿ ಒಂದು ಬೌದ್ದಿಕ ಬದ್ದತೆ ಬೇಕು. ಇವತ್ತು ಸಹ ಅಸ್ಪಶ್ಯರಿಗೆ ಹಿಂಸೆ ನೀಡುವ ಘಟನೆ ನಡೆಯುತ್ತಿವೆ. ಆಗ ಅಂಬೇಡ್ಕರ್ ಅವರು ಅದಕ್ಕೊಂದು ದೊಡ್ಡ ಪ್ರತಿರೋಧ ಒಡ್ಡಿದ್ದರು. ಅಂಬೇಡ್ಕರ್ ಅವರು ಒಡ್ಡಿದ ಈ ಪ್ರತಿರೋಧದ ಚಳವಳಿಯಲ್ಲಿ ಅನೇಕ ಸವರ್ಣೀಯರು ಭಾಗವಹಿಸುತ್ತಾರೆ. ಸವರ್ಣೀಯರಲ್ಲಿನ ಪ್ರಗತಿಪರರು ಎಲ್ಲರೂ ಭಾಗವಹಿಸಿದ್ದರು. ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ಸಾಮಾಜಿಕ ಸಬಲೀಕರಣ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಅವರು ಹೇಳುತ್ತಾರೆ. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧ ಆಗಿದೆ” ಎಂದು ತಿಳಿಸಿದರು.

“ಶೋಷಿತ ಸಮುದಾಯಗಳು ಪಂಚಭೂತ ವಂಚಿತ ಸಮುದಾಯಗಳು ಈ ಸಮುದಾಯಗಳು ಗಾಳಿಯಿಂದ ವಂಚಿತರಾಗುತ್ತಾರೆ. ಭೂಮಿಯಿಂದ ವಂಚಿತರಾಗಿದ್ದಾರೆ. ಆಕಾಶ ಕನಸಿನ ಸಂಕೇತ ಅವರಿಗೆ ಕನಸು ಕಾಣೋದಕ್ಕೆ ಆಗುವುದಿಲ್ಲ. ನೀರು ಮುಟ್ಟೋದಕ್ಕೆ ಬಿಡೋದಿಲ್ಲ. ಗುಡಿಸಲಿಗೆ ಬೆಂಕಿ ಹಚ್ಚುತ್ತಾರೆ. ಒಟ್ಟಿನಲ್ಲಿ ಈ ಶೋಷಿತ ಸಮುದಾಯಗಳು ಈ ಪಂಚಭೂತಗಳಿಂದ ವಂಚಿತರಾಗಿದ್ದಾರೆ. ಇವರಿಗೆ ಸರಿಯಾದ ನೀರು, ಗಾಳಿ, ಬೆಂಕಿ, ಭೂಮಿ ಇವ್ಯಾವುದನ್ನೂ ಕೊಡಲಿಲ್ಲ ಅಂದರೆ, ಇವು ಪಂಚಭೂತ ವಂಚಿತ ಸಮುದಾಯಗಳು” ಎಂದು ಹೇಳಿದರು.

“1949ರಲ್ಲಿ ಪ್ರಜಾಪ್ರಭುತ್ವವನ್ನ ಸಾಮಾಜಿಕ, ರಾಜಕೀಯ, ಆರ್ಥಿಕ ಪ್ರಜಾಪ್ರಭುತ್ವ ಎಂದು ಅಂಬೇಡ್ಕರ್ ವಿವರಿಸಿದ್ದಾರೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಇದ್ದರೆ ಇದು ಸಾಮಾಜಿಕ ಪ್ರಜಾಪ್ರಭುತ್ವ ಆಗುತ್ತದೆ. ಆದರೆ, ಈಗ ದ್ವೇಷದ ರಾಜಕಾರಣ ನಡೆಯುತ್ತದೆ. ಪ್ರಜಾಪ್ರಭುತ್ವ ಸಮಾನತೆ ಸಹೋದರತೆ ಜತೆಗೆ ಎಲ್ಲರೂ ತಾರತಮ್ಯ ಮೀರಿ ಸಮಾಜವನ್ನ ಕಟ್ಟಬೇಕು. ಅರ್ಧಕ್ಕೂ ಹೆಚ್ಚು ಸಂಪತ್ತು ಕೆಲವೇ ಜನರ ಬಳಿ‌ ಇದೆ. ಸ್ವಾತಂತ್ರ್ಯ ಕೊಟ್ಟಿರುವ ಹಕ್ಕಿನಿಂದಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅನೇಕ ಚಳುವಳಿಗಳ ಕಾರಣಕ್ಕಾಗಿ ಅನೇಕ ಮುನ್ನಡೆಗಳು ನಡೆಯುತ್ತಿವೆ. ಈ ಮುನ್ನಡೆಗಳ ನಡುವೆ ಹಲವು ಸಮಸ್ಯೆಗಳು ಇದೆ. ಇನ್ನೂ ಅಸ್ಪ್ರಶ್ಯತೆ ಇದೆ. ಸಾಮಾಜಿಕ ಪ್ರಜಾಪ್ರಭುತ್ವ ನೆಲೆಯೂರಿದರೆ ಆಗ ಸ್ವಾತಂತ್ರ್ಯ ಸಮಾನತೆ‌ ಬರುತ್ತದೆ” ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿಯ ಇಂದಿರಾ ಕೃಷ್ಣಪ್ಪ ಮಾತನಾಡಿ, “ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಈ ದಿನಾಚರಣೆಯನ್ನ ನಡೆಸುತ್ತೇವೆ. ಎಲ್ಲ ಜಿಲ್ಲೆಗಳಲ್ಲಿ ಮಹಾಡ್ ಸತ್ಯಾಗ್ರಹದ ಅರಿವು ಮೂಡಲಿ ಎಂದು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಏಕಕಾಲದಲ್ಲಿ ಆಚರಣೆ ಮಾಡಲಾಗುತ್ತಿದೆ” ಎಂದರು.

“ಪ್ರಯಾಗರಾಜ್‌ಗೆ ಹೋಗಿ ಕುಂಭಮೇಳದಲ್ಲಿ ಜನರು ಮುಳುಗಿ ಪವಿತ್ರರಾಗಿದ್ದೀವಿ ಎಂದು ಹೇಳಿಕೊಂಡರು. ಅಲ್ಲಿನ ಜೀವಜಲವನ್ನ ಕೊಳಕು ಮಾಡಿದ್ದಾರೆ; ಇದು ಸಾಮಾನ್ಯ ಜ್ಞಾನ ಎಲ್ಲರಿಗೂ ಗೊತ್ತಾಗುವ ವಿಚಾರ. ನೀರನ್ನು ಹಾಳು ಮಾಡಿ, ಮಲಿನ ಮಾಡಿದ್ದಾರೆ. ಸರ್ಕಾರ ಆ ಪ್ರದೇಶ, ನೀರನ್ನ ಸ್ವಚ್ಛ ಮಾಡಲು ನಮ್ಮ ತೆರಿಗೆ ಹಣದಲ್ಲಿ ನೂರಾರು ಕೋಟಿ ಹಣ ಖರ್ಚು ಮಾಡಿದೆ. ಎಷ್ಟು ಹಣ ವೆಚ್ಚ ಆಗಿದೆ ಎಂದು ಯಾರಾದರೂ ಯೋಚನೆ ಮಾಡಿದ್ದೀರಾ? ಅಂಬೇಡ್ಕರ್ ಮಾಡಿದ್ದ ಸತ್ಯಾಗ್ರಹಕ್ಕೂ ಈಗ ಸರ್ಕಾರವೇ ಏರ್ಪಡಿಸುವ ಇಂತಹ ಕಾರ್ಯಕ್ರಮಗಳಿಗೂ ಎಲ್ಲಿಯ ಸಾಮ್ಯತೆ? ಮೌಢ್ಯದ ವಿರೋಧದ ಬಗ್ಗೆ ಮಾತನಾಡಬೇಕಾದ ಕರ್ನಾಟಕ ಸರ್ಕಾರ ಇಲ್ಲಿಯೂ ಕೂಡ ಹಾಗೆಯೇ ಮಾಡಿತ್ತು. ಈ ಬಗ್ಗೆ ಎಲ್ಲರೂ ಪ್ರಶ್ನೆಗಳನ್ನ ಎತ್ತಿ ಹಿಡಿಯಬೇಕು” ಎಂದು ಹೇಳಿದರು.

“ಈ ಚಳವಳಿ ನಡೆದು ಇಂದಿಗೆ 98 ವರ್ಷಗಳು ಕಳೆದರು ಕೂಡ ನೀರಿನ ವಿಷಯದಲ್ಲಿ, ಬಟ್ಟೆಯ ವಿಷಯದಲ್ಲಿ, ದಲಿತರ ಅಭಿರುಚಿಯ ವಿಷಯದಲ್ಲಿ ದಿನನಿತ್ಯ ಕೊಲೆ, ಸುಲಿಗೆ, ಅತ್ಯಾಚಾರಗಳು ನಿರಂತರವಾಗಿ ನಡೆಯುತ್ತಲೇ ಇದೆ. ಇತ್ತೀಚಿಗೆ ರಾಜಸ್ತಾನದ ಶಾಲೆಯೊಂದರಲ್ಲಿ ಏಳನೇ ತರಗತಿಯ ಬಾಲಕನೊಬ್ಬ ನೀರು ಕುಡಿದನೆಂದು ಹೊಡೆದು ಸಾಯಿಸಿದರು. ಉತ್ತರ ಪ್ರದೇಶದಲ್ಲಿ ಯುವಕನೊಬ್ಬ ಸಾರ್ವಜನಿಕ ಬಾವಿಯೊಂದರ ನೀರನ್ನು ಮುಟ್ಟಿದ ಕಾರಣಕ್ಕೆ ಕೊಲೆಮಾಡಲಾಯಿತು. ಹೀಗೆ, ಪ್ರತಿದಿನ ಸವರ್ಣಿಯರು ತಮ್ಮ ಬಾವಿಯಲ್ಲಿ ನೀರು ಸೇದಿದರು ಎಂದು. ಕೆರೆಯ ನೀರನ್ನು ಬಳಸಿದರು ಎಂದು ನಿರಂತರವಾಗಿ ಹಲ್ಲೆಗಳನ್ನು ದೇಶಾದ್ಯಂತ ನಡೆಸುತ್ತಲೇ ಇದ್ದಾರೆ. ಇದು ದೇಶ ಸಮಾನತೆಯ ಕಡೆಗೆ ನಡೆಯದೆ ಅಮಾನುಷ ದ್ವೇಷ ಮತ್ತು ವಿಕೃತಿಯ ಕಡೆಗೆ ನಡೆಯುತ್ತಿರುವುದನ್ನು ಮತ್ತೆ ಮತ್ತೆ ಖಚಿತಪಡಿಸುತ್ತಿದೆ” ಎಂದು ತಿಳಿಸಿದರು.

ದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...